ETV Bharat / state

ಬದ್ಧತೆಯಿಂದ ಪಕ್ಷ ಕಟ್ಟಿ ; ಪದಾಧಿಕಾರಿಗಳಿಗೆ ಸಂಘಟನೆ ಪಾಠ ಮಾಡಿದ ಹೆಚ್​ಡಿಕೆ

author img

By

Published : Nov 16, 2021, 8:50 PM IST

ಪಕ್ಷವನ್ನು ನಾವು ಹಣ ತೆತ್ತು ಕಟ್ಟಲು ಸಾಧ್ಯವಿಲ್ಲ. ನಮ್ಮ ಸ್ವಂತ ಶ್ರಮದ ಮೇಲೆ ಬದ್ಧತೆಯಿಂದ ಕಟ್ಟಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತಿಳಿಸಿದ್ದಾರೆ..

former-chief-minister-hd-kumaraswamy
ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು : ಮುಂಬರುವ ಬಿಬಿಎಂಪಿ ಹಾಗೂ 2023ರ ವಿಧಾನಸಭೆ ಚುನಾವಣೆ (2023 Assembly Election)ಗೆ ಬೆಂಗಳೂರು ನಗರ ನಮ್ಮ ಪಕ್ಷಕ್ಕೆ ಬಹಳ ಮುಖ್ಯ. ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರು ತಮ್ಮೆಲ್ಲ ಶಕ್ತಿಯನ್ನು ಬಳಸಿ ಪಕ್ಷ ಕಟ್ಟಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (Former Chief Minister HD Kumaraswamy) ಅವರು ಸೂಚನೆ ನೀಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಪರ್ವ 1.Oದ 2ನೇ ಹಂತದ 'ಜನತಾ ಸಂಗಮ'ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಪಕ್ಷವನ್ನು ನಾವು ಹಣ ತೆತ್ತು ಕಟ್ಟಲು ಸಾಧ್ಯವಿಲ್ಲ. ನಮ್ಮ ಸ್ವಂತ ಶ್ರಮದ ಮೇಲೆ ಬದ್ಧತೆಯಿಂದ ಕಟ್ಟಬೇಕು.

ಯಾರೇ ಆಗಲಿ, ನನ್ನ ಜತೆ ಮುಕ್ತವಾಗಿ ಚರ್ಚೆ ಮಾಡಬಹುದು. ಭೇಟಿಯಾಗಿ ಮಾತುಕತೆ ನಡೆಸಬಹುದು. ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಮುಖಂಡರಿಗೆ ಹೇಳಿದರು.

ಸ್ವತಂತ್ರ ಸರ್ಕಾರಕ್ಕೆ ಬಿಬಿಎಂಪಿ ಮುಖ್ಯ : ಪಕ್ಷ ಸಂಘಟನೆ ಹಾಗೂ ಬಿಜೆಪಿ-ಕಾಂಗ್ರೆಸ್ ನಡುವೆ ಸರ್ಕಾರ ಮಾಡಿದಾಗ ಅನುಭವಿಸಿದ ವೇದನೆಯನ್ನು ಎಳೆ ಎಳೆಯಾಗಿ ಸಭೆಯಲ್ಲಿ ಬಿಡಿಸಿಟ್ಟರು. ಅಲ್ಲದೇ, 2023ರಲ್ಲಿ ಜೆಡಿಎಸ್ ಸ್ವತಂತ್ರ ಸರ್ಕಾರ ನಡೆಸಬೇಕಾದರೆ ಬಿಬಿಎಂಪಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲೇಬೇಕು ಎಂದು ಅವರು ಒತ್ತಿ ಹೇಳಿದರು.

former-chief-minister-hd-kumaraswamy
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೊಂದಿಗೆ ಹೆಚ್​ಡಿಕೆ ಮಾತುಕತೆ

ಈಗಾಗಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದೇನೆ. ಬೆಂಗಳೂರು ನಗರ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು.

ಈವರೆಗೆ ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಜಾರಿ ಮಾಡಿದ ಯೋಜನೆಗಳನ್ನು ನಗರದ ಜನರಿಗೆ ತಿಳಿಸಬೇಕು ಎಂದು ಅವರು ಪದಾಧಿಕಾರಿಗಳಿಗೆ ಸೂಚಿಸಿದರು.

ಕ್ಷೇತ್ರವಾರು ಸಮಾಲೋಚನೆ : ನಗರದ ಒಟ್ಟು 28 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಮುಖ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಒತ್ತು ನೀಡಿ ಅವನ್ನು ಸಭೆಯಲ್ಲಿಯೇ ಬಗೆಹರಿಸಿದರು.

ಗ್ರಾಮೀಣ ಪ್ರದೇಶಕ್ಕೂ, ನಗರ ಪ್ರದೇಶಕ್ಕೂ ಪಕ್ಷ ಕಟ್ಟುವಿಕೆಯಲ್ಲಿ ಪ್ರತ್ಯೇಕ ಸವಾಲುಗಳಿವೆ ಎನ್ನುತ್ತಲೇ, ನಗರದ ವಿವಿಧ ಸ್ತರಗಳಲ್ಲಿ ಪಕ್ಷ ಸಂಘಟಿಸುವ ಪಾಠ ಮಾಡಿದರು. ಅಲ್ಲದೇ, ಕಾಲಮಿತಿಯನ್ನು ನಿಗದಿ ಮಾಡಿ ಪದಾಧಿಕಾರಿಗಳಿಗೆ ಕೆಲ ಮಹತ್ವದ ಗುರಿಗಳನ್ನು ನಿಗದಿ ಮಾಡಿದರು.

ಹಾಗೆಯೇ, ಪಕ್ಷದ ಸಂಘಟನೆ ವಿಷಯದಲ್ಲಿ ನೆಪಗಳಿಗೆ ಅವಕಾಶ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಹಾಗೂ ಪರಸ್ಪರ ಸಹಕಾರದಿಂದ ಸಂಘಟನೆ ಮಾಡಬೇಕು ಎಂದು ಸೂಚಿಸಿದರು. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಪದಾಧಿಕಾರಿಗಳ ಅಭಿಪ್ರಾಯಗಳನ್ನು ಆಲಿಸಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಶರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್. ಪ್ರಕಾಶ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಮುಂತಾದವರು ಹಾಜರಿದ್ದರು.

ಓದಿ: ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬಸ್​​ಗಳು ರಸ್ತೆಗಿಳಿದರೆ ಟಿಕೆಟ್ ದರ ಆಗಲಿದೆಯಾ ದುಪ್ಪಟ್ಟು?

ಬೆಂಗಳೂರು : ಮುಂಬರುವ ಬಿಬಿಎಂಪಿ ಹಾಗೂ 2023ರ ವಿಧಾನಸಭೆ ಚುನಾವಣೆ (2023 Assembly Election)ಗೆ ಬೆಂಗಳೂರು ನಗರ ನಮ್ಮ ಪಕ್ಷಕ್ಕೆ ಬಹಳ ಮುಖ್ಯ. ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರು ತಮ್ಮೆಲ್ಲ ಶಕ್ತಿಯನ್ನು ಬಳಸಿ ಪಕ್ಷ ಕಟ್ಟಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (Former Chief Minister HD Kumaraswamy) ಅವರು ಸೂಚನೆ ನೀಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಪರ್ವ 1.Oದ 2ನೇ ಹಂತದ 'ಜನತಾ ಸಂಗಮ'ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಪಕ್ಷವನ್ನು ನಾವು ಹಣ ತೆತ್ತು ಕಟ್ಟಲು ಸಾಧ್ಯವಿಲ್ಲ. ನಮ್ಮ ಸ್ವಂತ ಶ್ರಮದ ಮೇಲೆ ಬದ್ಧತೆಯಿಂದ ಕಟ್ಟಬೇಕು.

ಯಾರೇ ಆಗಲಿ, ನನ್ನ ಜತೆ ಮುಕ್ತವಾಗಿ ಚರ್ಚೆ ಮಾಡಬಹುದು. ಭೇಟಿಯಾಗಿ ಮಾತುಕತೆ ನಡೆಸಬಹುದು. ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಮುಖಂಡರಿಗೆ ಹೇಳಿದರು.

ಸ್ವತಂತ್ರ ಸರ್ಕಾರಕ್ಕೆ ಬಿಬಿಎಂಪಿ ಮುಖ್ಯ : ಪಕ್ಷ ಸಂಘಟನೆ ಹಾಗೂ ಬಿಜೆಪಿ-ಕಾಂಗ್ರೆಸ್ ನಡುವೆ ಸರ್ಕಾರ ಮಾಡಿದಾಗ ಅನುಭವಿಸಿದ ವೇದನೆಯನ್ನು ಎಳೆ ಎಳೆಯಾಗಿ ಸಭೆಯಲ್ಲಿ ಬಿಡಿಸಿಟ್ಟರು. ಅಲ್ಲದೇ, 2023ರಲ್ಲಿ ಜೆಡಿಎಸ್ ಸ್ವತಂತ್ರ ಸರ್ಕಾರ ನಡೆಸಬೇಕಾದರೆ ಬಿಬಿಎಂಪಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲೇಬೇಕು ಎಂದು ಅವರು ಒತ್ತಿ ಹೇಳಿದರು.

former-chief-minister-hd-kumaraswamy
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೊಂದಿಗೆ ಹೆಚ್​ಡಿಕೆ ಮಾತುಕತೆ

ಈಗಾಗಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದೇನೆ. ಬೆಂಗಳೂರು ನಗರ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು.

ಈವರೆಗೆ ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಜಾರಿ ಮಾಡಿದ ಯೋಜನೆಗಳನ್ನು ನಗರದ ಜನರಿಗೆ ತಿಳಿಸಬೇಕು ಎಂದು ಅವರು ಪದಾಧಿಕಾರಿಗಳಿಗೆ ಸೂಚಿಸಿದರು.

ಕ್ಷೇತ್ರವಾರು ಸಮಾಲೋಚನೆ : ನಗರದ ಒಟ್ಟು 28 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಮುಖ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಒತ್ತು ನೀಡಿ ಅವನ್ನು ಸಭೆಯಲ್ಲಿಯೇ ಬಗೆಹರಿಸಿದರು.

ಗ್ರಾಮೀಣ ಪ್ರದೇಶಕ್ಕೂ, ನಗರ ಪ್ರದೇಶಕ್ಕೂ ಪಕ್ಷ ಕಟ್ಟುವಿಕೆಯಲ್ಲಿ ಪ್ರತ್ಯೇಕ ಸವಾಲುಗಳಿವೆ ಎನ್ನುತ್ತಲೇ, ನಗರದ ವಿವಿಧ ಸ್ತರಗಳಲ್ಲಿ ಪಕ್ಷ ಸಂಘಟಿಸುವ ಪಾಠ ಮಾಡಿದರು. ಅಲ್ಲದೇ, ಕಾಲಮಿತಿಯನ್ನು ನಿಗದಿ ಮಾಡಿ ಪದಾಧಿಕಾರಿಗಳಿಗೆ ಕೆಲ ಮಹತ್ವದ ಗುರಿಗಳನ್ನು ನಿಗದಿ ಮಾಡಿದರು.

ಹಾಗೆಯೇ, ಪಕ್ಷದ ಸಂಘಟನೆ ವಿಷಯದಲ್ಲಿ ನೆಪಗಳಿಗೆ ಅವಕಾಶ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಹಾಗೂ ಪರಸ್ಪರ ಸಹಕಾರದಿಂದ ಸಂಘಟನೆ ಮಾಡಬೇಕು ಎಂದು ಸೂಚಿಸಿದರು. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಪದಾಧಿಕಾರಿಗಳ ಅಭಿಪ್ರಾಯಗಳನ್ನು ಆಲಿಸಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಶರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್. ಪ್ರಕಾಶ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಮುಂತಾದವರು ಹಾಜರಿದ್ದರು.

ಓದಿ: ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬಸ್​​ಗಳು ರಸ್ತೆಗಿಳಿದರೆ ಟಿಕೆಟ್ ದರ ಆಗಲಿದೆಯಾ ದುಪ್ಪಟ್ಟು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.