ETV Bharat / state

ಬಹುಶಃ ಸಚಿವ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ :ಕುಮಾರಸ್ವಾಮಿ ತಿರುಗೇಟು

author img

By

Published : Aug 31, 2020, 10:07 PM IST

ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

former cm hd kumaraswamy tweet
ಕುಮಾರಸ್ವಾಮಿ ಟ್ವೀಟ್​

ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

former cm hd kumaraswamy tweet
ಕುಮಾರಸ್ವಾಮಿ ಟ್ವೀಟ್​

ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

former cm hd kumaraswamy tweet
ಕುಮಾರಸ್ವಾಮಿ ಟ್ವೀಟ್​

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದು ಟೀಕಿಸಿದ್ದಾರೆ.

former cm hd kumaraswamy tweet
ಕುಮಾರಸ್ವಾಮಿ ಟ್ವೀಟ್​

ಸಚಿವ ಸ್ಥಾನ ಸಿಕ್ಕಿದೆ ಎಂಬ ಉತ್ಸಾಹದಲ್ಲಿ ನನ್ನ ಹಿನ್ನೆಲೆ-ಮುನ್ನೆಲೆ ಬಗೆಗೆ ಮಾತನಾಡುವುದು ಸುಧಾಕರ್ ಅವರ ನೈಜ ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಅಧಿಕಾರ ಶಾಶ್ವತ ಮತ್ತು ತಮ್ಮ ಸ್ವಂತ ಶಕ್ತಿ ಎಂಬ ಭ್ರಮೆಯಲ್ಲಿ ಇರುವವರು ಮಾತ್ರ ಹೀಗೆ ಮಾತನಾಡುತ್ತಾರೆ ಎಂಬುದು ನನ್ನ ಗ್ರಹಿಕೆ. ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ ಎಂದು ಟಾಂಗ್ ನೀಡಿದ್ದಾರೆ.

ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚ‌ನೆಗೊಂಡ ಸರಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ ಸಚಿವ ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದಿದ್ದಾರೆ.

ಕೆಸರಲ್ಲಿ ಬಿದ್ದ ಪಶುವಿನಂತೆ
ಅನು ದೆಸೆದೆಸೆಗೆ ಬಾಯ ಬಿಡುತ್ತಿದ್ದೇನೆ.
ಅಯ್ಯಾ, ಆರೈವವರಿಲ್ಲ, ಅಕಟಕಟ
ಪಶುವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ ಎಂದು ವಚನದ ಮೂಲಕ ತಿರುಗೇಟು ನೀಡಿದ್ದಾರೆ.

ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

former cm hd kumaraswamy tweet
ಕುಮಾರಸ್ವಾಮಿ ಟ್ವೀಟ್​

ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

former cm hd kumaraswamy tweet
ಕುಮಾರಸ್ವಾಮಿ ಟ್ವೀಟ್​

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದು ಟೀಕಿಸಿದ್ದಾರೆ.

former cm hd kumaraswamy tweet
ಕುಮಾರಸ್ವಾಮಿ ಟ್ವೀಟ್​

ಸಚಿವ ಸ್ಥಾನ ಸಿಕ್ಕಿದೆ ಎಂಬ ಉತ್ಸಾಹದಲ್ಲಿ ನನ್ನ ಹಿನ್ನೆಲೆ-ಮುನ್ನೆಲೆ ಬಗೆಗೆ ಮಾತನಾಡುವುದು ಸುಧಾಕರ್ ಅವರ ನೈಜ ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಅಧಿಕಾರ ಶಾಶ್ವತ ಮತ್ತು ತಮ್ಮ ಸ್ವಂತ ಶಕ್ತಿ ಎಂಬ ಭ್ರಮೆಯಲ್ಲಿ ಇರುವವರು ಮಾತ್ರ ಹೀಗೆ ಮಾತನಾಡುತ್ತಾರೆ ಎಂಬುದು ನನ್ನ ಗ್ರಹಿಕೆ. ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ ಎಂದು ಟಾಂಗ್ ನೀಡಿದ್ದಾರೆ.

ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚ‌ನೆಗೊಂಡ ಸರಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ ಸಚಿವ ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದಿದ್ದಾರೆ.

ಕೆಸರಲ್ಲಿ ಬಿದ್ದ ಪಶುವಿನಂತೆ
ಅನು ದೆಸೆದೆಸೆಗೆ ಬಾಯ ಬಿಡುತ್ತಿದ್ದೇನೆ.
ಅಯ್ಯಾ, ಆರೈವವರಿಲ್ಲ, ಅಕಟಕಟ
ಪಶುವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ ಎಂದು ವಚನದ ಮೂಲಕ ತಿರುಗೇಟು ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.