ETV Bharat / state

ಸರ್ಕಾರ ನೆರೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದೆ: ಸಚಿವ ಅಶೋಕ್

author img

By

Published : Dec 10, 2020, 7:05 PM IST

ನೆರೆ ಪೀಡಿತ ಪ್ರದೇಶಗಳ ಜನರ ನೆರವಿಗೆ ಸರ್ಕಾರ ಬಂದಿದೆ. ಪ್ರವಾಹವನ್ನು ನಿಯಂತ್ರಣ ಮಾಡಲು ಸಕಲ ‌ಕ್ರಮ ಕೈಗೊಂಡಿದ್ದೇವೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

Minister R. Ashok
ಸಚಿವ ಆರ್.ಅಶೋಕ್

ಬೆಂಗಳೂರು: ಸರ್ಕಾರ ನೆರೆ ಸಂತ್ರಸ್ತರ ನೆರವಿಗೆ ಬಂದಿದ್ದು, ನೆರೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸಭೆಯಲ್ಲಿ ಅತಿವೃಷ್ಟಿ ವಿಚಾರವಾಗಿ ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅವರು, ನೆರೆ ಪೀಡಿತ ಪ್ರದೇಶಗಳ ಜನರ ನೆರವಿಗೆ ಸರ್ಕಾರ ಬಂದಿದೆ. ಪ್ರವಾಹವನ್ನು ನಿಯಂತ್ರಣ ಮಾಡಲು ಸಕಲ ‌ಕ್ರಮ ಕೈಗೊಂಡಿದ್ದೇವೆ. ಆಗಸ್ಟ್- ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತ ಶೇ 500 ಹೆಚ್ಚು ಮಳೆಯಾಗಿದೆ. ಆ ಸಂದರ್ಭ ರಾಜ್ಯದ 133 ತಾಲೂಕುಗಳು ನೆರೆ ಪೀಡಿತವಾಗಿದ್ದವು. ಸೆ.15 ರಿಂದ 30ರವರೆಗೆ ಎರಡನೇ ಅವಧಿಗೆ ಬಿದ್ದ ಮಳೆಗೆ 50 ತಾಲೂಕು ಪ್ರವಾಹ‌ ಪೀಡಿತವಾಗಿತ್ತು. ಅಕ್ಟೋಬರ್ ಎರಡನೇ ವಾರದಿಂದ‌ ಮೂರನೇ ವಾರದವರೆಗೆ ಮೂರನೇ ಬಾರಿ ಮಳೆಯಾಗಿದೆ.‌ ಮೂರು ಬಾರಿ ಸುರಿದ‌ ಮಳೆಗೆ ಅಪಾರ ಹಾನಿ ಸಂಭವಿಸಿದೆ‌ ಎಂದು ಅವರು ವಿವರಿಸಿದರು.

ಮಹಾಮಳೆಗೆ 48,367 ಮನೆಗಳು ಹಾನಿಯಾಗಿವೆ. 20.87 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. 37,805 ಕಿ.ಮೀ ರಸ್ತೆಗಳು ಹಾನಿಯಾಗಿದ್ದರೆ, 4,084 ಸೇತುವೆಗಳು ಹಾಳಾಗಿವೆ. 7,606 ಕಟ್ಟಡಗಳು, 291 ಕುಡಿಯುವ ನೀರಿನ ಟ್ಯಾಂಕ್‌ಗಳಿಗೆ ಹಾನಿಯಾಗಿದೆ. ಒಟ್ಟು 52,242 ಜನರನ್ನು ಕಾಳಜಿ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಊಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ.

ಓದಿ: ಡೆಮಾಕ್ರಸಿಗೆ ಆದ ಅಪಮಾನದ‌ ಸೇಡನ್ನು ಈಗ ತೀರಿಸಿಕೊಂಡಿದ್ದೇವೆ: ಸಚಿವ ಆರ್. ಅಶೋಕ್

27,773 ಕುಟುಂಬಗಳಿಗೆ 10 ಸಾವಿರ ರೂ. ನೀಡಲಾಗಿದೆ. ಬೆಳೆ ಹಾನಿಗೆ 5 ಹಂತದಲ್ಲಿ ಆರ್‌ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. 7,12,936 ಬೆಳೆ ಹಾನಿಯಾದ ರೈತರಿಗೆ 531.13 ಕೋಟಿ ರೂ. ಪರಿಹಾರ ನೀಡಲಾಗಿದೆ. ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಮೂರು ತಿಂಗಳೊಳಗಾಗಿ ಪರಿಹಾರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. 296.60 ಕೋಟಿ ರೂ. ಮನೆ‌ ಹಾನಿ ಪರಿಹಾರ, ಮೂಲ ಸೌಕರ್ಯಕ್ಕೆ 470 ಕೋಟಿ ರೂ, ಅಗ್ನಿ ಶಾಮಕ ಇಲಾಖೆಗೆ 20 ಕೋಟಿ ರೂ. ಸೇರಿ ಒಟ್ಟು 1320.60 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದರು.

ಎನ್‌ಡಿಆರ್‌ಎಫ್ ನಿಧಿಯಿಂದ ಕೇಂದ್ರ 556 ಕೋಟಿ ನೀಡಿದೆ. ಶೀಘ್ರವೇ ಕೇಂದ್ರದ ತಂಡ ಬಂದು ಪರಿಶೀಲನೆ ಮಾಡಲಿದೆ. ಜನರು ಸಂಕಷ್ಟದಲ್ಲಿರುವಾಗ ನಾವು ಸ್ಪಂದಿಸಿದ್ದೇವೆ. ಎಲ್ಲ ಜಿಲ್ಲಾ ಸಚಿವರು ಎರಡು ಮೂರು ಬಾರಿ ಭೇಟಿ ಮಾಡಿದ್ದಾರೆ. ಜನರ ಪರವಾಗಿ ನಿಲ್ಲುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ.‌ ನಾನೂ 26 ಬಾರಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು: ಸರ್ಕಾರ ನೆರೆ ಸಂತ್ರಸ್ತರ ನೆರವಿಗೆ ಬಂದಿದ್ದು, ನೆರೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸಭೆಯಲ್ಲಿ ಅತಿವೃಷ್ಟಿ ವಿಚಾರವಾಗಿ ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅವರು, ನೆರೆ ಪೀಡಿತ ಪ್ರದೇಶಗಳ ಜನರ ನೆರವಿಗೆ ಸರ್ಕಾರ ಬಂದಿದೆ. ಪ್ರವಾಹವನ್ನು ನಿಯಂತ್ರಣ ಮಾಡಲು ಸಕಲ ‌ಕ್ರಮ ಕೈಗೊಂಡಿದ್ದೇವೆ. ಆಗಸ್ಟ್- ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತ ಶೇ 500 ಹೆಚ್ಚು ಮಳೆಯಾಗಿದೆ. ಆ ಸಂದರ್ಭ ರಾಜ್ಯದ 133 ತಾಲೂಕುಗಳು ನೆರೆ ಪೀಡಿತವಾಗಿದ್ದವು. ಸೆ.15 ರಿಂದ 30ರವರೆಗೆ ಎರಡನೇ ಅವಧಿಗೆ ಬಿದ್ದ ಮಳೆಗೆ 50 ತಾಲೂಕು ಪ್ರವಾಹ‌ ಪೀಡಿತವಾಗಿತ್ತು. ಅಕ್ಟೋಬರ್ ಎರಡನೇ ವಾರದಿಂದ‌ ಮೂರನೇ ವಾರದವರೆಗೆ ಮೂರನೇ ಬಾರಿ ಮಳೆಯಾಗಿದೆ.‌ ಮೂರು ಬಾರಿ ಸುರಿದ‌ ಮಳೆಗೆ ಅಪಾರ ಹಾನಿ ಸಂಭವಿಸಿದೆ‌ ಎಂದು ಅವರು ವಿವರಿಸಿದರು.

ಮಹಾಮಳೆಗೆ 48,367 ಮನೆಗಳು ಹಾನಿಯಾಗಿವೆ. 20.87 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. 37,805 ಕಿ.ಮೀ ರಸ್ತೆಗಳು ಹಾನಿಯಾಗಿದ್ದರೆ, 4,084 ಸೇತುವೆಗಳು ಹಾಳಾಗಿವೆ. 7,606 ಕಟ್ಟಡಗಳು, 291 ಕುಡಿಯುವ ನೀರಿನ ಟ್ಯಾಂಕ್‌ಗಳಿಗೆ ಹಾನಿಯಾಗಿದೆ. ಒಟ್ಟು 52,242 ಜನರನ್ನು ಕಾಳಜಿ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಊಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ.

ಓದಿ: ಡೆಮಾಕ್ರಸಿಗೆ ಆದ ಅಪಮಾನದ‌ ಸೇಡನ್ನು ಈಗ ತೀರಿಸಿಕೊಂಡಿದ್ದೇವೆ: ಸಚಿವ ಆರ್. ಅಶೋಕ್

27,773 ಕುಟುಂಬಗಳಿಗೆ 10 ಸಾವಿರ ರೂ. ನೀಡಲಾಗಿದೆ. ಬೆಳೆ ಹಾನಿಗೆ 5 ಹಂತದಲ್ಲಿ ಆರ್‌ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. 7,12,936 ಬೆಳೆ ಹಾನಿಯಾದ ರೈತರಿಗೆ 531.13 ಕೋಟಿ ರೂ. ಪರಿಹಾರ ನೀಡಲಾಗಿದೆ. ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಮೂರು ತಿಂಗಳೊಳಗಾಗಿ ಪರಿಹಾರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. 296.60 ಕೋಟಿ ರೂ. ಮನೆ‌ ಹಾನಿ ಪರಿಹಾರ, ಮೂಲ ಸೌಕರ್ಯಕ್ಕೆ 470 ಕೋಟಿ ರೂ, ಅಗ್ನಿ ಶಾಮಕ ಇಲಾಖೆಗೆ 20 ಕೋಟಿ ರೂ. ಸೇರಿ ಒಟ್ಟು 1320.60 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದರು.

ಎನ್‌ಡಿಆರ್‌ಎಫ್ ನಿಧಿಯಿಂದ ಕೇಂದ್ರ 556 ಕೋಟಿ ನೀಡಿದೆ. ಶೀಘ್ರವೇ ಕೇಂದ್ರದ ತಂಡ ಬಂದು ಪರಿಶೀಲನೆ ಮಾಡಲಿದೆ. ಜನರು ಸಂಕಷ್ಟದಲ್ಲಿರುವಾಗ ನಾವು ಸ್ಪಂದಿಸಿದ್ದೇವೆ. ಎಲ್ಲ ಜಿಲ್ಲಾ ಸಚಿವರು ಎರಡು ಮೂರು ಬಾರಿ ಭೇಟಿ ಮಾಡಿದ್ದಾರೆ. ಜನರ ಪರವಾಗಿ ನಿಲ್ಲುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ.‌ ನಾನೂ 26 ಬಾರಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.