ETV Bharat / state

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆಗೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ : ವಿದೇಶಾಂಗ ಸಚಿವ ಜೈಶಂಕರ್

author img

By

Published : Apr 2, 2023, 4:39 PM IST

Updated : Apr 2, 2023, 5:00 PM IST

ಬೆಂಗಳೂರು ನಗರದ ಕಬ್ಬನ್​ ಪಾರ್ಕ್​ನಲ್ಲಿ ನಡೆದ ಸಂವಾದದಲ್ಲಿ ವಿದೇಶಾಂಗ ಸಚಿವ ಜೈಶಂಕರ್​ ಪಾಲ್ಗೊಂಡರು. ಈ ವೇಳೆ ಪಾಶ್ಚಾತ್ಯ ರಾಷ್ಟ್ರಗಳು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

foreign-affairs-minister-jaishankar
ವಿದೇಶಾಂಗ ಸಚಿವ ಜೈ ಶಂಕರ್
ವಿದೇಶಾಂಗ ಸಚಿವ ಜೈಶಂಕರ್

ಬೆಂಗಳೂರು : ಪಾಶ್ಚಾತ್ಯ ರಾಷ್ಟ್ರಗಳು ತಮ್ಮ ಹಿತಾಸಕ್ತಿಗೆ ಅನುಗುಣವಾದ ಅಭಿಪ್ರಾಯಗಳನ್ನು ಇತರ ದೇಶಗಳ ಮೇಲೆ ಹೇರುವುದನ್ನು ನಿಲ್ಲಿಸುವ ಅಗತ್ಯವಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಕಟುವಾಗಿ ಟೀಕಿಸಿದ್ದು, ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನ ಅನರ್ಹಗೊಳಿಸಿರುವ ಬಗ್ಗೆ ಅಮೆರಿಕ ಮತ್ತು ಜರ್ಮನಿ ಸ್ಪಂದನೆ ಅನಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಕೇಂದ್ರ ಸಂಸದ ಪಿ. ಸಿ ಮೋಹನ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದ ಮೀಟ್ ಅಂಡ್ ಗ್ರೀಟ್( Meet and Greet) ಸಂವಾದದಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಪಾಲ್ಗೊಂಡರು. ಈ ವೇಳೆ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಅಮೆರಿಕ ಮತ್ತು ಜರ್ಮನಿ ನೀಡಿರುವ ಪ್ರತಿಕ್ರಿಯೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಾಶ್ಚಿಮಾತ್ಯ ರಾಷ್ಟ್ರಗಳು ಹಿಂದಿನಿಂದಲೂ ಬೇರೆ ದೇಶಗಳ ಸಾರ್ವಭೌಮತ್ವ, ಸಾಂವಿಧಾನಿಕ ಅಧಿಕಾರಗಳ ಕುರಿತಾದ ಆಂತರಿಕ ವಿಷಯಗಳ ಮೇಲೆ ತಮ್ಮ ಅಭಿಪ್ರಾಯವೇ ಶ್ರೇಷ್ಠ ಎಂಬ ಮನಸ್ಥಿತಿ ಹೊಂದಿದೆ. ಇದರಿಂದ ಆ ದೇಶಗಳು ಇನ್ನೂ ಹೊರಬಂದಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಬೇರೆ ರಾಷ್ಟ್ರಗಳೂ ಕೂಡ ಪಶ್ಚಿಮದ ದೇಶಗಳ ಕುರಿತಾಗಿಯೂ ಸಮನಾದ ದೃಷ್ಟಿಕೋನದಿಂದ ಪ್ರತಿಕ್ರಿಯೆ ನೀಡಲು ಆರಂಭಿಸುತ್ತದೆ. ಹಿಂದೆಂದಿಗಿಂತಲೂ ಪ್ರಸ್ತುತ ಸಂದರ್ಭದಲ್ಲಿ ಇಂತಹ ಮನಸ್ಥಿತಿಯನ್ನು ವಿಶ್ವದಾದ್ಯಂತ ನಾವು ಕಾಣಬಹುದು ಎಂದು ಹೇಳಿದರು.

ಇನ್ನೊಂದು ಆಯಾಮದ ಮೂಲಕ ಗಮನಿಸಿದರೆ, ನಮ್ಮಲ್ಲಿಯೇ ಇರುವ ಕೆಲವರು ಪಶ್ಚಿಮದ ರಾಷ್ಟ್ರಗಳಿಗೆ ತೆರಳಿ ಭಾರತದ ಕುರಿತಾಗಿ ಅವಮಾನಕರ ಅಭಿಪ್ರಾಯಗಳನ್ನು ವಿವರಿಸುತ್ತಾರೆ. ಜೊತೆಗೆ ಇಂತಹ ರಾಷ್ಟ್ರಗಳಿಗೆ ಆಹ್ವಾನ ನೀಡಿರುವುದರ ಪರಿಣಾಮದಿಂದ ಮಾತ್ರ ಇಂತಹ ಹೇಳಿಕೆಗಳು ಅಲ್ಲಿಂದ ಬರಲು ಸಾಧ್ಯ. ಈ ರೀತಿಯ ಮನಸ್ಥಿತಿಯ ದೇಶದ ಒಳಗಿನ ಹಾಗೂ ಹೊರಗಿನ ಇಬ್ಬರಲ್ಲೂ ಇರುವ ಮೂಲ ಸಮಸ್ಯೆಯನ್ನು ಪರಿಹರಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.

ಉಚಿತ ಕೊಡುಗೆಗಳಿಂದ ದೇಶದ ಬೊಕ್ಕಸಕ್ಕೆ ಹೊರೆ- ಎಸ್​ ಜೈಶಂಕರ್​.. ಉಚಿತ ಕೊಡುಗೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, ಇತ್ತೀಚೆಗೆ ಉಚಿತ ಕೊಡುಗೆಗಳನ್ನು ನೀಡುವ ಪರಿಪಾಠ ದೆಹಲಿಯಿಂದ ಶುರುವಾಗಿ ದೇಶದ ಇತರ ಭಾಗಗಳಿಗೂ ಹಬ್ಬುತ್ತಿರುವುದು ಆತಂಕಕಾರಿ. ಅಂತಹ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಢೀಕರಣ ದೊಡ್ಡ ಸಮಸ್ಯೆ ಆಗಿರುವುದರಿಂದ ಹಾಗೂ ತಾತ್ಕಾಲಿಕ ರಾಜಕೀಯ ಲಾಭದ ಸಲುವಾಗಿ ಮಾಡುವ ಇಂತಹ ಯೋಜನೆಗಳಿಂದ ಯಾರೋ ಒಬ್ಬರು ಬೆಲೆ ತೆರಲೇಬೇಕು. ಒಂದೆಡೆ ಉಚಿತ ನೀಡುವಾಗ, ಇನ್ನೊಂದೆಡೆಯಿಂದ ತರಬೇಕು. ಜವಾಬ್ದಾರಿ ರಹಿತ ಇಂತಹ ಉಚಿತ ಕೊಡುಗೆಗಳ ಕಾರ್ಯಕ್ರಮಗಳಿಂದ ದೇಶದ ಬೊಕ್ಕಸಕ್ಕೆ ಅಪಾರ ಹಾನಿ ಉಂಟಾಗುತ್ತದೆ ಎಂದು ತಿಳಿಸಿದರು.

ಪ್ರಸ್ತುತ G20 ಆತಿಥೇಯ ರಾಷ್ಟ್ರವಾಗಿರುವ ಭಾರತವು, ಇದುವರೆಗೆ G20 ಸದಸ್ಯ ರಾಷ್ಟ್ರವಲ್ಲದ ದೇಶಗಳನ್ನು ಸಂಪರ್ಕಿಸಿ ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಮುಂಚೆ ಇಂತಹ ಅತೀ ದೊಡ್ಡ ಸಮಾವೇಶಗಳನ್ನು ಆಯ್ದ ಕೇವಲ 2-3 ನಗರಗಳಲ್ಲಿ ಮಾತ್ರ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ದೇಶದ 60 ಇತರ ನಗರಗಳಲ್ಲಿ ಸಮಾವೇಶ ಆಯೋಜಿಸಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಿರುವುದು ಗಮನಾರ್ಹ. ಭಾರತದ ಅಭಿವೃದ್ಧಿಗೆ ಪ್ರತೀ ರಾಜ್ಯ, ನಗರಗಳು ಗಣನೀಯ ಕೊಡುಗೆ ನೀಡುತ್ತಿದ್ದು, ಜಾಗತಿಕ ವಿದ್ಯಮಾನಗಳನ್ನು ಇತರ ನಗರಗಳಿಗೂ ಪ್ರಚುರಪಡಿಸುವ ಉದ್ದೇಶದಿಂದ ಈ ರೀತಿ ಎಲ್ಲೆಡೆ G20 ಸಮಾವೇಶಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ " ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

G20 ಸಮಾವೇಶಕ್ಕೆ ಆಗಮಿಸುವ ಜಗತ್ತಿನ ಖ್ಯಾತ 200 ಕ್ಕಿಂತಲೂ ಅಧಿಕ ಅಗ್ರಗಣ್ಯ ವ್ಯಕ್ತಿಗಳಿಗೆ ಈ ದೇಶದ ವೈವಿಧ್ಯಮಯ ಸಂಸ್ಕೃತಿ, ಆಚಾರ, ವಿಚಾರ, ಅಡುಗೆ, ತಿನಿಸುಗಳನ್ನು ಕುರಿತಾಗಿ ಅರಿವು ಮೂಡಿಸುವುದು ಇದರ ಹಿಂದಿನ ಉದ್ದೇಶ. G20 ಆಯೋಜನೆಯ ಹಿಂದಿನ ಉದ್ದೇಶ, ಭಾರತ ವಿಶ್ವಕ್ಕೆ ತೆರೆದುಕೊಳ್ಳುವುದು ಹಾಗೂ ವಿಶ್ವವು ಭಾರತವನ್ನು ಅರ್ಥೈಸಿಕೊಳ್ಳುವುದು ಆಗಿದೆ ಎಂದು ಡಾ. ಎಸ್ ಜೈಶಂಕರ್ ಸಂವಾದದಲ್ಲಿ ವಿವರಿಸಿದರು. ಸುಮಾರು 500ಕ್ಕೂ ಅಧಿಕ ಯುವ ಮತದಾರರು ಮತ್ತು ವಾಯು ವಿಹಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : 2022-23 ಸಾಲಿನಲ್ಲಿ ಸಾಲದ ಹೊರೆ ಕಡಿತ : ಆರ್​​ಬಿಐ ಮೂಲಕ ಎತ್ತುವಳಿ ಮಾಡಿದ್ದು ಕೇವಲ 36,000 ಕೋಟಿ ಸಾಲ!

ವಿದೇಶಾಂಗ ಸಚಿವ ಜೈಶಂಕರ್

ಬೆಂಗಳೂರು : ಪಾಶ್ಚಾತ್ಯ ರಾಷ್ಟ್ರಗಳು ತಮ್ಮ ಹಿತಾಸಕ್ತಿಗೆ ಅನುಗುಣವಾದ ಅಭಿಪ್ರಾಯಗಳನ್ನು ಇತರ ದೇಶಗಳ ಮೇಲೆ ಹೇರುವುದನ್ನು ನಿಲ್ಲಿಸುವ ಅಗತ್ಯವಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಕಟುವಾಗಿ ಟೀಕಿಸಿದ್ದು, ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನ ಅನರ್ಹಗೊಳಿಸಿರುವ ಬಗ್ಗೆ ಅಮೆರಿಕ ಮತ್ತು ಜರ್ಮನಿ ಸ್ಪಂದನೆ ಅನಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಕೇಂದ್ರ ಸಂಸದ ಪಿ. ಸಿ ಮೋಹನ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದ ಮೀಟ್ ಅಂಡ್ ಗ್ರೀಟ್( Meet and Greet) ಸಂವಾದದಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಪಾಲ್ಗೊಂಡರು. ಈ ವೇಳೆ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಅಮೆರಿಕ ಮತ್ತು ಜರ್ಮನಿ ನೀಡಿರುವ ಪ್ರತಿಕ್ರಿಯೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಾಶ್ಚಿಮಾತ್ಯ ರಾಷ್ಟ್ರಗಳು ಹಿಂದಿನಿಂದಲೂ ಬೇರೆ ದೇಶಗಳ ಸಾರ್ವಭೌಮತ್ವ, ಸಾಂವಿಧಾನಿಕ ಅಧಿಕಾರಗಳ ಕುರಿತಾದ ಆಂತರಿಕ ವಿಷಯಗಳ ಮೇಲೆ ತಮ್ಮ ಅಭಿಪ್ರಾಯವೇ ಶ್ರೇಷ್ಠ ಎಂಬ ಮನಸ್ಥಿತಿ ಹೊಂದಿದೆ. ಇದರಿಂದ ಆ ದೇಶಗಳು ಇನ್ನೂ ಹೊರಬಂದಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಬೇರೆ ರಾಷ್ಟ್ರಗಳೂ ಕೂಡ ಪಶ್ಚಿಮದ ದೇಶಗಳ ಕುರಿತಾಗಿಯೂ ಸಮನಾದ ದೃಷ್ಟಿಕೋನದಿಂದ ಪ್ರತಿಕ್ರಿಯೆ ನೀಡಲು ಆರಂಭಿಸುತ್ತದೆ. ಹಿಂದೆಂದಿಗಿಂತಲೂ ಪ್ರಸ್ತುತ ಸಂದರ್ಭದಲ್ಲಿ ಇಂತಹ ಮನಸ್ಥಿತಿಯನ್ನು ವಿಶ್ವದಾದ್ಯಂತ ನಾವು ಕಾಣಬಹುದು ಎಂದು ಹೇಳಿದರು.

ಇನ್ನೊಂದು ಆಯಾಮದ ಮೂಲಕ ಗಮನಿಸಿದರೆ, ನಮ್ಮಲ್ಲಿಯೇ ಇರುವ ಕೆಲವರು ಪಶ್ಚಿಮದ ರಾಷ್ಟ್ರಗಳಿಗೆ ತೆರಳಿ ಭಾರತದ ಕುರಿತಾಗಿ ಅವಮಾನಕರ ಅಭಿಪ್ರಾಯಗಳನ್ನು ವಿವರಿಸುತ್ತಾರೆ. ಜೊತೆಗೆ ಇಂತಹ ರಾಷ್ಟ್ರಗಳಿಗೆ ಆಹ್ವಾನ ನೀಡಿರುವುದರ ಪರಿಣಾಮದಿಂದ ಮಾತ್ರ ಇಂತಹ ಹೇಳಿಕೆಗಳು ಅಲ್ಲಿಂದ ಬರಲು ಸಾಧ್ಯ. ಈ ರೀತಿಯ ಮನಸ್ಥಿತಿಯ ದೇಶದ ಒಳಗಿನ ಹಾಗೂ ಹೊರಗಿನ ಇಬ್ಬರಲ್ಲೂ ಇರುವ ಮೂಲ ಸಮಸ್ಯೆಯನ್ನು ಪರಿಹರಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.

ಉಚಿತ ಕೊಡುಗೆಗಳಿಂದ ದೇಶದ ಬೊಕ್ಕಸಕ್ಕೆ ಹೊರೆ- ಎಸ್​ ಜೈಶಂಕರ್​.. ಉಚಿತ ಕೊಡುಗೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, ಇತ್ತೀಚೆಗೆ ಉಚಿತ ಕೊಡುಗೆಗಳನ್ನು ನೀಡುವ ಪರಿಪಾಠ ದೆಹಲಿಯಿಂದ ಶುರುವಾಗಿ ದೇಶದ ಇತರ ಭಾಗಗಳಿಗೂ ಹಬ್ಬುತ್ತಿರುವುದು ಆತಂಕಕಾರಿ. ಅಂತಹ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಢೀಕರಣ ದೊಡ್ಡ ಸಮಸ್ಯೆ ಆಗಿರುವುದರಿಂದ ಹಾಗೂ ತಾತ್ಕಾಲಿಕ ರಾಜಕೀಯ ಲಾಭದ ಸಲುವಾಗಿ ಮಾಡುವ ಇಂತಹ ಯೋಜನೆಗಳಿಂದ ಯಾರೋ ಒಬ್ಬರು ಬೆಲೆ ತೆರಲೇಬೇಕು. ಒಂದೆಡೆ ಉಚಿತ ನೀಡುವಾಗ, ಇನ್ನೊಂದೆಡೆಯಿಂದ ತರಬೇಕು. ಜವಾಬ್ದಾರಿ ರಹಿತ ಇಂತಹ ಉಚಿತ ಕೊಡುಗೆಗಳ ಕಾರ್ಯಕ್ರಮಗಳಿಂದ ದೇಶದ ಬೊಕ್ಕಸಕ್ಕೆ ಅಪಾರ ಹಾನಿ ಉಂಟಾಗುತ್ತದೆ ಎಂದು ತಿಳಿಸಿದರು.

ಪ್ರಸ್ತುತ G20 ಆತಿಥೇಯ ರಾಷ್ಟ್ರವಾಗಿರುವ ಭಾರತವು, ಇದುವರೆಗೆ G20 ಸದಸ್ಯ ರಾಷ್ಟ್ರವಲ್ಲದ ದೇಶಗಳನ್ನು ಸಂಪರ್ಕಿಸಿ ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಮುಂಚೆ ಇಂತಹ ಅತೀ ದೊಡ್ಡ ಸಮಾವೇಶಗಳನ್ನು ಆಯ್ದ ಕೇವಲ 2-3 ನಗರಗಳಲ್ಲಿ ಮಾತ್ರ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ದೇಶದ 60 ಇತರ ನಗರಗಳಲ್ಲಿ ಸಮಾವೇಶ ಆಯೋಜಿಸಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಿರುವುದು ಗಮನಾರ್ಹ. ಭಾರತದ ಅಭಿವೃದ್ಧಿಗೆ ಪ್ರತೀ ರಾಜ್ಯ, ನಗರಗಳು ಗಣನೀಯ ಕೊಡುಗೆ ನೀಡುತ್ತಿದ್ದು, ಜಾಗತಿಕ ವಿದ್ಯಮಾನಗಳನ್ನು ಇತರ ನಗರಗಳಿಗೂ ಪ್ರಚುರಪಡಿಸುವ ಉದ್ದೇಶದಿಂದ ಈ ರೀತಿ ಎಲ್ಲೆಡೆ G20 ಸಮಾವೇಶಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ " ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

G20 ಸಮಾವೇಶಕ್ಕೆ ಆಗಮಿಸುವ ಜಗತ್ತಿನ ಖ್ಯಾತ 200 ಕ್ಕಿಂತಲೂ ಅಧಿಕ ಅಗ್ರಗಣ್ಯ ವ್ಯಕ್ತಿಗಳಿಗೆ ಈ ದೇಶದ ವೈವಿಧ್ಯಮಯ ಸಂಸ್ಕೃತಿ, ಆಚಾರ, ವಿಚಾರ, ಅಡುಗೆ, ತಿನಿಸುಗಳನ್ನು ಕುರಿತಾಗಿ ಅರಿವು ಮೂಡಿಸುವುದು ಇದರ ಹಿಂದಿನ ಉದ್ದೇಶ. G20 ಆಯೋಜನೆಯ ಹಿಂದಿನ ಉದ್ದೇಶ, ಭಾರತ ವಿಶ್ವಕ್ಕೆ ತೆರೆದುಕೊಳ್ಳುವುದು ಹಾಗೂ ವಿಶ್ವವು ಭಾರತವನ್ನು ಅರ್ಥೈಸಿಕೊಳ್ಳುವುದು ಆಗಿದೆ ಎಂದು ಡಾ. ಎಸ್ ಜೈಶಂಕರ್ ಸಂವಾದದಲ್ಲಿ ವಿವರಿಸಿದರು. ಸುಮಾರು 500ಕ್ಕೂ ಅಧಿಕ ಯುವ ಮತದಾರರು ಮತ್ತು ವಾಯು ವಿಹಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : 2022-23 ಸಾಲಿನಲ್ಲಿ ಸಾಲದ ಹೊರೆ ಕಡಿತ : ಆರ್​​ಬಿಐ ಮೂಲಕ ಎತ್ತುವಳಿ ಮಾಡಿದ್ದು ಕೇವಲ 36,000 ಕೋಟಿ ಸಾಲ!

Last Updated : Apr 2, 2023, 5:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.