ETV Bharat / state

ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ: ದೇವೇಗೌಡ - HD Devegowda

ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಖಂಡಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗಿದ್ದಾರೆ.

ಹೆಚ್.ಡಿ.ದೇವೇಗೌಡರ
ಹೆಚ್.ಡಿ.ದೇವೇಗೌಡರ
author img

By

Published : Aug 12, 2020, 12:22 PM IST

ಬೆಂಗಳೂರು: ಡಿ.ಜೆ ಹಳ್ಳಿ ಗಲಭೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ, ಎಲ್ಲರಿಗೂ ನಷ್ಟ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು, ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ದೇವೇಗೌಡರು ಮನವಿ ಮಾಡಿದ್ದಾರೆ.

ಹೆಚ್.ಡಿ.ದೇವೇಗೌಡರ ಟ್ವೀಟ್
ಹೆಚ್.ಡಿ.ದೇವೇಗೌಡರ ಟ್ವೀಟ್

ಸಿದ್ದರಾಮಯ್ಯನವರಿಗೆ ಶುಭ ಕೋರಿದ ಹೆಚ್​​ಡಿಡಿ:

ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಆತ್ಮೀಯರು ಆದ ಸಿದ್ದರಾಮಯ್ಯನವರಿಗೆ ಜನುಮದಿನದ ಶುಭಾಶಯಗಳು ಎಂದು ಶುಭ ಕೋರಿದ್ದಾರೆ. ಸುಖ ಶಾಂತಿ ನೆಮ್ಮದಿ ಆರೋಗ್ಯ ಮತ್ತು ಯಶಸ್ಸು ಸದಾ ನಿಮ್ಮೊಂದಿಗಿರಲಿ ಎಂದು ದೇವೇಗೌಡರು ಹಾರೈಸಿದ್ದಾರೆ.

ಬೆಂಗಳೂರು: ಡಿ.ಜೆ ಹಳ್ಳಿ ಗಲಭೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ, ಎಲ್ಲರಿಗೂ ನಷ್ಟ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು, ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ದೇವೇಗೌಡರು ಮನವಿ ಮಾಡಿದ್ದಾರೆ.

ಹೆಚ್.ಡಿ.ದೇವೇಗೌಡರ ಟ್ವೀಟ್
ಹೆಚ್.ಡಿ.ದೇವೇಗೌಡರ ಟ್ವೀಟ್

ಸಿದ್ದರಾಮಯ್ಯನವರಿಗೆ ಶುಭ ಕೋರಿದ ಹೆಚ್​​ಡಿಡಿ:

ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಆತ್ಮೀಯರು ಆದ ಸಿದ್ದರಾಮಯ್ಯನವರಿಗೆ ಜನುಮದಿನದ ಶುಭಾಶಯಗಳು ಎಂದು ಶುಭ ಕೋರಿದ್ದಾರೆ. ಸುಖ ಶಾಂತಿ ನೆಮ್ಮದಿ ಆರೋಗ್ಯ ಮತ್ತು ಯಶಸ್ಸು ಸದಾ ನಿಮ್ಮೊಂದಿಗಿರಲಿ ಎಂದು ದೇವೇಗೌಡರು ಹಾರೈಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.