ETV Bharat / state

ಗುರು ರಾಘವೇಂದ್ರ ಬ್ಯಾಂಕ್ ಹಗರಣ : ಆಡಳಿತಾಧಿಕಾರಿಯಾಗಿ ಶ್ಯಾಮ್ ಪ್ರಸಾದ್ ನೇಮಕ

author img

By

Published : Feb 27, 2021, 3:30 AM IST

ಗುರು ರಾಘವೇಂದ್ರ ಬ್ಯಾಂಕ್​ಗೆ ಆಡಳಿತಾಧಿಕಾರಿಯಾಗಿ ಶ್ಯಾಮ್ ಪ್ರಸಾದ್​ರನ್ನು ಹೈಕೋರ್ಟ್​ ನೇಮಿಸಿ ಆದೇಶ ಹೊರಡಿಸಿದೆ.

Guru Raghavendra Bank scam, Guru Raghavendra Bank scam news, Shyam Prasad appointed, Shyam Prasad appointed as administrator, ಗುರು ರಾಘವೇಂದ್ರ ಬ್ಯಾಂಕ್ ಹಗರಣ, ಗುರುರಾಘವೇಂದ್ರ ಬ್ಯಾಂಕ್ ಹಗರಣ ಸುದ್ದಿ, ಶ್ಯಾಮ್ ಪ್ರಸಾದ್ ನೇಮಕ, ಬ್ಯಾಂಕ್​ನ ಆಡಳಿತಾಧಿಕಾರಿಯಾಗಿ ಶ್ಯಾಮ್ ಪ್ರಸಾದ್ ನೇಮಕ,
ಆಡಳಿತಾಧಿಕಾರಿಯಾಗಿ ಶ್ಯಾಮ್ ಪ್ರಸಾದ್ ನೇಮಕ

ಬೆಂಗಳೂರು : ಠೇವಣಿದಾರರ ಹಣ ದುರ್ಬಳಕೆ ಪ್ರಕರಣ ಹಿನ್ನೆಲೆ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌ಗೆ ಕೆನರಾ ಬ್ಯಾಂಕಿನ ನಿವೃತ್ತ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೆ. ಎಸ್. ಶ್ಯಾಮ್​ ಪ್ರಸಾದ್​ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಆಡಳಿತಾಧಿಕಾರಿಗಳಿಗೆ ಸಂಬಂಧಿಸಿದಂತೆ ಆರ್‌ಬಿಐ ಸಲ್ಲಿಸಿದ ಪ್ರಸ್ತಾವನೆ ಪರಿಶೀಲಿಸಿದ ಪೀಠ, ಶ್ಯಾಮ್​ ಪ್ರಸಾದ್​ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿತು.

ಕೋರ್ಟ್ ಅದೇಶ ಅಧಿಕೃತವಾಗಿ ಹೊರಬಿದ್ದ ಒಂದು ವಾರದಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಿರುವ ಸಂಬಂಧ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಅಲ್ಲದೇ, ಆಡಳಿತಾಧಿಕಾರಿ ಅಧಿಕಾರ ವಹಿಸಿಕೊಂಡ ಬಳಿಕ ದಾಖಲೆಗಳನ್ನು ಪರಿಶೀಲಿಸಿ, ಠೇವಣಿದಾರರ ಹಿತ ಕಾಪಾಡಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಎರಡು ವಾರದಲ್ಲಿ ಕೋರ್ಟ್​ಗೆ ವರದಿ ಸಲ್ಲಿಸಬೇಕು. ಅದಕ್ಕಾಗಿ ಆಡಳಿತಾಧಿಕಾರಿ ತಮ್ಮೆಲ್ಲಾ ಅಧಿಕಾರ ಚಲಾಯಿಸಬಹುದು ಎಂದು ತಿಳಿಸಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.

ಬೆಂಗಳೂರು : ಠೇವಣಿದಾರರ ಹಣ ದುರ್ಬಳಕೆ ಪ್ರಕರಣ ಹಿನ್ನೆಲೆ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌ಗೆ ಕೆನರಾ ಬ್ಯಾಂಕಿನ ನಿವೃತ್ತ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೆ. ಎಸ್. ಶ್ಯಾಮ್​ ಪ್ರಸಾದ್​ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಆಡಳಿತಾಧಿಕಾರಿಗಳಿಗೆ ಸಂಬಂಧಿಸಿದಂತೆ ಆರ್‌ಬಿಐ ಸಲ್ಲಿಸಿದ ಪ್ರಸ್ತಾವನೆ ಪರಿಶೀಲಿಸಿದ ಪೀಠ, ಶ್ಯಾಮ್​ ಪ್ರಸಾದ್​ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿತು.

ಕೋರ್ಟ್ ಅದೇಶ ಅಧಿಕೃತವಾಗಿ ಹೊರಬಿದ್ದ ಒಂದು ವಾರದಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಿರುವ ಸಂಬಂಧ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಅಲ್ಲದೇ, ಆಡಳಿತಾಧಿಕಾರಿ ಅಧಿಕಾರ ವಹಿಸಿಕೊಂಡ ಬಳಿಕ ದಾಖಲೆಗಳನ್ನು ಪರಿಶೀಲಿಸಿ, ಠೇವಣಿದಾರರ ಹಿತ ಕಾಪಾಡಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಎರಡು ವಾರದಲ್ಲಿ ಕೋರ್ಟ್​ಗೆ ವರದಿ ಸಲ್ಲಿಸಬೇಕು. ಅದಕ್ಕಾಗಿ ಆಡಳಿತಾಧಿಕಾರಿ ತಮ್ಮೆಲ್ಲಾ ಅಧಿಕಾರ ಚಲಾಯಿಸಬಹುದು ಎಂದು ತಿಳಿಸಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.