ಬೆಂಗಳೂರು: ಆನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಆರ್ಪಿ ಶರ್ಮಾ ಬುಧವಾರ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಸಾವು ಸಂಭವಿಸಿದೆ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ.
ಡಿಜಿಪಿಯಾಗಿ ನಿವೃತ್ತಿ ಹೊಂದಿದ್ದ ಆರ್ಪಿ ಶರ್ಮಾ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದ್ದು, ಕೆಲ ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದರು, ಆದರೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರಾಜವೀರ್ ಪ್ರತಾಪ್ ಶರ್ಮಾ ಉತ್ತರ ಪ್ರದೇಶ ಮೂಲದವರಾಗಿದ್ದು 87 ನೇ ಬ್ಯಾಚ್ನಲ್ಲಿ ಕೇರಳ ಕೇಡರ್ಗೆ ಆಯ್ಕೆಯಾಗಿದ್ದರು. 94ರಲ್ಲಿ ಕರ್ನಾಟಕ ಕೇಡರ್ಗೆ ವರ್ಗಾವಣೆಯಾಗಿದ್ದರು. ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ತಮ್ಮ ವೆಪನ್ ಸ್ವಚ್ಛಗೊಳಿಸುವಾಗ ಮಿಸ್ ಫೈಯರ್ ಆಗಿ ಗುಂಡು ತಗುಲಿ ಕಳೆದ ಸೆಪ್ಟೆಂಬರ್ನಲ್ಲಿ ಕೊಲಂಬಿಯಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಅಂದು ಪ್ರಾಣಾಪಾಯದಿಂದ ಪಾರಾಗಿದ್ದರು.
ತಮ್ಮ ನಿವಾಸದಲ್ಲಿ ಗುಂಡು ತಗುಲಿ ರಕ್ತದ ಮಡುವಲ್ಲಿ ಬಿದ್ದಿದ್ದ ಶರ್ಮಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು . ಶರ್ಮಾಗೆ ಗುಂಡೇಟು ತಗುಲಿದ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿತ್ತು. ಗುಂಡಿನ ಶಬ್ಧ ಕೇಳೆ ಪಕ್ಕದ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು.
ಇನ್ನು ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್.ಪಿ. ಶರ್ಮಾ ಅನಾರೋಗ್ಯದಿಂದಲೂ ಬಳಲುತ್ತಿದ್ದರು. ಜೊತೆಗೆ ಕೌಟುಂಬಿಕ ಸಮಸ್ಯೆಯಿಂದ ತಾವೇ ಫೈರಿಂಗ್ ಮಾಡಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ರಾ ಎಂಬ ಚರ್ಚೆಯೂ ನೆಡೆದಿತ್ತು.
ಇದನ್ನು ಓದಿ:ಮೂರು-ನಾಲ್ಕು ತಿಂಗಳಲ್ಲಿ ವೈದ್ಯರ ಕೊರತೆ ನೀಗಿಸಲಾಗುವುದು : ಸಚಿವ ಡಾ.ಕೆ.ಸುಧಾಕರ್