ETV Bharat / state

ಸದ್ದು ಮಾಡಿದ ಖಾಕಿ ಪಿಸ್ತೂಲ್: ಬೆಂಗಳೂರಲ್ಲಿ ರೌಡಿಶೀಟರ್ ಕಾಲಿಗೆ‌ ಗುಂಡು

ಬೆಂಗಳೂರಿನ ವಿವಿಧೆಡೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

author img

By

Published : Jan 7, 2021, 8:15 AM IST

firing-on-rowdy-sheeter-in-bengaluru
ರೌಡಿಶೀಟರ್ ಕಾಲಿಗೆ‌ ಗುಂಡು

ಬೆಂಗಳೂರು: ನಗರದ ವಿವಿಧ ಕಡೆಗಳಲ್ಲಿ ಅಪರಾಧ ಎಸಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಮೇಲೆ ನಂದಿನಿ ಲೇಔಟ್ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.

ಕಾರ್ತಿಕ್ ಎಂಬಾತನೆ ಬಂಧಿತ ರೌಡಿಶೀಟರ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಕಾರ್ತಿಕ್ 15ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ.

firing-on-rowdy-sheeter-in-bengaluru
ಸಬ್ ಇನ್‌ಸ್ಪೆಕ್ಟರ್ ನಿತ್ಯಾನಂದ

ಇಂದು ನಸುಕಿನಲ್ಲಿ ಶ್ರೀರಾಂಪುರ ಬಳಿ ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಲು ಮುಂದಾಗಿದ್ದರು. ಈ ವೇಳೆ, ಸಬ್ ಇನ್‌ಸ್ಪೆಕ್ಟರ್ ನಿತ್ಯಾನಂದ ನೇತೃತ್ವದ ತಂಡದ ಮೇಲೆ ಕಾರ್ತಿಕ್ ಹಲ್ಲೆಗೆ ಮುಂದಾಗಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೆಂಗಳೂರು: ನಗರದ ವಿವಿಧ ಕಡೆಗಳಲ್ಲಿ ಅಪರಾಧ ಎಸಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಮೇಲೆ ನಂದಿನಿ ಲೇಔಟ್ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.

ಕಾರ್ತಿಕ್ ಎಂಬಾತನೆ ಬಂಧಿತ ರೌಡಿಶೀಟರ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಕಾರ್ತಿಕ್ 15ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ.

firing-on-rowdy-sheeter-in-bengaluru
ಸಬ್ ಇನ್‌ಸ್ಪೆಕ್ಟರ್ ನಿತ್ಯಾನಂದ

ಇಂದು ನಸುಕಿನಲ್ಲಿ ಶ್ರೀರಾಂಪುರ ಬಳಿ ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಲು ಮುಂದಾಗಿದ್ದರು. ಈ ವೇಳೆ, ಸಬ್ ಇನ್‌ಸ್ಪೆಕ್ಟರ್ ನಿತ್ಯಾನಂದ ನೇತೃತ್ವದ ತಂಡದ ಮೇಲೆ ಕಾರ್ತಿಕ್ ಹಲ್ಲೆಗೆ ಮುಂದಾಗಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.