ETV Bharat / state

ನಟ ಪುನೀತ್​ ನಿಧನ ಹಿನ್ನೆಲೆ, ಇಂದಿನಿಂದ ಅ.31ರವರೆಗೆ ನಗರದಲ್ಲಿ ಮದ್ಯ ಮಾರಾಟ ನಿಷೇಧ: ಪೊಲೀಸ್​ ಆಯುಕ್ತ

author img

By

Published : Oct 29, 2021, 3:09 PM IST

Updated : Oct 29, 2021, 5:27 PM IST

ನಟ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ದರ್ಶನಕ್ಕೆ ಅಧಿಕ ಅಪಾರ ಸಂಖ್ಯೆ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲೆ ಬೆಂಗಳೂರು ನಗರಾದ್ಯಂತ ಇಂದಿನಿಂದ ಅ.31ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

Police commissioner kamal pant
ಪೊಲೀಸ್ ಆಯುಕ್ತ ಕಮಲ್​ ಪಂತ್

ಬೆಂಗಳೂರು : ನಟ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ದರ್ಶನಕ್ಕೆ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.

order copy
ಪೊಲೀಸ್​ ಆಯುಕ್ತರು ಹೊರಡಿಸಿರುವ ಆದೇಶದ ಪ್ರತಿ

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ನಟ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಇಂದಿನಿಂದ ಅ.31 ಮಧ್ಯರಾತ್ರಿ 12 ಗಂಟೆವರೆಗೆ ನಗರ ಪೊಲೀಸ್​ ಆಯುಕ್ತರ ವ್ಯಾಪ್ತಿಗೆ ಒಳಪಡುವ ಎಲ್ಲ ಬಾರ್​ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.

order copy
ಪೊಲೀಸ್​ ಆಯುಕ್ತರು ಹೊರಡಿಸಿರುವ ಆದೇಶದ ಪ್ರತಿ

ಮದ್ಯದಂಗಡಿಗಳನ್ನು ಮುಚ್ಚವಂತೆ ಅಬಕಾರಿ ಆಯುಕ್ತರು ಆದೇಶ:

ಇಂದು ಮಧ್ಯಾಹ್ನ 3 ಗಂಟೆಯಿಂದ ನಾಳೆ ಮಧ್ಯರಾತ್ರಿಯವರಿಗೆ ಬಾರ್ ಅಂಡ್ ರೆಸ್ಟೋರೆಂಟ್​​ಗಳನ್ನು ಮುಚ್ಚುವಂತೆ ಅಬಕಾರಿ ಆಯುಕ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಆಸ್ಪತ್ರೆಗೆ ಬಂದಾಗ ರೆಸ್ಪಾನ್ಸ್​ ಇರಲಿಲ್ಲ, ಹಾರ್ಟ್​ ಲೈನ್​ ಕಂಪ್ಲೀಟ್​ ಸ್ಟ್ರೈಟ್​ ಆಗಿತ್ತು: ವಿಕ್ರಂ ಆಸ್ಪತ್ರೆ ವೈದ್ಯರು

ಬೆಂಗಳೂರು : ನಟ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ದರ್ಶನಕ್ಕೆ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.

order copy
ಪೊಲೀಸ್​ ಆಯುಕ್ತರು ಹೊರಡಿಸಿರುವ ಆದೇಶದ ಪ್ರತಿ

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ನಟ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಇಂದಿನಿಂದ ಅ.31 ಮಧ್ಯರಾತ್ರಿ 12 ಗಂಟೆವರೆಗೆ ನಗರ ಪೊಲೀಸ್​ ಆಯುಕ್ತರ ವ್ಯಾಪ್ತಿಗೆ ಒಳಪಡುವ ಎಲ್ಲ ಬಾರ್​ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.

order copy
ಪೊಲೀಸ್​ ಆಯುಕ್ತರು ಹೊರಡಿಸಿರುವ ಆದೇಶದ ಪ್ರತಿ

ಮದ್ಯದಂಗಡಿಗಳನ್ನು ಮುಚ್ಚವಂತೆ ಅಬಕಾರಿ ಆಯುಕ್ತರು ಆದೇಶ:

ಇಂದು ಮಧ್ಯಾಹ್ನ 3 ಗಂಟೆಯಿಂದ ನಾಳೆ ಮಧ್ಯರಾತ್ರಿಯವರಿಗೆ ಬಾರ್ ಅಂಡ್ ರೆಸ್ಟೋರೆಂಟ್​​ಗಳನ್ನು ಮುಚ್ಚುವಂತೆ ಅಬಕಾರಿ ಆಯುಕ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಆಸ್ಪತ್ರೆಗೆ ಬಂದಾಗ ರೆಸ್ಪಾನ್ಸ್​ ಇರಲಿಲ್ಲ, ಹಾರ್ಟ್​ ಲೈನ್​ ಕಂಪ್ಲೀಟ್​ ಸ್ಟ್ರೈಟ್​ ಆಗಿತ್ತು: ವಿಕ್ರಂ ಆಸ್ಪತ್ರೆ ವೈದ್ಯರು

Last Updated : Oct 29, 2021, 5:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.