ETV Bharat / state

ರೈತರ ಬದುಕು ಹಸನು ಮಾಡೋ ಸತ್ಕಾರ್ಯದಲ್ಲಿ ಕೈ ಜೋಡಿಸಿ: ಸಿಎಂ ಬಿಎಸ್​ವೈ ಮನವಿ

author img

By

Published : Jun 17, 2020, 2:32 PM IST

ಬಾಯರ್ ಕ್ರಾಪ್ ಸೈನ್ಸ್ ಲಿಮಿಟೆಡ್ ಸಂಸ್ಥೆ ವತಿಯಿಂದ ಸಣ್ಣ ಹಿಡುವಳಿದಾರರಿಗೆ ಉಚಿತ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್​ ಯಡಿಯೂರಪ್ಪ ಚಾಲನೆ ನೀಡಿದರು.

Seed distribution by Bayer Crop Science Ltd.
ಉಚಿತ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು

ಬೆಂಗಳೂರು : ಸಾರ್ವಜನಿಕ ಹಿತಾಸಕ್ತಿ ಹೊಂದಿದ ಖಾಸಗಿ ಸಂಸ್ಥೆಗಳು ರೈತರ ಬದುಕು ಹಸನು ಮಾಡುವ ಸತ್ಕಾರ್ಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಮುಂದಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಬಾಯರ್ ಕ್ರಾಪ್ ಸೈನ್ಸ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಣ್ಣ ಹಿಡುವಳಿದಾರರಿಗೆ ಉಚಿತ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಣ್ಣ ಹಿಡುವಳಿದಾರರಿಗೆ ಬಾಯರ್ ಕ್ರಾಪ್ ಸೈನ್ಸ್ ಲಿಮಿಟೆಡ್​​​ನಿಂದ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳ ಉಚಿತ ಕಿಟ್ ನೀಡಲು ಮುಂದಾಗಿರುವುದು ಸಂತಸದ ಸಂಗತಿ. ಕಾರ್ಯಕ್ರಮಕ್ಕೆ ಸಂತೋಷದಿಂದ ಚಾಲನೆ ನೀಡಿದ್ದೇನೆ. ಸಣ್ಣ ಹಿಡುವಳಿದಾರರಿಗೆ ಉತ್ತಮ ಕೃಷಿ ಕೈಗೊಳ್ಳಲು ಅನುಕೂಲವಾಗುವಂತಹ ಬೀಜ, ಆಧುನಿಕ ಕೃಷಿ ಪದ್ಧತಿಯ ಮಾಹಿತಿಯನ್ನೊಳಗೊಂಡ ಕಿಟ್‍ ಉಚಿತವಾಗಿ ವಿತರಿಸುತ್ತಿರುವುದು ಔಚಿತ್ಯಪೂರ್ಣವಾಗಿದೆ ಎಂದರು.

ಉಚಿತ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಕೋವಿಡ್-19 ನಿಂದಾಗಿ ಇಡೀ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದ್ದು, ರಾಜ್ಯದ ಕೃಷಿ ಮೇಲೂ ಪ್ರಭಾವ ಬೀರಿದೆ. ರೈತರು ಹಾಗೂ ಸಣ್ಣ ಹಿಡುವಳಿದಾರರು ತಮ್ಮ ಬೆಳೆಗಳ ಕೊಯ್ಲೋತ್ತರ ಮತ್ತು ಕೃಷಿ ಭೂಮಿ ನಿರ್ವಹಣೆಗಾಗಿ ವಲಸೆ ಕಾರ್ಮಿಕರ ಮೇಲೆ ಅವಲಂಬಿತರಾಗಿದ್ದು, ಕೋವಿಡ್-19 ನ ಪರಿಸ್ಥಿತಿಯಲ್ಲಿ ತಮ್ಮ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲಾಗದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಈ ಸನ್ನಿವೇಶದಲ್ಲಿ ರೈತರು ತಮ್ಮ ಕುಟುಂಬ, ಕೃಷಿ, ಪಶುಸಂಗೋಪನೆಗಳ ನಿರ್ವಹಣೆಯನ್ನು ನಡೆಸುವುದು ಕಷ್ಟಕರವಾಗಿದೆ. ಕೋವಿಡ್​ ಸಂಕಷ್ಟದಿಂದ ರಾಜ್ಯದ ಜನರು ಹೊರಬರಲು ಸರ್ಕಾರ 2,284 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್‍ ಘೋಷಿಸಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಿ ಎಲ್ಲ ರೀತಿಯ ಬೆಂಬಲ ನೀಡಲು ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
2020-21ನೇ ಸಾಲಿನಲ್ಲಿ 47.81 ಲಕ್ಷ ರೈತರಿಗೆ 2 ಸಾವಿರ ರೂ.ಗಳಂತೆ ಒಟ್ಟು 956.32 ಕೋಟಿ ವರ್ಗಾಯಿಸಲಾಗಿದೆ. ಕೇಂದ್ರ ಸರ್ಕಾರದ ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ನೀಡುವ 4 ಸಾವಿರ ರೂ.ಗಳ ಪೈಕಿ 2 ಸಾವಿರ ರೂ.ಗಳ ಎರಡನೇ ಕಂತನ್ನು 50 ಲಕ್ಷ ರೈತರ ಖಾತೆಗೆ, ಒಟ್ಟು 1 ಸಾವಿರ ಕೋಟಿ ರೂ. ಜಮೆ ಮಾಡಲಾಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೊವೀಡ್ ಸಂದರ್ಭದಲ್ಲಿ ಸಂಕಷ್ಟಕೀಡಾಗಿರುವ ರೈತರಿಗೆ ಬೆಂಬಲ ನೀಡುವ ಸಲುವಾಗಿ 12,735 ಹೆಕ್ಟೇರ್ ವಿಸ್ತೀರ್ಣದಲ್ಲಿ ಹೂವು ಬೆಳೆದ ರೈತರಿಗೆ ಗರಿಷ್ಠ ಒಂದು ಹೆಕ್ಟೇರ್​​ ಗೆ ರೂ. 25,000 ಗಳ ಪರಿಹಾರ ಘೋಷಿಸಲಾಗಿದೆ ಎಂದರು. ರೈತ ಸಂಪರ್ಕ ಕೇಂದ್ರ, ಯಂತ್ರೋಪಕರಣಗಳ ಸೇವಾ ಕೇಂದ್ರ, ಕೃಷಿ ಪರಿಕರ ಮಾರಾಟ ಕೇಂದ್ರಗಳನ್ನು ತೆರೆಯುವ ಮೂಲಕ ಮುಂಗಾರು ಹಂಗಾಮಿನ ಚಟುವಟಿಕೆಗಳಿಗೆ ಪೂರಕ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಬಿಎಸ್​​​​​​ವೈ ಹೇಳಿದರು.
ಹಾಪ್‍ಕಾಮ್ಸ್ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ವ್ಯವಸ್ಥೆ ಹಾಗೂ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಸಂಸ್ಥೆಯ ಈ ಉಪಕ್ರಮದಿಂದ ಸಣ್ಣ ರೈತರು ಕಡಿಮೆ ವೆಚ್ಚದಲ್ಲಿ ಉತ್ತಮ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಜೀವನ ಮಟ್ಟ ಸುಧಾರಿಸಲು ಅನುಕೂಲವಾಗಲಿದೆ. ಸಾರ್ವಜನಿಕ ಹಿತಾಸಕ್ತಿ ಹೊಂದಿದ ಖಾಸಗಿ ಸಂಸ್ಥೆಗಳು ರೈತರ ಬದುಕು ಹಸನು ಮಾಡುವ ಸತ್ಕಾರ್ಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಉಪಮುಖ್ಯಮಂತ್ರಿ ಹಾಗೂ ಸಚಿವ ಅಶ್ವತ್ಥ್ ನಾರಾಯಣ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ.ರಮಣರೆಡ್ಡಿ ಹಾಗೂ ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು.

ಬೆಂಗಳೂರು : ಸಾರ್ವಜನಿಕ ಹಿತಾಸಕ್ತಿ ಹೊಂದಿದ ಖಾಸಗಿ ಸಂಸ್ಥೆಗಳು ರೈತರ ಬದುಕು ಹಸನು ಮಾಡುವ ಸತ್ಕಾರ್ಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಮುಂದಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಬಾಯರ್ ಕ್ರಾಪ್ ಸೈನ್ಸ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಣ್ಣ ಹಿಡುವಳಿದಾರರಿಗೆ ಉಚಿತ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಣ್ಣ ಹಿಡುವಳಿದಾರರಿಗೆ ಬಾಯರ್ ಕ್ರಾಪ್ ಸೈನ್ಸ್ ಲಿಮಿಟೆಡ್​​​ನಿಂದ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳ ಉಚಿತ ಕಿಟ್ ನೀಡಲು ಮುಂದಾಗಿರುವುದು ಸಂತಸದ ಸಂಗತಿ. ಕಾರ್ಯಕ್ರಮಕ್ಕೆ ಸಂತೋಷದಿಂದ ಚಾಲನೆ ನೀಡಿದ್ದೇನೆ. ಸಣ್ಣ ಹಿಡುವಳಿದಾರರಿಗೆ ಉತ್ತಮ ಕೃಷಿ ಕೈಗೊಳ್ಳಲು ಅನುಕೂಲವಾಗುವಂತಹ ಬೀಜ, ಆಧುನಿಕ ಕೃಷಿ ಪದ್ಧತಿಯ ಮಾಹಿತಿಯನ್ನೊಳಗೊಂಡ ಕಿಟ್‍ ಉಚಿತವಾಗಿ ವಿತರಿಸುತ್ತಿರುವುದು ಔಚಿತ್ಯಪೂರ್ಣವಾಗಿದೆ ಎಂದರು.

ಉಚಿತ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಕೋವಿಡ್-19 ನಿಂದಾಗಿ ಇಡೀ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದ್ದು, ರಾಜ್ಯದ ಕೃಷಿ ಮೇಲೂ ಪ್ರಭಾವ ಬೀರಿದೆ. ರೈತರು ಹಾಗೂ ಸಣ್ಣ ಹಿಡುವಳಿದಾರರು ತಮ್ಮ ಬೆಳೆಗಳ ಕೊಯ್ಲೋತ್ತರ ಮತ್ತು ಕೃಷಿ ಭೂಮಿ ನಿರ್ವಹಣೆಗಾಗಿ ವಲಸೆ ಕಾರ್ಮಿಕರ ಮೇಲೆ ಅವಲಂಬಿತರಾಗಿದ್ದು, ಕೋವಿಡ್-19 ನ ಪರಿಸ್ಥಿತಿಯಲ್ಲಿ ತಮ್ಮ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲಾಗದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಈ ಸನ್ನಿವೇಶದಲ್ಲಿ ರೈತರು ತಮ್ಮ ಕುಟುಂಬ, ಕೃಷಿ, ಪಶುಸಂಗೋಪನೆಗಳ ನಿರ್ವಹಣೆಯನ್ನು ನಡೆಸುವುದು ಕಷ್ಟಕರವಾಗಿದೆ. ಕೋವಿಡ್​ ಸಂಕಷ್ಟದಿಂದ ರಾಜ್ಯದ ಜನರು ಹೊರಬರಲು ಸರ್ಕಾರ 2,284 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್‍ ಘೋಷಿಸಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಿ ಎಲ್ಲ ರೀತಿಯ ಬೆಂಬಲ ನೀಡಲು ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
2020-21ನೇ ಸಾಲಿನಲ್ಲಿ 47.81 ಲಕ್ಷ ರೈತರಿಗೆ 2 ಸಾವಿರ ರೂ.ಗಳಂತೆ ಒಟ್ಟು 956.32 ಕೋಟಿ ವರ್ಗಾಯಿಸಲಾಗಿದೆ. ಕೇಂದ್ರ ಸರ್ಕಾರದ ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ನೀಡುವ 4 ಸಾವಿರ ರೂ.ಗಳ ಪೈಕಿ 2 ಸಾವಿರ ರೂ.ಗಳ ಎರಡನೇ ಕಂತನ್ನು 50 ಲಕ್ಷ ರೈತರ ಖಾತೆಗೆ, ಒಟ್ಟು 1 ಸಾವಿರ ಕೋಟಿ ರೂ. ಜಮೆ ಮಾಡಲಾಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೊವೀಡ್ ಸಂದರ್ಭದಲ್ಲಿ ಸಂಕಷ್ಟಕೀಡಾಗಿರುವ ರೈತರಿಗೆ ಬೆಂಬಲ ನೀಡುವ ಸಲುವಾಗಿ 12,735 ಹೆಕ್ಟೇರ್ ವಿಸ್ತೀರ್ಣದಲ್ಲಿ ಹೂವು ಬೆಳೆದ ರೈತರಿಗೆ ಗರಿಷ್ಠ ಒಂದು ಹೆಕ್ಟೇರ್​​ ಗೆ ರೂ. 25,000 ಗಳ ಪರಿಹಾರ ಘೋಷಿಸಲಾಗಿದೆ ಎಂದರು. ರೈತ ಸಂಪರ್ಕ ಕೇಂದ್ರ, ಯಂತ್ರೋಪಕರಣಗಳ ಸೇವಾ ಕೇಂದ್ರ, ಕೃಷಿ ಪರಿಕರ ಮಾರಾಟ ಕೇಂದ್ರಗಳನ್ನು ತೆರೆಯುವ ಮೂಲಕ ಮುಂಗಾರು ಹಂಗಾಮಿನ ಚಟುವಟಿಕೆಗಳಿಗೆ ಪೂರಕ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಬಿಎಸ್​​​​​​ವೈ ಹೇಳಿದರು.
ಹಾಪ್‍ಕಾಮ್ಸ್ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ವ್ಯವಸ್ಥೆ ಹಾಗೂ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಸಂಸ್ಥೆಯ ಈ ಉಪಕ್ರಮದಿಂದ ಸಣ್ಣ ರೈತರು ಕಡಿಮೆ ವೆಚ್ಚದಲ್ಲಿ ಉತ್ತಮ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಜೀವನ ಮಟ್ಟ ಸುಧಾರಿಸಲು ಅನುಕೂಲವಾಗಲಿದೆ. ಸಾರ್ವಜನಿಕ ಹಿತಾಸಕ್ತಿ ಹೊಂದಿದ ಖಾಸಗಿ ಸಂಸ್ಥೆಗಳು ರೈತರ ಬದುಕು ಹಸನು ಮಾಡುವ ಸತ್ಕಾರ್ಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಉಪಮುಖ್ಯಮಂತ್ರಿ ಹಾಗೂ ಸಚಿವ ಅಶ್ವತ್ಥ್ ನಾರಾಯಣ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ.ರಮಣರೆಡ್ಡಿ ಹಾಗೂ ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.