ETV Bharat / state

ಇಂದಿನಿಂದ ಸರ್ಕಾರಿ ಶಾಲೆ ಆರಂಭ: ಪಠ್ಯ ಪುಸ್ತಕ ವಿತರಣೆ ವಿಳಂಬ ಸಾಧ್ಯತೆ

author img

By

Published : May 31, 2023, 7:23 AM IST

ಇಂದಿನಿಂದ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆ ವಿಳಂಬವಾಗುವ ಸಾಧ್ಯತೆ ಕಂಡುಬಂದಿದೆ.

Government schools will start  Government schools will start from today  schools will start from today across the state  ಇಂದಿನಿಂದ ಸರ್ಕಾರಿ ಶಾಲೆಗಳು ಆರಂಭ  ಪಠ್ಯ ಪುಸ್ತಕ ವಿತರಣೆ ವಿಳಂಬ  ಶೈಕ್ಷಣಿಕ ವರ್ಷಾರಂಭವಾದ ಮೇ 29  ರಾಜ್ಯದಲ್ಲಿ ಖಾಸಗಿ ಶಾಲೆಗಳು ಆರಂಭ  ಕಿರಿಯ ಪ್ರಾಥಮಿಕ ಶಾಲೆಗಳ ಪ್ರಮಾಣ  ಹಿರಿಯ ಪ್ರಾಥಮಿಕ ಶಾಲೆಗಳ ಪ್ರಮಾಣ  ಇಂದಿನಿಂದ ಶಾಲೆಗಳು ಆರಂಭ
ಇಂದಿನಿಂದ ಸರ್ಕಾರಿ ಶಾಲೆಗಳು ಆರಂಭ

ಬೆಂಗಳೂರು: ಶೈಕ್ಷಣಿಕ ವರ್ಷಾರಂಭವಾದ ಮೇ 29 ರಿಂದಲೇ ರಾಜ್ಯದಲ್ಲಿ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳು ಶುರುವಾಗಲಿವೆ. ಶಾಲಾರಂಭಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 1 ರಿಂದ 10ನೇ ತರಗತಿವರೆಗೂ ಮೊದಲ ದಿನದಿಂದಲೇ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಆದರೆ ಪಠ್ಯ ಪುಸ್ತಕ ವಿತರಣೆ ವಿಳಂಬವಾಗಲಿದೆ.

ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಒಟ್ಟು 62,229 ಶಾಲೆಗಳು ರಾಜ್ಯದಲ್ಲಿವೆ. ಇದರಲ್ಲಿ 25,278 ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು 36,951 ಹಾಗೂ 15, 867 ಮಾಧ್ಯಮಿಕ ಶಾಲೆಗಳಿವೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಆಗಮಿಸಿ ಕೆಲವು ಹಿರಿಯ ತರಗತಿ ಮಕ್ಕಳು, ಪೋಷಕರ ಸಹಕಾರದೊಂದಿಗೆ ಕಳೆದ ಒಂದೆರಡು ದಿನಗಳಿಂದ ಶಾಲೆ ಸ್ವಚ್ಛಗೊಳಿಸುವ ಕಾರ್ಯ ಮಾಡಿದ್ದಾರೆ. ಆಡಳಿತ ಮಂಡಳಿ ಶಾಲೆಗಳಲ್ಲಿ ತರಗತಿ ಚಟುವಟಿಕೆಗಳ ಆರಂಭಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಶಾಲೆಗಳು ಆರಂಭವಾಗುತ್ತಿದ್ದಂತೆ 1 ರಿಂದ 3ನೇ ತರಗತಿಗೆ ಆರಂಭದ 30 ದಿನಗಳು ಹಾಗೂ 4ರಿಂದ 10ನೇ ತರಗತಿ ಮಕ್ಕಳಿಗೆ 15 ದಿನಗಳ ಕಾಲ ಸೇತುಬಂಧ ಕಾರ್ಯಕ್ರಮ ನಡೆಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಎಲ್ಲ ಶಾಲೆಗಳಿಗೆ ತಿಳಿಸಿದೆ.

ಮಕ್ಕಳ ಕಲಿಕಾ ಅಂತರ ತಗ್ಗಿಸಲು ಸೇತುಬಂಧವನ್ನು ಸರ್ಕಾರ ಹಮ್ಮಿಕೊಂಡಿದೆ. ಶಿಕ್ಷಣದ ಸಾಹಿತ್ಯ ಮತ್ತು ವಿನ್ಯಾಸ ಸಿದ್ಧಪಡಿಸಿ ವೆಬ್​ಸೈಟ್​ನಲ್ಲಿ ಅಪ್ಲೋಡ್​ ಮಾಡಲಾಗಿದೆ. ಶಾಲಾ ಹಂತದಲ್ಲಿ ಸೇತುಬಂಧ ಶಿಕ್ಷಣವನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುವಂತೆ ಹಾಗೂ ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗಾಗಿ ಈ ಸಾಹಿತ್ಯ ಸಿದ್ಧಪಡಿಸಿದೆ. ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟ ಹಾಗೂ ಸಾಮರ್ಥ್ಯ ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಂಬಂಧ ಕಲ್ಪಿಸುವುದು ಸೇತು ಬಂಧ ಶಿಕ್ಷಣದ ಉದ್ದೇಶ.

ಮಕ್ಕಳ ಕಲಿಕಾ ಅನುಭವಗಳನ್ನು ಆಧರಿಸಿ ರಸಪ್ರಶ್ನೆ, ಲಿಖಿತ ಅಥವಾ ಮೌಖಿಕ ಪ್ರಶ್ನೋತ್ತರ, ಸರಳ ಯೋಜನೆಗಳು, ಸಂಭಾಷಣೆ, ಸರಳ ಚಟುವಟಿಕೆಗಳು, ಅಭ್ಯಾಸ ಹಾಳೆಗಳನ್ನು ಪೂರ್ಣಗೊಳಿಸಿರುವುದು, ಮನೆಪಾಠ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮೌಲ್ಯಮಾಪನ ಮಾಡುವುದು. ಸೇತುಬಂಧದ ಬಳಿಕವೂ ವಿದ್ಯಾರ್ಥಿಗಳಲ್ಲಿ ಸಾಮರ್ಥ್ಯಗಳಿಕೆ ಆಗಿರದಿದ್ದಲ್ಲಿ ಅಂತಹವರನ್ನು ಗಮನಿಸಿ ಆಯಾ ತರಗತಿ ಪಠ್ಯ ಬೋಧನಾ ಸಂದರ್ಭದಲ್ಲಿ ಪೂರ್ವ ಸಿದ್ಧತಾ ಚಟುವಟಿಕೆಗಳನ್ನು ನೀಡುವಾಗ ಸಾಮರ್ಥ್ಯಗಳಿಗೆ ವಿಶೇಷ ಆದ್ಯತೆ ನೀಡಿ ಕಲಿಕೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಲಾಗಿದೆ.

ಈಗಾಗಲೇ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳ ಪೂರೈಕೆ ಮಾಡಲಾಗಿದೆ. ಈ ಬಾರಿ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಶಾಲೆಗಳ ಆರಂಭದಲ್ಲೇ ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸದ್ಯ ಪಠ್ಯ ಪುಸ್ತಕ ಪರಿಷ್ಕರಣೆ ವಿಷಯ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿತರಣೆಯಲ್ಲಿ ಸ್ವಲ್ಪ ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಆದರೆ ಮೊದಲ ದಿನವೇ ಸಮವಸ್ತ್ರ ವಿತರಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಮಕ್ಕಳ ರಜಾ ದಿನ ಮುಕ್ತಾಯ: ಮೊದಲ ದಿನ ಮಕ್ಕಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಆಡಳಿತ ಮಂಡಳಿ

ಬೆಂಗಳೂರು: ಶೈಕ್ಷಣಿಕ ವರ್ಷಾರಂಭವಾದ ಮೇ 29 ರಿಂದಲೇ ರಾಜ್ಯದಲ್ಲಿ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳು ಶುರುವಾಗಲಿವೆ. ಶಾಲಾರಂಭಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 1 ರಿಂದ 10ನೇ ತರಗತಿವರೆಗೂ ಮೊದಲ ದಿನದಿಂದಲೇ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಆದರೆ ಪಠ್ಯ ಪುಸ್ತಕ ವಿತರಣೆ ವಿಳಂಬವಾಗಲಿದೆ.

ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಒಟ್ಟು 62,229 ಶಾಲೆಗಳು ರಾಜ್ಯದಲ್ಲಿವೆ. ಇದರಲ್ಲಿ 25,278 ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು 36,951 ಹಾಗೂ 15, 867 ಮಾಧ್ಯಮಿಕ ಶಾಲೆಗಳಿವೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಆಗಮಿಸಿ ಕೆಲವು ಹಿರಿಯ ತರಗತಿ ಮಕ್ಕಳು, ಪೋಷಕರ ಸಹಕಾರದೊಂದಿಗೆ ಕಳೆದ ಒಂದೆರಡು ದಿನಗಳಿಂದ ಶಾಲೆ ಸ್ವಚ್ಛಗೊಳಿಸುವ ಕಾರ್ಯ ಮಾಡಿದ್ದಾರೆ. ಆಡಳಿತ ಮಂಡಳಿ ಶಾಲೆಗಳಲ್ಲಿ ತರಗತಿ ಚಟುವಟಿಕೆಗಳ ಆರಂಭಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಶಾಲೆಗಳು ಆರಂಭವಾಗುತ್ತಿದ್ದಂತೆ 1 ರಿಂದ 3ನೇ ತರಗತಿಗೆ ಆರಂಭದ 30 ದಿನಗಳು ಹಾಗೂ 4ರಿಂದ 10ನೇ ತರಗತಿ ಮಕ್ಕಳಿಗೆ 15 ದಿನಗಳ ಕಾಲ ಸೇತುಬಂಧ ಕಾರ್ಯಕ್ರಮ ನಡೆಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಎಲ್ಲ ಶಾಲೆಗಳಿಗೆ ತಿಳಿಸಿದೆ.

ಮಕ್ಕಳ ಕಲಿಕಾ ಅಂತರ ತಗ್ಗಿಸಲು ಸೇತುಬಂಧವನ್ನು ಸರ್ಕಾರ ಹಮ್ಮಿಕೊಂಡಿದೆ. ಶಿಕ್ಷಣದ ಸಾಹಿತ್ಯ ಮತ್ತು ವಿನ್ಯಾಸ ಸಿದ್ಧಪಡಿಸಿ ವೆಬ್​ಸೈಟ್​ನಲ್ಲಿ ಅಪ್ಲೋಡ್​ ಮಾಡಲಾಗಿದೆ. ಶಾಲಾ ಹಂತದಲ್ಲಿ ಸೇತುಬಂಧ ಶಿಕ್ಷಣವನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುವಂತೆ ಹಾಗೂ ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗಾಗಿ ಈ ಸಾಹಿತ್ಯ ಸಿದ್ಧಪಡಿಸಿದೆ. ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟ ಹಾಗೂ ಸಾಮರ್ಥ್ಯ ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಂಬಂಧ ಕಲ್ಪಿಸುವುದು ಸೇತು ಬಂಧ ಶಿಕ್ಷಣದ ಉದ್ದೇಶ.

ಮಕ್ಕಳ ಕಲಿಕಾ ಅನುಭವಗಳನ್ನು ಆಧರಿಸಿ ರಸಪ್ರಶ್ನೆ, ಲಿಖಿತ ಅಥವಾ ಮೌಖಿಕ ಪ್ರಶ್ನೋತ್ತರ, ಸರಳ ಯೋಜನೆಗಳು, ಸಂಭಾಷಣೆ, ಸರಳ ಚಟುವಟಿಕೆಗಳು, ಅಭ್ಯಾಸ ಹಾಳೆಗಳನ್ನು ಪೂರ್ಣಗೊಳಿಸಿರುವುದು, ಮನೆಪಾಠ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮೌಲ್ಯಮಾಪನ ಮಾಡುವುದು. ಸೇತುಬಂಧದ ಬಳಿಕವೂ ವಿದ್ಯಾರ್ಥಿಗಳಲ್ಲಿ ಸಾಮರ್ಥ್ಯಗಳಿಕೆ ಆಗಿರದಿದ್ದಲ್ಲಿ ಅಂತಹವರನ್ನು ಗಮನಿಸಿ ಆಯಾ ತರಗತಿ ಪಠ್ಯ ಬೋಧನಾ ಸಂದರ್ಭದಲ್ಲಿ ಪೂರ್ವ ಸಿದ್ಧತಾ ಚಟುವಟಿಕೆಗಳನ್ನು ನೀಡುವಾಗ ಸಾಮರ್ಥ್ಯಗಳಿಗೆ ವಿಶೇಷ ಆದ್ಯತೆ ನೀಡಿ ಕಲಿಕೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಲಾಗಿದೆ.

ಈಗಾಗಲೇ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳ ಪೂರೈಕೆ ಮಾಡಲಾಗಿದೆ. ಈ ಬಾರಿ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಶಾಲೆಗಳ ಆರಂಭದಲ್ಲೇ ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸದ್ಯ ಪಠ್ಯ ಪುಸ್ತಕ ಪರಿಷ್ಕರಣೆ ವಿಷಯ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿತರಣೆಯಲ್ಲಿ ಸ್ವಲ್ಪ ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಆದರೆ ಮೊದಲ ದಿನವೇ ಸಮವಸ್ತ್ರ ವಿತರಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಮಕ್ಕಳ ರಜಾ ದಿನ ಮುಕ್ತಾಯ: ಮೊದಲ ದಿನ ಮಕ್ಕಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಆಡಳಿತ ಮಂಡಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.