ETV Bharat / state

ಆಪರೇಷನ್ ಕಮಲ ಭೀತಿ: ಕಂಪ್ಲಿ ಗಣೇಶ್ ಅಮಾನತು ದಿಢೀರ್​ ವಾಪಸ್​ ಪಡೆದ ಕಾಂಗ್ರೆಸ್..!

ಆಪರೇಷನ್ ಕಮಲ ಭೀತಿ ಕಾಂಗ್ರೆಸ್​​ ಶಾಸಕ ಗಣೇಶ್​ಗೆ ವರವಾಗಿದೆ. ಆನಂದ ಸಿಂಗ್​ ಮೇಲೆ ಹಲ್ಲೆ ನಡೆಸಿ ಕಾಂಗ್ರೆಸ್​​ ಅಮಾನತು ಶಿಕ್ಷೆಗೆ ಗುರಿಯಾಗಿದ್ದರು ಕಂಪ್ಲಿ ಶಾಸಕ. ಇದೀಗ ಶಾಸಕ ಗಣೇಶ್ ಅಮಾನತು ಆದೇಶವನ್ನು ಕಾಂಗ್ರೆಸ್ ಪಕ್ಷ ದಿಢೀರ್​ ವಾಪಸ್​ ಪಡೆದಿದೆ.

author img

By

Published : May 29, 2019, 10:01 PM IST

Updated : May 29, 2019, 10:58 PM IST

ಕಂಪ್ಲಿ ಶಾಸಕ ಗಣೇಶ್

ಬೆಂಗಳೂರು: ರೆಸಾರ್ಟ್​ನಲ್ಲಿ ವಿಜಯನಗರ ಶಾಸಕ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕನಿಗೆ ಮತ್ತೊಂದು ರಿಲೀಫ್​ ಸಿಕ್ಕಿದೆ. ಶಾಸಕ ಗಣೇಶ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಹಠಾತ್ತನೇ ಹಿಂಪಡೆದಿದೆ.

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಮುನ್ನ ಅಮಾನತು ಆದೇಶ ಹಿಂಪಡೆದಿರುವ ಸಂದೇಶವನ್ನು ಕಾಂಗ್ರೆಸ್ ಪಕ್ಷ ಶಾಸಕ ಗಣೇಶ್​ಗೆ ರವಾನಿಸಿದೆ ಎಂದು ತಿಳಿದುಬಂದಿದೆ.

ಆಪರೇಷನ್ ಕಮಲದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕರು ತಮ್ಮ ಶಾಸಕರನ್ನ ಮತ್ತು ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗ್ತಿದೆ. ಸ್ವಪಕ್ಷದ ಶಾಸಕನ ಮೇಲೆಯೇ ಹಲ್ಲೆ ನಡೆಸಿ ಕಾರಾಗೃಹ ಶಿಕ್ಷೆ ಅನುಭವಿಸಿ ಬಂದಿರುವ ಶಾಸಕ ಗಣೇಶ್​ ವಿರುದ್ಧದ ಅಮಾನತು ಆದೇಶವನ್ನ ಕಾಂಗ್ರೆಸ್​ ಹಿಂಪಡೆದಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಪರಸ್ಪರ ಚರ್ಚಿಸಿ ಶಾಸಕ ಗಣೇಶ್ ಅವರ ಅಮಾನತು ಆದೇಶವನ್ನು ವಾಪಸ್​ ಪಡೆಯಲಾಗಿದೆ ಎಂದು ಕಾಂಗ್ರೆಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ನಂತರ ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಹೋಗಬೇಕು ಮತ್ತು ಶಾಸಕ ಗಣೇಶ್ ಅಮಾನತು ಮಾಡಿದ್ದಕ್ಕೆ ಸಿಟ್ಟಾಗಿ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಸೇರಿಬಿಡುತ್ತಾರೆನ್ನುವ ಆತಂಕದಿಂದ ಗಣೇಶ್ ಮನವೊಲಿಕೆಗೆ ಈ ಕ್ರಮವನ್ನು ಕೈಗೊಂಡಿದೆ ಎನ್ನಲಾಗ್ತಿದೆ.

ಕಳೆದ ಫೆಬ್ರವರಿ ಬಿಡದಿಯ ರೆಸಾರ್ಟ್​ನಲ್ಲಿ ಆಪರೇಷನ್ ಕಮಲದಿಂದ ಶಾಸಕರನ್ನು ರಕ್ಷಿಸಿಕೊಳ್ಳಲು ತಂಗಿದ್ದ ಸಂದರ್ಭ ಶಾಸಕ ಗಣೇಶ್ ಅವರು ಶಾಸಕ ಆನಂದ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.​ ಬಳಿಕ ಬಂಧನಕ್ಕೊಳಗಾಗಿದ್ದ ಗಣೇಶ್​, ಇತ್ತೀಚೆಗಷ್ಟೇ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು.

ಬೆಂಗಳೂರು: ರೆಸಾರ್ಟ್​ನಲ್ಲಿ ವಿಜಯನಗರ ಶಾಸಕ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕನಿಗೆ ಮತ್ತೊಂದು ರಿಲೀಫ್​ ಸಿಕ್ಕಿದೆ. ಶಾಸಕ ಗಣೇಶ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಹಠಾತ್ತನೇ ಹಿಂಪಡೆದಿದೆ.

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಮುನ್ನ ಅಮಾನತು ಆದೇಶ ಹಿಂಪಡೆದಿರುವ ಸಂದೇಶವನ್ನು ಕಾಂಗ್ರೆಸ್ ಪಕ್ಷ ಶಾಸಕ ಗಣೇಶ್​ಗೆ ರವಾನಿಸಿದೆ ಎಂದು ತಿಳಿದುಬಂದಿದೆ.

ಆಪರೇಷನ್ ಕಮಲದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕರು ತಮ್ಮ ಶಾಸಕರನ್ನ ಮತ್ತು ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗ್ತಿದೆ. ಸ್ವಪಕ್ಷದ ಶಾಸಕನ ಮೇಲೆಯೇ ಹಲ್ಲೆ ನಡೆಸಿ ಕಾರಾಗೃಹ ಶಿಕ್ಷೆ ಅನುಭವಿಸಿ ಬಂದಿರುವ ಶಾಸಕ ಗಣೇಶ್​ ವಿರುದ್ಧದ ಅಮಾನತು ಆದೇಶವನ್ನ ಕಾಂಗ್ರೆಸ್​ ಹಿಂಪಡೆದಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಪರಸ್ಪರ ಚರ್ಚಿಸಿ ಶಾಸಕ ಗಣೇಶ್ ಅವರ ಅಮಾನತು ಆದೇಶವನ್ನು ವಾಪಸ್​ ಪಡೆಯಲಾಗಿದೆ ಎಂದು ಕಾಂಗ್ರೆಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ನಂತರ ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಹೋಗಬೇಕು ಮತ್ತು ಶಾಸಕ ಗಣೇಶ್ ಅಮಾನತು ಮಾಡಿದ್ದಕ್ಕೆ ಸಿಟ್ಟಾಗಿ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಸೇರಿಬಿಡುತ್ತಾರೆನ್ನುವ ಆತಂಕದಿಂದ ಗಣೇಶ್ ಮನವೊಲಿಕೆಗೆ ಈ ಕ್ರಮವನ್ನು ಕೈಗೊಂಡಿದೆ ಎನ್ನಲಾಗ್ತಿದೆ.

ಕಳೆದ ಫೆಬ್ರವರಿ ಬಿಡದಿಯ ರೆಸಾರ್ಟ್​ನಲ್ಲಿ ಆಪರೇಷನ್ ಕಮಲದಿಂದ ಶಾಸಕರನ್ನು ರಕ್ಷಿಸಿಕೊಳ್ಳಲು ತಂಗಿದ್ದ ಸಂದರ್ಭ ಶಾಸಕ ಗಣೇಶ್ ಅವರು ಶಾಸಕ ಆನಂದ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.​ ಬಳಿಕ ಬಂಧನಕ್ಕೊಳಗಾಗಿದ್ದ ಗಣೇಶ್​, ಇತ್ತೀಚೆಗಷ್ಟೇ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು.

Intro: ಆಪರೇಶನ್ ಕಮಲ ಭೀತಿ : ಕಂಪ್ಲಿ ಶಾಸಕ ಗಣೇಶ್ ಅಮಾನತ್ತು ಹಠಾತ್ತನೇ ವಾಪಾಸ್ಸು ಪಡೆದ ಕಾಂಗ್ರೆಸ್..!

ಬೆಂಗಳೂರು : ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪಕ್ಷದಿಂದ ಸಸ್ಪೆಂಡ್ ಮಾಡಲಾಗಿದ್ದ ಕಂಪ್ಲಿ ಶಾಸಕ ಗಣೇಶ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಪಕ್ಷ ಹಠಾತ್ತನೇ ಹಿಂದಕ್ಕೆ ಪಡೆದಿದೆ.

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಮುನ್ನ ಅಮಾನತ್ತು ಆದೇಶ ಹಿಂದಕ್ಕೆ ಪಡೆದಿರುವ ಸಂದೇಶವನ್ನು ಕಾಂಗ್ರೆಸ್ ಪಕ್ಷ ಶಾಸಕ ಗಣೇಶ್ ಅವರಿಗೆ ರವಾನಿಸಿದೆ.




Body:ಆಪರೇಶನ್ ಕಮಲದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್‌ ಪಕ್ಷ ತನ್ನ ಶಾಸಕರನ್ನ ಮತ್ತು ಮೈತ್ರಿ ಸರಕಾರ ಉಳಿಸಿಕೊಳ್ಳುವ ಪ್ರಯತ್ನವಾಗಿ ಪಕ್ಷದ ಶಾಸಕನ ಮೇಲೆಯೇ ಹಲ್ಲೆ ನಡೆಸಿ ಕಾರಾಗೃಹ ವಾಸವನ್ನೂ ಅನುಭವಿಸಿ ಬಂದ ಶಾಸಕನ ಅಮಾನತು ಆದೇಶವನ್ನ ಹಿಂದಕ್ಕೆ ಪಡೆದಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಪರಸ್ಪರ ಚರ್ಚಿಸಿ ಶಾಸಕ ಗಣೇಶ್ ಸಸ್ಪೆಂಡ್ ಆದೇಶ ವಾಪಾಸು ಪಡೆದಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ನಂತರ ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಹೋಗಬೇಕು ಮತ್ತು ಶಾಸಕ ಗಣೇಶ್ ಅಮಾನತು ಮಾಡಿದ್ದಕ್ಕೆ ಸಿಟ್ಟಾಗಿ ಆಪರೇಶನ್ ಕಮಲದಲ್ಲಿ ಬಿಜೆಪಿ ಗೆ ಸೇರಿಬಿಡುತ್ತಾರೆನ್ನುವ ಆತಂಕದಿಂದ ಗಣೇಶ್ ಮನವೊಲಿಕೆಗೆ ಈ ಕ್ರಮ ವನ್ನು ಕೈಗೊಂಡಿದೆ.


Conclusion: ಕಳೆದ ಫೆಬ್ರವರಿ ಯಲ್ಲಿ ಬಿಡದಿಯ ರೆಸಾರ್ಟ್ ನಲ್ಲಿ ಆಪರೇಶನ್ ಕಮಲ ದಿಂದ ಶಾಸಕರನ್ನು ರಕ್ಷಿಸಿಕೊಳ್ಳಲು ತಂಗಿದ್ದ ಸಂದರ್ಭದಲ್ಲಿ ಶಾಸಕ ತನ್ನ ಆತ್ಮೀಯ ಗೆಳೆಯ ರಾಗಿದ್ದ ಬಳ್ಳಾರಿ ಜಿಲ್ಲೆ ಯ ವಿಜಯನಗರ ಶಾಸಕರಾದ ಆನಂದ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಂತರ ಬಂಧನ ಕ್ಕೊಳಗಾಗಿದ್ದರು. ಇತ್ತೀಚೆಗೆ ಜಾಮೀನಿನಿ ಮೇಲೆ ಬಿಡುಗಡೆಯಾಗಿದ್ದರು.
Last Updated : May 29, 2019, 10:58 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.