ಬೆಂಗಳೂರು : ಕಾಸರಗೋಡು ಮತ್ತು ಮಂಜೇಶ್ವರದಲ್ಲಿರುವ ಕನ್ನಡ ಭಾಷೆಯ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಿಸುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ಮಾಧ್ಯಮಗಳ ಮೂಲಕ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಭಾಷೆಯಲ್ಲಿನ ಗ್ರಾಮಗಳ ಹೆಸರನ್ನು ಬದಲಿಸುವ ಬಗ್ಗೆ ಗಮನಕ್ಕೆ ಬಂದಿದೆ. ಈ ಪ್ರಕ್ರಿಯು ನಿಜಕ್ಕೂ ಸತ್ಯವೇ ಅಗಿದ್ದರೆ, ಇದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
![HD Kumaraswamy urges Pinarayi Vijayan to halt process of renaming villages in Kerala](https://etvbharatimages.akamaized.net/etvbharat/prod-images/kn-bng-06-hdk-letter-to-kerala-cm-script-7208083_28062021221548_2806f_1624898748_1033.jpg)
ಭಾಷಾ ಸಾಮರಸ್ಯ ಮತ್ತು ಸಾಂಸ್ಕೃತಿಕ ಸಹಬಾಳ್ವೆಯಿಂದ ಕೂಡಿರುವ ವಾತಾವರಣವನ್ನು ಹದಗಡೆಸುವುದು ಸೂಕ್ತವಲ್ಲ ಎಂದು ಹೆಚ್ಡಿಕೆ ಅಭಿಪ್ರಾಯಪಟ್ಟಿದ್ದು, ಕಾಸರಗೋಡು, ಕೇರಳದ ಭಾಗವಾಗಿದ್ದರೂ ದಶಕಗಳಿಂದ ಕರ್ನಾಟಕದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ ಎಂದು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಐಟಿ ಆ್ಯಕ್ಟ್ ನಂತರ ಟ್ವಿಟರ್ ಮತ್ತೊಂದು ಕ್ಯಾತೆ: ಪ್ರಕಟಿಸಿದ್ದ ಮ್ಯಾಪ್ ಡಿಲೀಟ್!
ಅಲ್ಲದೇ, ಈ ಪ್ರದೇಶದ ಜನರು ಯಾವಾಗಲು ಪರಸ್ಪರ ಭಾಷಾ ಪರಂಪರೆಯನ್ನು ಹೊಂದಿದ್ದಾರೆ. ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವುದು ಉತ್ತಮ. ಹೆಸರು ಬದಲಾವಣೆಯು ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ವಾದವಿದೆ. ಆದರೆ, ಹಳ್ಳಿಯ ಹೆಸರುಗಳು ಮೂಲ ಕನ್ನಡ ಪರಿಮಳವನ್ನು ಉಳಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಹೆಚ್ಡಿಕೆ ಮನವಿ ಮಾಡಿದ್ದಾರೆ.