ETV Bharat / state

ಗಲಭೆಯ ಕುರಿತು ಮೂರು ಹಂತದ ತನಿಖೆಯಾಗಲಿ: ಅಬ್ದುಲ್ ಅಜೀಮ್

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣವನ್ನು ಮೂರು ಹಂತಗಳಲ್ಲಿ ತನಿಖೆ ನಡೆಸಬೇಕೆಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

author img

By

Published : Aug 13, 2020, 4:07 PM IST

Abdul Azeem
Abdul Azeem

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣವನ್ನು ಮೂರು ಹಂತದ ತನಿಖೆಗೆ ಒಳಪಡಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮನವಿ ಮಾಡಿದ್ದಾರೆ.

ಆರ್‌.ಟಿ.ನಗರದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ ಅಬ್ದುಲ್ ಅಜೀಮ್, ಪ್ರಕರಣ ಸಂಬಂಧ ಚರ್ಚೆ ನಡೆಸಿದರು. ಮೊದಲನೇ ಹಂತದಲ್ಲಿ ಮ್ಯಾಜಿಸ್ಟೀರಿಯಲ್‌ ತನಿಖೆಯಿಂದ ಆಸ್ತಿ ಪಾಸ್ತಿ ನಷ್ಟ ಹಾಗೂ ಘಟನೆ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ಲೂಟಿ, ಬೆಂಕಿ ಹಚ್ಚಿರುವವರು ಎನ್ನುವ ಬಗ್ಗೆ ಎರಡನೇ ಹಂತದ ತನಿಖೆ ತಿಳಿಸುತ್ತೆ. ಇಡೀ ಘಟನೆಯ ಹಿಂದೆ ಯಾರಿದ್ದಾರೆ ಅನ್ನೋದು ಐಜಿಪಿ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಅವರು ವಿವರಿಸಿದರು.

ಕಾನೂನು ಉಲ್ಲಂಘಿಸುವಂತಹ ಕೆಲಸಕ್ಕೆ ಕುಮ್ಮಕ್ಕು ನೀಡುವ ಸಂಘಟನೆಯ ಕೈವಾಡ ಇದ್ದರೆ ಅದು ಯಾವ ಸಂಘಟನೆ, ಯಾರು ಪ್ರಚೋದನೆ ಕೊಡುತ್ತಿದ್ದಾರೆ, ಹಣಕಾಸಿನ ನೆರವು ಒದಗಿಸುವವರು ಯಾರೆಂಬುದರ ಬಗ್ಗೆ ಮೂರನೇ ಹಂತದ ತನಿಖೆಯಾಗಬೇಕು ಎಂದು ಸಚಿವರಿಗೆ ಸಲಹೆ ನೀಡಿದ್ದಾಗಿ ತಿಳಿಸಿದರು.

ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸುವ ಕೆಲಸ ಆಗಬಾರದು. ಈಗಾಗಲೇ ಸಾಕ್ಷ್ಯಾಧಾರಗಳು ಸಿಕ್ಕಿವೆ, ಯಾರು ಅಪರಾಧಿಗಳು ಅನ್ನೋದು ಗೊತ್ತಾಗಿದೆ. ಹೀಗಾಗಿ ಆಸ್ತಿ ಪಾಸ್ತಿ ನಷ್ಟವನ್ನ ಅವರಿಂದಲೇ ಭರಿಸಬೇಕು ಎಂದು ಅಬ್ದುಲ್ ಅಜೀಜ್ ಒತ್ತಾಯಿಸಿದರು.

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣವನ್ನು ಮೂರು ಹಂತದ ತನಿಖೆಗೆ ಒಳಪಡಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮನವಿ ಮಾಡಿದ್ದಾರೆ.

ಆರ್‌.ಟಿ.ನಗರದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ ಅಬ್ದುಲ್ ಅಜೀಮ್, ಪ್ರಕರಣ ಸಂಬಂಧ ಚರ್ಚೆ ನಡೆಸಿದರು. ಮೊದಲನೇ ಹಂತದಲ್ಲಿ ಮ್ಯಾಜಿಸ್ಟೀರಿಯಲ್‌ ತನಿಖೆಯಿಂದ ಆಸ್ತಿ ಪಾಸ್ತಿ ನಷ್ಟ ಹಾಗೂ ಘಟನೆ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ಲೂಟಿ, ಬೆಂಕಿ ಹಚ್ಚಿರುವವರು ಎನ್ನುವ ಬಗ್ಗೆ ಎರಡನೇ ಹಂತದ ತನಿಖೆ ತಿಳಿಸುತ್ತೆ. ಇಡೀ ಘಟನೆಯ ಹಿಂದೆ ಯಾರಿದ್ದಾರೆ ಅನ್ನೋದು ಐಜಿಪಿ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಅವರು ವಿವರಿಸಿದರು.

ಕಾನೂನು ಉಲ್ಲಂಘಿಸುವಂತಹ ಕೆಲಸಕ್ಕೆ ಕುಮ್ಮಕ್ಕು ನೀಡುವ ಸಂಘಟನೆಯ ಕೈವಾಡ ಇದ್ದರೆ ಅದು ಯಾವ ಸಂಘಟನೆ, ಯಾರು ಪ್ರಚೋದನೆ ಕೊಡುತ್ತಿದ್ದಾರೆ, ಹಣಕಾಸಿನ ನೆರವು ಒದಗಿಸುವವರು ಯಾರೆಂಬುದರ ಬಗ್ಗೆ ಮೂರನೇ ಹಂತದ ತನಿಖೆಯಾಗಬೇಕು ಎಂದು ಸಚಿವರಿಗೆ ಸಲಹೆ ನೀಡಿದ್ದಾಗಿ ತಿಳಿಸಿದರು.

ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸುವ ಕೆಲಸ ಆಗಬಾರದು. ಈಗಾಗಲೇ ಸಾಕ್ಷ್ಯಾಧಾರಗಳು ಸಿಕ್ಕಿವೆ, ಯಾರು ಅಪರಾಧಿಗಳು ಅನ್ನೋದು ಗೊತ್ತಾಗಿದೆ. ಹೀಗಾಗಿ ಆಸ್ತಿ ಪಾಸ್ತಿ ನಷ್ಟವನ್ನ ಅವರಿಂದಲೇ ಭರಿಸಬೇಕು ಎಂದು ಅಬ್ದುಲ್ ಅಜೀಜ್ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.