ಬೆಂಗಳೂರು: ಭಾರತೀಯ ವಾಯುಸೇನೆಯ ತರಬೇತಿ ಕೇಂದ್ರದ ನೂತನ ಮುಖ್ಯಸ್ಥ ಏರ್ ಮಾರ್ಷಲ್ ಆರ್.ಡಿ ಮಾಥುರ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಅಕ್ಟೋಬರ್ 1ರಂದು ಬೆಂಗಳೂರಿನ ಭಾರತೀಯ ವಾಯುಸೇನೆಯ ತರಬೇತಿ ಕೇಂದ್ರದ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಆರ್.ಡಿ.ಮಾಥುರ್ ಅಧಿಕಾರ ಸ್ವೀಕಾರ ಮಾಡಿದ್ದು, ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದರು.
ಶಿಷ್ಟಾಚಾರದಂತೆ ಉಭಯ ಕುಶಲೋಪರಿ ವಿಚಾರಿಸಿ ಪರಸ್ಪರ ಸಹಕಾರದ ಮಾತುಕತೆ ನಡೆಸಿದರು.