ETV Bharat / state

ಹೆಂಡತಿಯನ್ನು ನೋಯಿಸುವ ಉದ್ದೇಶವಿಲ್ಲದೇ ಮಾಡಿದ ವ್ಯಂಗ್ಯ ಕ್ರೌರ್ಯವಲ್ಲ: ಹೈಕೋರ್ಟ್ - ವರದಕ್ಷಿಣೆ ಕಿರುಕುಳ

ವೈದ್ಯರೊಬ್ಬರ ವಿರುದ್ಧ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಹಾಗೂ ನಿಂದನೆ ಪ್ರಕರಣದ ವಿಚಾರಣೆ ವೇಳೆ ನೋಯಿಸುವ ಉದ್ದೇಶವಿಲ್ಲದೇ ಮಾಡಿದ ಮೋಜು ಕ್ರೌರ್ಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜೊತೆಗೆ ಮಹಿಳೆಯ ಆರೋಪದಲ್ಲಿ ಹುರುಳಿಲ್ಲ ಎಂದು ಅರ್ಜಿಯನ್ನ ವಜಾಗೊಳಿಸಿದೆ.

High court
ಹೈಕೋರ್ಟ್
author img

By

Published : Aug 5, 2021, 7:46 PM IST

Updated : Aug 5, 2021, 8:45 PM IST

ಬೆಂಗಳೂರು: ಓರ್ವ ವ್ಯಕ್ತಿಯನ್ನು ನೋಯಿಸುವ ಯಾವುದೇ ಉದ್ದೇಶವಿಲ್ಲದೇ ಮಾಡುವ ಮನನೋಯಿಸುವ ವರ್ತನೆ ಅಥವಾ ದ್ವಂದ್ವಾರ್ಥದ(ಪನ್-​) ಮಾತುಗಳನ್ನು ಕ್ರೌರ್ಯ ಎಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ನಿಂದನೆ ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ವಜಾಗೊಳಿಸುವ ವೇಳೆ ಅಭಿಪ್ರಾಯಪಟ್ಟಿದೆ.

ಲಾಸ್ ಏಂಜಲೀಸ್ ಮೂಲದ ದಂತ ವೈದ್ಯ ಹಾಗೂ ಆತನ ಪೋಷಕರ ವಿರುದ್ಧ ಮಹಿಳೆಯೊಬ್ಬರು ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3, 4 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 ಹಾಗೂ 325 ಅಡಿ 2017ರಲ್ಲಿ ದೂರು ಸಲ್ಲಿಸಿದ್ದರು.

ಈ ದೂರು ರದ್ದು ಕೋರಿ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ, ಜಿ. ನರೇಂದರ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿ, ಪ್ರಕರಣವನ್ನು ರದ್ದುಪಡಿಸಿದೆ. ದಂತ ವೈದ್ಯನಾಗಿರುವ ಪತಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂ​ಡಿಎಸ್ ಓದುವ ವೇಳೆ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸಿ 2012ರಲ್ಲಿ ವಿವಾಹವಾಗಿದ್ದ ದಂಪತಿ ನಡುವೆ ಅಸಮಾಧಾನ ಉಂಟಾಗಿತ್ತು.

ಮದುವೆ ಬಳಿಕ ಪತಿ ಕೆಟ್ಟದಾಗಿ ವರ್ತಿಸಿದ, ಅದರಲ್ಲೂ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಹುಟ್ಟುವ ಮಕ್ಕಳು ಇನ್ನಷ್ಟು ರೋಗಿಗಳಾಗುತ್ತಾರೆ ಎಂದು ಕೀಳಾಗಿ ನುಡಿದಿದ್ದ ಎಂದು ಮಹಿಳೆ ಆರೋಪಿಸಿದ್ದರು. ಜತೆಗೆ ಪತಿಗೆ ಮತ್ತೋರ್ವ ಮಹಿಳಾ ವೈದ್ಯೆಯೊಂದಿಗೆ ಅಕ್ರಮ ಸಂಬಂಧವಿದೆ ಎಂದೂ ದೂರಿದ್ದರು.

ಅರ್ಜಿ ವಿಚಾರಣೆ ವೇಳೆ ಮಹಿಳೆಯ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಹಾಗೂ ಆಕೆಯ ಆರೋಪಗಳನ್ನು ಖಚಿತಪಡಿಸುವ ಸಾಕ್ಷ್ಯಗಳಿಲ್ಲ ಎಂಬುದನ್ನು ಗಮನಿಸಿದ ಪೀಠ, ಅರ್ಜಿ ವಜಾ ಮಾಡಿದೆ. ಈ ವೇಳೆ ನೋಯಿಸುವ ಉದ್ದೇಶವಿಲ್ಲದೇ ಮಾಡಿದ ವ್ಯಂಗ್ಯ ಕ್ರೌರ್ಯದ ವ್ಯಾಪ್ತಿಗೆ ಬರದು ಎಂದು ಅಭಿಪ್ರಾಯಪಟ್ಟಿದೆ.

ಓದಿ: ಕರ್ನಾಟಕದ ಗಡಿ ನಿರ್ಬಂಧ ಕೇಂದ್ರದ ನಿರ್ದೇಶನಕ್ಕೆ ವಿರುದ್ಧ: ಕೇರಳ ಸಿಎಂ

ಬೆಂಗಳೂರು: ಓರ್ವ ವ್ಯಕ್ತಿಯನ್ನು ನೋಯಿಸುವ ಯಾವುದೇ ಉದ್ದೇಶವಿಲ್ಲದೇ ಮಾಡುವ ಮನನೋಯಿಸುವ ವರ್ತನೆ ಅಥವಾ ದ್ವಂದ್ವಾರ್ಥದ(ಪನ್-​) ಮಾತುಗಳನ್ನು ಕ್ರೌರ್ಯ ಎಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ನಿಂದನೆ ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ವಜಾಗೊಳಿಸುವ ವೇಳೆ ಅಭಿಪ್ರಾಯಪಟ್ಟಿದೆ.

ಲಾಸ್ ಏಂಜಲೀಸ್ ಮೂಲದ ದಂತ ವೈದ್ಯ ಹಾಗೂ ಆತನ ಪೋಷಕರ ವಿರುದ್ಧ ಮಹಿಳೆಯೊಬ್ಬರು ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3, 4 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 ಹಾಗೂ 325 ಅಡಿ 2017ರಲ್ಲಿ ದೂರು ಸಲ್ಲಿಸಿದ್ದರು.

ಈ ದೂರು ರದ್ದು ಕೋರಿ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ, ಜಿ. ನರೇಂದರ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿ, ಪ್ರಕರಣವನ್ನು ರದ್ದುಪಡಿಸಿದೆ. ದಂತ ವೈದ್ಯನಾಗಿರುವ ಪತಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂ​ಡಿಎಸ್ ಓದುವ ವೇಳೆ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸಿ 2012ರಲ್ಲಿ ವಿವಾಹವಾಗಿದ್ದ ದಂಪತಿ ನಡುವೆ ಅಸಮಾಧಾನ ಉಂಟಾಗಿತ್ತು.

ಮದುವೆ ಬಳಿಕ ಪತಿ ಕೆಟ್ಟದಾಗಿ ವರ್ತಿಸಿದ, ಅದರಲ್ಲೂ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಹುಟ್ಟುವ ಮಕ್ಕಳು ಇನ್ನಷ್ಟು ರೋಗಿಗಳಾಗುತ್ತಾರೆ ಎಂದು ಕೀಳಾಗಿ ನುಡಿದಿದ್ದ ಎಂದು ಮಹಿಳೆ ಆರೋಪಿಸಿದ್ದರು. ಜತೆಗೆ ಪತಿಗೆ ಮತ್ತೋರ್ವ ಮಹಿಳಾ ವೈದ್ಯೆಯೊಂದಿಗೆ ಅಕ್ರಮ ಸಂಬಂಧವಿದೆ ಎಂದೂ ದೂರಿದ್ದರು.

ಅರ್ಜಿ ವಿಚಾರಣೆ ವೇಳೆ ಮಹಿಳೆಯ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಹಾಗೂ ಆಕೆಯ ಆರೋಪಗಳನ್ನು ಖಚಿತಪಡಿಸುವ ಸಾಕ್ಷ್ಯಗಳಿಲ್ಲ ಎಂಬುದನ್ನು ಗಮನಿಸಿದ ಪೀಠ, ಅರ್ಜಿ ವಜಾ ಮಾಡಿದೆ. ಈ ವೇಳೆ ನೋಯಿಸುವ ಉದ್ದೇಶವಿಲ್ಲದೇ ಮಾಡಿದ ವ್ಯಂಗ್ಯ ಕ್ರೌರ್ಯದ ವ್ಯಾಪ್ತಿಗೆ ಬರದು ಎಂದು ಅಭಿಪ್ರಾಯಪಟ್ಟಿದೆ.

ಓದಿ: ಕರ್ನಾಟಕದ ಗಡಿ ನಿರ್ಬಂಧ ಕೇಂದ್ರದ ನಿರ್ದೇಶನಕ್ಕೆ ವಿರುದ್ಧ: ಕೇರಳ ಸಿಎಂ

Last Updated : Aug 5, 2021, 8:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.