ಬೆಂಗಳೂರು: ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಬರೆದಿದ್ದಾರೆ ಎನ್ನಲಾದ ಡೆತ್ನೋಟ್ ಅನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದೆ. ಡೆತ್ ನೋಟ್ನಲ್ಲಿನ ಕೈಬರಹ ರಮೇಶ್ ಅವರೇ ಬರೆದಿದ್ದಾ ಎಂಬುದರ ಕುರಿತು ತನಿಖೆ ನಡೆಯಲಿದೆ.
ಐಟಿ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಮೇಶ್ ಕುಟುಂಬಸ್ಥರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಘಟನಾ ಸ್ಥಳ ಪರಿಶೀಲಿಸಿರುವ ಪೊಲೀಸರು, ವೈದ್ಯರ ಮೌಖಿಕ ವರದಿ ಹಾಗೂ ಕುಟುಂಬದವರ ದೂರಿನ ಸಾರಾಂಶ ಆಧರಿಸಿ ಅಸಹಜ ಸಾವು ಎಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಸದ್ಯಕ್ಕೆ ಜಿ. ಪರಮೇಶ್ವರ್ ಅವರ ಸಂಸ್ಥೆಗಳ ಮೇಲಿನ ಐಟಿ ದಾಳಿಯನ್ನು ಮೊಟಕುಗೊಳಿಸಲಾಗಿದೆ.