ETV Bharat / state

ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ.. ಬದಲಾವಣೆಗೆ ಚಿಂತನೆ ನಡೆಸಿರುವ ಜೆಡಿಎಸ್‌?

author img

By

Published : May 17, 2023, 7:21 PM IST

ಒಕ್ಕಗಲಿಗರ ಪ್ರಭಾವ ಇರುವ ಕ್ಷೇತ್ರಗಳಲ್ಲಿ ತಮ್ಮ ಬಲ ಕಸಿಯಲು ಯಾರಿಗೂ ಸಾಧ್ಯವಾಗುವುದಿಲ್ಲವೆಂದು ಬಲವಾದ ವಿಶ್ವಾಸವೂ ದೇವೇಗೌಡರ ಕುಟುಂಬದಲ್ಲಿತ್ತು. ವಿಧಾನಸಭೆಯ ಚುನಾವಣೆಯ ಫಲಿತಾಂಶ ಜೆಡಿಎಸ್ ನಾಯಕರ ಲೆಕ್ಕಾಚಾರ ಬುಡಮೇಲು ಮಾಡಿದೆ. ಮೈಸೂರು ಭಾಗದಲ್ಲಿ ಕಾಂಗ್ರೆಸ್ ಎದುರು ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿದ ಪರಿಣಾಮ ಅಧಿಕಾರದ ಗದ್ದುಗೆ ಕನಸು ಭಗ್ನಗೊಂಡಿದೆ.

jds
ಜೆಡಿಎಸ್​

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಬೇಕೆಂದು ಜೆಡಿಎಸ್ ನಡೆಸಿದ ಹೋರಾಟ ಕಾಂಗ್ರೆಸ್ ಅಲೆಗೆ ಕೊಚ್ಚಿ ಹೋಗಿದೆ. ಹಿಂದಿನ ಚುನಾವಣೆಗೆ ಹೋಲಿಕೆ ಮಾಡಿದರೆ ಜೆಡಿಎಸ್ ಶಾಸಕರ ಸಂಖ್ಯೆ ಅರ್ಧದಷ್ಟು ಕುಸಿದಿದೆ. ಹಳೇ ಮೈಸೂರು ಭಾಗ ಸೇರಿದಂತೆ ಹಲವು ಕಡೆ ಪಕ್ಷ ನೆಲಕಚ್ಚಿದೆ.

2013ರ ಚುನಾವಣೆಯಲ್ಲಿ ಜೆಡಿಎಸ್ 40 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. 2018 ರ ಚುನಾವಣೆಗೂ ಮುನ್ನ ಏಳು ಮಂದಿ ಕಾಂಗ್ರೆಸ್ ಸೇರಿದ್ದರೆ, ಮೂವರು ಬಿಜೆಪಿಗೆ ಹೋಗಿದ್ದರು. ಒಬ್ಬರು ನಿಧನರಾಗಿದ್ದರು. ಆಗ ಜೆಡಿಎಸ್​ನ ಬಲ 29 ಕ್ಕೆ ಕುಸಿದಿತ್ತು.

ಈ ಸಂಕಷ್ಟದ ಸ್ಥಿತಿಯಲ್ಲಿ ಚುನಾವಣೆ ಎದುರಿಸಿದ್ದ ಜೆಡಿಎಸ್ 2018 ರಲ್ಲಿ 37 ಸ್ಥಾನಗಳನ್ನು ಗಳಿಸಿ ಮೇಲಕ್ಕೇರಿತ್ತು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಜತೆಗೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿ ಮುಖ್ಯಮಂತ್ರಿಯೂ ಆದರು. ಬಿಜೆಪಿ ಹೆಣೆದ ರಾಜಕೀಯ ತಂತ್ರಗಾರಿಕೆಗೆ ಸಮ್ಮಿಶ್ರ ಸರ್ಕಾರ ಪತನಗೊಂಡಿತು.

ಆದರೆ, ಈ ಬಾರಿಯೂ 40 ರಿಂದ 55 ಸ್ಥಾನ ಗೆದ್ದರೆ ಅತಂತ್ರ ಸ್ಥಿತಿಯ ಲಾಭ ಪಡೆದು ಸುಲಭವಾಗಿ ಅಧಿಕಾರದ ಗದ್ದುಗೆ ಏರಬಹುದು ಎಂಬ ಲೆಕ್ಕಾಚಾರ ಜೆಡಿಎಸ್ ದಾಗಿತ್ತು. ಅದಕ್ಕಾಗಿಯೇ ಒಂದು ವರ್ಷಕ್ಕೂ ಮುನ್ನವೇ ಚುನಾವಣಾ ತಯಾರಿ ಆರಂಭಿಸಿತ್ತು. ಜನತಾ ಜಲಧಾರೆ, ಪಂಚರತ್ನ ಯೋಜನೆ ಹೆಸರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪಂಚರತ್ನ ರಥಯಾತ್ರೆ ಮೂಲಕ ಪ್ರಚಾರ ನಡೆಸಿದ್ದರು.

ಇನ್ನು ಕೊನೆ ಹಂತದಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ವಲಸೆ ಬಂದವರಿಗೆ ಟಿಕೆಟ್ ನೀಡಿದ ಜೆಡಿಎಸ್, ಅದರಿಂದಲೂ ಸಾಕಷ್ಟು ಲಾಭವಾಗಬಹುದು ಎಂಬ ನಿರೀಕ್ಷೆ ಜೆಡಿಎಸ್ ಇರಿಸಿಕೊಂಡಿತ್ತು. ಒಕ್ಕಗಲಿಗರ ಪ್ರಭಾವ ಇರುವ ಕ್ಷೇತ್ರಗಳಲ್ಲಿ ತಮ್ಮ ಬಲವನ್ನು ಕಸಿಯಲು ಯಾರಿಗೂ ಸಾಧ್ಯವಾಗುವುದಿಲ್ಲವೆಂದು ಬಲವಾದ ವಿಶ್ವಾಸವೂ ದೇವೇಗೌಡರ ಕುಟುಂಬದಲ್ಲಿತ್ತು. ಆದರೆ, ಈ ಚುನಾವಣೆಯ ಫಲಿತಾಂಶ ಜೆಡಿಎಸ್ ನಾಯಕರ ಲೆಕ್ಕಾಚಾರವನ್ನೇ ಬುಡಮೇಲು ಮಾಡಿತು.

ಜೆಡಿಎಸ್ ನ ಭದ್ರಕೋಟೆಯಾಗಿದ್ದ ಮಂಡ್ಯ, ಹಾಸನ, ರಾಮನಗರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಹಿನ್ನೆಡೆಯಾಗಿದೆ. ದೇವೇಗೌಡರ ತವರು ಜಿಲ್ಲೆ ಹಾಸನದಲ್ಲೂ ಈ ಬಾರಿ ಜೆಡಿಎಸ್ ನ ಹಿಡಿತ ಸಡಿಲವಾಗಿದೆ. ಅಲ್ಲಿಯೂ ಜೆಡಿಎಸ್ ನಿರಾಯಾಸವಾಗಿ ಯಾವ ಕ್ಷೇತ್ರವನ್ನೂ ಗೆದ್ದಿಲ್ಲ. ಮಂಡ್ಯದಲ್ಲಿ ಜೆಡಿಎಸ್ ನ ಬಲ ತೀರಾ ಕುಗ್ಗಿದೆ. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲೂ ಹಿಂದೆ ಇದ್ದ ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಜೆಡಿಎಸ್ ಗೆ ಸಾಧ್ಯವಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ಗೆ ಪ್ರಾತಿನಿಧ್ಯ ಸಿಕ್ಕಿದೆ.

ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗಾಗಿಯೇ ಹಂಬಲಿಸುತ್ತಿದೆ ಎಂಬ ಸಂದೇಶ ಪಕ್ಷಕ್ಕೆ ಪ್ರತಿಕೂಲ ಪರಿಣಾಮ ಉಂಟು ಮಾಡಿದಂತಿದೆ. ಒಕ್ಕಲಿಗ ಮತಗಳು ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ ತೆಕ್ಕೆಯಿಂದ ಕಾಂಗ್ರೆಸ್ ಕೈಗೆ ಈ ಬಾರಿ ಜಾರಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬಾರಿ ನನಗೆ ಅವಕಾಶ ಕೊಡಿ ಎನ್ನುವ ಮೂಲಕ ಒಕ್ಕಲಿಗರೊಬ್ಬರು ಮುಖ್ಯಮಂತ್ರಿಯಾಗಲು ಬೆಂಬಲ ನೀಡಬೇಕೆಂದು ಡಿ.ಕೆ. ಶಿವಕುಮಾರ್ ಹಳೇ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾಡಿದ ಮನವಿಯೂ ಜೆಡಿಎಸ್ ಬಲ ಕುಸಿತಕ್ಕೆ ಕಾರಣವಾಗಿರಬಹುದೆಂದು ಹೇಳಲಾಗುತ್ತಿದೆ.

ಬದಲಾವಣೆ ಮಾಡಲು ಜೆಡಿಎಸ್ ಚಿಂತನೆ? : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಗೆಲುವು ಸಾಧಿಸಲಾಗದೆ, ಭಾರಿ ಹಿನ್ನಡೆ ಅನುಭವಿಸಿರುವ ಜೆಡಿಎಸ್ ನಲ್ಲಿ ಆಮೂಲಾಗ್ರ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಆದ ಹಿನ್ನಡೆಯಿಂದ ಕಾರ್ಯಕರ್ತರು ನಿರಾಶರಾಗಿರುವುದನ್ನು ಮನಗಂಡಿರುವ ದಳಪತಿಗಳು, ಪಕ್ಷದಲ್ಲಿ ಬದಲಾವಣೆ ಮಾಡುವ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಮುಂದಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ಕ್ರಿಯಾಶೀಲರಾಗದೆ, ಹೆಸರಿಗೆ ಮಾತ್ರ ಸ್ಥಾನ ಪಡೆದಿರುವವರನ್ನು ಗುರುತಿಸಿ ಆ ಸ್ಥಾನಗಳಿಗೆ ಸಮರ್ಥ ಕಾರ್ಯಕರ್ತರನ್ನು ನೇಮಕ ಮಾಡಲು ಚಿಂತನೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಂದಿನ ಬಿಬಿಎಂಪಿ, ಜಿ ಪಂ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸುವ ಕಾರ್ಯಕ್ಕೆ ಮುಂದಾಗಲಿದ್ದಾರೆ. ವಿಧಾನಸಭಾ ಚುನಾಣೆಯ ಸೋಲಿನ ಕಹಿಯನ್ನು ಮರೆತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದಾರೆ.

ತಳಮಟ್ಟದಿಂದ ಸಂಘಟನೆ ಮಾಡಿ ಪಕ್ಷಕ್ಕೆ ಚೈತನ್ಯ ತುಂಬುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದಾರೆ. ಹಾಗಾಗಿ, ನಿಷ್ಕ್ರಿಯಗೊಂಡಿರುವ ವಿವಿಧ ಘಟಕಗಳ ಪದಾಧಿಕಾರಿಗಳನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಜಿಲ್ಲಾ ಹಾಗೂ ರಾಜ್ಯಮಟ್ಟದ ಪಕ್ಷದ ವಿವಿಧ ಹುದ್ದೆಗಳಿಗೆ ಮೇಜರ್ ಸರ್ಜರಿ ಮಾಡುವ ತೀರ್ಮಾನಕ್ಕೆ ಜೆಡಿಎಸ್ ನಾಯಕರು ಬಂದಿದ್ದಾರೆ. ಹೀಗಾಗಿ ಹಿಂದುಳಿದ, ಮಹಿಳಾ, ಯುವ ಘಟಕ ಸೇರಿದಂತೆ ಎಲ್ಲಾ ಘಟಕಗಳನ್ನು ಪುನಾರಚನೆ ಮಾಡಲು ಉದ್ದೇಶಿಸಲಾಗಿದೆ. ಆ ಮೂಲಕ ಪಕ್ಷಕ್ಕೆ ಹೊಸ ರೂಪ ಕೊಟ್ಟು ಬಲಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಬದಲಾವಣೆ ಮಾಡಲು ಜೆಡಿಎಸ್ ನಿರ್ಧರಿಸಿದೆ.

ಇದನ್ನೂಓದಿ: ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು.. ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾದ ದಳಪತಿಗಳು?

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಬೇಕೆಂದು ಜೆಡಿಎಸ್ ನಡೆಸಿದ ಹೋರಾಟ ಕಾಂಗ್ರೆಸ್ ಅಲೆಗೆ ಕೊಚ್ಚಿ ಹೋಗಿದೆ. ಹಿಂದಿನ ಚುನಾವಣೆಗೆ ಹೋಲಿಕೆ ಮಾಡಿದರೆ ಜೆಡಿಎಸ್ ಶಾಸಕರ ಸಂಖ್ಯೆ ಅರ್ಧದಷ್ಟು ಕುಸಿದಿದೆ. ಹಳೇ ಮೈಸೂರು ಭಾಗ ಸೇರಿದಂತೆ ಹಲವು ಕಡೆ ಪಕ್ಷ ನೆಲಕಚ್ಚಿದೆ.

2013ರ ಚುನಾವಣೆಯಲ್ಲಿ ಜೆಡಿಎಸ್ 40 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. 2018 ರ ಚುನಾವಣೆಗೂ ಮುನ್ನ ಏಳು ಮಂದಿ ಕಾಂಗ್ರೆಸ್ ಸೇರಿದ್ದರೆ, ಮೂವರು ಬಿಜೆಪಿಗೆ ಹೋಗಿದ್ದರು. ಒಬ್ಬರು ನಿಧನರಾಗಿದ್ದರು. ಆಗ ಜೆಡಿಎಸ್​ನ ಬಲ 29 ಕ್ಕೆ ಕುಸಿದಿತ್ತು.

ಈ ಸಂಕಷ್ಟದ ಸ್ಥಿತಿಯಲ್ಲಿ ಚುನಾವಣೆ ಎದುರಿಸಿದ್ದ ಜೆಡಿಎಸ್ 2018 ರಲ್ಲಿ 37 ಸ್ಥಾನಗಳನ್ನು ಗಳಿಸಿ ಮೇಲಕ್ಕೇರಿತ್ತು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಜತೆಗೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿ ಮುಖ್ಯಮಂತ್ರಿಯೂ ಆದರು. ಬಿಜೆಪಿ ಹೆಣೆದ ರಾಜಕೀಯ ತಂತ್ರಗಾರಿಕೆಗೆ ಸಮ್ಮಿಶ್ರ ಸರ್ಕಾರ ಪತನಗೊಂಡಿತು.

ಆದರೆ, ಈ ಬಾರಿಯೂ 40 ರಿಂದ 55 ಸ್ಥಾನ ಗೆದ್ದರೆ ಅತಂತ್ರ ಸ್ಥಿತಿಯ ಲಾಭ ಪಡೆದು ಸುಲಭವಾಗಿ ಅಧಿಕಾರದ ಗದ್ದುಗೆ ಏರಬಹುದು ಎಂಬ ಲೆಕ್ಕಾಚಾರ ಜೆಡಿಎಸ್ ದಾಗಿತ್ತು. ಅದಕ್ಕಾಗಿಯೇ ಒಂದು ವರ್ಷಕ್ಕೂ ಮುನ್ನವೇ ಚುನಾವಣಾ ತಯಾರಿ ಆರಂಭಿಸಿತ್ತು. ಜನತಾ ಜಲಧಾರೆ, ಪಂಚರತ್ನ ಯೋಜನೆ ಹೆಸರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪಂಚರತ್ನ ರಥಯಾತ್ರೆ ಮೂಲಕ ಪ್ರಚಾರ ನಡೆಸಿದ್ದರು.

ಇನ್ನು ಕೊನೆ ಹಂತದಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ವಲಸೆ ಬಂದವರಿಗೆ ಟಿಕೆಟ್ ನೀಡಿದ ಜೆಡಿಎಸ್, ಅದರಿಂದಲೂ ಸಾಕಷ್ಟು ಲಾಭವಾಗಬಹುದು ಎಂಬ ನಿರೀಕ್ಷೆ ಜೆಡಿಎಸ್ ಇರಿಸಿಕೊಂಡಿತ್ತು. ಒಕ್ಕಗಲಿಗರ ಪ್ರಭಾವ ಇರುವ ಕ್ಷೇತ್ರಗಳಲ್ಲಿ ತಮ್ಮ ಬಲವನ್ನು ಕಸಿಯಲು ಯಾರಿಗೂ ಸಾಧ್ಯವಾಗುವುದಿಲ್ಲವೆಂದು ಬಲವಾದ ವಿಶ್ವಾಸವೂ ದೇವೇಗೌಡರ ಕುಟುಂಬದಲ್ಲಿತ್ತು. ಆದರೆ, ಈ ಚುನಾವಣೆಯ ಫಲಿತಾಂಶ ಜೆಡಿಎಸ್ ನಾಯಕರ ಲೆಕ್ಕಾಚಾರವನ್ನೇ ಬುಡಮೇಲು ಮಾಡಿತು.

ಜೆಡಿಎಸ್ ನ ಭದ್ರಕೋಟೆಯಾಗಿದ್ದ ಮಂಡ್ಯ, ಹಾಸನ, ರಾಮನಗರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಹಿನ್ನೆಡೆಯಾಗಿದೆ. ದೇವೇಗೌಡರ ತವರು ಜಿಲ್ಲೆ ಹಾಸನದಲ್ಲೂ ಈ ಬಾರಿ ಜೆಡಿಎಸ್ ನ ಹಿಡಿತ ಸಡಿಲವಾಗಿದೆ. ಅಲ್ಲಿಯೂ ಜೆಡಿಎಸ್ ನಿರಾಯಾಸವಾಗಿ ಯಾವ ಕ್ಷೇತ್ರವನ್ನೂ ಗೆದ್ದಿಲ್ಲ. ಮಂಡ್ಯದಲ್ಲಿ ಜೆಡಿಎಸ್ ನ ಬಲ ತೀರಾ ಕುಗ್ಗಿದೆ. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲೂ ಹಿಂದೆ ಇದ್ದ ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಜೆಡಿಎಸ್ ಗೆ ಸಾಧ್ಯವಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ಗೆ ಪ್ರಾತಿನಿಧ್ಯ ಸಿಕ್ಕಿದೆ.

ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗಾಗಿಯೇ ಹಂಬಲಿಸುತ್ತಿದೆ ಎಂಬ ಸಂದೇಶ ಪಕ್ಷಕ್ಕೆ ಪ್ರತಿಕೂಲ ಪರಿಣಾಮ ಉಂಟು ಮಾಡಿದಂತಿದೆ. ಒಕ್ಕಲಿಗ ಮತಗಳು ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ ತೆಕ್ಕೆಯಿಂದ ಕಾಂಗ್ರೆಸ್ ಕೈಗೆ ಈ ಬಾರಿ ಜಾರಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬಾರಿ ನನಗೆ ಅವಕಾಶ ಕೊಡಿ ಎನ್ನುವ ಮೂಲಕ ಒಕ್ಕಲಿಗರೊಬ್ಬರು ಮುಖ್ಯಮಂತ್ರಿಯಾಗಲು ಬೆಂಬಲ ನೀಡಬೇಕೆಂದು ಡಿ.ಕೆ. ಶಿವಕುಮಾರ್ ಹಳೇ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾಡಿದ ಮನವಿಯೂ ಜೆಡಿಎಸ್ ಬಲ ಕುಸಿತಕ್ಕೆ ಕಾರಣವಾಗಿರಬಹುದೆಂದು ಹೇಳಲಾಗುತ್ತಿದೆ.

ಬದಲಾವಣೆ ಮಾಡಲು ಜೆಡಿಎಸ್ ಚಿಂತನೆ? : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಗೆಲುವು ಸಾಧಿಸಲಾಗದೆ, ಭಾರಿ ಹಿನ್ನಡೆ ಅನುಭವಿಸಿರುವ ಜೆಡಿಎಸ್ ನಲ್ಲಿ ಆಮೂಲಾಗ್ರ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಆದ ಹಿನ್ನಡೆಯಿಂದ ಕಾರ್ಯಕರ್ತರು ನಿರಾಶರಾಗಿರುವುದನ್ನು ಮನಗಂಡಿರುವ ದಳಪತಿಗಳು, ಪಕ್ಷದಲ್ಲಿ ಬದಲಾವಣೆ ಮಾಡುವ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಮುಂದಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ಕ್ರಿಯಾಶೀಲರಾಗದೆ, ಹೆಸರಿಗೆ ಮಾತ್ರ ಸ್ಥಾನ ಪಡೆದಿರುವವರನ್ನು ಗುರುತಿಸಿ ಆ ಸ್ಥಾನಗಳಿಗೆ ಸಮರ್ಥ ಕಾರ್ಯಕರ್ತರನ್ನು ನೇಮಕ ಮಾಡಲು ಚಿಂತನೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಂದಿನ ಬಿಬಿಎಂಪಿ, ಜಿ ಪಂ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸುವ ಕಾರ್ಯಕ್ಕೆ ಮುಂದಾಗಲಿದ್ದಾರೆ. ವಿಧಾನಸಭಾ ಚುನಾಣೆಯ ಸೋಲಿನ ಕಹಿಯನ್ನು ಮರೆತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದಾರೆ.

ತಳಮಟ್ಟದಿಂದ ಸಂಘಟನೆ ಮಾಡಿ ಪಕ್ಷಕ್ಕೆ ಚೈತನ್ಯ ತುಂಬುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದಾರೆ. ಹಾಗಾಗಿ, ನಿಷ್ಕ್ರಿಯಗೊಂಡಿರುವ ವಿವಿಧ ಘಟಕಗಳ ಪದಾಧಿಕಾರಿಗಳನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಜಿಲ್ಲಾ ಹಾಗೂ ರಾಜ್ಯಮಟ್ಟದ ಪಕ್ಷದ ವಿವಿಧ ಹುದ್ದೆಗಳಿಗೆ ಮೇಜರ್ ಸರ್ಜರಿ ಮಾಡುವ ತೀರ್ಮಾನಕ್ಕೆ ಜೆಡಿಎಸ್ ನಾಯಕರು ಬಂದಿದ್ದಾರೆ. ಹೀಗಾಗಿ ಹಿಂದುಳಿದ, ಮಹಿಳಾ, ಯುವ ಘಟಕ ಸೇರಿದಂತೆ ಎಲ್ಲಾ ಘಟಕಗಳನ್ನು ಪುನಾರಚನೆ ಮಾಡಲು ಉದ್ದೇಶಿಸಲಾಗಿದೆ. ಆ ಮೂಲಕ ಪಕ್ಷಕ್ಕೆ ಹೊಸ ರೂಪ ಕೊಟ್ಟು ಬಲಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಬದಲಾವಣೆ ಮಾಡಲು ಜೆಡಿಎಸ್ ನಿರ್ಧರಿಸಿದೆ.

ಇದನ್ನೂಓದಿ: ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು.. ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾದ ದಳಪತಿಗಳು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.