ETV Bharat / state

ಕೋವಿಡ್ ಅಕ್ರಮ ತನಿಖೆಗೆ ಆಯೋಗ ರಚನೆ ಹಿಂದೆ ದುರುದ್ದೇಶವಿದೆ: ಮಾಜಿ ಸಚಿವ ಸುಧಾಕರ್ ಕಿಡಿ

author img

By ETV Bharat Karnataka Team

Published : Aug 29, 2023, 6:56 AM IST

ಕೊರೊನಾ ನಿಯಂತ್ರಣ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ಬಹಳ ಸಫಲ ಆಗಿತ್ತು. ಅದರ ವಿರುದ್ಧ ಈಗಿನ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಅವರ ಯಾವುದೇ ತನಿಖೆಯನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಸಚಿವ ಸುಧಾಕರ್ ಹೇಳಿದರು.

Former Minister Sudhakar
ಮಾಜಿ ಸಚಿವ ಡಾ.ಕೆ ಸುಧಾಕರ್

ಕೋವಿಡ್ ಅಕ್ರಮ ತನಿಖೆಗೆ ಆಯೋಗ ರಚನೆ: ಮಾಜಿ ಸಚಿವ ಸುಧಾಕರ್ ಪ್ರತಿಕ್ರಿಯೆ..

ಬೆಂಗಳೂರು: ಕೋವಿಡ್ ವೇಳೆ ಔಷಧ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗ ರಚನೆ ರಾಜಕೀಯ ಪ್ರೇರಿತವಾಗಿದೆ. ಈ ತನಿಖೆಗೆ ಆದೇಶ ನೀಡಿರುವುದರ ಹಿಂದೆ ದುರುದ್ದೇಶ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ಮಾಜಿ ಸಚಿವ ಡಾ. ಕೆ.ಸುಧಾಕರ್ ಆರೋಪಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೋವಿಡ್ ನಿರ್ವಹಣೆ ವೇಳೆ ನಡೆದಿರುವ ಔಷಧ, ಪರಿಕರ ಇತ್ಯಾದಿ ಖರೀದಿ, ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವಿನ ಕುರಿತು ತನಿಖೆಗೆ ನಿವೃತ್ತ ನ್ಯಾಯಾಧೀಶರ ಆಯೋಗ ರಚನೆ ಮಾಡಿದ್ದಾರೆ. ಆದರೆ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ಬಹಳ ಸಫಲ ಆಗಿತ್ತು. ಅದರ ವಿರುದ್ಧ ಇಂದು ಈಗಿನ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಅವರ ಯಾವುದೇ ತನಿಖೆಯನ್ನು ನಾನು ಸ್ವಾಗತ ಮಾಡುತ್ತೇನೆ' ಎಂದರು.

ಆರೋಪ ತಳ್ಳಿ ಹಾಕಿದ ಮಾಜಿ ಸಚಿವ: ಕಳೆದ ಎರಡು ಮೂರು ತಿಂಗಳಿಂದ ಇದನ್ನೇ ಹೇಳಿದ್ದೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಅಲೆಗಳನ್ನ ಸಮರ್ಥವಾಗಿ ನಾವು ನಿಭಾಯಿಸಿದ್ದೇವೆ. ಹಾಗೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ 3ನೇ ಅಲೆಯನ್ನ ಸಮರ್ಥವಾಗಿ ಎದುರಿಸಿದ್ದೇವೆ. ನಮ್ಮ ಸರ್ಕಾರ ಇದ್ದಾಗ ಕೊರೊನಾ ನಿರ್ವಹಣೆಗೆ ಕೋವಿಡ್ ಕಾರ್ಯಪಡೆಯನ್ನು ರಚಿಸಿದೆವು. ಇದರಲ್ಲಿ ಐವರು ಮಂತ್ರಿಗಳಿದ್ದೆವು. ಅದರ ಮೇಲೆ ಮುಖ್ಯಮಂತ್ರಿಗಳು ಇದನ್ನ ನೋಡಿಕೊಳ್ಳುತ್ತಿದ್ದರು ಎಂದು ಕೋವಿಡ್ ಅವ್ಯವಹಾರ ಆರೋಪವನ್ನು ತಳ್ಳಿ ಹಾಕಿದರು.

ರಾಜಕೀಯ ಪ್ರೇರಿತ ತನಿಖೆ: ಕೊರೊನಾ ಸಮಸ್ಯೆ ಹೊಸ ಸವಾಲಾಗಿತ್ತು. ಅದಕ್ಕೆ ಯಾವ ರೀತಿ ಚಿಕಿತ್ಸೆ ನೀಡಬೇಕು?, ಯಾವ ರೀತಿ ನಿಯಂತ್ರಿಸಬೇಕು? ಎನ್ನುವ ಮಾಹಿತಿ ಯಾರ ಬಳಿಯೂ ಇರಲಿಲ್ಲ. ಇಡೀ ವಿಶ್ವಕ್ಕೆ ಅದು ಹೊಸದಾಗಿತ್ತು. ವಿಶ್ವದಲ್ಲೇ ಮೊದಲ ಬಾರಿ ಇದನ್ನು ನೋಡಿದ್ದೆವು. ನಮ್ಮ ಸರ್ಕಾರ ಎರಡು ವರ್ಷ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ಕೋವಿಡ್ ನಿರ್ವಹಣೆ ಮಾಡಿದೆ. ಹಾಗಾಗಿ ಇದು ರಾಜಕೀಯ ಪ್ರೇರಿತ ತನಿಖೆ. ಅವರು ಯಾವುದೇ ತನಿಖೆ ಮಾಡಿದರೂ ಅದಕ್ಕೆ ನಾವು ಸಹಕರಿಸುತ್ತೇವೆ, ಸ್ವಾಗತ ಮಾಡುತ್ತೇವೆ. ಆದರೆ ಅವರ ತನಿಖೆಯ ಹಿಂದೆ ದುರುದ್ದೇಶ ಬಹಳ ಸ್ಪಷ್ಟವಾಗಿದೆ ಎಂದು ದೂರಿದರು.

ಕೋವಿಡ್ ವೇಳೆ ಪ್ರಧಾನಿ ಕಾರ್ಯವೈಖರಿಯನ್ನು ರಾಹುಲ್ ಗಾಂಧಿ ಟೀಕಿಸಿದ್ದರು. ನಿಯಂತ್ರಣ ವಿಧಾನವನ್ನು ಟೀಕಿಸಿದ್ದರು. ಕೇಂದ್ರ ಸರ್ಕಾರ ರಾಜ್ಯಗಳು ಯಾವ ರೀತಿ ನಿರ್ವಹಣೆ ಮಾಡಬೇಕು ಎಂದು ಆಗಿಂದಾಗ ಸಲಹೆ, ಸೂಚನೆ ನೀಡುತ್ತಾ ಬಂದಿತ್ತು. ಅದನ್ನು ನಾವು ಪಾಲಿಸಿಕೊಂಡು ಸಮರ್ಥವಾಗಿ ಕೊರೊನಾ ಎದುರಿಸಿದ್ದೇವೆ ಎಂದು ಡಾ.ಕೆ ಸುಧಾಕರ್​ ಸಮರ್ಥಿಸಿಕೊಂಡರು.

ಕೋವಿಡ್ ಅಕ್ರಮ ಆರೋಪ-ವಿಚಾರಣಾ ಆಯೋಗ ರಚಿಸಿದ ಸರ್ಕಾರ: ಕೋವಿಡ್ ಅಕ್ರಮಗಳ ತ‌ನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಮೂರು ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಸೂಚನೆ ನೀಡಿ ಒಳಾಡಳಿತ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೊದಲು ಕೋವಿಡ್ ಕಾಲದ ಅಕ್ರಮಗಳ ಬಗ್ಗೆ‌ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು.‌ ಅಂದು ಪ್ರತಿಪಕ್ಷವಾಗಿ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡಿತ್ತು. ಇದೀಗ ಲೆಕ್ಕಪತ್ರಗಳ‌ ಸಮಿತಿ ಮಾಡಿದ್ದ ಆರೋಪಗಳ ತನಿಖೆ ನಡೆಸುವಂತೆ ಆಯೋಗಕ್ಕೆ ಸೂಚನೆ ನೀಡಲಾಗಿದೆ. ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆಯೂ ವಿಚಾರಣಾ ಆಯೋಗ ತನಿಖೆ ನಡೆಸಲಿದೆ. ಜತೆಗೆ ಔಷಧ ಖರೀದಿ ಅಕ್ರಮ ಆರೋಪ, ವೈದ್ಯಕೀಯ ಉಪಕರಣಗಳ ಖರೀದಿ ಅಕ್ರಮ ಆರೋಪ, ಬೆಡ್ ಹಂಚಿಕೆ ಅಕ್ರಮ‌ ಆರೋಪಗಳ ಬಗ್ಗೆ ತನಿಖೆ ಮಾಡಲಿದೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ: ಕೋವಿಡ್ ಅಕ್ರಮ, ಶೇ 40 ಕಮಿಷನ್ ಆರೋಪದ ಬಗ್ಗೆ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ

ಕೋವಿಡ್ ಅಕ್ರಮ ತನಿಖೆಗೆ ಆಯೋಗ ರಚನೆ: ಮಾಜಿ ಸಚಿವ ಸುಧಾಕರ್ ಪ್ರತಿಕ್ರಿಯೆ..

ಬೆಂಗಳೂರು: ಕೋವಿಡ್ ವೇಳೆ ಔಷಧ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗ ರಚನೆ ರಾಜಕೀಯ ಪ್ರೇರಿತವಾಗಿದೆ. ಈ ತನಿಖೆಗೆ ಆದೇಶ ನೀಡಿರುವುದರ ಹಿಂದೆ ದುರುದ್ದೇಶ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ಮಾಜಿ ಸಚಿವ ಡಾ. ಕೆ.ಸುಧಾಕರ್ ಆರೋಪಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೋವಿಡ್ ನಿರ್ವಹಣೆ ವೇಳೆ ನಡೆದಿರುವ ಔಷಧ, ಪರಿಕರ ಇತ್ಯಾದಿ ಖರೀದಿ, ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವಿನ ಕುರಿತು ತನಿಖೆಗೆ ನಿವೃತ್ತ ನ್ಯಾಯಾಧೀಶರ ಆಯೋಗ ರಚನೆ ಮಾಡಿದ್ದಾರೆ. ಆದರೆ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ಬಹಳ ಸಫಲ ಆಗಿತ್ತು. ಅದರ ವಿರುದ್ಧ ಇಂದು ಈಗಿನ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಅವರ ಯಾವುದೇ ತನಿಖೆಯನ್ನು ನಾನು ಸ್ವಾಗತ ಮಾಡುತ್ತೇನೆ' ಎಂದರು.

ಆರೋಪ ತಳ್ಳಿ ಹಾಕಿದ ಮಾಜಿ ಸಚಿವ: ಕಳೆದ ಎರಡು ಮೂರು ತಿಂಗಳಿಂದ ಇದನ್ನೇ ಹೇಳಿದ್ದೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಅಲೆಗಳನ್ನ ಸಮರ್ಥವಾಗಿ ನಾವು ನಿಭಾಯಿಸಿದ್ದೇವೆ. ಹಾಗೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ 3ನೇ ಅಲೆಯನ್ನ ಸಮರ್ಥವಾಗಿ ಎದುರಿಸಿದ್ದೇವೆ. ನಮ್ಮ ಸರ್ಕಾರ ಇದ್ದಾಗ ಕೊರೊನಾ ನಿರ್ವಹಣೆಗೆ ಕೋವಿಡ್ ಕಾರ್ಯಪಡೆಯನ್ನು ರಚಿಸಿದೆವು. ಇದರಲ್ಲಿ ಐವರು ಮಂತ್ರಿಗಳಿದ್ದೆವು. ಅದರ ಮೇಲೆ ಮುಖ್ಯಮಂತ್ರಿಗಳು ಇದನ್ನ ನೋಡಿಕೊಳ್ಳುತ್ತಿದ್ದರು ಎಂದು ಕೋವಿಡ್ ಅವ್ಯವಹಾರ ಆರೋಪವನ್ನು ತಳ್ಳಿ ಹಾಕಿದರು.

ರಾಜಕೀಯ ಪ್ರೇರಿತ ತನಿಖೆ: ಕೊರೊನಾ ಸಮಸ್ಯೆ ಹೊಸ ಸವಾಲಾಗಿತ್ತು. ಅದಕ್ಕೆ ಯಾವ ರೀತಿ ಚಿಕಿತ್ಸೆ ನೀಡಬೇಕು?, ಯಾವ ರೀತಿ ನಿಯಂತ್ರಿಸಬೇಕು? ಎನ್ನುವ ಮಾಹಿತಿ ಯಾರ ಬಳಿಯೂ ಇರಲಿಲ್ಲ. ಇಡೀ ವಿಶ್ವಕ್ಕೆ ಅದು ಹೊಸದಾಗಿತ್ತು. ವಿಶ್ವದಲ್ಲೇ ಮೊದಲ ಬಾರಿ ಇದನ್ನು ನೋಡಿದ್ದೆವು. ನಮ್ಮ ಸರ್ಕಾರ ಎರಡು ವರ್ಷ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ಕೋವಿಡ್ ನಿರ್ವಹಣೆ ಮಾಡಿದೆ. ಹಾಗಾಗಿ ಇದು ರಾಜಕೀಯ ಪ್ರೇರಿತ ತನಿಖೆ. ಅವರು ಯಾವುದೇ ತನಿಖೆ ಮಾಡಿದರೂ ಅದಕ್ಕೆ ನಾವು ಸಹಕರಿಸುತ್ತೇವೆ, ಸ್ವಾಗತ ಮಾಡುತ್ತೇವೆ. ಆದರೆ ಅವರ ತನಿಖೆಯ ಹಿಂದೆ ದುರುದ್ದೇಶ ಬಹಳ ಸ್ಪಷ್ಟವಾಗಿದೆ ಎಂದು ದೂರಿದರು.

ಕೋವಿಡ್ ವೇಳೆ ಪ್ರಧಾನಿ ಕಾರ್ಯವೈಖರಿಯನ್ನು ರಾಹುಲ್ ಗಾಂಧಿ ಟೀಕಿಸಿದ್ದರು. ನಿಯಂತ್ರಣ ವಿಧಾನವನ್ನು ಟೀಕಿಸಿದ್ದರು. ಕೇಂದ್ರ ಸರ್ಕಾರ ರಾಜ್ಯಗಳು ಯಾವ ರೀತಿ ನಿರ್ವಹಣೆ ಮಾಡಬೇಕು ಎಂದು ಆಗಿಂದಾಗ ಸಲಹೆ, ಸೂಚನೆ ನೀಡುತ್ತಾ ಬಂದಿತ್ತು. ಅದನ್ನು ನಾವು ಪಾಲಿಸಿಕೊಂಡು ಸಮರ್ಥವಾಗಿ ಕೊರೊನಾ ಎದುರಿಸಿದ್ದೇವೆ ಎಂದು ಡಾ.ಕೆ ಸುಧಾಕರ್​ ಸಮರ್ಥಿಸಿಕೊಂಡರು.

ಕೋವಿಡ್ ಅಕ್ರಮ ಆರೋಪ-ವಿಚಾರಣಾ ಆಯೋಗ ರಚಿಸಿದ ಸರ್ಕಾರ: ಕೋವಿಡ್ ಅಕ್ರಮಗಳ ತ‌ನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಮೂರು ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಸೂಚನೆ ನೀಡಿ ಒಳಾಡಳಿತ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೊದಲು ಕೋವಿಡ್ ಕಾಲದ ಅಕ್ರಮಗಳ ಬಗ್ಗೆ‌ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು.‌ ಅಂದು ಪ್ರತಿಪಕ್ಷವಾಗಿ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡಿತ್ತು. ಇದೀಗ ಲೆಕ್ಕಪತ್ರಗಳ‌ ಸಮಿತಿ ಮಾಡಿದ್ದ ಆರೋಪಗಳ ತನಿಖೆ ನಡೆಸುವಂತೆ ಆಯೋಗಕ್ಕೆ ಸೂಚನೆ ನೀಡಲಾಗಿದೆ. ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆಯೂ ವಿಚಾರಣಾ ಆಯೋಗ ತನಿಖೆ ನಡೆಸಲಿದೆ. ಜತೆಗೆ ಔಷಧ ಖರೀದಿ ಅಕ್ರಮ ಆರೋಪ, ವೈದ್ಯಕೀಯ ಉಪಕರಣಗಳ ಖರೀದಿ ಅಕ್ರಮ ಆರೋಪ, ಬೆಡ್ ಹಂಚಿಕೆ ಅಕ್ರಮ‌ ಆರೋಪಗಳ ಬಗ್ಗೆ ತನಿಖೆ ಮಾಡಲಿದೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ: ಕೋವಿಡ್ ಅಕ್ರಮ, ಶೇ 40 ಕಮಿಷನ್ ಆರೋಪದ ಬಗ್ಗೆ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.