ETV Bharat / state

'ಬಿಜೆಪಿಯಿಂದ ದೇಶಕ್ಕೆ ಉಳಿಗಾಲವಿಲ್ಲ': ಭಾರತ್ ಬಂದ್​ಗೆ ಬೆಂಬಲಿಸುವಂತೆ ಸಿದ್ದರಾಮಯ್ಯ ಕರೆ

author img

By

Published : Dec 8, 2020, 4:27 AM IST

ಸಂವಿಧಾನದ ಪ್ರಕಾರ ಕೃಷಿ ರಾಜ್ಯಕ್ಕೆ ಸಂಬಂಧ ವಿಷಯವಾಗಿದ್ದರೂ ರಾಜ್ಯ ಸರ್ಕಾರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡು ಕೃಷಿಯಂತಹ ಕರಾಳ ಕಾನೂನುಗಳನ್ನು ತಂದಿರುವ ಕೇಂದ್ರ ಸರ್ಕಾರದ ನಡೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರತಿಯೊಬ್ಬ ನಾಗರಿಕರೂ ಭಾರತ್​ ಬಂದ್​ನಲ್ಲಿ ಪಾಲ್ಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

siddaramaiah
ಸಿದ್ದರಾಮಯ್ಯ

ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆಕೊಟ್ಟಿರುವ ಡಿಸೆಂಬರ್ 8ರ ಭಾರತ ಬಂದ್​ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬಂದ್​ನಲ್ಲಿ ಭಾಗವಹಿಸುವುದಲ್ಲದೆ ಪ್ರತಿಯೊಬ್ಬ ನಾಗರಿಕರೂ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

ರಾಜಧಾನಿಯಲ್ಲಿ ಲಕ್ಷಾಂತರ ರೈತರು ಕೊರೆಯುವ ಚಳಿ, ಪೊಲೀಸರ ದೌರ್ಜನ್ಯ ಮತ್ತು ಬಿಜೆಪಿ ಕಿಡಿಗೇಡಿಗಳ ಅಪಪ್ರಚಾರಕ್ಕೆ ಎದೆಗೊಟ್ಟು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ನಮಗಾಗಿ ಹೋರಾಟ ನಡೆಸುತ್ತಿರುವ ಅನ್ನದಾತರ ಬೆಂಬಲಕ್ಕೆ ನಿಲ್ಲುವುದು ಅನ್ನ ತಿನ್ನುವ ನಮ್ಮೆಲ್ಲ ಕರ್ತವ್ಯವಾಗಿದೆ. ಕೊರೊನಾ ವೈರಸ್ ದಾಳಿಯಿಂದ ತಾವು ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿ ನರಳುತ್ತಿರುವ ನಮ್ಮ ರೈತ ಬಂಧುಗಳು ‘ನಮ್ಮನ್ನು ರಕ್ಷಿಸಿ, ಉಳಿಸಿ’ ಎಂದು ಗೋಗರೆಯುತ್ತಿರುವಾಗ, ಕೇಂದ್ರ ಸರ್ಕಾರ ಕೃಷಿ ವಿರೋಧಿ ಕಾಯ್ದೆಗಳನ್ನು ಅವಸರದಲ್ಲಿ ಜಾರಿಗೊಳಿಸಿ ಅವರ ಗಾಯದ ಮೇಲೆ ಬರೆ ಎಳೆದು ನಿಧಾನವಾಗಿ ಸಾಯಿಸಲು ಹೊರಟಿದೆ ಎಂದಿದ್ದಾರೆ.

ಭಾರತ್ ಬಂದ್ ಬೆಂಬಲಿಸಿ ಇಂದು ಕಾಂಗ್ರೆಸ್ ನಾಯಕರ ಸಾಂಕೇತಿಕ ಪ್ರತಿಭಟನೆ

ಖಾಸಗಿ ಕಂಪನಿಗಳ ತಾಳಕ್ಕೆ ಕೇಂದ್ರ ಸರ್ಕಾರ ಕುಣಿಯತೊಡಗಿದೆ. ಈ ಸಂಚಿನ ಭಾಗವಾಗಿಯೇ ಎಪಿಎಂಸಿ ಹೊಂದಿರುವ ನಿಯಂತ್ರಣವನ್ನು ಕಿತ್ತು ಹಾಕಿ ಖಾಸಗಿಯವರಿಗೆ ಅನಿಯಂತ್ರಿತವಾದ ಮುಕ್ತ ಹಸ್ತ ನೀಡುವ ದುರುದ್ದೇಶದಿಂದ ಈ ಕಾಯ್ದೆ ತರಲಾಗಿದೆ. ಈ ಬಗ್ಗೆ ನಮ್ಮ ರೈತರು ಜಾಗೃತರಾಗಬೇಕಾಗಿದೆ. ರೈತ ಸಂಘಟನೆಗಳ ಜೊತೆ ಕೇಂದ್ರ ಸರ್ಕಾರ ಹಲವು ಸುತ್ತಿನ ಮಾತುಕತೆ ನಡೆಸಿದರೂ ಕನಿಷ್ಠ ಬೆಂಬಲ ಬೆಲೆಯ ಒಂದು ಅಂಶವನ್ನು ಕಾನೂನಿನಲ್ಲಿ ಅಳವಡಿಸಬೇಕೆಂಬ ಸಣ್ಣ ಬೇಡಿಕೆಯನ್ನು ಒಪ್ಪದಿರುವ ಕೇಂದ್ರ ಸರ್ಕಾರದ ದುರುದ್ದೇಶ ಸ್ಪಷ್ಟವಾಗಿದೆ. ಇದು ಕಾರ್ಪೊರೇಟ್​ ಧಣಿಗಳ ಗುಲಾಮಿ ಸರ್ಕಾರ ಎಂದು ಪ್ರಕಟಣೆಯಲ್ಲಿ ಆಪಾದಿಸಿದ್ದಾರೆ.

ಸಂವಿಧಾನದ ಪ್ರಕಾರ ಕೃಷಿ ರಾಜ್ಯಕ್ಕೆ ಸಂಬಂಧ ವಿಷಯವಾಗಿದ್ದರೂ ರಾಜ್ಯ ಸರ್ಕಾರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡು ಈ ಕರಾಳ ಕಾನೂನುಗಳನ್ನು ತಂದಿರುವ ಕೇಂದ್ರಸರ್ಕಾರದ ನಡೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರದ ಖಾಸಗೀಕರಣದ ತಿದ್ದುಪಡಿ, ಪ್ರಮುಖ ಬೆಳೆಗಳನ್ನು ಅಗತ್ಯವಸ್ತುಗಳ ಕಾಯ್ದೆ ಹೊರಗಿಡುವ ತಿದ್ದುಪಡಿ, ಬೀಜ-ಗೊಬ್ಬರಗಳ ಮೇಲೆ ಜಿಎಸ್​ಟಿ... ಹೀಗೆ ಒಂದಾದರ ಮೇಲೊಂದರಂತೆ ರೈತರ ಮೇಲೆ ಪ್ರಹಾರ ಮಾಡುತ್ತಾ ಬಂದಿರುವ ಬಿಜೆಪಿಯಿಂದ ದೇಶಕ್ಕೆ ಉಳಿಗಾಲ ಇಲ್ಲ. ರಾಜ್ಯದ ಬಿಜೆಪಿ ಸರ್ಕಾರ ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡಾ ಬಹುರಾಷ್ಟ್ರೀಯ ಕಂಪನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಹಿತಾಸಕ್ತಿ ರಕ್ಷಣೆಗಾಗಿ ರೈತರನ್ನು ಬಲಿಗೊಡುವ ಅಜೆಂಡಾದ ಭಾಗವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ರೈತವಿರೋಧಿ ನೀತಿ-ನಿರ್ಧಾರಗಳನ್ನು ಗುಲಾಮರಂತೆ ತಲೆಬಗ್ಗಿಸಿ ಒಪ್ಪಿಕೊಂಡು ಜಾರಿಗೊಳಿಸುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ರಾಜ್ಯದ ರೈತರಿಗೆ ದ್ರೋಹಬಗೆಯುತ್ತಿದೆ. ಹಿಂದೆ ಗುಂಡು ಹೊಡೆದು ರೈತರ ಸಾಯಿಸಿದ ಬಿ.ಎಸ್.ಯಡಿಯೂರಪ್ಪನವರು ಈಗ ಕರಾಳ ಕಾನೂನುಗಳ ಮೂಲಕ ರೈತರನ್ನು ಸಾಯಿಸಲು ಹೊರಟಿದ್ದಾರೆ ಎಂದಿದ್ದಾರೆ.

ದೆಹಲಿಯಲ್ಲಿ ರೈತರು ಪ್ರಭತ್ವದ ದೌರ್ಜನ್ಯವನ್ನು ಎದುರಿಸಿ, ಕಷ್ಟ-ನಷ್ಟಗಳನ್ನುಂಡು ನಮಗಾಗಿ ಹೋರಾಡುತ್ತಿದ್ದಾರೆ. ನಾಳಿನ ಭಾರತ ಬಂದ್​ಗೆ ಎಲ್ಲರೂ ಬೆಂಬಲ ನೀಡುವ ಮೂಲಕ ಅನ್ನದಾತರ ಋಣ ಸಂದಾಯ ಮಾಡಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆಕೊಟ್ಟಿರುವ ಡಿಸೆಂಬರ್ 8ರ ಭಾರತ ಬಂದ್​ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬಂದ್​ನಲ್ಲಿ ಭಾಗವಹಿಸುವುದಲ್ಲದೆ ಪ್ರತಿಯೊಬ್ಬ ನಾಗರಿಕರೂ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

ರಾಜಧಾನಿಯಲ್ಲಿ ಲಕ್ಷಾಂತರ ರೈತರು ಕೊರೆಯುವ ಚಳಿ, ಪೊಲೀಸರ ದೌರ್ಜನ್ಯ ಮತ್ತು ಬಿಜೆಪಿ ಕಿಡಿಗೇಡಿಗಳ ಅಪಪ್ರಚಾರಕ್ಕೆ ಎದೆಗೊಟ್ಟು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ನಮಗಾಗಿ ಹೋರಾಟ ನಡೆಸುತ್ತಿರುವ ಅನ್ನದಾತರ ಬೆಂಬಲಕ್ಕೆ ನಿಲ್ಲುವುದು ಅನ್ನ ತಿನ್ನುವ ನಮ್ಮೆಲ್ಲ ಕರ್ತವ್ಯವಾಗಿದೆ. ಕೊರೊನಾ ವೈರಸ್ ದಾಳಿಯಿಂದ ತಾವು ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿ ನರಳುತ್ತಿರುವ ನಮ್ಮ ರೈತ ಬಂಧುಗಳು ‘ನಮ್ಮನ್ನು ರಕ್ಷಿಸಿ, ಉಳಿಸಿ’ ಎಂದು ಗೋಗರೆಯುತ್ತಿರುವಾಗ, ಕೇಂದ್ರ ಸರ್ಕಾರ ಕೃಷಿ ವಿರೋಧಿ ಕಾಯ್ದೆಗಳನ್ನು ಅವಸರದಲ್ಲಿ ಜಾರಿಗೊಳಿಸಿ ಅವರ ಗಾಯದ ಮೇಲೆ ಬರೆ ಎಳೆದು ನಿಧಾನವಾಗಿ ಸಾಯಿಸಲು ಹೊರಟಿದೆ ಎಂದಿದ್ದಾರೆ.

ಭಾರತ್ ಬಂದ್ ಬೆಂಬಲಿಸಿ ಇಂದು ಕಾಂಗ್ರೆಸ್ ನಾಯಕರ ಸಾಂಕೇತಿಕ ಪ್ರತಿಭಟನೆ

ಖಾಸಗಿ ಕಂಪನಿಗಳ ತಾಳಕ್ಕೆ ಕೇಂದ್ರ ಸರ್ಕಾರ ಕುಣಿಯತೊಡಗಿದೆ. ಈ ಸಂಚಿನ ಭಾಗವಾಗಿಯೇ ಎಪಿಎಂಸಿ ಹೊಂದಿರುವ ನಿಯಂತ್ರಣವನ್ನು ಕಿತ್ತು ಹಾಕಿ ಖಾಸಗಿಯವರಿಗೆ ಅನಿಯಂತ್ರಿತವಾದ ಮುಕ್ತ ಹಸ್ತ ನೀಡುವ ದುರುದ್ದೇಶದಿಂದ ಈ ಕಾಯ್ದೆ ತರಲಾಗಿದೆ. ಈ ಬಗ್ಗೆ ನಮ್ಮ ರೈತರು ಜಾಗೃತರಾಗಬೇಕಾಗಿದೆ. ರೈತ ಸಂಘಟನೆಗಳ ಜೊತೆ ಕೇಂದ್ರ ಸರ್ಕಾರ ಹಲವು ಸುತ್ತಿನ ಮಾತುಕತೆ ನಡೆಸಿದರೂ ಕನಿಷ್ಠ ಬೆಂಬಲ ಬೆಲೆಯ ಒಂದು ಅಂಶವನ್ನು ಕಾನೂನಿನಲ್ಲಿ ಅಳವಡಿಸಬೇಕೆಂಬ ಸಣ್ಣ ಬೇಡಿಕೆಯನ್ನು ಒಪ್ಪದಿರುವ ಕೇಂದ್ರ ಸರ್ಕಾರದ ದುರುದ್ದೇಶ ಸ್ಪಷ್ಟವಾಗಿದೆ. ಇದು ಕಾರ್ಪೊರೇಟ್​ ಧಣಿಗಳ ಗುಲಾಮಿ ಸರ್ಕಾರ ಎಂದು ಪ್ರಕಟಣೆಯಲ್ಲಿ ಆಪಾದಿಸಿದ್ದಾರೆ.

ಸಂವಿಧಾನದ ಪ್ರಕಾರ ಕೃಷಿ ರಾಜ್ಯಕ್ಕೆ ಸಂಬಂಧ ವಿಷಯವಾಗಿದ್ದರೂ ರಾಜ್ಯ ಸರ್ಕಾರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡು ಈ ಕರಾಳ ಕಾನೂನುಗಳನ್ನು ತಂದಿರುವ ಕೇಂದ್ರಸರ್ಕಾರದ ನಡೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರದ ಖಾಸಗೀಕರಣದ ತಿದ್ದುಪಡಿ, ಪ್ರಮುಖ ಬೆಳೆಗಳನ್ನು ಅಗತ್ಯವಸ್ತುಗಳ ಕಾಯ್ದೆ ಹೊರಗಿಡುವ ತಿದ್ದುಪಡಿ, ಬೀಜ-ಗೊಬ್ಬರಗಳ ಮೇಲೆ ಜಿಎಸ್​ಟಿ... ಹೀಗೆ ಒಂದಾದರ ಮೇಲೊಂದರಂತೆ ರೈತರ ಮೇಲೆ ಪ್ರಹಾರ ಮಾಡುತ್ತಾ ಬಂದಿರುವ ಬಿಜೆಪಿಯಿಂದ ದೇಶಕ್ಕೆ ಉಳಿಗಾಲ ಇಲ್ಲ. ರಾಜ್ಯದ ಬಿಜೆಪಿ ಸರ್ಕಾರ ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡಾ ಬಹುರಾಷ್ಟ್ರೀಯ ಕಂಪನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಹಿತಾಸಕ್ತಿ ರಕ್ಷಣೆಗಾಗಿ ರೈತರನ್ನು ಬಲಿಗೊಡುವ ಅಜೆಂಡಾದ ಭಾಗವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ರೈತವಿರೋಧಿ ನೀತಿ-ನಿರ್ಧಾರಗಳನ್ನು ಗುಲಾಮರಂತೆ ತಲೆಬಗ್ಗಿಸಿ ಒಪ್ಪಿಕೊಂಡು ಜಾರಿಗೊಳಿಸುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ರಾಜ್ಯದ ರೈತರಿಗೆ ದ್ರೋಹಬಗೆಯುತ್ತಿದೆ. ಹಿಂದೆ ಗುಂಡು ಹೊಡೆದು ರೈತರ ಸಾಯಿಸಿದ ಬಿ.ಎಸ್.ಯಡಿಯೂರಪ್ಪನವರು ಈಗ ಕರಾಳ ಕಾನೂನುಗಳ ಮೂಲಕ ರೈತರನ್ನು ಸಾಯಿಸಲು ಹೊರಟಿದ್ದಾರೆ ಎಂದಿದ್ದಾರೆ.

ದೆಹಲಿಯಲ್ಲಿ ರೈತರು ಪ್ರಭತ್ವದ ದೌರ್ಜನ್ಯವನ್ನು ಎದುರಿಸಿ, ಕಷ್ಟ-ನಷ್ಟಗಳನ್ನುಂಡು ನಮಗಾಗಿ ಹೋರಾಡುತ್ತಿದ್ದಾರೆ. ನಾಳಿನ ಭಾರತ ಬಂದ್​ಗೆ ಎಲ್ಲರೂ ಬೆಂಬಲ ನೀಡುವ ಮೂಲಕ ಅನ್ನದಾತರ ಋಣ ಸಂದಾಯ ಮಾಡಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.