ETV Bharat / state

ಭಗವದ್ಗೀತೆ ಸರ್ವಕಾಲಕ್ಕೂ ಪ್ರಸ್ತುತ: ರಾಜನಾಥ್ ಸಿಂಗ್

ಗೀತ ಜಯಂತಿ ನಿಮಿತ್ತ ಬೆಂಗಳೂರಿನ ವಸಂತಪುರದ ಇಸ್ಕಾನ್​ನ ಶ್ರೀರಾಜಾಧಿರಾಜ ಗೋವಿಂದ ಮಂದಿರದಲ್ಲಿ ಇಂದು 'ಗೀತ ದಾನ ಯಜ್ಞ ಮಹೋತ್ಸವ' ಏರ್ಪಡಿಸಲಾಗಿತ್ತು.

author img

By

Published : Dec 3, 2022, 10:35 PM IST

KN_BNG
ಗೀತ ದಾನ ಯಜ್ಞ ಮಹೋತ್ಸವವನ್ನು ಉದ್ಘಾಟಿಸಿದ ರಾಜನಾಥ್​ ಸಿಂಗ್​

ಬೆಂಗಳೂರು: ಸತ್ಯ, ಧರ್ಮ, ಅಹಿಂಸೆಯನ್ನು ಪ್ರತಿಪಾದಿಸುವ ಭಗವದ್ಗೀತೆ ಸರ್ವ ಕಾಲಕ್ಕೂ ಶ್ರೇಷ್ಠ ಗ್ರಂಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು. ಅವರು ಇಂದು ವಸಂತಪುರದ ಇಸ್ಕಾನ್​ನ ಶ್ರೀ ರಾಜಾಧಿರಾಜ ಗೋವಿಂದ ಮಂದಿರದಲ್ಲಿ ಗೀತ ಜಯಂತಿಯ ಸಂದರ್ಭದಲ್ಲಿ ಏರ್ಪಡಿಸಲಾದ 'ಗೀತ ದಾನ ಯಜ್ಞ ಮಹೋತ್ಸವ'ವನ್ನು ಉದ್ಘಾಟಿಸಿ ಮಾತನಾಡಿದರು.

ಗೀತ ದಾನ ಯಜ್ಞ ಮಹೋತ್ಸವ

ನಾವು ಯಾವುದೇ ಪಠ್ಯ ಕಲಿಯಲು ಶಿಕ್ಷಕರ ಅವಶ್ಯಕತೆ ಇರುತ್ತದೆ. ಆದರೆ, ಭಾವನೆಗಳಾದ ಶಾಂತ, ಕ್ರೌರ್ಯ, ಸಂತಸ, ದುಃಖ ಮುಂತಾದವುಗಳನ್ನು ಯಾರೂ ಕಲಿಸಿಲ್ಲ. ಇದು ನಮ್ಮಲ್ಲಿಯೇ ಪ್ರಕಟಗೊಳ್ಳುತ್ತದೆ.

ಭಗವದ್ಗೀತೆ ಸಹ ನಮ್ಮ ಜೀವನಕ್ಕೆ ಹತ್ತಿರವಾದದ್ದು. ನಾವು ಹೇಗೆ ಶೋಕದಿಂದ ಮುಕ್ತವಾಗಬಹುದೆಂದು ತಿಳಿಸಿಕೊಡುತ್ತದೆ. ಹಾಗೆಯೇ ಮೃತ್ಯುವಿನ ಭಯವನ್ನು ಹೋಗಲಾಡಿಸುತ್ತದೆ. ನಮ್ಮನ್ನು ಆಧ್ಯಾತ್ಮಿಕದ ಕಡೆ ಕರೆದೊಯ್ಯುತ್ತದೆ. ಎಷ್ಟೋ ಮಹಾಕವಿ, ಸಾಧಕರಿಗೆ ಇದು ಪ್ರೇರಣಾ ಶಕ್ತಿಯಾಗಿದೆ.

ಭಗವದ್ಗೀತೆಯ ನೀತಿಯನ್ನು ನಮ್ಮ ಜೀವನದಲ್ಲಿ ಅಳವಡಿಕೊಳ್ಳುವುದರ ಮೂಲಕ ಸರಿಯಾದ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ನಾವು ಎಂದಿಗೂ ಸಕಾರಾತ್ಮಕವಾಗಿ ಆಲೋಚನೆ ಮಾಡಿ ಒಳ್ಳೆಯ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಅದೇ ತರನಾದ ಜೀವನ ಶೈಲಿಯನ್ನು ಮುಂದಿನ ಯುವ ಪೀಳಿಗೆಗೂ ತಲುಪಿಸಬೇಕೆಂದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಗವದ್ಗೀತೆ ದೇವರ ವಾಣಿಯಾಗಿದೆ. ಇದನ್ನು ಪಠಿಸುವುದರಿಂದ ನಮಗೆ ಶಾಂತಿ, ನೆಮ್ಮದಿ ಹಾಗೂ ಸಹನೆ ದೊರೆಯುತ್ತದೆ. ಅಲ್ಲದೆ ಬದುಕಿನ ದೃಷ್ಟಿಕೋನ ಬದಲಾಗಿ ಮನುಕುಲದ ಅಭಿವೃದ್ದಿ ಸಾಧ್ಯವಾಗುತ್ತದೆ.

ಮಹಾಭಾರತದ ಕುರುಕ್ಷೇತ್ರ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ಹೇಳಿದ ನೀತಿಪಾಠದ ಭಗವದ್ಗೀತೆ ಮನುಷ್ಯನ ಪಾಪ, ಪುಣ್ಯ, ಮರುಜನ್ಮ, ಕರ್ತವ್ಯ, ಬದುಕು ಮುಂತಾದವುಗಳ ಮೇಲೆ ಬೆಳಕು ಚೆಲ್ಲುತ್ತದೆ. ನಮ್ಮಲ್ಲಿನ ಎಷ್ಟೋ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿ ಪರಿಹಾರ ಉಂಟು‌. ಇಸ್ಕಾನ್​ ನವರು ನಮ್ಮ ದೇಶ ಮಾತ್ರವಲ್ಲದೇ ವಿದೇಶದಲ್ಲಿ ಸಹ ನಮ್ಮ ಸಂಸ್ಕೃತಿಯನ್ನು ಪ್ರಚಾರ ಪಡಿಸುತ್ತಿದ್ದಾರೆ. ಭಾರತದಲ್ಲಿ ಭಕ್ತಿ ಚಳವಳಿಯನ್ನು ಮತ್ತೆ ತರುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಗೀತ ಜಯಂತಿಯ ಈ ಶುಭ ಸಂದರ್ಭದಲ್ಲಿ ಇಸ್ಕಾನ್ ನವರು ಈ ತಿಂಗಳು ನಡೆಯುವ ಗೀತದಾನ ಯಜ್ಞದ ಅವಧಿಯಲ್ಲಿ 1 ಲಕ್ಷ ಭಗವದ್ಗೀತೆ ಪ್ರತಿಗಳನ್ನು ಜನರಿಗೆ ಹಂಚುವ ಕೆಲಸ ಕೈಗೆತ್ತಿಕೊಂಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಇಸ್ಕಾನ್ ಉಪಾಧ್ಯಕ್ಷರಾದ ಚಂಚಲ ದಾಸ್ ಗಣ್ಯರನ್ನು ಸ್ವಾಗತಿಸಿದರು. ಮಕ್ಕಳು ಮತ್ತು ಯುವಜನರ ವಿವಿಧ ತಂಡಗಳು ಮಂದಿರದ ಆವರಣದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದರು. ವಿದ್ವಾಂಸರಾದ ವಿದ್ಯಾಭೂಷಣ ಅವರ ಭಗವದ್ಗೀತೆಯ ವಾಚನದ ಯೂಟ್ಯೂಬ್ ವಿಡಿಯೋಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಇಸ್ಕಾನ್ ಅಕ್ಷಯ ಪಾತ್ರೆ ಅಧ್ಯಕ್ಷರಾದ ಮಧುಪಂಡಿತ್ ದಾಸ್, ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ಚಿ ಸೂರ್ಯ, ಶಾಸಕ ಎಂ‌. ಕೃಷ್ಣಪ್ಪ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಪುತ್ತಿಗೆ ಮಠದಿಂದ ಪರ್ಯಾಯ ಪೂರ್ವ ಬಾಳೆ ಮುಹೂರ್ತ

ಬೆಂಗಳೂರು: ಸತ್ಯ, ಧರ್ಮ, ಅಹಿಂಸೆಯನ್ನು ಪ್ರತಿಪಾದಿಸುವ ಭಗವದ್ಗೀತೆ ಸರ್ವ ಕಾಲಕ್ಕೂ ಶ್ರೇಷ್ಠ ಗ್ರಂಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು. ಅವರು ಇಂದು ವಸಂತಪುರದ ಇಸ್ಕಾನ್​ನ ಶ್ರೀ ರಾಜಾಧಿರಾಜ ಗೋವಿಂದ ಮಂದಿರದಲ್ಲಿ ಗೀತ ಜಯಂತಿಯ ಸಂದರ್ಭದಲ್ಲಿ ಏರ್ಪಡಿಸಲಾದ 'ಗೀತ ದಾನ ಯಜ್ಞ ಮಹೋತ್ಸವ'ವನ್ನು ಉದ್ಘಾಟಿಸಿ ಮಾತನಾಡಿದರು.

ಗೀತ ದಾನ ಯಜ್ಞ ಮಹೋತ್ಸವ

ನಾವು ಯಾವುದೇ ಪಠ್ಯ ಕಲಿಯಲು ಶಿಕ್ಷಕರ ಅವಶ್ಯಕತೆ ಇರುತ್ತದೆ. ಆದರೆ, ಭಾವನೆಗಳಾದ ಶಾಂತ, ಕ್ರೌರ್ಯ, ಸಂತಸ, ದುಃಖ ಮುಂತಾದವುಗಳನ್ನು ಯಾರೂ ಕಲಿಸಿಲ್ಲ. ಇದು ನಮ್ಮಲ್ಲಿಯೇ ಪ್ರಕಟಗೊಳ್ಳುತ್ತದೆ.

ಭಗವದ್ಗೀತೆ ಸಹ ನಮ್ಮ ಜೀವನಕ್ಕೆ ಹತ್ತಿರವಾದದ್ದು. ನಾವು ಹೇಗೆ ಶೋಕದಿಂದ ಮುಕ್ತವಾಗಬಹುದೆಂದು ತಿಳಿಸಿಕೊಡುತ್ತದೆ. ಹಾಗೆಯೇ ಮೃತ್ಯುವಿನ ಭಯವನ್ನು ಹೋಗಲಾಡಿಸುತ್ತದೆ. ನಮ್ಮನ್ನು ಆಧ್ಯಾತ್ಮಿಕದ ಕಡೆ ಕರೆದೊಯ್ಯುತ್ತದೆ. ಎಷ್ಟೋ ಮಹಾಕವಿ, ಸಾಧಕರಿಗೆ ಇದು ಪ್ರೇರಣಾ ಶಕ್ತಿಯಾಗಿದೆ.

ಭಗವದ್ಗೀತೆಯ ನೀತಿಯನ್ನು ನಮ್ಮ ಜೀವನದಲ್ಲಿ ಅಳವಡಿಕೊಳ್ಳುವುದರ ಮೂಲಕ ಸರಿಯಾದ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ನಾವು ಎಂದಿಗೂ ಸಕಾರಾತ್ಮಕವಾಗಿ ಆಲೋಚನೆ ಮಾಡಿ ಒಳ್ಳೆಯ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಅದೇ ತರನಾದ ಜೀವನ ಶೈಲಿಯನ್ನು ಮುಂದಿನ ಯುವ ಪೀಳಿಗೆಗೂ ತಲುಪಿಸಬೇಕೆಂದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಗವದ್ಗೀತೆ ದೇವರ ವಾಣಿಯಾಗಿದೆ. ಇದನ್ನು ಪಠಿಸುವುದರಿಂದ ನಮಗೆ ಶಾಂತಿ, ನೆಮ್ಮದಿ ಹಾಗೂ ಸಹನೆ ದೊರೆಯುತ್ತದೆ. ಅಲ್ಲದೆ ಬದುಕಿನ ದೃಷ್ಟಿಕೋನ ಬದಲಾಗಿ ಮನುಕುಲದ ಅಭಿವೃದ್ದಿ ಸಾಧ್ಯವಾಗುತ್ತದೆ.

ಮಹಾಭಾರತದ ಕುರುಕ್ಷೇತ್ರ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ಹೇಳಿದ ನೀತಿಪಾಠದ ಭಗವದ್ಗೀತೆ ಮನುಷ್ಯನ ಪಾಪ, ಪುಣ್ಯ, ಮರುಜನ್ಮ, ಕರ್ತವ್ಯ, ಬದುಕು ಮುಂತಾದವುಗಳ ಮೇಲೆ ಬೆಳಕು ಚೆಲ್ಲುತ್ತದೆ. ನಮ್ಮಲ್ಲಿನ ಎಷ್ಟೋ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿ ಪರಿಹಾರ ಉಂಟು‌. ಇಸ್ಕಾನ್​ ನವರು ನಮ್ಮ ದೇಶ ಮಾತ್ರವಲ್ಲದೇ ವಿದೇಶದಲ್ಲಿ ಸಹ ನಮ್ಮ ಸಂಸ್ಕೃತಿಯನ್ನು ಪ್ರಚಾರ ಪಡಿಸುತ್ತಿದ್ದಾರೆ. ಭಾರತದಲ್ಲಿ ಭಕ್ತಿ ಚಳವಳಿಯನ್ನು ಮತ್ತೆ ತರುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಗೀತ ಜಯಂತಿಯ ಈ ಶುಭ ಸಂದರ್ಭದಲ್ಲಿ ಇಸ್ಕಾನ್ ನವರು ಈ ತಿಂಗಳು ನಡೆಯುವ ಗೀತದಾನ ಯಜ್ಞದ ಅವಧಿಯಲ್ಲಿ 1 ಲಕ್ಷ ಭಗವದ್ಗೀತೆ ಪ್ರತಿಗಳನ್ನು ಜನರಿಗೆ ಹಂಚುವ ಕೆಲಸ ಕೈಗೆತ್ತಿಕೊಂಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಇಸ್ಕಾನ್ ಉಪಾಧ್ಯಕ್ಷರಾದ ಚಂಚಲ ದಾಸ್ ಗಣ್ಯರನ್ನು ಸ್ವಾಗತಿಸಿದರು. ಮಕ್ಕಳು ಮತ್ತು ಯುವಜನರ ವಿವಿಧ ತಂಡಗಳು ಮಂದಿರದ ಆವರಣದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದರು. ವಿದ್ವಾಂಸರಾದ ವಿದ್ಯಾಭೂಷಣ ಅವರ ಭಗವದ್ಗೀತೆಯ ವಾಚನದ ಯೂಟ್ಯೂಬ್ ವಿಡಿಯೋಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಇಸ್ಕಾನ್ ಅಕ್ಷಯ ಪಾತ್ರೆ ಅಧ್ಯಕ್ಷರಾದ ಮಧುಪಂಡಿತ್ ದಾಸ್, ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ಚಿ ಸೂರ್ಯ, ಶಾಸಕ ಎಂ‌. ಕೃಷ್ಣಪ್ಪ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಪುತ್ತಿಗೆ ಮಠದಿಂದ ಪರ್ಯಾಯ ಪೂರ್ವ ಬಾಳೆ ಮುಹೂರ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.