ETV Bharat / state

ಟ್ರಿನಿಟಿ ಹೋಟೆಲ್​ನಲ್ಲಿ ಅಗ್ನಿ ಅವಘಡ: ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಇಬ್ಬರು, 7 ಜನರ ರಕ್ಷಣೆ

author img

By

Published : Sep 14, 2021, 9:26 AM IST

ಟ್ರಿನಿಟಿ ಹೋಟೆಲ್​ನಲ್ಲಿ ಭಾರಿ ಅಗ್ನಿ ಅವಘಢ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಏಳು ಜನರನ್ನು ರಕ್ಷಿಸಿದ್ದಾರೆ.

ಟ್ರಿನಿಟಿ ಹೋಟೆಲ್​ನಲ್ಲಿ ಅಗ್ನಿ ಅವಘಡ
ಟ್ರಿನಿಟಿ ಹೋಟೆಲ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು: ಟ್ರಿನಿಟಿ ಸರ್ಕಲ್ ಬಳಿಯಿರುವ ಅಜಂತಾ ಟ್ರಿನಿಟಿ ಹೋಟೆಲ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, 2 ಮಹಡಿಯಲ್ಲಿದ್ದ ವಸ್ತುಗಳು ಭಸ್ಮವಾಗಿವೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಟ್ರಿನಿಟಿ ಹೋಟೆಲ್​ನಲ್ಲಿ ಅಗ್ನಿ ಅವಘಡ

ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಿಂದ, ಇಡೀ ಹೋಟೆಲ್​ಗೆ ಜ್ವಾಲೆ ಆವರಿಸಿತ್ತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ, ಹೋಟೆಲ್​ನಲ್ಲಿ ತಂಗಿದ್ದ ನಾಗೇಶ್, ಮಹೇಂದ್ರ, ಸತ್ಯಪ್ರಕಾಶ್, ದಿನೇಶ್ ಹಾಗೂ ಅಭಿಷೇಕ್ ಅವರನ್ನು ರಕ್ಷಿಸಿದರು.

ದಟ್ಟ ಹೊಗೆ ಆವರಿಸಿಕೊಂಡಿದ್ದರಿಂದ ರಾಜಪ್ಪ ಹಾಗೂ ಸುರೇಶ್ ಎಂಬುವರು ಎರಡನೇ ಮಹಡಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಪಾರ್ಕಿಂಗ್ ಲಾಟ್​ನಲ್ಲಿದ್ದ ಒಂದು ಆಟೋ, ಒಂದು ಬೊಲೆರೊ ವಾಹನ ಸುಟ್ಟು ಕರಕಲಾಗಿರುವುದರಿಂದ ಮೊದಲು ಬೊಲೆರೊ ವಾಹನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಬೊಲೆರೊ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಪಕ್ಕದಲ್ಲೇ ಇದ್ದ ಆಟೋಗೆ ತಗುಲಿರಬಹುದು. ಬಳಿಕ ಕಟ್ಟಡಕ್ಕೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ವೈರ್​​ಗೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಇದರಿಂದ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಹೋಟೆಲ್​ ಅಗ್ನಿಗಾಹುತಿಯಾಗಿದೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಕ್ಷುಲ್ಲಕ‌ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಘಟನೆಯಲ್ಲಿ ಇಡೀ ಹೋಟೆಲ್​ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಭಸ್ಮವಾಗಿವೆ. ಈ ಕುರಿತು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಟ್ರಿನಿಟಿ ಸರ್ಕಲ್ ಬಳಿಯಿರುವ ಅಜಂತಾ ಟ್ರಿನಿಟಿ ಹೋಟೆಲ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, 2 ಮಹಡಿಯಲ್ಲಿದ್ದ ವಸ್ತುಗಳು ಭಸ್ಮವಾಗಿವೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಟ್ರಿನಿಟಿ ಹೋಟೆಲ್​ನಲ್ಲಿ ಅಗ್ನಿ ಅವಘಡ

ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಿಂದ, ಇಡೀ ಹೋಟೆಲ್​ಗೆ ಜ್ವಾಲೆ ಆವರಿಸಿತ್ತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ, ಹೋಟೆಲ್​ನಲ್ಲಿ ತಂಗಿದ್ದ ನಾಗೇಶ್, ಮಹೇಂದ್ರ, ಸತ್ಯಪ್ರಕಾಶ್, ದಿನೇಶ್ ಹಾಗೂ ಅಭಿಷೇಕ್ ಅವರನ್ನು ರಕ್ಷಿಸಿದರು.

ದಟ್ಟ ಹೊಗೆ ಆವರಿಸಿಕೊಂಡಿದ್ದರಿಂದ ರಾಜಪ್ಪ ಹಾಗೂ ಸುರೇಶ್ ಎಂಬುವರು ಎರಡನೇ ಮಹಡಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಪಾರ್ಕಿಂಗ್ ಲಾಟ್​ನಲ್ಲಿದ್ದ ಒಂದು ಆಟೋ, ಒಂದು ಬೊಲೆರೊ ವಾಹನ ಸುಟ್ಟು ಕರಕಲಾಗಿರುವುದರಿಂದ ಮೊದಲು ಬೊಲೆರೊ ವಾಹನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಬೊಲೆರೊ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಪಕ್ಕದಲ್ಲೇ ಇದ್ದ ಆಟೋಗೆ ತಗುಲಿರಬಹುದು. ಬಳಿಕ ಕಟ್ಟಡಕ್ಕೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ವೈರ್​​ಗೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಇದರಿಂದ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಹೋಟೆಲ್​ ಅಗ್ನಿಗಾಹುತಿಯಾಗಿದೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಕ್ಷುಲ್ಲಕ‌ ಕಾರಣಕ್ಕೆ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಘಟನೆಯಲ್ಲಿ ಇಡೀ ಹೋಟೆಲ್​ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಭಸ್ಮವಾಗಿವೆ. ಈ ಕುರಿತು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.