ETV Bharat / state

ಎತ್ತಿನಹೊಳೆ ಪರ್ಯಾಯ ಪ್ರಸ್ತಾವನೆ ಕೈಬಿಡವಂತೆ ಸಿಎಂಗೆ ಹೆಚ್​ಡಿಕೆ ಒತ್ತಾಯ

ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದರು. ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದರು..

author img

By

Published : Sep 6, 2021, 9:28 PM IST

h-d-kumaraswamy-meets-cm-basavaraja-bommai-in-bengalore
ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಭೇಟಿ

ಬೆಂಗಳೂರು : ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ನೀರಾವರಿ ಯೋಜನೆಗಳ ವಿಚಾರದಲ್ಲಿ ಪಕ್ಷದ ಶಾಸಕರ ಸಲಹೆಗಳನ್ನು ಆಲಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕು ಎನ್ನುವುದು ಸೇರಿದಂತೆ ಹಲವು ವಿಚಾರಗಳನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿಟ್ಟಿದೆ.

ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದರು. ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.

ಎತ್ತಿನಹೊಳೆ ಯೋಜನೆಯ ಭೈರಗೊಂಡ್ಲು ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು 5.78 ರಿಂದ 2 ಟಿಎಂಸಿವರೆಗೆ ಕಡಿತಗೊಳಿಸುವ ಪರ್ಯಾಯ ಪ್ರಸ್ತಾವನೆಯಿಂದ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಯ ಮೇಲೆ ಉಂಟಾಗುವ ಭೀಕರ ಪರಿಣಾಮಗಳನ್ನ ಪ್ರಸ್ತಾಪಿಸಿ ಕೂಡಲೇ ಪರ್ಯಾಯ ಪ್ರಸ್ತಾವನೆ ಕೈಬಿಡುವಂತೆ ಕುಮಾರಸ್ವಾಮಿ ಒತ್ತಾಯಿಸಿದರು.

ಎತ್ತಿನಹೊಳೆ ಯೋಜನೆಯ ನಿರ್ಮಾಣ ಕಾರ್ಯ 2012ರಿಂದ ಜಾರಿಯಲ್ಲಿದೆ. ಈವರೆಗೆ ಇದಕ್ಕೆ ಸುಮಾರು 8200 ಕೋಟಿ ರೂ.ಗಳು ವೆಚ್ಚವಾಗಿರುತ್ತದೆ. ಯೋಜನೆಯ ಪ್ರಮುಖ ಅಂಗವಾದ ಭೈರಗೊಂಡ್ಲು ಜಲಾಶಯದವರೆಗೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಸದರಿ ಅಣೆಕಟ್ಟು ಕಾಮಗಾರಿಯನ್ನು ಭೂಸ್ವಾಧೀನ ಸಮಸ್ಯೆಗಳಿಂದಾಗಿ ಪ್ರಾರಂಭ ಮಾಡಲಾಗದೆ ಸುಮಾರು 31/2 ವರ್ಷಗಳಿಂದಲೂ ನೆನಗುದಿಗೆ ಬಿದ್ದಿರುತ್ತದೆ.

ಎತ್ತಿನಹೊಳೆ ಯೋಜನೆಯ ಮೂಲ ಉದ್ದೇಶ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸುವುದು ಹಾಗೂ ಕೆರೆಗಳನ್ನು ತುಂಬಿಸುವುದು ಆಗಿರುತ್ತದೆ. ಎತ್ತಿನಹೊಳೆ ಮೂಲ ಸ್ಥಳದಲ್ಲಿ ಸದಾಕಾಲ ವಿಶ್ವಾಸಾರ್ಹ (Perennial and dependable) ಹರಿವಿನ ಕೊರತೆಯಿಂದಾಗಿ ದೇವರಾಯನದುರ್ಗದ ಸಮೀಪ 10 ಟಿಎಂಸಿ ಸಾಮರ್ಥ್ಯದ ಜಲಾಶಯವನ್ನು ನಿರ್ಮಿಸಿ, ಎತ್ತಿನಹೊಳೆಯಿಂದ ನೀರನ್ನು ಮೇಲಕ್ಕೆತ್ತಿ ಗುರುತ್ವಾಕರ್ಷಣಾ ಕಾಲುವೆಯ ಮುಖಾಂತರ ಜಲಾಶಯವನ್ನು ತುಂಬಿಸುವುದು ಆಗಿದೆ.

ನಂತರದಲ್ಲಿ ಜಲಾಶಯದಿಂದ ನೀರನ್ನು ಪಂಪ್‌ಗಳ ಮೂಲಕ ಮೇಲಕ್ಕೆತ್ತಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸುವುದು ಎಂದು ಯೋಜಿಸಲಾಗಿತ್ತು. ಆದರೆ, ಈ ಜಲಾಶಯದಿಂದ ವನ್ಯಭೂಮಿ ಮುಳುಗಡೆಯಾಗಲಿದೆ. ಇದನ್ನು ಸ್ವಾಧೀನಪಡಿಸಿಕೊಳ್ಳಲು ಉದ್ಭವಿಸಿದ ಸಮಸ್ಯೆಯಿಂದಾಗಿ, ದೇವರಾಯನದುರ್ಗ ಜಲಾಶಯದ ಬದಲಿಗೆ ಕೊರಟಗೆರೆ ತಾಲೂಕಿನ ಭೈರಗೊಂಡ್ಲು ಸಮೀಪ 5.78 ಟಿಎಂಸಿ ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಿ 2014ರಲ್ಲಿ ಅನುಮೋದನೆ ನೀಡಲಾಯಿತು.

ಇಲ್ಲಿಯೂ ಕೂಡ ಕೊರಟಗೆರೆ ಜಮೀನು ಮಾಲೀಕರು ಭೂಸ್ವಾಧೀನ ಪ್ರಕ್ರಿಯೆಗೆ ತೀವ್ರ ವಿರೋಧ ನೀಡುತ್ತಲಿರುವುದರಿಂದ ಈ ಅಣೆಕಟ್ಟೆಯ ಕಾಮಗಾರಿಯನ್ನು ಈವರೆಗೂ ಪ್ರಾರಂಭಿಸಲಾಗಿಲ್ಲ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ನೀಡುವ ಪರಿಹಾರ ಧನದಂತೆಯೇ ತಮಗೂ ಪರಿಹಾರ ನೀಡಬೇಕೆಂದು ಕೊರಟಗೆರೆ ಭೂಮಾಲೀಕರ ಬೇಡಿಕೆಯಾಗಿರುತ್ತದೆ. ಅವರ ಬೇಡಿಕೆಯನ್ನು ಈಡೇರಿಸಿದಲ್ಲಿ ಸರ್ಕಾರಕ್ಕೆ 319 ಕೋಟಿ ರೂ. ಅಧಿಕ ವೆಚ್ಚವಾಗಲಿದೆ ಎಂಬುದು ಸರ್ಕಾರದ ವಾದವಾಗಿರುತ್ತದೆ.

ಈ ಸಮಸ್ಯೆಯನ್ನು ಬಗೆಹರಿಸುವ ಉದ್ದೇಶದಿಂದ ಭೈರಗೊಂಡ್ಲು ಜಲಾಶಯದ ಸಾಮರ್ಥ್ಯವನ್ನು 5.78ರಿಂದ 2 ಟಿಎಂಸಿಗೆ ಇಳಿಸಿ, ಈ ಜಲಾಶಯವನ್ನು ತುಂಬಿಸಿ ನಂತರ ಮೇಲಕ್ಕೆತ್ತುವ ಬದಲು, ಗುರುತ್ವಾಕರ್ಷಣೆ ತೆರೆದ ಕಾಲುವೆಯಿಂದಲೇ ನೇರವಾಗಿ ಪಂಪ್‌ಗಳ ಮುಖಾಂತರ ಮೇಲಕ್ಕೆತ್ತಿ ಸದರಿ ಜಿಲ್ಲೆಗಳಿಗೆ ನೀರು ಹರಿಸಬಹುದೆಂದು ವಿಶ್ವೇಶ್ವರಯ್ಯ ಜಲ ನಿಗಮವು ತೀರ್ಮಾನಿಸಿ, ಈ ಪರ್ಯಾಯ ಪ್ರಸ್ತಾವನೆಯನ್ನು ಮರು ಪರಿಷ್ಕೃತ ಅಂದಾಜಿನಲ್ಲಿ ಅಳವಡಿಸಿರುವುದಾಗಿ ತಿಳಿದು ಬಂದಿರುತ್ತದೆ.

23251 ಕೋಟಿ ರೂ. ಮೊತ್ತದ ಮರು ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡುವ ಪ್ರಕ್ರಿಯೆಯು ಸರ್ಕಾರದಲ್ಲಿ ಅಂತಿಮ ಘಟ್ಟದಲ್ಲಿರುವುದಾಗಿಯೂ ತಿಳಿದು ಬಂದಿರುತ್ತದೆ. ಈ ರೀತಿ ಪದೇಪದೆ ಯೋಜನೆಯ ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಿ, ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು ತೀವ್ರವಾಗಿ ಕಡಿತಗೊಳಿಸುವ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನತೆಗೆ ಈ ಯೋಜನೆಯ ಬಗ್ಗೆ ವಿಶ್ವಾಸವೇ ಇಲ್ಲದಂತಾಗಿದೆ.

ಈ ಹಂತದಲ್ಲಿ ವಿನ್ಯಾಸದಲ್ಲಿ ಮಾಡಲಾಗಿರುವ ಬದಲಾವಣೆಯಿಂದ ತೀವ್ರವಾಗಿ ಆಘಾತವಾಗಿರುತ್ತದೆ. ಯಾವುದೇ ಸಮಯದಲ್ಲೂ ಇದು ಉಗ್ರ ಚಳವಳಿ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇರುತ್ತದೆ. ಈ ಪರ್ಯಾಯ ಪ್ರಸ್ತಾವನೆಯಿಂದ ಯೋಜನೆಯ ಮೂಲ ಉದ್ದೇಶಕ್ಕೆ ದುಷ್ಪರಿಣಾಮ ಉಂಟಾಗಲಿದೆ ಎಂದು ವಿಸ್ತ್ರತವಾಗಿ ಸಂಪೂರ್ಣ ವಿವರಗಳೊಂದಿಗೆ ಸಿಎಂ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಭೈರಗೊಂಡ್ಲು ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು 5.78ರಿಂದ 2 ಟಿಎಂಸಿವರೆಗೆ ಕಡಿತಗೊಳಿಸುವ ಪ್ರಸ್ತಾವನೆಯನ್ನು ಕೂಡಲೇ ಕೈಬಿಟ್ಟು, ಜಲಾಶಯಕ್ಕೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೊರಟಗೆರೆ ಭೂಮಾಲೀಕರ ಬೇಡಿಕೆಯಂತೆಯೇ ಸಕಾರಾತ್ಮಕವಾಗಿ ಪರಿಗಣಿಸಿ, ಈಗಾಗಲೇ ಅನುಮೋದಿತ ಪರಿಷ್ಕೃತ ಯೋಜನಾ ವರದಿಯಂತೆ ನಿರ್ಮಾಣ ಕಾರ್ಯವನ್ನು ಮುಂದುವರೆಸುವಂತೆ ಮನವಿ ಮಾಡಿದರು.

ರಾಜ್ಯದ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ, ಮಹದಾಯಿ ಯೋಜನೆಗಳ ಅನುಷ್ಠಾನ, ನೆರೆ ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚಿಸಿದರು. ಕೇಂದ್ರ ಸರ್ಕಾರದಲ್ಲಿ ನೆನಗುದಿಗೆ ಬಿದ್ದಿರುವ ರಾಜ್ಯದ ಪ್ರಮುಖ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ (2ನೇ ಹಂತ), ಮಹದಾಯಿ ಯೋಜನೆಗಳಿಗೆ ಅನುಮತಿ ಮಂಜೂರಾತಿ ಮತ್ತು ತೀರ್ಮಾನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಹೇರುವ ಸಂಬಂಧ ಚರ್ಚಿಸಿದರು.

ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರಿಗೆ ನೀಡುವ ಪರಿಹಾರ ಮತ್ತು ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯಿಂದ ಉಂಟಾಗಿರುವ ಹಾನಿಗೆ ಶೀಘ್ರವೇ ಪರಿಹಾರ ನೀಡಬೇಕು. ಅಲ್ಲದೇ, ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬದವರಿಗೆ ನೀಡುವ ಪರಿಹಾರವನ್ನು ಒಂದು ಲಕ್ಷ ರೂ. ನಿಂದ ಐದು ಲಕ್ಷ ರೂ. ಗೆ ಹೆಚ್ಚಿಸಬೇಕು. ಯಾವುದೇ ಷರತ್ತು ವಿಧಿಸಬಾರದು ಎಂದು ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಶಾಸಕರ ನಿಯೋಗ ಸಿಎಂ ಬೊಮ್ಮಾಯಿಗೆ ಮನವಿ ಮಾಡಿತು.

ಶಾಸಕರ ಅನುದಾನ: ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡಬೇಕು. ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದು ಸಿಎಂಗೆ ಮನವಿ ಮಾಡಿದ್ದಾರೆ ಎಂದರು.

ಹೆಚ್​ಡಿಕೆಗೆ ಟ್ರಾಫಿಕ್ ಕಿರಿಕಿರಿ: ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸುವ ವೇಳೆ ಕುಮಾರಪಾರ್ಕ್ ರಸ್ತೆಯಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಟ್ರಾಫಿಕ್ ಬಿಸಿ ತಟ್ಟಿತು. ಸಿಎಂ ಕಚೇರಿ ಮುಂಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ಕೃಷ್ಣಾದ ಒಳಗೆ ತೆರಳಲು ಟ್ರಾಫಿಕ್ ನಲ್ಲಿ ಕಾಯಬೇಕಾಯಿತು. ಹಲವು ಶಾಸಕರ ವಾಹನಗಳೂ ಹೆಚ್​ಡಿಕೆ ವಾಹನದ ಹಿಂದೆ ಬಂದ ಕಾರಣ ಕೆಲಕಾಲ ಸಿಎಂ ಕಚೇರಿ ಮುಂಭಾಗದಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.

ಕಲಬುರಗಿ ಮೈತ್ರಿ: ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ. ಕಲಬುರ್ಗಿ ಮಹಾನಗರ ಪಾಲಿಕೆ ಅತಂತ್ರವಾಗಿದ್ದು, ಅಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಖಚಿತ ಎನ್ನಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿಯೂ ಮೈತ್ರಿ ಪ್ರಸ್ತಾಪವಿದ್ದು, ಇದರ ಬಗ್ಗೆಯೂ ಮಾತುಕತೆ ನಡೆದಿರಬಹುದು ಎನ್ನಲಾಗುತ್ತಿದೆ.

ಓದಿ: ಕರ್ನಾಟಕ ಕೋವಿಡ್ ರಿಪೋರ್ಟ್ : ಇಂದು 973 ಮಂದಿಗೆ ಕೊರೊನಾ,17 ಸೋಂಕಿತರ ಸಾವು

ಬೆಂಗಳೂರು : ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ನೀರಾವರಿ ಯೋಜನೆಗಳ ವಿಚಾರದಲ್ಲಿ ಪಕ್ಷದ ಶಾಸಕರ ಸಲಹೆಗಳನ್ನು ಆಲಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕು ಎನ್ನುವುದು ಸೇರಿದಂತೆ ಹಲವು ವಿಚಾರಗಳನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿಟ್ಟಿದೆ.

ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದರು. ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.

ಎತ್ತಿನಹೊಳೆ ಯೋಜನೆಯ ಭೈರಗೊಂಡ್ಲು ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು 5.78 ರಿಂದ 2 ಟಿಎಂಸಿವರೆಗೆ ಕಡಿತಗೊಳಿಸುವ ಪರ್ಯಾಯ ಪ್ರಸ್ತಾವನೆಯಿಂದ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಯ ಮೇಲೆ ಉಂಟಾಗುವ ಭೀಕರ ಪರಿಣಾಮಗಳನ್ನ ಪ್ರಸ್ತಾಪಿಸಿ ಕೂಡಲೇ ಪರ್ಯಾಯ ಪ್ರಸ್ತಾವನೆ ಕೈಬಿಡುವಂತೆ ಕುಮಾರಸ್ವಾಮಿ ಒತ್ತಾಯಿಸಿದರು.

ಎತ್ತಿನಹೊಳೆ ಯೋಜನೆಯ ನಿರ್ಮಾಣ ಕಾರ್ಯ 2012ರಿಂದ ಜಾರಿಯಲ್ಲಿದೆ. ಈವರೆಗೆ ಇದಕ್ಕೆ ಸುಮಾರು 8200 ಕೋಟಿ ರೂ.ಗಳು ವೆಚ್ಚವಾಗಿರುತ್ತದೆ. ಯೋಜನೆಯ ಪ್ರಮುಖ ಅಂಗವಾದ ಭೈರಗೊಂಡ್ಲು ಜಲಾಶಯದವರೆಗೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಸದರಿ ಅಣೆಕಟ್ಟು ಕಾಮಗಾರಿಯನ್ನು ಭೂಸ್ವಾಧೀನ ಸಮಸ್ಯೆಗಳಿಂದಾಗಿ ಪ್ರಾರಂಭ ಮಾಡಲಾಗದೆ ಸುಮಾರು 31/2 ವರ್ಷಗಳಿಂದಲೂ ನೆನಗುದಿಗೆ ಬಿದ್ದಿರುತ್ತದೆ.

ಎತ್ತಿನಹೊಳೆ ಯೋಜನೆಯ ಮೂಲ ಉದ್ದೇಶ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸುವುದು ಹಾಗೂ ಕೆರೆಗಳನ್ನು ತುಂಬಿಸುವುದು ಆಗಿರುತ್ತದೆ. ಎತ್ತಿನಹೊಳೆ ಮೂಲ ಸ್ಥಳದಲ್ಲಿ ಸದಾಕಾಲ ವಿಶ್ವಾಸಾರ್ಹ (Perennial and dependable) ಹರಿವಿನ ಕೊರತೆಯಿಂದಾಗಿ ದೇವರಾಯನದುರ್ಗದ ಸಮೀಪ 10 ಟಿಎಂಸಿ ಸಾಮರ್ಥ್ಯದ ಜಲಾಶಯವನ್ನು ನಿರ್ಮಿಸಿ, ಎತ್ತಿನಹೊಳೆಯಿಂದ ನೀರನ್ನು ಮೇಲಕ್ಕೆತ್ತಿ ಗುರುತ್ವಾಕರ್ಷಣಾ ಕಾಲುವೆಯ ಮುಖಾಂತರ ಜಲಾಶಯವನ್ನು ತುಂಬಿಸುವುದು ಆಗಿದೆ.

ನಂತರದಲ್ಲಿ ಜಲಾಶಯದಿಂದ ನೀರನ್ನು ಪಂಪ್‌ಗಳ ಮೂಲಕ ಮೇಲಕ್ಕೆತ್ತಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸುವುದು ಎಂದು ಯೋಜಿಸಲಾಗಿತ್ತು. ಆದರೆ, ಈ ಜಲಾಶಯದಿಂದ ವನ್ಯಭೂಮಿ ಮುಳುಗಡೆಯಾಗಲಿದೆ. ಇದನ್ನು ಸ್ವಾಧೀನಪಡಿಸಿಕೊಳ್ಳಲು ಉದ್ಭವಿಸಿದ ಸಮಸ್ಯೆಯಿಂದಾಗಿ, ದೇವರಾಯನದುರ್ಗ ಜಲಾಶಯದ ಬದಲಿಗೆ ಕೊರಟಗೆರೆ ತಾಲೂಕಿನ ಭೈರಗೊಂಡ್ಲು ಸಮೀಪ 5.78 ಟಿಎಂಸಿ ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಿ 2014ರಲ್ಲಿ ಅನುಮೋದನೆ ನೀಡಲಾಯಿತು.

ಇಲ್ಲಿಯೂ ಕೂಡ ಕೊರಟಗೆರೆ ಜಮೀನು ಮಾಲೀಕರು ಭೂಸ್ವಾಧೀನ ಪ್ರಕ್ರಿಯೆಗೆ ತೀವ್ರ ವಿರೋಧ ನೀಡುತ್ತಲಿರುವುದರಿಂದ ಈ ಅಣೆಕಟ್ಟೆಯ ಕಾಮಗಾರಿಯನ್ನು ಈವರೆಗೂ ಪ್ರಾರಂಭಿಸಲಾಗಿಲ್ಲ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ನೀಡುವ ಪರಿಹಾರ ಧನದಂತೆಯೇ ತಮಗೂ ಪರಿಹಾರ ನೀಡಬೇಕೆಂದು ಕೊರಟಗೆರೆ ಭೂಮಾಲೀಕರ ಬೇಡಿಕೆಯಾಗಿರುತ್ತದೆ. ಅವರ ಬೇಡಿಕೆಯನ್ನು ಈಡೇರಿಸಿದಲ್ಲಿ ಸರ್ಕಾರಕ್ಕೆ 319 ಕೋಟಿ ರೂ. ಅಧಿಕ ವೆಚ್ಚವಾಗಲಿದೆ ಎಂಬುದು ಸರ್ಕಾರದ ವಾದವಾಗಿರುತ್ತದೆ.

ಈ ಸಮಸ್ಯೆಯನ್ನು ಬಗೆಹರಿಸುವ ಉದ್ದೇಶದಿಂದ ಭೈರಗೊಂಡ್ಲು ಜಲಾಶಯದ ಸಾಮರ್ಥ್ಯವನ್ನು 5.78ರಿಂದ 2 ಟಿಎಂಸಿಗೆ ಇಳಿಸಿ, ಈ ಜಲಾಶಯವನ್ನು ತುಂಬಿಸಿ ನಂತರ ಮೇಲಕ್ಕೆತ್ತುವ ಬದಲು, ಗುರುತ್ವಾಕರ್ಷಣೆ ತೆರೆದ ಕಾಲುವೆಯಿಂದಲೇ ನೇರವಾಗಿ ಪಂಪ್‌ಗಳ ಮುಖಾಂತರ ಮೇಲಕ್ಕೆತ್ತಿ ಸದರಿ ಜಿಲ್ಲೆಗಳಿಗೆ ನೀರು ಹರಿಸಬಹುದೆಂದು ವಿಶ್ವೇಶ್ವರಯ್ಯ ಜಲ ನಿಗಮವು ತೀರ್ಮಾನಿಸಿ, ಈ ಪರ್ಯಾಯ ಪ್ರಸ್ತಾವನೆಯನ್ನು ಮರು ಪರಿಷ್ಕೃತ ಅಂದಾಜಿನಲ್ಲಿ ಅಳವಡಿಸಿರುವುದಾಗಿ ತಿಳಿದು ಬಂದಿರುತ್ತದೆ.

23251 ಕೋಟಿ ರೂ. ಮೊತ್ತದ ಮರು ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡುವ ಪ್ರಕ್ರಿಯೆಯು ಸರ್ಕಾರದಲ್ಲಿ ಅಂತಿಮ ಘಟ್ಟದಲ್ಲಿರುವುದಾಗಿಯೂ ತಿಳಿದು ಬಂದಿರುತ್ತದೆ. ಈ ರೀತಿ ಪದೇಪದೆ ಯೋಜನೆಯ ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಿ, ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು ತೀವ್ರವಾಗಿ ಕಡಿತಗೊಳಿಸುವ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನತೆಗೆ ಈ ಯೋಜನೆಯ ಬಗ್ಗೆ ವಿಶ್ವಾಸವೇ ಇಲ್ಲದಂತಾಗಿದೆ.

ಈ ಹಂತದಲ್ಲಿ ವಿನ್ಯಾಸದಲ್ಲಿ ಮಾಡಲಾಗಿರುವ ಬದಲಾವಣೆಯಿಂದ ತೀವ್ರವಾಗಿ ಆಘಾತವಾಗಿರುತ್ತದೆ. ಯಾವುದೇ ಸಮಯದಲ್ಲೂ ಇದು ಉಗ್ರ ಚಳವಳಿ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇರುತ್ತದೆ. ಈ ಪರ್ಯಾಯ ಪ್ರಸ್ತಾವನೆಯಿಂದ ಯೋಜನೆಯ ಮೂಲ ಉದ್ದೇಶಕ್ಕೆ ದುಷ್ಪರಿಣಾಮ ಉಂಟಾಗಲಿದೆ ಎಂದು ವಿಸ್ತ್ರತವಾಗಿ ಸಂಪೂರ್ಣ ವಿವರಗಳೊಂದಿಗೆ ಸಿಎಂ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಭೈರಗೊಂಡ್ಲು ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು 5.78ರಿಂದ 2 ಟಿಎಂಸಿವರೆಗೆ ಕಡಿತಗೊಳಿಸುವ ಪ್ರಸ್ತಾವನೆಯನ್ನು ಕೂಡಲೇ ಕೈಬಿಟ್ಟು, ಜಲಾಶಯಕ್ಕೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೊರಟಗೆರೆ ಭೂಮಾಲೀಕರ ಬೇಡಿಕೆಯಂತೆಯೇ ಸಕಾರಾತ್ಮಕವಾಗಿ ಪರಿಗಣಿಸಿ, ಈಗಾಗಲೇ ಅನುಮೋದಿತ ಪರಿಷ್ಕೃತ ಯೋಜನಾ ವರದಿಯಂತೆ ನಿರ್ಮಾಣ ಕಾರ್ಯವನ್ನು ಮುಂದುವರೆಸುವಂತೆ ಮನವಿ ಮಾಡಿದರು.

ರಾಜ್ಯದ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ, ಮಹದಾಯಿ ಯೋಜನೆಗಳ ಅನುಷ್ಠಾನ, ನೆರೆ ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚಿಸಿದರು. ಕೇಂದ್ರ ಸರ್ಕಾರದಲ್ಲಿ ನೆನಗುದಿಗೆ ಬಿದ್ದಿರುವ ರಾಜ್ಯದ ಪ್ರಮುಖ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ (2ನೇ ಹಂತ), ಮಹದಾಯಿ ಯೋಜನೆಗಳಿಗೆ ಅನುಮತಿ ಮಂಜೂರಾತಿ ಮತ್ತು ತೀರ್ಮಾನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಹೇರುವ ಸಂಬಂಧ ಚರ್ಚಿಸಿದರು.

ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರಿಗೆ ನೀಡುವ ಪರಿಹಾರ ಮತ್ತು ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯಿಂದ ಉಂಟಾಗಿರುವ ಹಾನಿಗೆ ಶೀಘ್ರವೇ ಪರಿಹಾರ ನೀಡಬೇಕು. ಅಲ್ಲದೇ, ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬದವರಿಗೆ ನೀಡುವ ಪರಿಹಾರವನ್ನು ಒಂದು ಲಕ್ಷ ರೂ. ನಿಂದ ಐದು ಲಕ್ಷ ರೂ. ಗೆ ಹೆಚ್ಚಿಸಬೇಕು. ಯಾವುದೇ ಷರತ್ತು ವಿಧಿಸಬಾರದು ಎಂದು ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಶಾಸಕರ ನಿಯೋಗ ಸಿಎಂ ಬೊಮ್ಮಾಯಿಗೆ ಮನವಿ ಮಾಡಿತು.

ಶಾಸಕರ ಅನುದಾನ: ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡಬೇಕು. ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದು ಸಿಎಂಗೆ ಮನವಿ ಮಾಡಿದ್ದಾರೆ ಎಂದರು.

ಹೆಚ್​ಡಿಕೆಗೆ ಟ್ರಾಫಿಕ್ ಕಿರಿಕಿರಿ: ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸುವ ವೇಳೆ ಕುಮಾರಪಾರ್ಕ್ ರಸ್ತೆಯಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಟ್ರಾಫಿಕ್ ಬಿಸಿ ತಟ್ಟಿತು. ಸಿಎಂ ಕಚೇರಿ ಮುಂಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ಕೃಷ್ಣಾದ ಒಳಗೆ ತೆರಳಲು ಟ್ರಾಫಿಕ್ ನಲ್ಲಿ ಕಾಯಬೇಕಾಯಿತು. ಹಲವು ಶಾಸಕರ ವಾಹನಗಳೂ ಹೆಚ್​ಡಿಕೆ ವಾಹನದ ಹಿಂದೆ ಬಂದ ಕಾರಣ ಕೆಲಕಾಲ ಸಿಎಂ ಕಚೇರಿ ಮುಂಭಾಗದಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.

ಕಲಬುರಗಿ ಮೈತ್ರಿ: ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ. ಕಲಬುರ್ಗಿ ಮಹಾನಗರ ಪಾಲಿಕೆ ಅತಂತ್ರವಾಗಿದ್ದು, ಅಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಖಚಿತ ಎನ್ನಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿಯೂ ಮೈತ್ರಿ ಪ್ರಸ್ತಾಪವಿದ್ದು, ಇದರ ಬಗ್ಗೆಯೂ ಮಾತುಕತೆ ನಡೆದಿರಬಹುದು ಎನ್ನಲಾಗುತ್ತಿದೆ.

ಓದಿ: ಕರ್ನಾಟಕ ಕೋವಿಡ್ ರಿಪೋರ್ಟ್ : ಇಂದು 973 ಮಂದಿಗೆ ಕೊರೊನಾ,17 ಸೋಂಕಿತರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.