ETV Bharat / state

ಬುಧವಾರದಿಂದ ಪಿಯುಸಿ, ಡಿಗ್ರಿ ಕಾಲೇಜು ಆರಂಭಿಸಲು ಸರ್ಕಾರದ ನಿರ್ಧಾರ

author img

By

Published : Feb 14, 2022, 9:51 PM IST

ಶಕ್ತಿ ಭವನದಲ್ಲಿ ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಹಿಜಾಬ್ ಸಂಘರ್ಷ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಲಾಯಿತು.

ಬುಧವಾರದಿಂದ ಪಿಯುಸಿ, ಡಿಗ್ರಿ ಕಾಲೇಜು ಆರಂಭಿಸಲು ಸರ್ಕಾರ ನಿರ್ಧಾರ
ಬುಧವಾರದಿಂದ ಪಿಯುಸಿ, ಡಿಗ್ರಿ ಕಾಲೇಜು ಆರಂಭಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಬುಧವಾರದಿಂದ ಪಿಯುಸಿ ಮತ್ತು ಡಿಗ್ರಿ ಕಾಲೇಜು ಆರಂಭಿಸಲು ಸಿಎಂ‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಿಜಾಬ್ ಗಲಾಟೆ ಸಂಬಂಧ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಫೆ.16ರಂದು ಪಿಯುಸಿ, ಡಿಗ್ರಿ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಶಕ್ತಿ ಭವನದಲ್ಲಿ ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಹಿಜಾಬ್ ಸಂಘರ್ಷ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ‌.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಹಿರಿಯ ಪೋಷಕ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ

ಸಭೆ ಬಳಿಕ ನಡೆದ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಬುಧವಾರದಿಂದ ಪಿಯೂ ಮತ್ತು ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. ಕೋರ್ಟ್ ನ ಸೂಚನೆ ಇದೆ, ಅದನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು ಎಂದು ತಿಳಿಸಿದರು.ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪೋಷಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸ್ತಿವಿ. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳಲಿದೆ ಎಂದರು.

ಬೆಂಗಳೂರು: ಬುಧವಾರದಿಂದ ಪಿಯುಸಿ ಮತ್ತು ಡಿಗ್ರಿ ಕಾಲೇಜು ಆರಂಭಿಸಲು ಸಿಎಂ‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಿಜಾಬ್ ಗಲಾಟೆ ಸಂಬಂಧ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಫೆ.16ರಂದು ಪಿಯುಸಿ, ಡಿಗ್ರಿ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಶಕ್ತಿ ಭವನದಲ್ಲಿ ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಹಿಜಾಬ್ ಸಂಘರ್ಷ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ‌.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಹಿರಿಯ ಪೋಷಕ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ

ಸಭೆ ಬಳಿಕ ನಡೆದ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಬುಧವಾರದಿಂದ ಪಿಯೂ ಮತ್ತು ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. ಕೋರ್ಟ್ ನ ಸೂಚನೆ ಇದೆ, ಅದನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು ಎಂದು ತಿಳಿಸಿದರು.ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪೋಷಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸ್ತಿವಿ. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳಲಿದೆ ಎಂದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.