ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗಳಿಗೆ ಬಾರದಂತೆ ಆರೋಗ್ಯ ಇಲಾಖೆ ಸೂಚಿಸಿದೆ.
![Health Department instructs patients not to be hospitalized for minor illness](https://etvbharatimages.akamaized.net/etvbharat/prod-images/6458739_thumbn.jpg)
ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ತುರ್ತು ಅಗತ್ಯ ಇದ್ದವರು ಮಾತ್ರ ಬರಬೇಕು. ಎರಡು ವಾರ ಅಥವಾ ಮುಂದಿನ ಆದೇಶದವರೆಗೆ ರೋಗಿಗಳು ಈ ಕ್ರಮವನ್ನು ಪಾಲಿಸುವಂತೆ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆ.