ETV Bharat / state

ಯುವತಿ ವಿಚಾರಕ್ಕೆ ಯುವಕನ ಮರ್ಡರ್​: 8 ತಾಸಲ್ಲೇ ಮೂವರನ್ನು ವಶಕ್ಕೆ ಪಡೆದ ಪೊಲೀಸರು

author img

By

Published : Oct 9, 2021, 12:15 PM IST

Updated : Oct 9, 2021, 1:18 PM IST

ಯುವತಿಯ ವಿಚಾರಕ್ಕೆ ಸಹಪಾಠಿಗಳ ನಡುವೆ ಆರಂಭವಾದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯವಾಗಿತ್ತು. ಇದೀಗ ಘಟನೆ ನಡೆದು 8 ಗಂಟೆಯೊಳಗೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

hal-police-detained-three-in-link-with-murder-case-within-8-hours
ಯುವತಿಯ ವಿಚಾರಕ್ಕೆ ಹತ್ಯೆ ಪ್ರಕರಣ: 8 ಗಂಟೆಯೊಳಗೆ ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್​​, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್​​​ಎಎಲ್​ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಾದ ಲಿಖಿತ್​​ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಲಿಖಿತ್ ಈ ಮೊದಲು ಸಿದ್ದಿಕ್ ಎಂಬಾತನ ಬಳಿ ಸಾಲ ಪಡೆದಿದ್ದ. ಹಣ ವಾಪಸ್​ ಕೇಳಿದಾಗ ಕೊಡದೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಅಲ್ಲದೆ ಈ ಕುರಿತು ಮಾತನಾಡಲು ಆರೋಪಿಗಳಿಗೆ ಲಿಖಿತ್​ ಕರೆ ಮಾಡಿದ್ದ. ಇದಕ್ಕೆ ಆರೋಪಿಗಳು ಅವರೂ ಕೂಡ ಒಪ್ಪಿದ್ದರು.

ಮಾತುಕತೆಗೆ ಬರುವಾಗ ಲಿಖಿತ್​​ ಜತೆ ನವೀನ್ ಮತ್ತು ಕದಿರೇಶ್ ಎಂಬುವರು ಬಂದಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ ಲಿಖಿತ್​​ನನ್ನು ಡ್ರ್ಯಾಗರ್​​ನಿಂದ ಇರಿದು ಆರೋಪಿಗಳು ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ:

ನಯೀಮ್​​ ಮತ್ತು ಲಿಖಿತ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಯುವತಿ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಶುಕ್ರವಾರ ಸಂಜೆ 4 ಗಂಟೆಗೆ ಈ ವಿಚಾರದ ಕುರಿತು ಮಾತನಾಡಲು ನಯೀಮ್​ ನನ್ನು ಹೆಚ್‌ಎಎಲ್​​ನ ಲಾಲ್ ಬಹದ್ದೂರ್ ಶಾಸ್ತ್ರಿ ನಗರಕ್ಕೆ ಬರಲು ಲಿಖಿತ್ ಹೇಳಿದ್ದ. ಈ ವೇಳೆ ಯುವತಿ ವಿಚಾರವಾಗಿ ಇಬ್ಬರೂ ಮಾತುಕತೆ ಪ್ರಾರಂಭಿಸಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು. ಬಳಿಕ ಡ್ರ್ಯಾಗರ್​ನಿಂದ ಲಿಖಿತ್​​​ಗೆ ಇರಿದು ಇಬ್ಬರು ಪರಾರಿಯಾಗಿದ್ದರು.

ಇದನ್ನೂ ಓದಿ: ಬೆಂಗಳೂರು: ಯುವತಿಯ ವಿಚಾರಕ್ಕೆ ಸಹಪಾಠಿಗಳ ಮಧ್ಯೆ ಜಗಳ..ಡ್ರ್ಯಾಗರ್​​ನಿಂದ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್​​, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್​​​ಎಎಲ್​ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಾದ ಲಿಖಿತ್​​ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಲಿಖಿತ್ ಈ ಮೊದಲು ಸಿದ್ದಿಕ್ ಎಂಬಾತನ ಬಳಿ ಸಾಲ ಪಡೆದಿದ್ದ. ಹಣ ವಾಪಸ್​ ಕೇಳಿದಾಗ ಕೊಡದೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಅಲ್ಲದೆ ಈ ಕುರಿತು ಮಾತನಾಡಲು ಆರೋಪಿಗಳಿಗೆ ಲಿಖಿತ್​ ಕರೆ ಮಾಡಿದ್ದ. ಇದಕ್ಕೆ ಆರೋಪಿಗಳು ಅವರೂ ಕೂಡ ಒಪ್ಪಿದ್ದರು.

ಮಾತುಕತೆಗೆ ಬರುವಾಗ ಲಿಖಿತ್​​ ಜತೆ ನವೀನ್ ಮತ್ತು ಕದಿರೇಶ್ ಎಂಬುವರು ಬಂದಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ ಲಿಖಿತ್​​ನನ್ನು ಡ್ರ್ಯಾಗರ್​​ನಿಂದ ಇರಿದು ಆರೋಪಿಗಳು ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ:

ನಯೀಮ್​​ ಮತ್ತು ಲಿಖಿತ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಯುವತಿ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಶುಕ್ರವಾರ ಸಂಜೆ 4 ಗಂಟೆಗೆ ಈ ವಿಚಾರದ ಕುರಿತು ಮಾತನಾಡಲು ನಯೀಮ್​ ನನ್ನು ಹೆಚ್‌ಎಎಲ್​​ನ ಲಾಲ್ ಬಹದ್ದೂರ್ ಶಾಸ್ತ್ರಿ ನಗರಕ್ಕೆ ಬರಲು ಲಿಖಿತ್ ಹೇಳಿದ್ದ. ಈ ವೇಳೆ ಯುವತಿ ವಿಚಾರವಾಗಿ ಇಬ್ಬರೂ ಮಾತುಕತೆ ಪ್ರಾರಂಭಿಸಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು. ಬಳಿಕ ಡ್ರ್ಯಾಗರ್​ನಿಂದ ಲಿಖಿತ್​​​ಗೆ ಇರಿದು ಇಬ್ಬರು ಪರಾರಿಯಾಗಿದ್ದರು.

ಇದನ್ನೂ ಓದಿ: ಬೆಂಗಳೂರು: ಯುವತಿಯ ವಿಚಾರಕ್ಕೆ ಸಹಪಾಠಿಗಳ ಮಧ್ಯೆ ಜಗಳ..ಡ್ರ್ಯಾಗರ್​​ನಿಂದ ಯುವಕನ ಬರ್ಬರ ಹತ್ಯೆ

Last Updated : Oct 9, 2021, 1:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.