ETV Bharat / state

2.30 ನಿಮಿಷದಲ್ಲಿ ನಾಡಗೀತೆ ಹಾಡಲು ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

author img

By

Published : Sep 25, 2022, 8:26 PM IST

ನಾಡಗೀತೆಗೆ ಸಮಯ ಮತ್ತು ದಾಟಿ ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮೈಸೂರು ಅನಂತಸ್ವಾಮಿರವರ ದಾಟಿಯನ್ನು ಅಳವಡಿಸಿಕೊಂಡು 2.30 ನಿಮಿಷಗಳಲ್ಲಿ ನಾಡಗೀತೆ ಹಾಡಲು ಸರ್ಕಾರ ಆದೇಶಿಸಿದೆ.

2.30 ನಿಮಿಷದಲ್ಲಿ ನಾಡಗೀತೆ ಹಾಡಲು ಅಧಿಕೃತ ಆದೇಶ ಹೊರಡಿಸಿದ ಸರ್ಕಾರ
government has issued an official order to sing state anthem

ಬೆಂಗಳೂರು: ನಾಡಗೀತೆಯನ್ನು 2.30 ನಿಮಿಷಗಳಲ್ಲಿ ಹಾಡುವ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮೈಸೂರು ಅನಂತಸ್ವಾಮಿರವರ ದಾಟಿಯನ್ನು ಅಳವಡಿಸಿಕೊಂಡು ನಾಡಗೀತೆಯ ಪೂರ್ಣಪಾಠ ಬಳಸಬೇಕು ಹಾಗೂ ಯಾವುದೇ ಆಲಾಪವಿಲ್ಲದ, ಪುನರಾವರ್ತನೆ ಇಲ್ಲದೆ, ಎರಡು ನಿಮಿಷ ಮೂವತ್ತು ಸೆಕೆಂಡುಗಳಲ್ಲಿ ಹಾಡುವಂತೆ ಆದೇಶಿಸಲಾಗಿದೆ.

ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದ ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ವಿಕಲಚೇತನರಿಗೆ ಅನಾನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರ್ಕಾರದ ಮುಂದೆ ಇತ್ತು.

2006 ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರ್ಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರ್ಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್​​ಗಳಲ್ಲಿ ನಾಡಗೀತೆ ಹಾಡಬೇಕೆಂದು ಶಿಫಾರಸು ಮಾಡಿತ್ತು. ಆ ಶಿಫಾರಸ್ಸಿಗೆ ಸಿಎಂ ಸಮ್ಮತಿ ಸೂಚಿಸಿದ್ದರು. ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇದನ್ನೂ ಓದಿ : ನಾಡಗೀತೆ ಗೊಂದಲಕ್ಕೆ ತೆರೆ: 2.30 ನಿಮಿಷಕ್ಕೆ ನಾಡಗೀತೆ ಕಡಿತಗೊಳಿಸಲು ಸರ್ಕಾರ ಸಮ್ಮತಿ

ಬೆಂಗಳೂರು: ನಾಡಗೀತೆಯನ್ನು 2.30 ನಿಮಿಷಗಳಲ್ಲಿ ಹಾಡುವ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮೈಸೂರು ಅನಂತಸ್ವಾಮಿರವರ ದಾಟಿಯನ್ನು ಅಳವಡಿಸಿಕೊಂಡು ನಾಡಗೀತೆಯ ಪೂರ್ಣಪಾಠ ಬಳಸಬೇಕು ಹಾಗೂ ಯಾವುದೇ ಆಲಾಪವಿಲ್ಲದ, ಪುನರಾವರ್ತನೆ ಇಲ್ಲದೆ, ಎರಡು ನಿಮಿಷ ಮೂವತ್ತು ಸೆಕೆಂಡುಗಳಲ್ಲಿ ಹಾಡುವಂತೆ ಆದೇಶಿಸಲಾಗಿದೆ.

ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದ ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ವಿಕಲಚೇತನರಿಗೆ ಅನಾನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರ್ಕಾರದ ಮುಂದೆ ಇತ್ತು.

2006 ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರ್ಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರ್ಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್​​ಗಳಲ್ಲಿ ನಾಡಗೀತೆ ಹಾಡಬೇಕೆಂದು ಶಿಫಾರಸು ಮಾಡಿತ್ತು. ಆ ಶಿಫಾರಸ್ಸಿಗೆ ಸಿಎಂ ಸಮ್ಮತಿ ಸೂಚಿಸಿದ್ದರು. ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇದನ್ನೂ ಓದಿ : ನಾಡಗೀತೆ ಗೊಂದಲಕ್ಕೆ ತೆರೆ: 2.30 ನಿಮಿಷಕ್ಕೆ ನಾಡಗೀತೆ ಕಡಿತಗೊಳಿಸಲು ಸರ್ಕಾರ ಸಮ್ಮತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.