ETV Bharat / state

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್​

author img

By

Published : May 22, 2023, 11:47 AM IST

Updated : May 22, 2023, 10:27 PM IST

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್​ ರದ್ದು ಪಡಿಸಿ ಆದೇಶ ಹೊರಡಿಸಿದೆ.

High Court quashed the government decision  government decision to appoint an administrator  Govt not empowered to appoint administrator  ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ  ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ  ಸರ್ಕಾರದ ಕ್ರಮವನ್ನು ಹೈಕೋರ್ಟ್​ ರದ್ದು ಪಡಿಸಿ ಆದೇಶ  ಮುರುಘಾಮಠ ಮಠದ ಆಡಳಿತಾಧಿಕಾರಿ ನೇಮಕ ವಿಚಾರ  ಚಿತ್ರದುರ್ಗ ಮುರುಘಾಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ  ಪಿಎಸ್ ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ  ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು
ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್​

ಬೆಂಗಳೂರು : ಮುರುಘಾಮಠ ಮಠದ ಆಡಳಿತಾಧಿಕಾರಿ ನೇಮಕ ವಿಚಾರವಾಗಿ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಚಿತ್ರದುರ್ಗ ಮುರುಘಾಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶಿದೆ. ಇದರಿಂದ ಮಠದ ಚುಕ್ಕಾಣಿ ಸಮುದಾಯದ ಮುಖಂಡರಿಗೆ ಹಿಂದಿರುಗಲಿದೆ.

ಡಿಎಸ್ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಸುದೀರ್ಘ ವಿಚಾರಣೆ ನಡೆಸಿ ಅಂತಿಮ ತೀರ್ಪು ಕಾಯ್ದಿರಿಸಿತ್ತು. ಸೋಮವಾರ ಈ ಆದೇಶ ಪ್ರಕಟಿಸಿದೆ. ಆದೇಶದ ವಿಸ್ತೃತ ಪ್ರತಿ ಇನ್ನೂ ಲಭ್ಯವಾಗಬೇಕಿದೆ.

ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವುದಕ್ಕೆ ಸರ್ಕಾರಕ್ಕೆ ಅಧಿಕಾರವಿಲ್ಲ. ಮಠ ಮತ್ತು ಮಠದಲ್ಲಿ ಶೈಕ್ಷಣಿಕ ಆಡಳಿತವನ್ನು ನಿರ್ವಹಣೆ ಮಾಡುವುದಕ್ಕಾಗಿ ಮಠದ ಭಕ್ತರು ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಮುಖಂಡರು ಸೂಕ್ತ ನಿರ್ಧಾರವನ್ನು ಕೈಗೊಳ್ಳಬಹುದು. ಹೀಗಾಗಿ ಮಠಕ್ಕೆ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿ ಮುಂದಿನ ನಾಲ್ಕು ವಾರಗಳ ಕಾಲ ಮುಂದುವರೆಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಆದೇಶದಲ್ಲಿ ಏನಿದೆ ? ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ(ತಿದ್ದುಪಡಿ) ಕಾಯ್ದೆ 2011ರ ಪ್ರಕಾರ ಮಠಾಧಿಪತಿಗಳು ನಿರ್ವಹಣೆ ಮಾಡುತ್ತಿರುವ ಮಠಗಳು ಮತ್ತು ದೇವಾಲಯಗಳು ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಆಡಳಿತಾತ್ಮಕ ಕಾರ್ಯಗಳು ಧಾರ್ಮಿಕ ವಿಧಿ ವಿಧಾನಗಳು ಅಥವಾ ಇತರೆ ತಾತ್ಕಾಲಿಕ ಚಟುವಟಿಕೆಗಳಿಂದ ಮಠಗಳಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತಿಳಿಸಿದೆ. ಹೀಗಿರುವಾಗ ಮುರುಘಾ ಮಠಕ್ಕೆ ಸರ್ಕಾರದಿಂದ ಹೇಗೆ ಆಡಳಿ ಅಧಿಕಾರಿಯನ್ನು ನೇಮಿಸಿದೆ ಎಂಬುದು ತಿಳಿಯುತ್ತಿಲ್ಲ ಎಂದು ಪೀಠ ತಿಳಿಸಿದೆ.

ಜತೆಗೆ, ಸರ್ಕಾರವು ಮಠಕ್ಕೆ ಸ್ವಲ್ಪ ಭೂಮಿ ಮತ್ತು ಹಣವನ್ನು ನೀಡಿದೆ ಎಂಬ ಕಾರಣದಿಂದ ಎಲ್ಲಾ ವಿಚಾರಗಳಲ್ಲೂ ಹಸ್ತಕ್ಷೇಪವನ್ನು ಸಮರ್ಥಿಸಲಾಗುವುದಿಲ್ಲ. ಸಮುದಾಯದವರ ಮಧ್ಯಸ್ಥಿಕೆ ಅಥವಾ ನ್ಯಾಯಾಂಗ ಪ್ರಕ್ರಿಯೆಂತಹ ಸೂಕ್ತ ಕ್ರಮದ ಮೂಲಕ ಸಮಸ್ಯೆಗಳನ್ನು ತಾವಾಗಿಯೇ ಪರಿಹರಿಸಿಕೊಳ್ಳಲು ಧಾರ್ಮಿಕ ಸಂಸ್ಥೆಗಳನ್ನು ಸರ್ಕಾರ ಬಿಡಬೇಕು ಎಂದು ಪೀಠ ತಿಳಿಸಿದೆ. ಅಲ್ಲದೆ ಭಕ್ತರು ಮತ್ತು ಸಮುದಾಯದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಮಠದ ದೈನಂದಿನ ವ್ಯವಹಾರಗಳನ್ನು ನೋಡಿಕೊಳ್ಳಲು ಮುಂದಿನ ಆರುವಾರಗಳಲ್ಲಿ ಕ್ರಿಯಾಯೋಜನೆಯನ್ನು ತಂದು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣ ಸಂಬಂಧ ಈ ಹಿಂದೆ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ‘ಸರ್ಕಾರ ಸಂವಿಧಾನದ 162ನೇ ವಿಧಿಯಡಿ ಆಡಳಿತಾಧಿಕಾರಿ ನೇಮಕ ಮಾಡಿರುವುದು ಕಾನೂನು ಬಾಹಿರ. ಮಠಗಳ ಮೇಲೆ ನಿಯಂತ್ರಣ ಹೊಂದಲು ಕಾನೂನಿನಡಿ ಅವಕಾಶವಿಲ್ಲ. ಸಿವಿಲ್ ಪ್ರೊಸಿಜರ್ ಕೋಡ್ ಅನುಸಾರ ಕಲಂ 92ರ ಅಡಿಯಲ್ಲಿ ನಿಯಂತ್ರಣ ಹೊಂದಬಹುದು. ಆದ್ದರಿಂದ ಈ ಪ್ರಕರಣದಲ್ಲಿ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿದ್ದರು.

ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಮುರುಘಾ ಮಠದ ಪೀಠಾಧಿಪತಿಗಳು, ಪೊಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಜೈಲಿನಿಂದಲೇ ಮಠ ಮತ್ತು ವಿದ್ಯಾಸಂಸ್ಥೆಗಳ ಆಡಳಿತ ನಡೆಸುವುದಾದರೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಗೆ ಭಾರಿ ಹಾನಿಯುಂಟಾಗಲಿದೆ.

ಶಿವಮೂರ್ತಿ ಶರಣರು ಮಠ ಮತ್ತು ವಿದ್ಯಾಪೀಠಕ್ಕೆ ಏಕೈಕ (ಸೋಲ್) ಟ್ರಸ್ಟಿ ಮತ್ತು ಅಧ್ಯಕ್ಷರಾಗಿದ್ದಾರೆ. 2010ರ ನವೆಂಬರ್ 26ರಂದು ಟ್ರಸ್ಟ್ ಡೀಡ್ ನಿಗದಿಪಡಿಸಲಾಗಿದೆ. ಇದರಂತೆ ಮಠ ಮತ್ತು ವಿದ್ಯಾಪೀಠಗಳ ಆಡಳಿತದಲ್ಲಿ ಸಂಪೂರ್ಣ ಅವರ ಅಧಿಕಾರ ಹೊಂದಿದ್ದಾರೆ. ವಿದ್ಯಾಪೀಠದ ಅಡಿಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ 106 ವಿದ್ಯಾಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿ ಸಾವಿರಾರು ನೌಕರರು ದುಡಿಯುತ್ತಿದ್ದಾರೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿದೆ. ಈ ನಡುವೆ ಶರಣರು ಜೈಲು ಸೇರಿರುವುದರಿಂದ ಅದನ್ನು ಸರ್ಕಾರ ರಕ್ಷಣೆ ಮಾಡಬೇಕಿದೆ. ಈ ಹಿನ್ನೆಲೆ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಅಲ್ಲದೆ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದರಿಂದ ದೈನಂದಿನ ಪೂಜಾ ಕೈಂಕರ್ಯ, ದಾಸೋಹ ಹಾಗೂ ಇತರೆ ಚಟುವಟಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಕೋರಿದ್ದರು.

ಓದಿ: ಮುರುಘಾ ಮಠದ ವಿವಿಧ ವಿಭಾಗಗಳಿಗೆ ಆಡಳಿತಾಧಿಕಾರಿ ನೇಮಕ ಹಿಂಪಡೆಯಲು ಕೋರಿ ಮಧ್ಯಂತರ ಅರ್ಜಿ

ಬೆಂಗಳೂರು : ಮುರುಘಾಮಠ ಮಠದ ಆಡಳಿತಾಧಿಕಾರಿ ನೇಮಕ ವಿಚಾರವಾಗಿ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಚಿತ್ರದುರ್ಗ ಮುರುಘಾಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶಿದೆ. ಇದರಿಂದ ಮಠದ ಚುಕ್ಕಾಣಿ ಸಮುದಾಯದ ಮುಖಂಡರಿಗೆ ಹಿಂದಿರುಗಲಿದೆ.

ಡಿಎಸ್ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಸುದೀರ್ಘ ವಿಚಾರಣೆ ನಡೆಸಿ ಅಂತಿಮ ತೀರ್ಪು ಕಾಯ್ದಿರಿಸಿತ್ತು. ಸೋಮವಾರ ಈ ಆದೇಶ ಪ್ರಕಟಿಸಿದೆ. ಆದೇಶದ ವಿಸ್ತೃತ ಪ್ರತಿ ಇನ್ನೂ ಲಭ್ಯವಾಗಬೇಕಿದೆ.

ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವುದಕ್ಕೆ ಸರ್ಕಾರಕ್ಕೆ ಅಧಿಕಾರವಿಲ್ಲ. ಮಠ ಮತ್ತು ಮಠದಲ್ಲಿ ಶೈಕ್ಷಣಿಕ ಆಡಳಿತವನ್ನು ನಿರ್ವಹಣೆ ಮಾಡುವುದಕ್ಕಾಗಿ ಮಠದ ಭಕ್ತರು ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಮುಖಂಡರು ಸೂಕ್ತ ನಿರ್ಧಾರವನ್ನು ಕೈಗೊಳ್ಳಬಹುದು. ಹೀಗಾಗಿ ಮಠಕ್ಕೆ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿ ಮುಂದಿನ ನಾಲ್ಕು ವಾರಗಳ ಕಾಲ ಮುಂದುವರೆಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಆದೇಶದಲ್ಲಿ ಏನಿದೆ ? ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ(ತಿದ್ದುಪಡಿ) ಕಾಯ್ದೆ 2011ರ ಪ್ರಕಾರ ಮಠಾಧಿಪತಿಗಳು ನಿರ್ವಹಣೆ ಮಾಡುತ್ತಿರುವ ಮಠಗಳು ಮತ್ತು ದೇವಾಲಯಗಳು ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಆಡಳಿತಾತ್ಮಕ ಕಾರ್ಯಗಳು ಧಾರ್ಮಿಕ ವಿಧಿ ವಿಧಾನಗಳು ಅಥವಾ ಇತರೆ ತಾತ್ಕಾಲಿಕ ಚಟುವಟಿಕೆಗಳಿಂದ ಮಠಗಳಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತಿಳಿಸಿದೆ. ಹೀಗಿರುವಾಗ ಮುರುಘಾ ಮಠಕ್ಕೆ ಸರ್ಕಾರದಿಂದ ಹೇಗೆ ಆಡಳಿ ಅಧಿಕಾರಿಯನ್ನು ನೇಮಿಸಿದೆ ಎಂಬುದು ತಿಳಿಯುತ್ತಿಲ್ಲ ಎಂದು ಪೀಠ ತಿಳಿಸಿದೆ.

ಜತೆಗೆ, ಸರ್ಕಾರವು ಮಠಕ್ಕೆ ಸ್ವಲ್ಪ ಭೂಮಿ ಮತ್ತು ಹಣವನ್ನು ನೀಡಿದೆ ಎಂಬ ಕಾರಣದಿಂದ ಎಲ್ಲಾ ವಿಚಾರಗಳಲ್ಲೂ ಹಸ್ತಕ್ಷೇಪವನ್ನು ಸಮರ್ಥಿಸಲಾಗುವುದಿಲ್ಲ. ಸಮುದಾಯದವರ ಮಧ್ಯಸ್ಥಿಕೆ ಅಥವಾ ನ್ಯಾಯಾಂಗ ಪ್ರಕ್ರಿಯೆಂತಹ ಸೂಕ್ತ ಕ್ರಮದ ಮೂಲಕ ಸಮಸ್ಯೆಗಳನ್ನು ತಾವಾಗಿಯೇ ಪರಿಹರಿಸಿಕೊಳ್ಳಲು ಧಾರ್ಮಿಕ ಸಂಸ್ಥೆಗಳನ್ನು ಸರ್ಕಾರ ಬಿಡಬೇಕು ಎಂದು ಪೀಠ ತಿಳಿಸಿದೆ. ಅಲ್ಲದೆ ಭಕ್ತರು ಮತ್ತು ಸಮುದಾಯದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಮಠದ ದೈನಂದಿನ ವ್ಯವಹಾರಗಳನ್ನು ನೋಡಿಕೊಳ್ಳಲು ಮುಂದಿನ ಆರುವಾರಗಳಲ್ಲಿ ಕ್ರಿಯಾಯೋಜನೆಯನ್ನು ತಂದು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣ ಸಂಬಂಧ ಈ ಹಿಂದೆ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ‘ಸರ್ಕಾರ ಸಂವಿಧಾನದ 162ನೇ ವಿಧಿಯಡಿ ಆಡಳಿತಾಧಿಕಾರಿ ನೇಮಕ ಮಾಡಿರುವುದು ಕಾನೂನು ಬಾಹಿರ. ಮಠಗಳ ಮೇಲೆ ನಿಯಂತ್ರಣ ಹೊಂದಲು ಕಾನೂನಿನಡಿ ಅವಕಾಶವಿಲ್ಲ. ಸಿವಿಲ್ ಪ್ರೊಸಿಜರ್ ಕೋಡ್ ಅನುಸಾರ ಕಲಂ 92ರ ಅಡಿಯಲ್ಲಿ ನಿಯಂತ್ರಣ ಹೊಂದಬಹುದು. ಆದ್ದರಿಂದ ಈ ಪ್ರಕರಣದಲ್ಲಿ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿದ್ದರು.

ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಮುರುಘಾ ಮಠದ ಪೀಠಾಧಿಪತಿಗಳು, ಪೊಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಜೈಲಿನಿಂದಲೇ ಮಠ ಮತ್ತು ವಿದ್ಯಾಸಂಸ್ಥೆಗಳ ಆಡಳಿತ ನಡೆಸುವುದಾದರೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಗೆ ಭಾರಿ ಹಾನಿಯುಂಟಾಗಲಿದೆ.

ಶಿವಮೂರ್ತಿ ಶರಣರು ಮಠ ಮತ್ತು ವಿದ್ಯಾಪೀಠಕ್ಕೆ ಏಕೈಕ (ಸೋಲ್) ಟ್ರಸ್ಟಿ ಮತ್ತು ಅಧ್ಯಕ್ಷರಾಗಿದ್ದಾರೆ. 2010ರ ನವೆಂಬರ್ 26ರಂದು ಟ್ರಸ್ಟ್ ಡೀಡ್ ನಿಗದಿಪಡಿಸಲಾಗಿದೆ. ಇದರಂತೆ ಮಠ ಮತ್ತು ವಿದ್ಯಾಪೀಠಗಳ ಆಡಳಿತದಲ್ಲಿ ಸಂಪೂರ್ಣ ಅವರ ಅಧಿಕಾರ ಹೊಂದಿದ್ದಾರೆ. ವಿದ್ಯಾಪೀಠದ ಅಡಿಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ 106 ವಿದ್ಯಾಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿ ಸಾವಿರಾರು ನೌಕರರು ದುಡಿಯುತ್ತಿದ್ದಾರೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿದೆ. ಈ ನಡುವೆ ಶರಣರು ಜೈಲು ಸೇರಿರುವುದರಿಂದ ಅದನ್ನು ಸರ್ಕಾರ ರಕ್ಷಣೆ ಮಾಡಬೇಕಿದೆ. ಈ ಹಿನ್ನೆಲೆ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಅಲ್ಲದೆ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದರಿಂದ ದೈನಂದಿನ ಪೂಜಾ ಕೈಂಕರ್ಯ, ದಾಸೋಹ ಹಾಗೂ ಇತರೆ ಚಟುವಟಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಕೋರಿದ್ದರು.

ಓದಿ: ಮುರುಘಾ ಮಠದ ವಿವಿಧ ವಿಭಾಗಗಳಿಗೆ ಆಡಳಿತಾಧಿಕಾರಿ ನೇಮಕ ಹಿಂಪಡೆಯಲು ಕೋರಿ ಮಧ್ಯಂತರ ಅರ್ಜಿ

Last Updated : May 22, 2023, 10:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.