ETV Bharat / state

ವಿನಯ್ ಕುಲಕರ್ಣಿ ಬಂಧನ ರಾಜಕೀಯ ದುರುದ್ದೇಶಪೂರಿತ ಕ್ರಮ: ಸಿದ್ದರಾಮಯ್ಯ

author img

By

Published : Nov 5, 2020, 11:35 PM IST

ಮಾಜಿ ಸಚಿವ ವಿನಯ್​​ ಕುಲಕರ್ಣಿ ಬಂಧನವನ್ನು ಖಂಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರು ವಿರುದ್ಧ ಸರಣಿ ಟ್ವೀಟ್​ ಮಾಡುವ ಮೂಲಕ ಕಿಡಿ ಕಾರಿದ್ದಾರೆ.

Ex CM Siddaramaiah Condemns Vinay Kulkarni Arrest
ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

Ex CM Siddaramaiah Condemns Vinay Kulkarni Arrest
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ದುರುದ್ದೇಶಪೂರಿತ ಕ್ರಮ. ಸೈದ್ಧಾಂತಿಕವಾಗಿ ರಾಜಕೀಯ ವಿರೋಧಿಗಳನ್ನು ಎದುರಿಸಲಾಗದ ಬಿಜೆಪಿ ಸಿಬಿಐ ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷದ ದನಿ ಅಡಗಿಸಲು ಪ್ರಯತ್ನಿಸುತ್ತಿರುವುದಕ್ಕೆ ಈ ಪ್ರಕರಣ ಇನ್ನೊಂದು ಸಾಕ್ಷಿ ಎಂದಿದ್ದಾರೆ.

Ex CM Siddaramaiah Condemns Vinay Kulkarni Arrest
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ನಾನು ಮಾತಾಡಿದ್ದೆ. ತಾನು ನಿರಪರಾಧಿ, ತನ್ನದೇನೂ ಪಾತ್ರ ಇಲ್ಲ ಎಂದು ತಿಳಿಸಿದ್ದರು. ತನಿಖೆ ಮಾಡಿದ್ದ ರಾಜ್ಯದ ಪೊಲೀಸರು ಕೂಡಾ ಯಾವುದೇ ಆರೋಪ ಹೊರಿಸಿಲ್ಲ. ಇದರಿಂದ ನಿರಾಶೆಗೀಡಾದ ಬಿಜೆಪಿ ನಾಯಕರು ಸಿಬಿಐ ಮೂಲಕ ಅವರನ್ನು ಹಣಿಯಲು ಹೊರಟಿದ್ದಾರೆ ಎಂದವರು ತಿಳಿಸಿದ್ದಾರೆ.

Ex CM Siddaramaiah Condemns Vinay Kulkarni Arrest
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಕಾಂಗ್ರೆಸ್ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನದಲ್ಲಿರುವ ಬಿಜೆಪಿ, ಅವರ ಮೇಲೆ ಪೊಲೀಸ್, ಸಿಬಿಐ, ಆದಾಯ ತೆರಿಗೆ ಇಲಾಖೆ, ಇ.ಡಿ. ಮೊದಲಾದ ಕೇಂದ್ರಾಧೀನ ಸಂಸ್ಥೆಗಳ ಮೂಲಕ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದೆ. ಇಂತಹ ಸವಾಲನ್ನು ಎದುರಿಸಿ ಗೆಲ್ಲುವ ಶಕ್ತಿಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

Ex CM Siddaramaiah Condemns Vinay Kulkarni Arrest
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ದುರುದ್ದೇಶಪೂರಿತ ಕ್ರಮ. ಸೈದ್ಧಾಂತಿಕವಾಗಿ ರಾಜಕೀಯ ವಿರೋಧಿಗಳನ್ನು ಎದುರಿಸಲಾಗದ ಬಿಜೆಪಿ ಸಿಬಿಐ ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷದ ದನಿ ಅಡಗಿಸಲು ಪ್ರಯತ್ನಿಸುತ್ತಿರುವುದಕ್ಕೆ ಈ ಪ್ರಕರಣ ಇನ್ನೊಂದು ಸಾಕ್ಷಿ ಎಂದಿದ್ದಾರೆ.

Ex CM Siddaramaiah Condemns Vinay Kulkarni Arrest
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ನಾನು ಮಾತಾಡಿದ್ದೆ. ತಾನು ನಿರಪರಾಧಿ, ತನ್ನದೇನೂ ಪಾತ್ರ ಇಲ್ಲ ಎಂದು ತಿಳಿಸಿದ್ದರು. ತನಿಖೆ ಮಾಡಿದ್ದ ರಾಜ್ಯದ ಪೊಲೀಸರು ಕೂಡಾ ಯಾವುದೇ ಆರೋಪ ಹೊರಿಸಿಲ್ಲ. ಇದರಿಂದ ನಿರಾಶೆಗೀಡಾದ ಬಿಜೆಪಿ ನಾಯಕರು ಸಿಬಿಐ ಮೂಲಕ ಅವರನ್ನು ಹಣಿಯಲು ಹೊರಟಿದ್ದಾರೆ ಎಂದವರು ತಿಳಿಸಿದ್ದಾರೆ.

Ex CM Siddaramaiah Condemns Vinay Kulkarni Arrest
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಕಾಂಗ್ರೆಸ್ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನದಲ್ಲಿರುವ ಬಿಜೆಪಿ, ಅವರ ಮೇಲೆ ಪೊಲೀಸ್, ಸಿಬಿಐ, ಆದಾಯ ತೆರಿಗೆ ಇಲಾಖೆ, ಇ.ಡಿ. ಮೊದಲಾದ ಕೇಂದ್ರಾಧೀನ ಸಂಸ್ಥೆಗಳ ಮೂಲಕ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದೆ. ಇಂತಹ ಸವಾಲನ್ನು ಎದುರಿಸಿ ಗೆಲ್ಲುವ ಶಕ್ತಿಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.