ಬೆಂಗಳೂರು: ರಾಜ್ಯ ರಾಜಕೀಯದ ಗೊಂದಲಗಳನ್ನು ಬದಿಗಿಟ್ಟು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ನಿರಾಳವಾಗಿ ಐಪಿಎಲ್ ಪಂದ್ಯ ವೀಕ್ಷಿಸಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು- ಮುಂಬೈ ನಡುವಿನ ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಆಗಮಿಸಿದ್ದರು. ಶಾಸಕ ಬೈರತಿ ಬಸವರಾಜ್ ಹಾಗೂ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಪಂದ್ಯ ವೀಕ್ಷಣೆಗೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು.
![Former Chief Minister Siddaramaiah](https://etvbharatimages.akamaized.net/etvbharat/images/2834419_3x2_bngjpg.jpg)
ಪಂದ್ಯ ಆರಂಭಕ್ಕೆ ಮುನ್ನವೇ ಆಗಮಿಸಿ ಗ್ಯಾಲರಿಯಲ್ಲಿ ಕುಳಿತು ಸಿದ್ದರಾಮಯ್ಯ ಅತ್ಯಂತ ಆಸಕ್ತಿಯಿಂದ ಪಂದ್ಯ ವೀಕ್ಷಿಸಿದರು. ಬೆಳಗಿನಿಂದಲೂ ರಾಜ್ಯ ರಾಜಕೀಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ನಂತರ ಕ್ರಿಕೆಟ್ ಪಂದ್ಯವನ್ನು ಅತ್ಯಂತ ಉತ್ಸಾಹದಿಂದ ಆಗಮಿಸಿದ್ದು ವಿಶೇಷ ಗಮನ ಸೆಳೆಯಿತು.