ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಡಿ, ಕೊರೊನಾದ ಅಂಧಕಾರ ಜಗತ್ತನ್ನೇ ಬಾಧಿಸಿದೆ. ಈ ದೀಪಾವಳಿ ಅದೆಲ್ಲವನ್ನೂ ನಿವಾರಿಸಿ ನಿಮ್ಮ ಬದುಕಿನ ಎಲ್ಲಾ ಸಂಕಷ್ಟಗಳನ್ನು ದೂರ ಮಾಡಿ ಸಂತೋಷ, ಸಮೃದ್ಧಿ, ಆರೋಗ್ಯ ಹಾಗೂ ಸಂಪತ್ತನ್ನು ಕರುಣಿಸಲಿ ಎಂದು ನಾಡಿನ ಜನರ ಪರವಾಗಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಇನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಅಂಧಕಾರ ತೊಲಗಲಿ. ಎಲ್ಲರ ಮನೆ ಮನದಲ್ಲಿ ನಂದಾದೀಪ ಬೆಳಗಲಿ. ಸರ್ವರಿಗೂ ಬೆಳಕಿನ ಹಬ್ಬ ದೀಪಾವಳಿ ಸುಖ-ಸಮೃದ್ಧಿ ತರಲಿ ಎಂದು ಹಾರೈಸಿದ್ದಾರೆ.