ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶೀಘ್ರ ಗುಣಮುಖರಾಗಲಿ ಎಂದು ರಾಜ್ಯಪಾಲ ವಜುಬಾಯಿ ವಾಲಾ ಹಾರೈಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಡಿಸಿಎಂ ಗೋವಿಂದ ಕಾರಜೋಳ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದಿದ್ದು, ಅವರು ಶೀಘ್ರ ಗುಣಮುಖರಾಗಲಿ ಬರಲಿ ಎಂದಿದ್ದಾರೆ.
![governor latter](https://etvbharatimages.akamaized.net/etvbharat/prod-images/kn-bng-11-governor-statement-script-7208083_25092020232358_2509f_1601056438_401.jpg)
ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ ನಲ್ಲಿರುವಂತೆ ಎಂದು ಕೋರುತ್ತೇನೆ ಎಂದು ಡಿಸಿಎಂ ಟ್ವಿಟ್ಟರ್ನಲ್ಲಿ ಮನವಿ ಮಾಡಿದ್ದರು.