ETV Bharat / state

ಮೇಕೆದಾಟು: ಕಾಲಹರಣ ಮಾಡದೇ ಅರಣ್ಯ, ಪರಿಸರ ಇಲಾಖೆ ಒಪ್ಪಿಸಿ- ಜೆಡಿಎಸ್‌

ಮೇಕೆದಾಟು ಯೋಜನೆ ವಿಚಾರದಲ್ಲಿ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡರಷ್ಟೇ ಸಾಲದು. ಮೊದಲು ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆಯ ಒಪ್ಪಿಗೆ ಪಡೆದು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಬೇಕು ಎಂದು ಹೆಚ್​​ಡಿಕೆ ಒತ್ತಾಯಿಸಿದರು.

author img

By

Published : Mar 24, 2022, 9:36 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಳ್ಳಲಾಗಿರುವ ವಿವಾದಾತ್ಮಕ ನಿರ್ಣಯಕ್ಕೆ ಪ್ರತಿಯಾಗಿ ರಾಜ್ಯ ವಿಧಾನಸಭೆಯಲ್ಲಿ ಕೈಗೊಂಡಿರುವ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಪಕ್ಷದ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡರಷ್ಟೇ ಸಾಲದು. ಮೊದಲು ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆಯ ಒಪ್ಪಿಗೆ ಪಡೆದು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಬೇಕು. ಇದು ನಮ್ಮ ಒಗ್ಗಟ್ಟು ಪ್ರದರ್ಶನದ ನಿರ್ಣಯ ಅಷ್ಟೇ. ಆದರೆ ತಕ್ಷಣ ಬೇಕಿರುವುದು ಕೇಂದ್ರದ ಒಪ್ಪಿಗೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಪಕ್ಷದ ಸರಕಾರವಿದೆ. ಕೇಂದ್ರದ ಒಪ್ಪಿಗೆ ಪಡೆದುಕೊಳ್ಳಲು ರಾಜ್ಯ ಸರಕಾರ ಬದ್ಧತೆ ತೋರಬೇಕು ಎಂದು ಒತ್ತಾಯಿಸಿದರು.

ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನನ್ನ ಪ್ರಧಾನ ಸಂಪಾದಕತ್ವದಲ್ಲಿ ಪ್ರತಿ ತಿಂಗಳು ಪ್ರಕಟವಾಗುವ 'ಜನತಾ ಪತ್ರಿಕೆ'ಯಲ್ಲಿ ಗೋದಾವರಿ, ಕೃಷ್ಣಾ, ಪೆನ್ನಾರ್ ಮತ್ತು ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಸೊನ್ನೆ ಸುತ್ತಲಾಗಿದೆ. ಈಗಾಗಲೇ ಕೇಂದ್ರದಲ್ಲಿ ಒಂದು ಸಭೆ ಮಾಡಿ ಕರ್ನಾಟಕವನ್ನು ಲೆಕ್ಕಕ್ಕೆ ಇಡದೇ ತೆಲಂಗಾಣ, ಆಂಧ್ರ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ಮಾತ್ರ ನೀರು ಹಂಚಿಕೊಂಡಿವೆ. ಇದೇ ಕಾಣಕ್ಕಾಗಿಯೇ ನದಿ ಜೋಡಣೆ ವಿಚಾರದಲ್ಲಿ ಕನ್ನಡಿಗರು ತಬ್ಬಲಿಗಳು ಆಗುತ್ತಿದ್ದಾರೆ ಎಂದು ' ಜನತಾ ಪತ್ರಿಕೆ' ಯಲ್ಲಿ ಸ್ವತಃ ದೇವೇಗೌಡರೇ ಬರೆದಿದ್ದಾರೆ ಎಂದು ಈ ಸಂದರ್ಭದಲ್ಲಿ ಗೌಡರು 'ಜನತಾ ಪತ್ರಿಕೆ'ಯಲ್ಲಿ ಬರೆದಿರುವ ಲೇಖನವನ್ನು ಪ್ರದರ್ಶಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಚಾಟಿ: ರಾಜ್ಯ ಸರ್ಕಾರವು ಕೇಂದ್ರದ ಮನವೊಲಿಸಲು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಆದರೂ ಸರಕಾರ ಮಂಡಿಸಿದ ಈ ನಿರ್ಣಯಕ್ಕೆ ನಾವೆಲ್ಲಾ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದೇವೆ. ಪ್ರತಿಪಕ್ಷ ನಾಯಕರು ನಮ್ಮನ್ನೆಲ್ಲಾ ಕರೆದು ನಿರ್ಣಯದ ಕರಡು ಸಿದ್ಧ ಮಾಡಬೇಕಿತ್ತು ಎಂದು ಹೇಳಿದ್ದಾರೆ. ಆದರೆ, ನೀರಾವರಿ ಬಗ್ಗೆ ಅಭಿಪ್ರಾಯಬೇಧ ಇರಬಾರದು. ನಮ್ಮ ನಿಲುವಿನಲ್ಲಿ ಗಟ್ಟಿತನ ಇಲ್ಲದಿರೋದ್ರಿಂದಲೇ ನಮ್ಮ ಬಗ್ಗೆ ಕೇಂದ್ರ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕಾಂಗ್ರೆಸ್ ನಿಲುವಿನ ಬಗ್ಗೆ ಹೆಚ್​​​ಡಿಕೆ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಳ್ಳಲಾಗಿರುವ ವಿವಾದಾತ್ಮಕ ನಿರ್ಣಯಕ್ಕೆ ಪ್ರತಿಯಾಗಿ ರಾಜ್ಯ ವಿಧಾನಸಭೆಯಲ್ಲಿ ಕೈಗೊಂಡಿರುವ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಪಕ್ಷದ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡರಷ್ಟೇ ಸಾಲದು. ಮೊದಲು ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆಯ ಒಪ್ಪಿಗೆ ಪಡೆದು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಬೇಕು. ಇದು ನಮ್ಮ ಒಗ್ಗಟ್ಟು ಪ್ರದರ್ಶನದ ನಿರ್ಣಯ ಅಷ್ಟೇ. ಆದರೆ ತಕ್ಷಣ ಬೇಕಿರುವುದು ಕೇಂದ್ರದ ಒಪ್ಪಿಗೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಪಕ್ಷದ ಸರಕಾರವಿದೆ. ಕೇಂದ್ರದ ಒಪ್ಪಿಗೆ ಪಡೆದುಕೊಳ್ಳಲು ರಾಜ್ಯ ಸರಕಾರ ಬದ್ಧತೆ ತೋರಬೇಕು ಎಂದು ಒತ್ತಾಯಿಸಿದರು.

ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನನ್ನ ಪ್ರಧಾನ ಸಂಪಾದಕತ್ವದಲ್ಲಿ ಪ್ರತಿ ತಿಂಗಳು ಪ್ರಕಟವಾಗುವ 'ಜನತಾ ಪತ್ರಿಕೆ'ಯಲ್ಲಿ ಗೋದಾವರಿ, ಕೃಷ್ಣಾ, ಪೆನ್ನಾರ್ ಮತ್ತು ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಸೊನ್ನೆ ಸುತ್ತಲಾಗಿದೆ. ಈಗಾಗಲೇ ಕೇಂದ್ರದಲ್ಲಿ ಒಂದು ಸಭೆ ಮಾಡಿ ಕರ್ನಾಟಕವನ್ನು ಲೆಕ್ಕಕ್ಕೆ ಇಡದೇ ತೆಲಂಗಾಣ, ಆಂಧ್ರ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ಮಾತ್ರ ನೀರು ಹಂಚಿಕೊಂಡಿವೆ. ಇದೇ ಕಾಣಕ್ಕಾಗಿಯೇ ನದಿ ಜೋಡಣೆ ವಿಚಾರದಲ್ಲಿ ಕನ್ನಡಿಗರು ತಬ್ಬಲಿಗಳು ಆಗುತ್ತಿದ್ದಾರೆ ಎಂದು ' ಜನತಾ ಪತ್ರಿಕೆ' ಯಲ್ಲಿ ಸ್ವತಃ ದೇವೇಗೌಡರೇ ಬರೆದಿದ್ದಾರೆ ಎಂದು ಈ ಸಂದರ್ಭದಲ್ಲಿ ಗೌಡರು 'ಜನತಾ ಪತ್ರಿಕೆ'ಯಲ್ಲಿ ಬರೆದಿರುವ ಲೇಖನವನ್ನು ಪ್ರದರ್ಶಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಚಾಟಿ: ರಾಜ್ಯ ಸರ್ಕಾರವು ಕೇಂದ್ರದ ಮನವೊಲಿಸಲು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಆದರೂ ಸರಕಾರ ಮಂಡಿಸಿದ ಈ ನಿರ್ಣಯಕ್ಕೆ ನಾವೆಲ್ಲಾ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದೇವೆ. ಪ್ರತಿಪಕ್ಷ ನಾಯಕರು ನಮ್ಮನ್ನೆಲ್ಲಾ ಕರೆದು ನಿರ್ಣಯದ ಕರಡು ಸಿದ್ಧ ಮಾಡಬೇಕಿತ್ತು ಎಂದು ಹೇಳಿದ್ದಾರೆ. ಆದರೆ, ನೀರಾವರಿ ಬಗ್ಗೆ ಅಭಿಪ್ರಾಯಬೇಧ ಇರಬಾರದು. ನಮ್ಮ ನಿಲುವಿನಲ್ಲಿ ಗಟ್ಟಿತನ ಇಲ್ಲದಿರೋದ್ರಿಂದಲೇ ನಮ್ಮ ಬಗ್ಗೆ ಕೇಂದ್ರ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕಾಂಗ್ರೆಸ್ ನಿಲುವಿನ ಬಗ್ಗೆ ಹೆಚ್​​​ಡಿಕೆ ಅಸಮಾಧಾನ ವ್ಯಕ್ತಪಡಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.