ETV Bharat / state

ಮೊದಲ ಹಂತದ ವ್ಯಾಕ್ಸಿನ್​ಗೆ ಸಕಲ ಸಿದ್ದತೆ; ಲಸಿಕೆ ಕೇಂದ್ರಕ್ಕೆ ಬಿಬಿಎಂಪಿ ಆಯುಕ್ತ ಭೇಟಿ - BBMP Commissioner visits Bangalore vaccine center

ಲಸಿಕೆ ಪಡೆಯುವ ಫಲಾನುಭವಿಗಳಿಗೆ ಒ.ಟಿ.ಪಿ ಬರುವ ವೇಳೆ ನೆಟ್ ವರ್ಕ್ ಸಮಸ್ಯೆ ಆಗದಂತೆ ಎಲ್ಲ ಕೇಂದ್ರಗಳಲ್ಲಿಯೂ ಎರಡು/ಮೂರು ಇಂಟರ್ ನೆಟ್ ಕನೆಕ್ಷನ್ ತೆಗೆದುಕೊಂಡಿದ್ದು, ಸೂಕ್ತ ಕ್ರಮ ವಹಿಸಲಾಗಿದೆ. ಎಲ್ಲಾದರೂ ನೆಟ್​ವರ್ಕ್​ ಸಮಸ್ಯೆಯಾದರೆ ಫಲಾನುಭವಿಗಳು ಕೋವಿನ್ ಪೋರ್ಟಲ್‌ನಲ್ಲಿ ದಾಖಲಿಸಿರುವ ಗುರುತಿನ ಚೀಟಿ ಪರಿಶೀಲನೆ ನಡೆಸಿ ಆಫ್ ಲೈನ್ ಮೂಲಕ ದಾಖಲು ಮಾಡಿಕೊಂಡು ಲಸಿಕೆ ನೀಡಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

First stage vaccine available in Bangalore
ಲಸಿಕೆ ಕೇಂದ್ರಕ್ಕೆ ಬಿಬಿಎಂಪಿ ಆಯುಕ್ತ ಭೇಟಿ
author img

By

Published : Jan 15, 2021, 7:06 PM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಾಳೆ 8 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಲಾಗುವುದು. ಈ ಸಂಬಂಧ ಇಂದು ಸಿ.ವಿ. ರಾಮನ್ ನಗರ ಸಾರ್ವಜನಿಕ ಆಸ್ಪತ್ರೆಗೆ ಆಯುಕ್ತ ಮಂಜುನಾಥ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಆಯುಕ್ತ ಮಂಜುನಾಥ್ ಪ್ರಸಾದ್‌, ಪ್ರಧಾನಮಂತ್ರಿಗಳು ನಾಳೆ 10.30ಕ್ಕೆ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅದೇ ವೇಳೆ ಬಿಬಿಎಂಪಿ ವ್ಯಾಪ್ತಿಯ 8 ಕೇಂದ್ರ (ವಿಕ್ಟೋರಿಯಾ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ಸಿ.ವಿ. ರಾಮನ್ ನಗರ ಜಿ.ಹೆಚ್, ಜಯನಗರ ಜಿ.ಹೆಚ್, ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಹಾಗೂ ಯಲಹಂಕ ಸಾರ್ವಜನಿಕ ಆಸ್ಪತ್ರೆ) ಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದರು.

ಮೊದಲ ಹಂತದ ವ್ಯಾಕ್ಸಿನ್​ಗೆ ಸಕಲ ಸಿದ್ದತೆ

ಪ್ರತಿಯೊಂದು ಕೇಂದ್ರದಲ್ಲೂ 100 ಮಂದಿಗೆ ಲಸಿಕೆ ನೀಡಲಾಗುವುದು. ಈಗಾಗಲೇ 1,05,000 ಕೊವಿಶೀಲ್ಡ್ ವ್ಯಾಕ್ಸಿನ್​ಗಳನ್ನು ದಾಸಪ್ಪ ಆಸ್ಪತ್ರೆಯ ದಾಸ್ತಾನು ಕೇಂದ್ರದಲ್ಲಿ ಸಂಗ್ರಹಿಸಿಡಲಾಗಿದೆ. ಇಂದು ವ್ಯಾಕ್ಸಿನ್​ಗಳನ್ನು ಕೋಲ್ಡ್ ಚೈನ್ ಪಾಯಿಂಟ್​ಗಳಿಗೆ ಕಳುಹಿಸಲಾಗುತ್ತದೆ. ನಾಳೆ ಬೆಳಗ್ಗೆ ಲಸಿಕೆ ನೀಡುವ 8 ಕೇಂದ್ರಗಳಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಒಂದು ಕೇಂದ್ರದಲ್ಲಿ ಏನೆಲ್ಲಾ ಸೌಲಭ್ಯಗಳಿರಲಿವೆ ಎಂಬುದನ್ನು ನೋಡಲು ಇಂದು ಸಿ.ವಿ. ರಾಮನ್ ನಗರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಲಸಿಕೆ ಪಡೆಯುವ ಫಲಾನುಭವಿಗಳು ಲಸಿಕೆ ಕೇಂದ್ರಕ್ಕೆ ಬಂದಾಗ ಮೊದಲಿಗೆ ಕೈಗಳಿಗೆ ಸ್ಯಾನಿಟೈಸರ್ ಹಾಕಲಾಗುತ್ತದೆ. ನಂತರ ಥರ್ಮಲ್ ಸ್ಕ್ಯಾನ್ ಹಾಗೂ ಪಲ್ಸ್ ಆಕ್ಸಿಮೀಟರ್ ಮೂಲಕ ತಪಾಸಣೆ ನಡೆಸಲಾಗುತ್ತದೆ. ನಂತರ ಕಾಯುವ ಕೊಠಡಿಗೆ ಬರಲಿದ್ದಾರೆ. ಲಸಿಕೆ ಪಡೆಯುವವರ ಮಾಹಿತಿಯನ್ನು ಕೋವಿನ್ ಪೋರ್ಟಲ್​ನಲ್ಲಿ ದಾಖಲಿಸಲಾಗಿದ್ದು, ಲ್ಯಾಪ್​ಟಾಪ್/ ಕಂಪ್ಯೂಟರ್​ನಲ್ಲಿ ಲಸಿಕೆ ಪಡೆಯುವ ಫಲಾನುಭವಿಯ ವಿವರಗಳನ್ನು ಸಿಬ್ಬಂದಿ ಪರಿಶೀಲನೆ ನಡೆಸಿ ಅವರೇ ಎಂಬುದು ಖಾತ್ರಿಯಾದ ಬಳಿಕ ಮೊಬೈಲ್ ಸಂಖ್ಯೆ ನಮೂದಿಸಿ, ಬರುವ ಒ.ಟಿ.ಪಿ ಯನ್ನು ಪೋರ್ಟಲ್ ನಲ್ಲಿ ನಮೂದಿಸಿಕೊಂಡು ಲಸಿಕೆ ನೀಡುವ ಕೊಠಡಿಗೆ ಕಳುಹಿಸಲಿದ್ದಾರೆ.

ಲಸಿಕೆ ನೀಡಿದ ಬಳಿಕ ಪರಿವೀಕ್ಷಣಾ ಕೊಠಡಿಯಲ್ಲಿ ಅರ್ಧ ಗಂಟೆ ವಿಶ್ರಾಂತಿ ಪಡೆಯಬೇಕು. ಈ ವೇಳೆ ಲಸಿಕೆ ನೀಡಿದವರಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ಪರಿವೀಕ್ಷಣಾ ಕೊಠಡಿಯಲ್ಲೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿರುತ್ತದೆ. ಇನ್ನೂ ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯಿದ್ದರೆ ಕೂಡಲೆ ಕೇಂದ್ರಕ್ಕೆ ಲಿಂಕ್ ಮಾಡಿರುವ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗುತ್ತದೆ ಎಂದರು.

ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿ 300 ಮಂದಿ ಫಲಾನುಭವಿಗಳಿದ್ದು, ನಾಳೆ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಜನವರಿ 18 ರಂದು 100 ಮಂದಿ, ಜನವರಿ 19ರಂದು 100 ಮಂದಿಗೆ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜನವರಿ 18 ರಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ 760 ಕೇಂದ್ರಗಳಲ್ಲಿಯೂ ಲಸಿಕೆ ನೀಡಲಾಗುತ್ತದೆ. ಅದಕ್ಕೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಆಯಾ ವಲಯ ಜಂಟಿ ಆಯುಕ್ತರು ಲಸಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು.

2ನೇ ಹಂತದಲ್ಲಿ ಪಾಲಿಕೆ, ಪೊಲೀಸ್, ಕಂದಾಯ ಸಿಬ್ಬಂದಿಗಳಿಗೆ ಲಸಿಕೆ

ಇಂದು ಮುಖ್ಯಕಾರ್ಯದರ್ಶಿಗಳ ಜೊತೆ ನಡೆದ ಸಭೆಯಲ್ಲಿ ಜನವರಿ 24ರ ವೇಳೆಗೆ 2ನೇ ಹಂತದಲ್ಲಿ ಲಸಿಕೆ ಪಡೆಯುವ ಫಲಾನುಭವಿಗಳು ಕೋವಿಡ್​ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ನೋಂದಣಿ ಆದ ಬಳಿಕ ಲಸಿಕೆ ನೀಡುವ ದಿನ ಖಾತರಿಪಡಿಸಲಿದ್ದಾರೆ. ಅದರಂತೆ 2ನೇ ಹಂತದಲ್ಲಿ ಪಾಲಿಕೆಯ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ, ಜಲಮಂಡಳಿ ಸಿಬ್ಬಂದಿ ಸೇರಿದಂತೆ ಫ್ರಂಟ್ ಲೈನ್ ವರ್ಕರ್ಸ್ ಗಳಿಗೆ ಲಸಿಕೆ ನೀಡಲಾಗುತ್ತದೆ ಎಂದರು.

ನೆಟ್​ವರ್ಕ್​ ಸಮಸ್ಯೆ ಆಗದಂತೆ ಎಚ್ಚರಿಕೆ

ಲಸಿಕೆ ಪಡೆಯುವ ಫಲಾನುಭವಿಗಳಿಗೆ ಒ.ಟಿ.ಪಿ ಬರುವ ವೇಳೆ ನೆಟ್ ವರ್ಕ್ ಸಮಸ್ಯೆ ಆಗದಂತೆ ಎಲ್ಲಾ ಕೇಂದ್ರಗಳಲ್ಲಿಯೂ ಎರಡು/ಮೂರು ಇಂಟರ್ ನೆಟ್ ಕನೆಕ್ಷನ್ ತೆಗೆದುಕೊಂಡಿದ್ದು, ಸೂಕ್ತ ಕ್ರಮ ವಹಿಸಲಾಗಿದೆ. ಎಲ್ಲಾದರೂ ನೆಟ್​ವರ್ಕ್​ ಸಮಸ್ಯೆಯಾದರೆ ಫಲಾನುಭವಿಗಳು ಕೋವಿನ್ ಪೋರ್ಟಲ್‌ನಲ್ಲಿ ದಾಖಲಿಸಿರುವ ಗುರುತಿನ ಚೀಟಿ ಪರಿಶೀಲನೆ ನಡೆಸಿ ಆಫ್ ಲೈನ್ ಮೂಲಕ ದಾಖಲು ಮಾಡಿಕೊಂಡು ಲಸಿಕೆ ನೀಡಲಾಗುತ್ತದೆ. ತದನಂತರ ಆನ್ ಲೈನ್ ನಲ್ಲಿ ದಾಖಲು ಮಾಡಿಕೊಳ್ಳಲು ಅವಕಾಶ ನೀಡಿದ್ದಾರೆ ಎಂದು ತಿಳಿಸಿದರು.

ಓದಿ: ಯತ್ನಾಳ್‌ಗೆ ನೀಡಿದ್ದ ಭದ್ರತೆ ವಾಪಸ್... ಬಿಎಸ್​ವೈ ವಿರುದ್ಧ ಗುಡುಗಿದ ಶಾಸಕ!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಾಳೆ 8 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಲಾಗುವುದು. ಈ ಸಂಬಂಧ ಇಂದು ಸಿ.ವಿ. ರಾಮನ್ ನಗರ ಸಾರ್ವಜನಿಕ ಆಸ್ಪತ್ರೆಗೆ ಆಯುಕ್ತ ಮಂಜುನಾಥ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಆಯುಕ್ತ ಮಂಜುನಾಥ್ ಪ್ರಸಾದ್‌, ಪ್ರಧಾನಮಂತ್ರಿಗಳು ನಾಳೆ 10.30ಕ್ಕೆ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅದೇ ವೇಳೆ ಬಿಬಿಎಂಪಿ ವ್ಯಾಪ್ತಿಯ 8 ಕೇಂದ್ರ (ವಿಕ್ಟೋರಿಯಾ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ಸಿ.ವಿ. ರಾಮನ್ ನಗರ ಜಿ.ಹೆಚ್, ಜಯನಗರ ಜಿ.ಹೆಚ್, ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಹಾಗೂ ಯಲಹಂಕ ಸಾರ್ವಜನಿಕ ಆಸ್ಪತ್ರೆ) ಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದರು.

ಮೊದಲ ಹಂತದ ವ್ಯಾಕ್ಸಿನ್​ಗೆ ಸಕಲ ಸಿದ್ದತೆ

ಪ್ರತಿಯೊಂದು ಕೇಂದ್ರದಲ್ಲೂ 100 ಮಂದಿಗೆ ಲಸಿಕೆ ನೀಡಲಾಗುವುದು. ಈಗಾಗಲೇ 1,05,000 ಕೊವಿಶೀಲ್ಡ್ ವ್ಯಾಕ್ಸಿನ್​ಗಳನ್ನು ದಾಸಪ್ಪ ಆಸ್ಪತ್ರೆಯ ದಾಸ್ತಾನು ಕೇಂದ್ರದಲ್ಲಿ ಸಂಗ್ರಹಿಸಿಡಲಾಗಿದೆ. ಇಂದು ವ್ಯಾಕ್ಸಿನ್​ಗಳನ್ನು ಕೋಲ್ಡ್ ಚೈನ್ ಪಾಯಿಂಟ್​ಗಳಿಗೆ ಕಳುಹಿಸಲಾಗುತ್ತದೆ. ನಾಳೆ ಬೆಳಗ್ಗೆ ಲಸಿಕೆ ನೀಡುವ 8 ಕೇಂದ್ರಗಳಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಒಂದು ಕೇಂದ್ರದಲ್ಲಿ ಏನೆಲ್ಲಾ ಸೌಲಭ್ಯಗಳಿರಲಿವೆ ಎಂಬುದನ್ನು ನೋಡಲು ಇಂದು ಸಿ.ವಿ. ರಾಮನ್ ನಗರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಲಸಿಕೆ ಪಡೆಯುವ ಫಲಾನುಭವಿಗಳು ಲಸಿಕೆ ಕೇಂದ್ರಕ್ಕೆ ಬಂದಾಗ ಮೊದಲಿಗೆ ಕೈಗಳಿಗೆ ಸ್ಯಾನಿಟೈಸರ್ ಹಾಕಲಾಗುತ್ತದೆ. ನಂತರ ಥರ್ಮಲ್ ಸ್ಕ್ಯಾನ್ ಹಾಗೂ ಪಲ್ಸ್ ಆಕ್ಸಿಮೀಟರ್ ಮೂಲಕ ತಪಾಸಣೆ ನಡೆಸಲಾಗುತ್ತದೆ. ನಂತರ ಕಾಯುವ ಕೊಠಡಿಗೆ ಬರಲಿದ್ದಾರೆ. ಲಸಿಕೆ ಪಡೆಯುವವರ ಮಾಹಿತಿಯನ್ನು ಕೋವಿನ್ ಪೋರ್ಟಲ್​ನಲ್ಲಿ ದಾಖಲಿಸಲಾಗಿದ್ದು, ಲ್ಯಾಪ್​ಟಾಪ್/ ಕಂಪ್ಯೂಟರ್​ನಲ್ಲಿ ಲಸಿಕೆ ಪಡೆಯುವ ಫಲಾನುಭವಿಯ ವಿವರಗಳನ್ನು ಸಿಬ್ಬಂದಿ ಪರಿಶೀಲನೆ ನಡೆಸಿ ಅವರೇ ಎಂಬುದು ಖಾತ್ರಿಯಾದ ಬಳಿಕ ಮೊಬೈಲ್ ಸಂಖ್ಯೆ ನಮೂದಿಸಿ, ಬರುವ ಒ.ಟಿ.ಪಿ ಯನ್ನು ಪೋರ್ಟಲ್ ನಲ್ಲಿ ನಮೂದಿಸಿಕೊಂಡು ಲಸಿಕೆ ನೀಡುವ ಕೊಠಡಿಗೆ ಕಳುಹಿಸಲಿದ್ದಾರೆ.

ಲಸಿಕೆ ನೀಡಿದ ಬಳಿಕ ಪರಿವೀಕ್ಷಣಾ ಕೊಠಡಿಯಲ್ಲಿ ಅರ್ಧ ಗಂಟೆ ವಿಶ್ರಾಂತಿ ಪಡೆಯಬೇಕು. ಈ ವೇಳೆ ಲಸಿಕೆ ನೀಡಿದವರಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ಪರಿವೀಕ್ಷಣಾ ಕೊಠಡಿಯಲ್ಲೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿರುತ್ತದೆ. ಇನ್ನೂ ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯಿದ್ದರೆ ಕೂಡಲೆ ಕೇಂದ್ರಕ್ಕೆ ಲಿಂಕ್ ಮಾಡಿರುವ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗುತ್ತದೆ ಎಂದರು.

ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿ 300 ಮಂದಿ ಫಲಾನುಭವಿಗಳಿದ್ದು, ನಾಳೆ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಜನವರಿ 18 ರಂದು 100 ಮಂದಿ, ಜನವರಿ 19ರಂದು 100 ಮಂದಿಗೆ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜನವರಿ 18 ರಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ 760 ಕೇಂದ್ರಗಳಲ್ಲಿಯೂ ಲಸಿಕೆ ನೀಡಲಾಗುತ್ತದೆ. ಅದಕ್ಕೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಆಯಾ ವಲಯ ಜಂಟಿ ಆಯುಕ್ತರು ಲಸಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು.

2ನೇ ಹಂತದಲ್ಲಿ ಪಾಲಿಕೆ, ಪೊಲೀಸ್, ಕಂದಾಯ ಸಿಬ್ಬಂದಿಗಳಿಗೆ ಲಸಿಕೆ

ಇಂದು ಮುಖ್ಯಕಾರ್ಯದರ್ಶಿಗಳ ಜೊತೆ ನಡೆದ ಸಭೆಯಲ್ಲಿ ಜನವರಿ 24ರ ವೇಳೆಗೆ 2ನೇ ಹಂತದಲ್ಲಿ ಲಸಿಕೆ ಪಡೆಯುವ ಫಲಾನುಭವಿಗಳು ಕೋವಿಡ್​ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ನೋಂದಣಿ ಆದ ಬಳಿಕ ಲಸಿಕೆ ನೀಡುವ ದಿನ ಖಾತರಿಪಡಿಸಲಿದ್ದಾರೆ. ಅದರಂತೆ 2ನೇ ಹಂತದಲ್ಲಿ ಪಾಲಿಕೆಯ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ, ಜಲಮಂಡಳಿ ಸಿಬ್ಬಂದಿ ಸೇರಿದಂತೆ ಫ್ರಂಟ್ ಲೈನ್ ವರ್ಕರ್ಸ್ ಗಳಿಗೆ ಲಸಿಕೆ ನೀಡಲಾಗುತ್ತದೆ ಎಂದರು.

ನೆಟ್​ವರ್ಕ್​ ಸಮಸ್ಯೆ ಆಗದಂತೆ ಎಚ್ಚರಿಕೆ

ಲಸಿಕೆ ಪಡೆಯುವ ಫಲಾನುಭವಿಗಳಿಗೆ ಒ.ಟಿ.ಪಿ ಬರುವ ವೇಳೆ ನೆಟ್ ವರ್ಕ್ ಸಮಸ್ಯೆ ಆಗದಂತೆ ಎಲ್ಲಾ ಕೇಂದ್ರಗಳಲ್ಲಿಯೂ ಎರಡು/ಮೂರು ಇಂಟರ್ ನೆಟ್ ಕನೆಕ್ಷನ್ ತೆಗೆದುಕೊಂಡಿದ್ದು, ಸೂಕ್ತ ಕ್ರಮ ವಹಿಸಲಾಗಿದೆ. ಎಲ್ಲಾದರೂ ನೆಟ್​ವರ್ಕ್​ ಸಮಸ್ಯೆಯಾದರೆ ಫಲಾನುಭವಿಗಳು ಕೋವಿನ್ ಪೋರ್ಟಲ್‌ನಲ್ಲಿ ದಾಖಲಿಸಿರುವ ಗುರುತಿನ ಚೀಟಿ ಪರಿಶೀಲನೆ ನಡೆಸಿ ಆಫ್ ಲೈನ್ ಮೂಲಕ ದಾಖಲು ಮಾಡಿಕೊಂಡು ಲಸಿಕೆ ನೀಡಲಾಗುತ್ತದೆ. ತದನಂತರ ಆನ್ ಲೈನ್ ನಲ್ಲಿ ದಾಖಲು ಮಾಡಿಕೊಳ್ಳಲು ಅವಕಾಶ ನೀಡಿದ್ದಾರೆ ಎಂದು ತಿಳಿಸಿದರು.

ಓದಿ: ಯತ್ನಾಳ್‌ಗೆ ನೀಡಿದ್ದ ಭದ್ರತೆ ವಾಪಸ್... ಬಿಎಸ್​ವೈ ವಿರುದ್ಧ ಗುಡುಗಿದ ಶಾಸಕ!

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.