ETV Bharat / state

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ; ಡಿಸಿಎಂ​ಗೆ ಕುಮಾರಸ್ವಾಮಿ ತಿರುಗೇಟು

author img

By ETV Bharat Karnataka Team

Published : Nov 13, 2023, 3:47 PM IST

ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು : ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತೀಕ್ಷ್ಣ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು, ʼಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಕಿಡಿಕಾರಿರುವ ಅವರು, ಜನರು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ಇವರ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ. ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

  • ರಾಜ್ಯ @INCKarnataka ಸರಕಾರ ರಾಜ್ಯದಲ್ಲಿ ಜಾರಿ ಆಗಿರುವ 5 ಗ್ಯಾರಂಟಿಗಳ ವೈಫಲ್ಯಗಳ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದೆ.

    ಪಂಚರಾಜ್ಯಗಳ ಜನರಿಗೆ ಸುಳ್ಳು ಗ್ಯಾರಂಟಿಗಳ ಮಂಕುಬೂದಿ ಎರಚುತ್ತಿದೆ ಕಾಂಗ್ರೆಸ್.‌ ತೆಲಂಗಾಣದ ಜನರು ಈ ಪೊಳ್ಳು ಗ್ಯಾರಂಟಿಗಳಿಗೆ ಮರುಳಾಗಬಾರದು ಎನ್ನುವುದು ನನ್ನ ಮನವಿ.

    *ಶಕ್ತಿ: ಬಸ್ಸುಗಳಿಲ್ಲ, ಜೆಸಿಬಿಗಳಲ್ಲಿ… pic.twitter.com/O3yhROpXmU

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 12, 2023 " class="align-text-top noRightClick twitterSection" data=" ">

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ. ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್​ಡಿ ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮೆದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಅವರು ಹೇಳಿದ್ದಾರೆ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಅವರು ಡಿಕೆಶಿಗೆ ಕುಟುಕಿದ್ದಾರೆ.

  • ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ.
    *
    ಇದು…

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 13, 2023 " class="align-text-top noRightClick twitterSection" data=" ">

ಚೀಪ್​ ಗಿಮಿಕ್‌ ಎಂದಿದ್ದರು ಸಚಿವರು: ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕ ವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಬಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಪ್​ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಪ್​ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ ಎಂದು ಡಿಕೆಶಿಗೆ ಟಾಂಗ್‌ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಶ್ವೇತಪತ್ರ ಹೊರಡಿಸಿ: ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ ಎಂದು ಉಪ ಮುಖ್ಯಮಂತ್ರಿಗಳಿಗೆ ನೇರ ಸವಾಲು ಹಾಕಿದ್ದಾರೆ.

ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ: ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ?. ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಅಯ್ಯೋ ದೇವರೇ, ಈ ಸರ್ಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿ ಕೆ ಶಿವಕುಮಾರ್

ಬೆಂಗಳೂರು : ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತೀಕ್ಷ್ಣ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು, ʼಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಕಿಡಿಕಾರಿರುವ ಅವರು, ಜನರು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ಇವರ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ. ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

  • ರಾಜ್ಯ @INCKarnataka ಸರಕಾರ ರಾಜ್ಯದಲ್ಲಿ ಜಾರಿ ಆಗಿರುವ 5 ಗ್ಯಾರಂಟಿಗಳ ವೈಫಲ್ಯಗಳ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದೆ.

    ಪಂಚರಾಜ್ಯಗಳ ಜನರಿಗೆ ಸುಳ್ಳು ಗ್ಯಾರಂಟಿಗಳ ಮಂಕುಬೂದಿ ಎರಚುತ್ತಿದೆ ಕಾಂಗ್ರೆಸ್.‌ ತೆಲಂಗಾಣದ ಜನರು ಈ ಪೊಳ್ಳು ಗ್ಯಾರಂಟಿಗಳಿಗೆ ಮರುಳಾಗಬಾರದು ಎನ್ನುವುದು ನನ್ನ ಮನವಿ.

    *ಶಕ್ತಿ: ಬಸ್ಸುಗಳಿಲ್ಲ, ಜೆಸಿಬಿಗಳಲ್ಲಿ… pic.twitter.com/O3yhROpXmU

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 12, 2023 " class="align-text-top noRightClick twitterSection" data=" ">

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ. ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್​ಡಿ ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮೆದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಅವರು ಹೇಳಿದ್ದಾರೆ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಅವರು ಡಿಕೆಶಿಗೆ ಕುಟುಕಿದ್ದಾರೆ.

  • ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ.
    *
    ಇದು…

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 13, 2023 " class="align-text-top noRightClick twitterSection" data=" ">

ಚೀಪ್​ ಗಿಮಿಕ್‌ ಎಂದಿದ್ದರು ಸಚಿವರು: ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕ ವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಬಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಪ್​ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಪ್​ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ ಎಂದು ಡಿಕೆಶಿಗೆ ಟಾಂಗ್‌ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಶ್ವೇತಪತ್ರ ಹೊರಡಿಸಿ: ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ ಎಂದು ಉಪ ಮುಖ್ಯಮಂತ್ರಿಗಳಿಗೆ ನೇರ ಸವಾಲು ಹಾಕಿದ್ದಾರೆ.

ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ: ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ?. ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಅಯ್ಯೋ ದೇವರೇ, ಈ ಸರ್ಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.