ETV Bharat / state

ಎಚ್ಎಎಲ್, ಬಿಇಎಲ್ ಕಾರ್ಮಿಕರ ಡಿಎ ತಡೆಹಿಡಿದ ಆಡಳಿತ ಮಂಡಳಿಗಳು: ಹೈಕೋರ್ಟ್ ತಡೆಯಾಜ್ಞೆ - High Court give injunction

ಎಚ್ಎಎಲ್ ಮತ್ತು ಬಿಇಎಲ್ ಕಾರ್ಮಿಕರ ಡಿಎ ತಡೆಹಿಡಿಯುವಂತೆ ಆದೇಶಿಸಿದ ಆಡಳಿತ ಮಂಡಳಿಗಳಿಗೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಬಿಇಎಲ್ ಹಾಗೂ ಎಚ್ಎಎಲ್ ಕಾರ್ಮಿಕರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಈ ತಡೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Dec 23, 2020, 7:25 PM IST

ಬೆಂಗಳೂರು: ಕಾರ್ಮಿಕರ ತುಟ್ಟಿಭತ್ಯೆ (ಡಿಎ) ತಡೆಹಿಡಿದಿದ್ದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಹಾಗೂ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ನ ಆದೇಶಗಳಿಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.

ಬಿಇಎಲ್ ಹಾಗೂ ಎಚ್ಎಎಲ್ ಕಾರ್ಮಿಕರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಈ ತಡೆ ನೀಡಿದೆ. ಅಲ್ಲದೇ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಇಲಾಖೆ, ಎಚ್ಎಎಲ್ ಮತ್ತು ಬಿಇಎಲ್ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಓದಿ:ಅಕ್ರಮ ವಿದ್ಯುತ್​ ಸಂಪರ್ಕ ಪ್ರಶ್ನಿಸಿದ ಸೆಸ್ಕ್​ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ

2020 ರ ಜನವರಿ 1ರಿಂದ ಈವರೆಗಿನ ತುಟ್ಟಿಭತ್ಯೆಯನ್ನು 2021ರ ಜನವರಿಯಿಂದ ಮಾರ್ಚ್ ಒಳಗೆ ಉದ್ಯೋಗಿಗಳಿಗೆ ನೀಡಬೇಕಿತ್ತು. ಆದರೆ, ಈ ಮೊತ್ತವನ್ನು ತಡೆ ಹಿಡಿದಿರುವುದಾಗಿ ಆಡಳಿತ ಮಂಡಳಿಗಳು ತಿಳಿಸಿದ್ದವು. ಈ ಹಿನ್ನೆಲೆ ಕಾರ್ಮಿಕರ ಸಂಘಗಳು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿವೆ.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಈ ನಿಯಮವು ಕಾರ್ಯನಿರ್ವಾಹಕ ಹುದ್ದೆಯಲ್ಲಿರುವ ಅಧಿಕಾರಿಗಳು ಹಾಗೂ ಅಸಂಘಟಿತ ಸೂಪರ್ವೈಸರ್ ಗಳಿಗೆ ಮಾತ್ರ ಅನ್ವಯಿಸುತ್ತಿದೆ. ಕಾರ್ಮಿಕರಿಗೆ ಅನ್ವಯಿಸುವುದಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ ಎಂದರು.

ಬೆಂಗಳೂರು: ಕಾರ್ಮಿಕರ ತುಟ್ಟಿಭತ್ಯೆ (ಡಿಎ) ತಡೆಹಿಡಿದಿದ್ದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಹಾಗೂ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ನ ಆದೇಶಗಳಿಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.

ಬಿಇಎಲ್ ಹಾಗೂ ಎಚ್ಎಎಲ್ ಕಾರ್ಮಿಕರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಈ ತಡೆ ನೀಡಿದೆ. ಅಲ್ಲದೇ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಇಲಾಖೆ, ಎಚ್ಎಎಲ್ ಮತ್ತು ಬಿಇಎಲ್ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಓದಿ:ಅಕ್ರಮ ವಿದ್ಯುತ್​ ಸಂಪರ್ಕ ಪ್ರಶ್ನಿಸಿದ ಸೆಸ್ಕ್​ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ

2020 ರ ಜನವರಿ 1ರಿಂದ ಈವರೆಗಿನ ತುಟ್ಟಿಭತ್ಯೆಯನ್ನು 2021ರ ಜನವರಿಯಿಂದ ಮಾರ್ಚ್ ಒಳಗೆ ಉದ್ಯೋಗಿಗಳಿಗೆ ನೀಡಬೇಕಿತ್ತು. ಆದರೆ, ಈ ಮೊತ್ತವನ್ನು ತಡೆ ಹಿಡಿದಿರುವುದಾಗಿ ಆಡಳಿತ ಮಂಡಳಿಗಳು ತಿಳಿಸಿದ್ದವು. ಈ ಹಿನ್ನೆಲೆ ಕಾರ್ಮಿಕರ ಸಂಘಗಳು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿವೆ.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಈ ನಿಯಮವು ಕಾರ್ಯನಿರ್ವಾಹಕ ಹುದ್ದೆಯಲ್ಲಿರುವ ಅಧಿಕಾರಿಗಳು ಹಾಗೂ ಅಸಂಘಟಿತ ಸೂಪರ್ವೈಸರ್ ಗಳಿಗೆ ಮಾತ್ರ ಅನ್ವಯಿಸುತ್ತಿದೆ. ಕಾರ್ಮಿಕರಿಗೆ ಅನ್ವಯಿಸುವುದಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.