ETV Bharat / state

ಕೇಂದ್ರದಿಂದ ಸರ್ಕಾರಿ ಸಂಸ್ಥೆಗಳ ಖಾಸಗೀಕರಣ, ಉದ್ಯೋಗ ನಷ್ಟ: ಹೆಚ್.ಡಿ.ದೇವೇಗೌಡ ಕಳವಳ

ಕೇಂದ್ರ ಸರ್ಕಾರ ಹಲವಾರು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಇದ್ರಿಂದಾಗಿ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ತಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಹೆಚ್.ಡಿ ದೇವೇಗೌಡ ಆತಂಕ ವ್ಯಕ್ತಪಡಿಸಿದ್ರು.

ಹೆಚ್.ಡಿ.ದೇವೇಗೌಡರು
author img

By

Published : Aug 29, 2019, 6:07 PM IST

ಬೆಂಗಳೂರು: ರಾಷ್ಟ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಆರ್​ಬಿಐನಿಂದ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ದೊಡ್ಡ ಪ್ರಮಾಣದ ಹಣ ತೆಗೆದುಕೊಂಡಿದೆ. ಹಿಂದೆಂದೂ ಕೇಂದ್ರಬ್ಯಾಂಕಿನಿಂದ ಇಷ್ಟೊಂದು ಹಣ ಪಡೆದಿರಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಕಳವಳ ವ್ಯಕ್ತಪಡಿಸಿದ್ರು.

ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿಂದು ಕಾಂಗ್ರೆಸ್ ಮುಖಂಡ ದಯಾನಂದಮೂರ್ತಿ ಸೇರಿದಂತೆ ಹಲವು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಭಾರಿ ಮಟ್ಟದಲ್ಲಿ ವಿದೇಶಿ ಹೂಡಿಕೆ ಬಂದಿದೆ ಎಂದು ಹೇಳುತ್ತಿದೆ. ಆದರೆ, ಹಲವು ಸರ್ಕಾರಿ ಇಲಾಖೆಗಳ ನೌಕರರಿಗೆ ಸಂಬಳ ಆಗಿಲ್ಲ. ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಇದ್ರಿಂದಾಗಿ ಜನರು ಉದ್ಯೋಗ ಕಳೆದುಕೊಳ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ರು.

ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ? ಎಂಬುದು ಗೊತ್ತಿದೆ. ಇನ್ನೂ ಹಲವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರ ಒಡೆತನಕ್ಕೆ ಕೊಡುವ ಸಾಧ್ಯತೆ ಇದೆ. ಮಾಜಿ ಪ್ರಧಾನಿ ದಿ. ವಾಜಪೇಯಿ ಕಾಲದಲ್ಲಿ ಅಶೋಕ ಹೋಟೆಲ್ ಮಾರಿದಂತೆ ಕೆಲವನ್ನು ಮಾರಾಟ ಮಾಡಿದರೂ ಅಚ್ಚರಿಯಿಲ್ಲ. ಏನೇನೂ ಮಾಡ್ತಾರೋ, ನಾನಂತೂ ಪಾರ್ಲಿಮೆಂಟ್‌ನಲ್ಲಿ ಇಲ್ಲ ಎಂದು ಹೇಳಿದರು.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಿರುವ ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡ

ರಾಜ್ಯದಲ್ಲಿ ಪ್ರವಾಹದಿಂದಾಗಿ ಅನೇಕ ಸಾವುನೋವು ಸಂಭವಿಸಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರದಿಂದ ಅನುದಾನ ತರಲು ಪಕ್ಷದ ನಿಯೋಗ ಕರೆದೊಯ್ಯುವುದಾಗಿ ಹೇಳಿದ್ದಾರೆ. ಅವರ ಸಾಮರ್ಥ್ಯದ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ ಎಂದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಮೂವರು ಉಪಮುಖ್ಯಮಂತ್ರಿಗಳಾಗಿದ್ದಾರೆ. ಜಾತಿಗೊಂದು ಅಂತಾ ಮಾಡಿದ್ರೆ, ಇನ್ನೂ ಹಲವು ಜಾತಿಗಳಿವೆ. ಇವರನ್ನು ಯಾವ ರೀತಿಯ ಲೆಕ್ಕಾಚಾರದ ಆಧಾರದಲ್ಲಿ ಆಯ್ಕೆ ಮಾಡಿದ್ದಾರೆಂಬುದನ್ನು ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಬೇಕು ಎಂದು ಟೀಕಿಸಿದ್ರು.

ತಮ್ಮ ವಿರುದ್ಧ ಕಿಡಿಕಾರಿರುವ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಲು ಹೆಚ್.ಡಿ.ದೇವೇಗೌಡರು ನಿರಾಕರಿಸಿದ್ದಾರೆ. ಕಾಗಿನೆಲೆ ಶ್ರೀಗಳು ಬಹಳ ದೊಡ್ಡವರು. ಹೀಗಾಗಿ ಅವರ ಬಗ್ಗೆ ಮಾತನಾಡುವುದಿಲ್ಲವೆಂದು ನಯವಾಗಿ ಹೇಳಿದರು. ದೇವೇಗೌಡರು ಮತೊಮ್ಮೆ ಹುಟ್ಟಿ ಬಂದರೂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯರಿಗೆ ಸರಿಸಾಟಿ ಯಾರು ಇಲ್ಲ ಎಂದು ಎಂದು ಶ್ರೀಗಳು ಮೊನ್ನೆ ಹೇಳಿಕೆ ನೀಡಿದ್ದರು.

ಬೆಂಗಳೂರು: ರಾಷ್ಟ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಆರ್​ಬಿಐನಿಂದ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ದೊಡ್ಡ ಪ್ರಮಾಣದ ಹಣ ತೆಗೆದುಕೊಂಡಿದೆ. ಹಿಂದೆಂದೂ ಕೇಂದ್ರಬ್ಯಾಂಕಿನಿಂದ ಇಷ್ಟೊಂದು ಹಣ ಪಡೆದಿರಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಕಳವಳ ವ್ಯಕ್ತಪಡಿಸಿದ್ರು.

ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿಂದು ಕಾಂಗ್ರೆಸ್ ಮುಖಂಡ ದಯಾನಂದಮೂರ್ತಿ ಸೇರಿದಂತೆ ಹಲವು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಭಾರಿ ಮಟ್ಟದಲ್ಲಿ ವಿದೇಶಿ ಹೂಡಿಕೆ ಬಂದಿದೆ ಎಂದು ಹೇಳುತ್ತಿದೆ. ಆದರೆ, ಹಲವು ಸರ್ಕಾರಿ ಇಲಾಖೆಗಳ ನೌಕರರಿಗೆ ಸಂಬಳ ಆಗಿಲ್ಲ. ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಇದ್ರಿಂದಾಗಿ ಜನರು ಉದ್ಯೋಗ ಕಳೆದುಕೊಳ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ರು.

ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ? ಎಂಬುದು ಗೊತ್ತಿದೆ. ಇನ್ನೂ ಹಲವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರ ಒಡೆತನಕ್ಕೆ ಕೊಡುವ ಸಾಧ್ಯತೆ ಇದೆ. ಮಾಜಿ ಪ್ರಧಾನಿ ದಿ. ವಾಜಪೇಯಿ ಕಾಲದಲ್ಲಿ ಅಶೋಕ ಹೋಟೆಲ್ ಮಾರಿದಂತೆ ಕೆಲವನ್ನು ಮಾರಾಟ ಮಾಡಿದರೂ ಅಚ್ಚರಿಯಿಲ್ಲ. ಏನೇನೂ ಮಾಡ್ತಾರೋ, ನಾನಂತೂ ಪಾರ್ಲಿಮೆಂಟ್‌ನಲ್ಲಿ ಇಲ್ಲ ಎಂದು ಹೇಳಿದರು.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಿರುವ ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡ

ರಾಜ್ಯದಲ್ಲಿ ಪ್ರವಾಹದಿಂದಾಗಿ ಅನೇಕ ಸಾವುನೋವು ಸಂಭವಿಸಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರದಿಂದ ಅನುದಾನ ತರಲು ಪಕ್ಷದ ನಿಯೋಗ ಕರೆದೊಯ್ಯುವುದಾಗಿ ಹೇಳಿದ್ದಾರೆ. ಅವರ ಸಾಮರ್ಥ್ಯದ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ ಎಂದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಮೂವರು ಉಪಮುಖ್ಯಮಂತ್ರಿಗಳಾಗಿದ್ದಾರೆ. ಜಾತಿಗೊಂದು ಅಂತಾ ಮಾಡಿದ್ರೆ, ಇನ್ನೂ ಹಲವು ಜಾತಿಗಳಿವೆ. ಇವರನ್ನು ಯಾವ ರೀತಿಯ ಲೆಕ್ಕಾಚಾರದ ಆಧಾರದಲ್ಲಿ ಆಯ್ಕೆ ಮಾಡಿದ್ದಾರೆಂಬುದನ್ನು ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಬೇಕು ಎಂದು ಟೀಕಿಸಿದ್ರು.

ತಮ್ಮ ವಿರುದ್ಧ ಕಿಡಿಕಾರಿರುವ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಲು ಹೆಚ್.ಡಿ.ದೇವೇಗೌಡರು ನಿರಾಕರಿಸಿದ್ದಾರೆ. ಕಾಗಿನೆಲೆ ಶ್ರೀಗಳು ಬಹಳ ದೊಡ್ಡವರು. ಹೀಗಾಗಿ ಅವರ ಬಗ್ಗೆ ಮಾತನಾಡುವುದಿಲ್ಲವೆಂದು ನಯವಾಗಿ ಹೇಳಿದರು. ದೇವೇಗೌಡರು ಮತೊಮ್ಮೆ ಹುಟ್ಟಿ ಬಂದರೂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯರಿಗೆ ಸರಿಸಾಟಿ ಯಾರು ಇಲ್ಲ ಎಂದು ಎಂದು ಶ್ರೀಗಳು ಮೊನ್ನೆ ಹೇಳಿಕೆ ನೀಡಿದ್ದರು.

Intro:ಬೆಂಗಳೂರು : ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ಇದೆ. ಆರ್ಬಿಐ ನಿಂದ ಇದೇ ಮೊದಲ ಬಾರಿಗೆ ಕೇಂದ್ರ ಇಷ್ಟೊಂದು ಹಣ ತೆಗೆದುಕೊಂಡಿದ್ದಾರೆ. ಹಿಂದೆದೂ ಇಷ್ಟೊಂದು ಹಣ ತೆಗೆದುಕೊಂಡಿರಲಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. Body:ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಹಾಲಕ್ಷ್ಮಿಲೇ ಔಟ್ನ ಕಾಂಗ್ರೆಸ್ ಮುಖಂಡ ದಯಾನಂದಮೂರ್ತಿ ಸೇರಿದಂತೆ ಹಲವು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು, ಆದರೆ ಈಗಿನ ಆರ್ ಬಿಐ ಗರ್ವನರ್ಗಳು, ಮಾಜಿ ಗರ್ವನರ್ಗಳು ಹೇಳಿರುವುದನ್ನು ಗಮನಿಸಿದ್ದೇನೆ. ಕೇಂದ್ರ ಸರ್ಕಾರ ಫಾರಿನ್ ಇನ್ವೆಸ್ಟ್ ಮೆಂಟ್ ಬಂದಿದೆ ಎಂದು ಹೇಳುತ್ತಿದೆ. ಆದರೆ, ಹಲವು ಸರ್ಕಾರಿ ಇಲಾಖೆಗಳ ನೌಕರರಿಗೆ ಸಂಬಳ ಆಗಿಲ್ಲ. ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗಿ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಹಲವರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಪೀಣ್ಯಾದಲ್ಲಿ ಯಾವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ ಅನ್ನೋದು ಗೊತ್ತಿದೆ.ಇನ್ನೂ ಹಲವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಗೆ ಕೊಡುವ ಸಾಧ್ಯತೆ ಇದೆ. ಮಾಜಿ ಪ್ರಧಾನಿ ದಿ. ವಾಜಪೇಯಿ ಕಾಲದಲ್ಲಿ ಅಶೋಕಾ ಹೋಟೆಲ್ ಮಾರಿದಂತೆ ಕೆಲವನ್ನು ಮಾರಾಟ ಮಾಡಿದ್ರೂ ಮಾಡಬಹುದು. ಏನೇನೂ ಮಾಡ್ತಾರೋ, ನಾನೇನು ಪಾರ್ಲಿಮೆಂಟ್ ನಲ್ಲಿ ಇಲ್ಲ ಎಂದು ಹೇಳಿದರು.
ದೇಶದ ಬಹುತೇಕ ರಾಜ್ಯಗಳಲ್ಲಿ ಸಂಕಷ್ಟ ಇದೆ. ಉತ್ತರಾಂಚಲ, ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ನೆರೆಯಿಂದಾಗಿ ರಾಜ್ಯದಲ್ಲೂ ಅನೇಕ ಸಾವು ನೋವು ಸಂಭವಿಸಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರದಿಂದ ಅನುದಾನ ತರಲು
ಪಕ್ಷದ ನಿಯೋಗ ಕರೆದೊಯ್ಯುವುದಾಗಿ ಹೇಳಿದ್ದಾರೆ. ಅವರ ಸಾಮರ್ಥ್ಯದ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ ಎಂದರು.
ಸಚಿವ ಸಂಪುಟ ಮಾಡೋಕೆ ಒಂದು ತಿಂಗಳು ತೆಗೆದುಕೊಂಡಿದ್ದಾರೆ. ಇನ್ನು ಖಾತೆ ಹಂಚಿಕೆಗೂ ಹಲವು ದಿನ ತೆಗೆದುಕೊಂಡಿದ್ದು, ಬಿಜೆಪಿ ಪಕ್ಷದಲ್ಲಿಯೇ ಹಲವು ಗೊಂದಲಗಳಿವೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೂವರು ಉಪಮುಖ್ಯಮಂತ್ರಿಗಳಾಗಿದ್ದಾರೆ. ಜಾತಿಗೊಂದು ಅಂತಾ ಮಾಡಿದ್ರೇ, ಇನ್ನೂ ಹಲವು ಜಾತಿಗಳಿವೆ. ಇವರನ್ನು ಯಾವ ರೀತಿಯ ಲೆಕ್ಕಾಚಾರದ ಆಧಾರದಲ್ಲಿ ಆಯ್ಕೆ ಮಾಡಿದ್ದಾರೆಂಬುದನ್ನು ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಬೇಕು ಎಂದರು.
ತಮ್ಮ ವಿರುದ್ಧ ಕಿಡಿಕಾರಿರುವ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಲು ಹೆಚ್.ಡಿ.ದೇವೇಗೌಡರು ನಿರಾಕರಿಸಿದ್ದಾರೆ.
ಕಾಗಿನೆಲೆ ಶ್ರೀಗಳು ಬಹಳ ದೊಡ್ಡವರು. ಹೀಗಾಗಿ ಅವರ ಬಗ್ಗೆ ಮಾತನಾಡುವುದಿಲ್ಲವೆಂದು ನಯವಾಗಿ ಹೇಳಿದರು.
ದೇವೇಗೌಡರು ಮತೊಮ್ಮೆ ಹುಟ್ಟಿ ಬಂದರೂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯರಿಗೆ ಸರಿಸಾಟಿ ಯಾರು ಇಲ್ಲ ಎಂದು ಎಂದು ಶ್ರೀಗಳು ಮೊನ್ನೆ ಹೇಳಿಕೆ ನೀಡಿದ್ದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.