ETV Bharat / state

ಎಂ. ಬಿ. ಪಾಟೀಲ್ ಹೆಸರಿನ ನಕಲಿ ಲೆಟರ್ ಹೆಡ್​​ ಪ್ರಕರಣ: ಪೊಲೀಸರಿಗೆ ತಲಾ 10 ಸಾವಿರ ದಂಡ

author img

By

Published : Jan 2, 2020, 10:11 PM IST

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಎಂ.ಬಿ.ಪಾಟೀಲ್​​ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಪತ್ರ ಬರೆದಿದ್ದರು ಎನ್ನಲಾಗಿದ್ದು. ಈ ಲೆಟರ್​ನ್ನು ಶಾರದಾ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಎಂಬಿ ಪಾಟೀಲ್ ಹೆಸರಿನ ನಕಲಿ ಲೆಟರ್ ಹೆಡ್​​ ಪ್ರಕರಣ,fake-letterhead-case-named-of-mb-patil
ಎಂಬಿ ಪಾಟೀಲ್ ಹೆಸರಿನ ನಕಲಿ ಲೆಟರ್ ಹೆಡ್​​ ಪ್ರಕರಣ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸಷ್ಟಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ಎಂಬುವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಶಾರದಾ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಕಾಲತ್ತು ವಹಿಸಿದ ಅರುಣ್ ಶ್ಯಾಮ್ , ಶ್ರೀರಾಂಪುರ ಪೊಲೀಸರು ಇನ್​ಪರ್ಮೇಷನ್​ ಟೆಕ್ನಾಲಜಿ ಕಾಯ್ದೆ ಸೆಕ್ಷನ್ 66(ಎಎನ್)ರೀತ್ಯಾ ಪ್ರಕರಣ‌ ದಾಖಲಿಸಿದ್ದು, ಪ್ರಕರಣ ದಾಖಲಿಸುವಾಗ ಮ್ಯಾಜಿಸ್ಟ್ರೇಟ್ ಅನುಮತಿ ತೆಗೆದುಕೊಂಡಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಈ ರೀತ್ಯಾ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದರು.

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯ, ಶ್ರೀರಾಂಪುರ ಠಾಣೆಯ ಇಬ್ಬರು ಪೊಲೀಸರಿಗೆ ತಲಾ 10 ಸಾವಿರ ರೂ.ದಂಡ ವಿಧಿಸಿ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಗೊಳಿಸಿದೆ.

ಹಿನ್ನೆಲೆ:
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಎಂ.ಬಿ.ಪಾಟೀಲ್​ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಪತ್ರ ಬರೆದಿದ್ದರು ಎನ್ನಲಾಗಿದ್ದು, ಆ ನಕಲಿ ಪತ್ರವನ್ನು ಶಾರದಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪ ಇವರ ಮೇಲೆ ಇತ್ತು. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸಷ್ಟಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ಎಂಬುವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಶಾರದಾ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಕಾಲತ್ತು ವಹಿಸಿದ ಅರುಣ್ ಶ್ಯಾಮ್ , ಶ್ರೀರಾಂಪುರ ಪೊಲೀಸರು ಇನ್​ಪರ್ಮೇಷನ್​ ಟೆಕ್ನಾಲಜಿ ಕಾಯ್ದೆ ಸೆಕ್ಷನ್ 66(ಎಎನ್)ರೀತ್ಯಾ ಪ್ರಕರಣ‌ ದಾಖಲಿಸಿದ್ದು, ಪ್ರಕರಣ ದಾಖಲಿಸುವಾಗ ಮ್ಯಾಜಿಸ್ಟ್ರೇಟ್ ಅನುಮತಿ ತೆಗೆದುಕೊಂಡಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಈ ರೀತ್ಯಾ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದರು.

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯ, ಶ್ರೀರಾಂಪುರ ಠಾಣೆಯ ಇಬ್ಬರು ಪೊಲೀಸರಿಗೆ ತಲಾ 10 ಸಾವಿರ ರೂ.ದಂಡ ವಿಧಿಸಿ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಗೊಳಿಸಿದೆ.

ಹಿನ್ನೆಲೆ:
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಎಂ.ಬಿ.ಪಾಟೀಲ್​ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಪತ್ರ ಬರೆದಿದ್ದರು ಎನ್ನಲಾಗಿದ್ದು, ಆ ನಕಲಿ ಪತ್ರವನ್ನು ಶಾರದಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪ ಇವರ ಮೇಲೆ ಇತ್ತು. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Intro:ಎಂಬಿ ಪಾಟೀಲ್ ವಿರುದ್ಧದ ಫೇಕ್ ಲೆಟರ್ :-
ಶಾರದಾ ಡೈಮಂಡ್ ವಿರುದ್ಧ ಪ್ರಕರಣರದ್ದು ಇಬ್ಬರು ಪೊಲೀಸರಿಗೆ ತಲಾ 10 ಸಾವಿರ ದಂಡ

ಪ್ರತ್ಯೇಕ ಲಿಂಗಾಯುತ ಧರ್ಮದ ವಿಚಾರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸಷ್ಟಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು   ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ

ಈ ಕುರಿತಂತೆ ಶಾರದಾ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು

ಅರ್ಜಿದಾರರ ಪರ ವಕಾಲತ್ತು ವಹಿಸಿದ ಅರುಣ್ ಶ್ಯಾಮ್ ಶ್ರೀರಾಂಪುರ ಪೋಲಿಸರು ಇನ್‌ಫರ್ಮೇಶನ್ ಟೆಕ್ನಾಲಜಿ ಕಾಯ್ದೆ ಸೆಕ್ಷನ್ ೬೬(ಎಎನ್)ರೀತ್ಯಾ ಪ್ರಕರಣ‌ ದಾಖಲಿಸಿದ್ದು ಪ್ರಕರಣ ದಾಖಲಿಸುವಾಗ ಮ್ಯಾಜಿಸ್ಟ್ರೇಟ್ ಪರ್ಮೀಶನ್ ತೆಗೆದುಕೊಂಡಿಲ್ಲ.
ಸುಪ್ರೀಂ ಕೋರ್ಟ್ ಆದೇಶದಂತೆ ಈ ರೀತ್ಯಾ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ತಿಳಿಸಿದರು.

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯ  ಶ್ರೀರಾಂಪುರ ಠಾಣಾ ಇಬ್ಬರು ಪೊಲೀಸರಿಗೆ ತಲಾ 10 ಸಾವಿರ ರೂ.ದಂಡ ವಿಧಿಸಿ
ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು  ಹೈಕೋರ್ಟ್ ರದ್ದು ಗೊಳಿಸಿದೆ.

ಹಿನ್ನೆಲೆ:

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವಎಂ.ಬಿ.ಪಾಟೀಲ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಬರೆದಿದ್ದರು ಎನ್ನಲಾದ ನಕಲಿ ಪತ್ರವನ್ನು ಶಾರದಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದಡಿ ಪ್ರಕರಣ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು


Body:kN_BNG_12_HIGCOURT_7204498Conclusion:kN_BNG_12_HIGCOURT_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.