ETV Bharat / state

ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

author img

By

Published : May 7, 2022, 9:03 PM IST

ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಸಂಜೆ 6 ಗಂಟೆಯ ನಂತರ ಧಾರಾಕಾರ ಮಳೆ ಸುರಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

heavy-rain-in-bengaluru
ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದೆ. ನಗರದ ಹಲವೆಡೆ ಕೂಡ ಶನಿವಾರ ಭಾರಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿತ್ತು. ಹಲವು ಬಡಾವಣೆಗಳಲ್ಲಿ ಸಂಜೆ 6 ಗಂಟೆಯ ನಂತರ ಧಾರಾಕಾರವಾಗಿ ಮಳೆ ಸುರಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಸಂಚಾರ ಅಸ್ತವ್ಯಸ್ತ: ಸಂಜೆ ಆರಂಭವಾದ ಮಳೆ ರಾತ್ರಿಯವರೆಗೆ ಸುರಿಯುವ ಸಾಧ್ಯತೆಯಿದೆ. ರಸ್ತೆಗಳ ಮೇಲೆ 2ರಿಂದ 3 ಅಡಿ ನೀರು ನಿಂತಿದೆ. ಪ್ರಮುಖ ರಸ್ತೆಗಳಲ್ಲಿ ಮರಗಳ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದರಿಂದ ನಗರದ ಹಲವು ಬಡಾವಣೆಗಳಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ.

ಎಲ್ಲೆಲ್ಲಿ ಮಳೆ: ಇಂದಿರಾನಗರ, ಉತ್ತರಹಳ್ಳಿ, ಚಾಲುಕ್ಯ ವೃತ್ತ, ವಿಧಾನ ಸೌಧ, ಮಲ್ಲೇಶ್ವರ, ಸದಾಶಿವನಗರ, ಸೇರಿ ಹಲವೆಡೆ ಮಳೆ ಸುರಿದಿದ್ದು. ಮರದ ಕೊಂಬೆಗಳು ಮುರಿದು ಬಿದ್ದಿದ್ದು, ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಗೋಮೂತ್ರ ಸಿಂಪಡಿಸಿ ಆಪ್​ ಕಚೇರಿ ಶುದ್ಧೀಕರಣ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದೆ. ನಗರದ ಹಲವೆಡೆ ಕೂಡ ಶನಿವಾರ ಭಾರಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿತ್ತು. ಹಲವು ಬಡಾವಣೆಗಳಲ್ಲಿ ಸಂಜೆ 6 ಗಂಟೆಯ ನಂತರ ಧಾರಾಕಾರವಾಗಿ ಮಳೆ ಸುರಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಸಂಚಾರ ಅಸ್ತವ್ಯಸ್ತ: ಸಂಜೆ ಆರಂಭವಾದ ಮಳೆ ರಾತ್ರಿಯವರೆಗೆ ಸುರಿಯುವ ಸಾಧ್ಯತೆಯಿದೆ. ರಸ್ತೆಗಳ ಮೇಲೆ 2ರಿಂದ 3 ಅಡಿ ನೀರು ನಿಂತಿದೆ. ಪ್ರಮುಖ ರಸ್ತೆಗಳಲ್ಲಿ ಮರಗಳ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದರಿಂದ ನಗರದ ಹಲವು ಬಡಾವಣೆಗಳಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ.

ಎಲ್ಲೆಲ್ಲಿ ಮಳೆ: ಇಂದಿರಾನಗರ, ಉತ್ತರಹಳ್ಳಿ, ಚಾಲುಕ್ಯ ವೃತ್ತ, ವಿಧಾನ ಸೌಧ, ಮಲ್ಲೇಶ್ವರ, ಸದಾಶಿವನಗರ, ಸೇರಿ ಹಲವೆಡೆ ಮಳೆ ಸುರಿದಿದ್ದು. ಮರದ ಕೊಂಬೆಗಳು ಮುರಿದು ಬಿದ್ದಿದ್ದು, ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಗೋಮೂತ್ರ ಸಿಂಪಡಿಸಿ ಆಪ್​ ಕಚೇರಿ ಶುದ್ಧೀಕರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.