ETV Bharat / state

ಉಪಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಸೋಲಿಸಿ: ಪರಮೇಶ್ವರ್ - ಅವಕಾಶ ಸಿಗದಿದ್ದರೆ ಮಧ್ಯಂತರ ಚುನಾವಣೆ

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿ. ಪರಮೇಶ್ವರ್​​ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಸೋಲಿಸಿ ಕಾಂಗ್ರೆಸ್​​ ಗೆಲ್ಲಿಸಬೇಕು ಎಂದು 15 ಕ್ಷೇತ್ರಗಳ ಮತದಾರರಿಗೆ ಮನವಿ ಮಾಡಿದರು.

ಪರಮೇಶ್ವರ್
ಪರಮೇಶ್ವರ್
author img

By

Published : Dec 1, 2019, 5:24 PM IST

ಬೆಂಗಳೂರು: ಉಪಚುನಾವಣೆ ಬಹಳ ಗಂಭೀರವಾದದ್ದು, ಇದು ರಾಜ್ಯದ ಭವಿಷ್ಯ ನಿರ್ಧರಿಸಲಿದೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ 15 ಕ್ಷೇತ್ರಗಳ ಚುನಾವಣೆಯಲ್ಲ. ಕಳೆದ ನಾಲ್ಕೈದು ತಿಂಗಳಿಂದ ನೋಡಿದ್ದೀರಾ. ಯಡಿಯೂರಪ್ಪ ಸಮ್ಮಿಶ್ರ ಸರ್ಕಾರ ಕೆಡವಿದ್ರು. ಶಾಸಕರನ್ನ ಕೊಂಡು ಸರ್ಕಾರ ರಚಿಸಿ, ಉತ್ತಮ ಆಡಳಿತ ಕೊಡ್ತಾರೆ ಅಂದುಕೊಂಡಿದ್ದೆವು. ಆದರೆ, ಅವರು ಸರ್ಕಾರ ಹೇಗೆ ನಡೆಸುತ್ತಿದ್ದಾರೆ...? ಪ್ರವಾಹ ಸಂತ್ರಸ್ಥರನ್ನ ಹೇಗೆ ನೋಡಿಕೊಳ್ತಿದ್ದಾರೆ ಎಂಬುದು ಕಣ್ಣಿಗೆ ಕಾಣುತ್ತಿದೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿ. ಪರಮೇಶ್ವರ್​​

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರ ಮಾತನಾಡಿ, ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಬಂದರೆ ಎರಡು ಆಯ್ಕೆಗಳಿವೆ. ಒಂದು ಜೆಡಿಎಸ್ ಜೊತೆ ಹೋಗಬಹುದು. ಅವಕಾಶ ಸಿಗದಿದ್ದರೆ ಮಧ್ಯಂತರ ಚುನಾವಣೆಗೆ ಹೋಗಬಹುದು. ಹೀಗಾಗಿ ಅವಕಾಶಗಳು ಮುಕ್ತವಾಗಿವೆ. ಆದರೆ ಇಲ್ಲಿ ಕೂತು ನಾವು ತೀರ್ಮಾನಿಸೋಕೆ ಆಗಲ್ಲ. ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಸಿದ್ದರಾಮಯ್ಯ ಏಕಾಂಗಿಯಾಗಿಲ್ಲ. ಅವರು ಏಕಾಂಗಿಯಾಗೋಕೆ ನಾವು ಬಿಡಲ್ಲ. ನಾವೆಲ್ಲರೂ ಅವರ ಜೊತೆಯೇ ಇದ್ದೇವೆ. ನನಗೆ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆಯಿತ್ತು. ಹೀಗಾಗಿ ಪ್ರಚಾರದಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ವೈದ್ಯರು ವಿಶ್ರಾಂತಿ ಪಡೆಯಿರಿ ಅಂದಿದ್ದರು. ಆದರೂ ಹುಣಸೂರಿಗೆ ರೈಲಿನಲ್ಲೇ ಹೋಗಿ ಪ್ರಚಾರ ಮಾಡಿದ್ದೆ. ನಾವೆಲ್ಲರೂ ಸಿದ್ದರಾಮಯ್ಯನವರ ಜೊತೆಯೇ ಇದ್ದೇವೆ ಎಂದು ಹೇಳಿದರು.

ಬೆಂಗಳೂರು: ಉಪಚುನಾವಣೆ ಬಹಳ ಗಂಭೀರವಾದದ್ದು, ಇದು ರಾಜ್ಯದ ಭವಿಷ್ಯ ನಿರ್ಧರಿಸಲಿದೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ 15 ಕ್ಷೇತ್ರಗಳ ಚುನಾವಣೆಯಲ್ಲ. ಕಳೆದ ನಾಲ್ಕೈದು ತಿಂಗಳಿಂದ ನೋಡಿದ್ದೀರಾ. ಯಡಿಯೂರಪ್ಪ ಸಮ್ಮಿಶ್ರ ಸರ್ಕಾರ ಕೆಡವಿದ್ರು. ಶಾಸಕರನ್ನ ಕೊಂಡು ಸರ್ಕಾರ ರಚಿಸಿ, ಉತ್ತಮ ಆಡಳಿತ ಕೊಡ್ತಾರೆ ಅಂದುಕೊಂಡಿದ್ದೆವು. ಆದರೆ, ಅವರು ಸರ್ಕಾರ ಹೇಗೆ ನಡೆಸುತ್ತಿದ್ದಾರೆ...? ಪ್ರವಾಹ ಸಂತ್ರಸ್ಥರನ್ನ ಹೇಗೆ ನೋಡಿಕೊಳ್ತಿದ್ದಾರೆ ಎಂಬುದು ಕಣ್ಣಿಗೆ ಕಾಣುತ್ತಿದೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿ. ಪರಮೇಶ್ವರ್​​

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರ ಮಾತನಾಡಿ, ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಬಂದರೆ ಎರಡು ಆಯ್ಕೆಗಳಿವೆ. ಒಂದು ಜೆಡಿಎಸ್ ಜೊತೆ ಹೋಗಬಹುದು. ಅವಕಾಶ ಸಿಗದಿದ್ದರೆ ಮಧ್ಯಂತರ ಚುನಾವಣೆಗೆ ಹೋಗಬಹುದು. ಹೀಗಾಗಿ ಅವಕಾಶಗಳು ಮುಕ್ತವಾಗಿವೆ. ಆದರೆ ಇಲ್ಲಿ ಕೂತು ನಾವು ತೀರ್ಮಾನಿಸೋಕೆ ಆಗಲ್ಲ. ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಸಿದ್ದರಾಮಯ್ಯ ಏಕಾಂಗಿಯಾಗಿಲ್ಲ. ಅವರು ಏಕಾಂಗಿಯಾಗೋಕೆ ನಾವು ಬಿಡಲ್ಲ. ನಾವೆಲ್ಲರೂ ಅವರ ಜೊತೆಯೇ ಇದ್ದೇವೆ. ನನಗೆ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆಯಿತ್ತು. ಹೀಗಾಗಿ ಪ್ರಚಾರದಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ವೈದ್ಯರು ವಿಶ್ರಾಂತಿ ಪಡೆಯಿರಿ ಅಂದಿದ್ದರು. ಆದರೂ ಹುಣಸೂರಿಗೆ ರೈಲಿನಲ್ಲೇ ಹೋಗಿ ಪ್ರಚಾರ ಮಾಡಿದ್ದೆ. ನಾವೆಲ್ಲರೂ ಸಿದ್ದರಾಮಯ್ಯನವರ ಜೊತೆಯೇ ಇದ್ದೇವೆ ಎಂದು ಹೇಳಿದರು.

Intro:news Body:ಉಪಚುನಾವಣೆ ಫಲಿತಾಂಶ ರಾಜ್ಯದ ಭವಿಷ್ಯ ನಿರ್ಧರಿಸಲಿದೆ: ಪರಮೇಶ್ವರ್


ಬೆಂಗಳೂರು: ಉಪಚುನಾವಣೆ ಬಹಳ ಗಂಭೀರವಾದುದು. ರಾಜ್ಯದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದು ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿ ಸುದ್ದಿಗಾರರ ಜೊತೆ ಮಾತನಾಡಿ, ಕೇವಲ 15 ಕ್ಷೇತ್ರಗಳ ಚುನಾವಣೆಯಲ್ಲ. ಕಳೆದ ನಾಲ್ಕೈದು ತಿಂಗಳಿಂದ ನೋಡಿದ್ದೀರ. ಯಡಿಯೂರಪ್ಪ ಸಮ್ಮಿಶ್ರ ಸರ್ಕಾರ ಕೆಡವಿದ್ರು. ಅದರ ನಂತರ ಆದ ಬೆಳವಣಿಗೆಗಳನ್ನ ಗಮನಿಸಿದ್ದೇವೆ. ಶಾಸಕರನ್ನ ಕೊಂಡುಕೊಂಡು ಸರ್ಕಾರ ರಚಿಸಿದ್ದು ಏಕೆ? ಉತ್ತಮ ಆಡಳಿತ ಕೊಡ್ತೀರ ಅಂತ ಅಂದುಕೊಂಡಿದ್ದೆವು. ಆದರೆ ನೀವು ಸರ್ಕಾರ ಹೇಗೆ ನಡೆಸುತ್ತಿದ್ದೀರ? ಪ್ರವಾಹ ಸಂತ್ರಸ್ಥರನ್ನ ಹೇಗೆ ನೋಡಿಕೊಳ್ತಿದ್ದೀರ ಎಂಬುದು ಕಣ್ಣಿಗೆ ಕಾಣುತ್ತಿದೆ ಎಂದರು.
ಅಧಿಕಾರಿಗಳು ಚುನಾವಣೆ ಬ್ಯುಸಿಯಲ್ಲಿದ್ದಾರೆ. ಸಂತ್ರಸ್ಥರನ್ನ ನೋಡಿಕೊಳ್ಳುವವರು ಯಾರು. ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದಾರೆ. ಇವರ ಬೆಂಬಲಕ್ಕೆ ಬರುವವರು ಕಾಣುತ್ತಿಲ್ಲ. ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನಿಸುತ್ತಿರುವುದು ಯಡಿಯೂರಪ್ಪ ದೊಡ್ಡ ಸಾಧನೆಯಾಗಿದೆ ಎಂದರು.
ತೆರಿಗೆ ಸಂಗ್ರಹ ಕೇವಲ ಶೇ.40 ರಷ್ಟು ಆಗಿದೆ. ಹಣ ಇದ್ದರೆ ಸರ್ಕಾರ ಖರ್ಚು ಮಾಡಬಹುದು. ತೆರಿಗೆಯನ್ನೇ ಸಂಗ್ರಹ ಮಾಡದಿದ್ದರೆ ಅಧಿಕಾರ ನಡೆಸೋದು ಹೇಗೆ? ಇನ್ನು ಅಭಿವೃದ್ಧಿ ಕೆಲಸ ಮಾಡೋದು ಹೇಗೆ. ಇಂತ ದುರಾಡಳಿತ ಸರ್ಕಾರ ನಿಮಗೆ ಬೇಕಾ? ಎಂದು ರಾಜ್ಯದ ಜನರಿಗೆ ಪ್ರಶ್ನೆ ಮಾಡಿದರು.
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರ ಮಾತನಾಡಿ, ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಬಂದರೆ ಎರಡು ಆಯ್ಕೆಗಳಿವೆ. ಒಂದು ಜೆಡಿಎಸ್ ಜೊತೆ ಹೋಗಬಹುದು. ಮತ್ತೆ ಚುನಾವಣೆ ಬೇಡ ಅನ್ನೋದಾದ್ರೆ ಹೋಗಬಹುದು. ಅವಕಾಶ ಸಿಗದಿದ್ದರೆ ಮಧ್ಯಂತರ ಚುನಾವಣೆಗೆ ಹೋಗಬಹುದು. ಹೀಗಾಗಿ ಅವಕಾಶಗಳು ಮುಕ್ತವಾಗಿವೆ. ಆದರೆ ಇಲ್ಲಿ ಕೂತು ನಾವು ತೀರ್ಮಾನಿಸೋಕೆ ಆಗಲ್ಲ. ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ನಮ್ಮ ಅವಧಿಯಲ್ಲಿ ಏನೆಲ್ಲಾ ಕೆಲಸ ಮಾಡಿದ್ದೆವು. ಸಿದ್ದರಾಮಯ್ಯ ಏನೆಲ್ಲಾ ಯೋಜನೆ ಕೊಟ್ಟಿದ್ದರು. ಆದರೆ ನೀವು ಯಾವ ಯೋಜನೆ ಕೊಡ್ತಿದ್ದೀರ. ಶಾಸಕರನ್ನ ಕೊಂಡು ಕೊಂಡು ಚುನಾವಣೆಗೆ ಹೋಗ್ತಿದ್ದೀರ. ಜನ ಅನರ್ಹರನ್ನ ಗೆಲ್ಲಿಸ್ತೀರಾ? ರಾಜ್ಯದ ಜನರೇ ಇದೆಲ್ಲವನ್ನೂ ಗಮನಿಸಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ಜೊತೆ ನಾವಿದ್ದೇವೆ
ಸಿದ್ದರಾಮಯ್ಯ ಏಕಾಂಗಿ ಎಂಬ ವಿಚಾರ ಮಾತನಾಡಿ, ಸಿದ್ದರಾಮಯ್ಯ ಏಕಾಂಗಿಯಾಗಿಲ್ಲ. ಅವರು ಏಕಾಂಗಿಯಾಗೋಕೆ ನಾವು ಬಿಡಲ್ಲ. ನಾವೆಲ್ಲರೂ ಅವರ ಜೊತೆಯೇ ಇದ್ದೇವೆ. ನನಗೆ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆಯಿತ್ತು. ಹೀಗಾಗಿ ಪ್ರಚಾರದಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ವೈದ್ಯರು ವಿಶ್ರಾಂತಿ ಪಡೆಯಿರಿ ಅಂದಿದ್ದರು. ಆದರೂ ಹುಣಸೂರಿಗೆ ರೈಲಿನಲ್ಲೇ ಹೋಗಿ ಪ್ರಚಾರ ಮಾಡಿದ್ದೆ. ನಾವೆಲ್ಲರೂ ಸಿದ್ದರಾಮಯ್ಯನವರ ಜೊತೆಯೇ ಇದ್ದೇವೆ ಎಂದು ಹೇಳಿದರು.
Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.