ETV Bharat / state

'ನಾನು ಹಿಟ್ ಅಂಡ್​ ರನ್ ವ್ಯಕ್ತಿಯಲ್ಲ', ದೆಹಲಿಯಲ್ಲೇ ದಾಖಲೆ ಬಿಡುಗಡೆ ಮಾಡ್ತೇನಿ: ಮಾಜಿ ಸಿಎಂ ಹೆಚ್​ಡಿಕೆ

author img

By

Published : Aug 5, 2023, 2:15 PM IST

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

HD Kumaraswamy
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ನಾನು ಹಿಟ್ ಅಂಡ್​ ರನ್ ವ್ಯಕ್ತಿಯಲ್ಲ, ಯಾವತ್ತೂ ಕೂಡ ನಾನು ಆ ರೀತಿ ಮಾಡಿದವನಲ್ಲ. ಕಾಂಗ್ರೆಸ್​ನವರು ನನ್ನ ಹೆಸರೇಳಿ ಹಿಟ್ ಅಂಡ್​ ರನ್ ಅಂತಾರೆ. ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಹಿಂದೆ ಪೇ ಸಿಎಂ ಅಂತಾ ಪೋಸ್ಟರ್ ಬೇರೆ ಅಂಟಿಸಿದ್ದರು. ಎಲ್ಲದಕ್ಕೂ ದಾಖಲೆ ಕೊಡ ಅಂತಾ ಹೇಳುತ್ತಿದ್ದರು. ಆದರೆ ಅವರೀಗ ಮಾಡ್ತಿರೋದು ಏನು?. ಅವರ ಯಾವುದೇ ಆರೋಪಗಳಿಗೆ ದಾಖಲೆಗಳಿವೆಯಾ? ಎಂದು ಕಾಂಗ್ರೆಸ್​ ನಾಯಕರ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರ ರಚನೆಯಾಗಿ ಎರಡು ತಿಂಗಳಾಯ್ತು. ನಾನು ವಿದೇಶ ಪ್ರವಾಸದಲ್ಲಿದ್ದೆ. ಮಾಧ್ಯಮಗಳ ಸುದ್ದಿಗಳನ್ನು ನಾನು‌ ಗಮನಿಸಿದ್ದೇನೆ. ಜಯಚಂದ್ರ ಅವರಿಗೆ ಬೆದರಿಕೆ ಹಾಕಿದವರು ಯಾರು? ಜಯಚಂದ್ರ ಅವರು ದೆಹಲಿ ಉಸ್ತುವಾರಿ ಕಾರ್ಯದರ್ಶಿ, ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದು ಯಾರು? ಹಲವು ಕರೆಗಳು ಅವರಿಗೆ ಬಂದಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು‌ ಬಾಹಿರ ಚಟುವಟಿಕೆ ನಡೆದಿವೆ. ನೈಸ್ ರಸ್ತೆ ವಿಚಾರದಲ್ಲಿ ನೀವೇ ರಿಪೋರ್ಟ್ ಕೊಟ್ಟಿದ್ದೀರಿ. ನಾನು ನಿನ್ನೆ, ಇಂದು ಜಾಹೀರಾತು ಗಮನಿಸಿದ್ದೇನೆ. ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ಕೊಟ್ಟಿದ್ದಾರೆ. ಯಾವ ರೀತಿ ನುಡಿದಂತೆ ನಡೆದಿದ್ದೀರ ಹೇಳಿ ಎಂದ ಹೆಚ್​​ಡಿಕೆ, ಉಚಿತ ವಿದ್ಯುತ್ ಕೊಟ್ಟ ಮೇಲೆ ಬೆಳಕು ಕಂಡ್ರಾ? ಇಲ್ಲಿಯವರೆಗೆ ಜ‌ನ ಕರೆಂಟ್ ನೋಡಿರಲಿಲ್ವೇ? ಗೃಹ ಜ್ಯೋತಿ ಸ್ಕೀಂನಲ್ಲಿ ಗೈಡ್ ಲೈನ್ಸ್ ಹಾಕಿದ್ರು. ಗೈಡ್ ಲೈನ್ಸ್​ಗೆ ನಮ್ಮದೇನೂ ‌ತಕರಾರಿಲ್ಲ. ಕೆಲವರು 200 ಯೂನಿಟ್ ಮೇಲೆ ಯೂಸ್ ಮಾಡ್ತಿದ್ರು. ಇವರು ನಿಯಮಗಳನ್ನು ಘೋಷಣೆ ಮಾಡಿದ ಮೇಲೆ ವಿದ್ಯುತ್​ ಬಳಕೆ ಕಡಿಮೆ ಮಾಡಿದ್ದಾರೆ. ಉಚಿತ ನಮಗೂ ಸಿಗುತ್ತೆ ಅಂತಾ ಕಡಿಮೆ ಮಾಡಿದ್ದಾರೆ. ಈಗ 230 ಯೂನಿಟ್​ಗೆ ಬಿಲ್ ಕಳುಹಿಸಿದ್ದಾರೆ. ಯಾವ ಕಾರಣಕ್ಕೆ ನೀವು ಬಿಲ್ ಕಳಿಸಿದ್ರಿ. 50, 60 ಯೂನಿಟ್ ವಿದ್ಯುತ್ ಬಳಸ್ತಿದ್ರು. ಅವರಿಗೆ 10% ಹೆಚ್ಚುವರಿ ಕೊಟ್ರು. ಈಗ ಅವರಿಗೂ 250 ರೂ.ಬಿಲ್ ಕಳುಹಿಸಿದ್ದಾರೆ. ಸದ್ಯ ಕಲಬುರಗಿಗೆ ಹೋಗಿದ್ದಾರೆ. ಉಚಿತ ಬಿಲ್ ಕೊಡೋಕೆ ಅಲ್ಲಿ ಹೋಗಿದ್ದಾರೆ ಎಂದು ತಿಳಿಸಿದರು.

2020-21ರಲ್ಲಿ 15% ಕಮೀಷನ್ ಕೊಡಿ ಅಂದಿದ್ದಾರೆ. ಬಿಡಿಎನಲ್ಲಿ ಕಮಿಷನ್ ಕೊಡಿ ಎಂದಿದ್ದಾರೆ. ಈಗ ಒಬ್ಬರು‌ ಅಡ್ವೈಸರ್ ಅನ್ನೂ ಇಟ್ಟುಕೊಂಡಿದ್ದಾರೆ. ಅವರಿಗೆ ತಲುಪಿಸಿ ಆಮೇಲೆ ಆರ್ಡರ್ ಕೊಡಿ ಅಂತಾರೆ. ನಿಮ್ಮ ಆ್ಯಕ್ಟಿವಿಟೀಸ್ ನೊಡೋಕೆ ಕ್ಯಾಮರಾ ಇಡ್ಲಾ? ಇವರು ಏನ್ಮಾಡ್ತಾರೆ ಅಂತ ನೊಡೋಕೆ ನಾನು ಪ್ರತಿದಿನ ಕ್ಯಾಮರಾ ಇಟ್ಟುಕೊಂಡು ಹೋಗ್ಲಾ? ಎಂದು ಡಿಸಿಎಂ ಡಿಕೆಶಿ ವಿರುದ್ಧ ಹೆಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷ ಅಬಕಾರಿ, ಸ್ಟ್ಯಾಂಪ್ ಡ್ಯೂಟಿಯಲ್ಲಿ ಹಣ ಬಂದಿದೆ. ಡೆವಲಪ್​ಮೆಂಟ್​ಗೆ ನಿಮಗೆ ತೊಂದರೆ ಏನಿದೆ. ಅನುದಾನ ಕೊಡಲು ನಿಮಗೆ ತೊಂದರೆಯೇನು?. ನಿಮ್ಮ 34 ಜನ ಶಾಸಕರು ಪತ್ರ ಬರೆದಿದ್ದೇಕೆ?. ಸಿಎಂ, ಸಚಿವರು ಎಲ್ಲಿದ್ದೀರಪ್ಪ? ಈಗ ವರ್ಗಾವಣೆ ಬಗ್ಗೆ ಮಾತಮಾಡಲು ಅಸಹಾಯಕರಾಗಿದ್ದಾರೆ ಎಂದರು.

ಇದನ್ನೂ ಓದಿ: ಕೋರ್ಟ್​ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ: ಮಹಿಳೆಯರ ಪರ್ಸ್ ಕದಿಯೋಕೆ ಹೋಗಿ ಸಿಕ್ಕಾಕೊಂಡ

ಪರಮೇಶ್ವರ್ ಬಗ್ಗೆ ನನಗೆ ಗೌರವವಿತ್ತು. ಅವರ ಜೊತೆ ನಾನು ‌ಕೆಲಸ ಮಾಡಿದ್ದೆ. ಬಿಡಿಎ ವಿಚಾರದಲ್ಲಿ ನಾನು ಕೈಹಾಕಿರಲಿಲ್ಲ. ಪೊಲೀಸ್ ವಿಚಾರ ಡಿಜಿಗೆ ಬಿಟ್ಟಿದ್ದೆ. ಹಿಂದೆ ನಾವು ಇಂಟರ್ ಫಿಯರ್ ಆಗಿರಲಿಲ್ಲ. ಇದೀಗ ಹಿಟ್ ಆ್ಯಂಡ್ ರನ್ ಅಂತ ಹೇಳ್ತೀರ ಎಂದು ಪರಮೇಶ್ವರ್ ವಿರುದ್ಧ ಹೆಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ನಾನು ಹಿಟ್ ಅಂಡ್​ ರನ್ ವ್ಯಕ್ತಿಯಲ್ಲ, ಯಾವತ್ತೂ ಕೂಡ ನಾನು ಆ ರೀತಿ ಮಾಡಿದವನಲ್ಲ. ಕಾಂಗ್ರೆಸ್​ನವರು ನನ್ನ ಹೆಸರೇಳಿ ಹಿಟ್ ಅಂಡ್​ ರನ್ ಅಂತಾರೆ. ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಹಿಂದೆ ಪೇ ಸಿಎಂ ಅಂತಾ ಪೋಸ್ಟರ್ ಬೇರೆ ಅಂಟಿಸಿದ್ದರು. ಎಲ್ಲದಕ್ಕೂ ದಾಖಲೆ ಕೊಡ ಅಂತಾ ಹೇಳುತ್ತಿದ್ದರು. ಆದರೆ ಅವರೀಗ ಮಾಡ್ತಿರೋದು ಏನು?. ಅವರ ಯಾವುದೇ ಆರೋಪಗಳಿಗೆ ದಾಖಲೆಗಳಿವೆಯಾ? ಎಂದು ಕಾಂಗ್ರೆಸ್​ ನಾಯಕರ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರ ರಚನೆಯಾಗಿ ಎರಡು ತಿಂಗಳಾಯ್ತು. ನಾನು ವಿದೇಶ ಪ್ರವಾಸದಲ್ಲಿದ್ದೆ. ಮಾಧ್ಯಮಗಳ ಸುದ್ದಿಗಳನ್ನು ನಾನು‌ ಗಮನಿಸಿದ್ದೇನೆ. ಜಯಚಂದ್ರ ಅವರಿಗೆ ಬೆದರಿಕೆ ಹಾಕಿದವರು ಯಾರು? ಜಯಚಂದ್ರ ಅವರು ದೆಹಲಿ ಉಸ್ತುವಾರಿ ಕಾರ್ಯದರ್ಶಿ, ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದು ಯಾರು? ಹಲವು ಕರೆಗಳು ಅವರಿಗೆ ಬಂದಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು‌ ಬಾಹಿರ ಚಟುವಟಿಕೆ ನಡೆದಿವೆ. ನೈಸ್ ರಸ್ತೆ ವಿಚಾರದಲ್ಲಿ ನೀವೇ ರಿಪೋರ್ಟ್ ಕೊಟ್ಟಿದ್ದೀರಿ. ನಾನು ನಿನ್ನೆ, ಇಂದು ಜಾಹೀರಾತು ಗಮನಿಸಿದ್ದೇನೆ. ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ಕೊಟ್ಟಿದ್ದಾರೆ. ಯಾವ ರೀತಿ ನುಡಿದಂತೆ ನಡೆದಿದ್ದೀರ ಹೇಳಿ ಎಂದ ಹೆಚ್​​ಡಿಕೆ, ಉಚಿತ ವಿದ್ಯುತ್ ಕೊಟ್ಟ ಮೇಲೆ ಬೆಳಕು ಕಂಡ್ರಾ? ಇಲ್ಲಿಯವರೆಗೆ ಜ‌ನ ಕರೆಂಟ್ ನೋಡಿರಲಿಲ್ವೇ? ಗೃಹ ಜ್ಯೋತಿ ಸ್ಕೀಂನಲ್ಲಿ ಗೈಡ್ ಲೈನ್ಸ್ ಹಾಕಿದ್ರು. ಗೈಡ್ ಲೈನ್ಸ್​ಗೆ ನಮ್ಮದೇನೂ ‌ತಕರಾರಿಲ್ಲ. ಕೆಲವರು 200 ಯೂನಿಟ್ ಮೇಲೆ ಯೂಸ್ ಮಾಡ್ತಿದ್ರು. ಇವರು ನಿಯಮಗಳನ್ನು ಘೋಷಣೆ ಮಾಡಿದ ಮೇಲೆ ವಿದ್ಯುತ್​ ಬಳಕೆ ಕಡಿಮೆ ಮಾಡಿದ್ದಾರೆ. ಉಚಿತ ನಮಗೂ ಸಿಗುತ್ತೆ ಅಂತಾ ಕಡಿಮೆ ಮಾಡಿದ್ದಾರೆ. ಈಗ 230 ಯೂನಿಟ್​ಗೆ ಬಿಲ್ ಕಳುಹಿಸಿದ್ದಾರೆ. ಯಾವ ಕಾರಣಕ್ಕೆ ನೀವು ಬಿಲ್ ಕಳಿಸಿದ್ರಿ. 50, 60 ಯೂನಿಟ್ ವಿದ್ಯುತ್ ಬಳಸ್ತಿದ್ರು. ಅವರಿಗೆ 10% ಹೆಚ್ಚುವರಿ ಕೊಟ್ರು. ಈಗ ಅವರಿಗೂ 250 ರೂ.ಬಿಲ್ ಕಳುಹಿಸಿದ್ದಾರೆ. ಸದ್ಯ ಕಲಬುರಗಿಗೆ ಹೋಗಿದ್ದಾರೆ. ಉಚಿತ ಬಿಲ್ ಕೊಡೋಕೆ ಅಲ್ಲಿ ಹೋಗಿದ್ದಾರೆ ಎಂದು ತಿಳಿಸಿದರು.

2020-21ರಲ್ಲಿ 15% ಕಮೀಷನ್ ಕೊಡಿ ಅಂದಿದ್ದಾರೆ. ಬಿಡಿಎನಲ್ಲಿ ಕಮಿಷನ್ ಕೊಡಿ ಎಂದಿದ್ದಾರೆ. ಈಗ ಒಬ್ಬರು‌ ಅಡ್ವೈಸರ್ ಅನ್ನೂ ಇಟ್ಟುಕೊಂಡಿದ್ದಾರೆ. ಅವರಿಗೆ ತಲುಪಿಸಿ ಆಮೇಲೆ ಆರ್ಡರ್ ಕೊಡಿ ಅಂತಾರೆ. ನಿಮ್ಮ ಆ್ಯಕ್ಟಿವಿಟೀಸ್ ನೊಡೋಕೆ ಕ್ಯಾಮರಾ ಇಡ್ಲಾ? ಇವರು ಏನ್ಮಾಡ್ತಾರೆ ಅಂತ ನೊಡೋಕೆ ನಾನು ಪ್ರತಿದಿನ ಕ್ಯಾಮರಾ ಇಟ್ಟುಕೊಂಡು ಹೋಗ್ಲಾ? ಎಂದು ಡಿಸಿಎಂ ಡಿಕೆಶಿ ವಿರುದ್ಧ ಹೆಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷ ಅಬಕಾರಿ, ಸ್ಟ್ಯಾಂಪ್ ಡ್ಯೂಟಿಯಲ್ಲಿ ಹಣ ಬಂದಿದೆ. ಡೆವಲಪ್​ಮೆಂಟ್​ಗೆ ನಿಮಗೆ ತೊಂದರೆ ಏನಿದೆ. ಅನುದಾನ ಕೊಡಲು ನಿಮಗೆ ತೊಂದರೆಯೇನು?. ನಿಮ್ಮ 34 ಜನ ಶಾಸಕರು ಪತ್ರ ಬರೆದಿದ್ದೇಕೆ?. ಸಿಎಂ, ಸಚಿವರು ಎಲ್ಲಿದ್ದೀರಪ್ಪ? ಈಗ ವರ್ಗಾವಣೆ ಬಗ್ಗೆ ಮಾತಮಾಡಲು ಅಸಹಾಯಕರಾಗಿದ್ದಾರೆ ಎಂದರು.

ಇದನ್ನೂ ಓದಿ: ಕೋರ್ಟ್​ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ: ಮಹಿಳೆಯರ ಪರ್ಸ್ ಕದಿಯೋಕೆ ಹೋಗಿ ಸಿಕ್ಕಾಕೊಂಡ

ಪರಮೇಶ್ವರ್ ಬಗ್ಗೆ ನನಗೆ ಗೌರವವಿತ್ತು. ಅವರ ಜೊತೆ ನಾನು ‌ಕೆಲಸ ಮಾಡಿದ್ದೆ. ಬಿಡಿಎ ವಿಚಾರದಲ್ಲಿ ನಾನು ಕೈಹಾಕಿರಲಿಲ್ಲ. ಪೊಲೀಸ್ ವಿಚಾರ ಡಿಜಿಗೆ ಬಿಟ್ಟಿದ್ದೆ. ಹಿಂದೆ ನಾವು ಇಂಟರ್ ಫಿಯರ್ ಆಗಿರಲಿಲ್ಲ. ಇದೀಗ ಹಿಟ್ ಆ್ಯಂಡ್ ರನ್ ಅಂತ ಹೇಳ್ತೀರ ಎಂದು ಪರಮೇಶ್ವರ್ ವಿರುದ್ಧ ಹೆಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.