ETV Bharat / state

ಹೆಬ್ಬಾಳ ವಿಧಾನಸಭಾ ಮತಕ್ಷೇತ್ರ: ಹೇಗಿದೆ ಈ ಬಾರಿ ಜಿದ್ದಾಜಿದ್ದು?

author img

By

Published : Mar 23, 2023, 2:27 PM IST

ಬೆಂಗಳೂರಿನ 28 ವಿಧಾನಸಭಾ ಮತಕ್ಷೇತ್ರಗಳಲ್ಲಿ ಹೆಬ್ಬಾಳ ಮತಕ್ಷೇತ್ರ ಕೂಡ ಒಂದು. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ರಾಜಕೀಯ ಲೆಕ್ಕಾಚಾರ ಜೋರಾಗಿದೆ. ಕ್ಷೇತ್ರದಲ್ಲಿ ಈಗಾಗಲೇ ಮೂರು ರಾಜಕೀಯ ಪಕ್ಷಗಳು ಮತಬೇಟೆಗೆ ಇಳಿದಿವೆ.

Hebbal Assembly Constituency
Hebbal Assembly Constituency

ಬೆಂಗಳೂರು: ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿದ್ದಂತೆಯೇ ರಾಜ್ಯ ವಿಧಾನಸಭಾ ಚುನಾವಣೆ ಕಾವೂ ಸಹ ಏರತೊಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚುನಾವಣೆ ಜ್ವರ ಆರಂಭವಾಗಿದ್ದು, ಕ್ಷೇತ್ರಗಳಲ್ಲೂ ಆಕಾಂಕ್ಷಿ ಅಭ್ಯರ್ಥಿಗಳು ಮತಬೇಟೆಗೆ ಇಳಿದಿದ್ದಾರೆ. ಅದೇ ರೀತಿ ಬೆಂಗಳೂರಿನಲ್ಲೂ ಚುನಾವಣೆ ಕಾವೇರುತ್ತಿದೆ.

Hebbal Assembly Constituency
ಕಳೆದ ಮೂರು ವರ್ಷಗಳ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಆಸ್ತಿ ಮತ್ತು ಕ್ರಿಮಿನಲ್ ದಾಖಲೆಗಳ ವಿವರಣೆ

ಕ್ಷೇತ್ರವಾರು ನೋಡುವುದಾದರೆ, ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಹೆಬ್ಬಾಳವೂ ಒಂದು. ಮೊದಲು ಹೆಬ್ಬಾಳ ಮಹಾನಗರ ಪಾಲಿಕೆ ವ್ಯಾಪ್ತಿಯ ಕೊನೇಯ ಪ್ರದೇಶವಾಗಿತ್ತು. ಆದರೆ, ಇದೀಗ ಯಲಹಂಕವರೆಗೂ ವಿಸ್ತರಿಸಿದೆ. ಕೆರೆಗಳು, ಲುಂಬಿಣಿ ಗಾರ್ಡನ್, ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ಹಲವು ಟೆಕ್ ಪಾರ್ಕ್​ಗಳು, ಫ್ಲೈಓವರ್, ಜಿಕೆವಿಕೆ, ಹೆಬ್ಬಾಳ ಪಶುವಿದ್ಯಾನಿಲಯ ಈ ವ್ಯಾಪ್ತಿಯಲ್ಲಿ ಬರುತ್ತದೆ. ಈ ಕ್ಷೇತ್ರದಲ್ಲಿ ಬೇರೆ ಬೇರೆ ಭಾಷಿಕರು ನೆಲೆಸಿದ್ದಾರೆ. ಮುಖ್ಯವಾಗಿ ನಗರದ ಪ್ರಮುಖ ಪ್ರವೇಶದ್ವಾರವಾಗಿದ್ದು ಏರ್​ಪೋರ್ಟ್, ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಆಂಧ್ರದ ಅನಂತಪುರ ಕಡೆ ಹೋಗಬೇಕಾದರೆ ಇದೇ ರಸ್ತೆ ಮೂಲಕವೇ ಹಾದು ಹೋಗಬೇಕು. ಹೆಬ್ಬಾಳ ಫ್ಲೈಓವರ್ ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಯಲಹಂಕ ಕಡೆ ಹೋಗುವ ಹಾಗೂ ನಗರಕ್ಕೆ ಬರುವ ವಾಹನ ಸವಾರರು ದಿನನಿತ್ಯ ಕಿರಿಕಿರಿ ಅನುಭವಿಸಿಯೇ ಓಡಾಡಬೇಕು. ಇದರ ಪರಿಹಾರಕ್ಕೆ ಫ್ಲೈಓವರ್ ವಿಸ್ತರಣೆ ಮಾಡಬೇಕೆಂಬ ಕೂಗು ಕೇಳಿಬರುತ್ತಿದೆ.

Hebbal Assembly Constituency
ಅಭ್ಯರ್ಥಿಗಳ ನಡುವಿನ ಗೆಲುವಿನ ಅಂತರ

ಕಿರಿದಾದ ರಸ್ತೆ, ಗುಂಡಿ ಬಿದ್ದ ರಸ್ತೆಗಳು, ಸಂಚಾರ ದಟ್ಟಣೆ, ಮೂಲಸೌಕರ್ಯಗಳ ಕೊರತೆ ಕ್ಷೇತ್ರದಲ್ಲಿ ಕಾಣುತ್ತಿದೆ. ಕೆಲವು ವಾರ್ಡ್​ಗಳು ಒಂದಷ್ಟು ಸುಸಜ್ಜಿತವಾಗಿ ಕಂಡರೂ ಬಹುಪಾಲು ಕಡೆ ಸಮಸ್ಯೆ ಎದ್ದು ಕಾಣಿಸುತ್ತಿದೆ. ಇದೇ ಈ ಚುನಾವಣೆಯಲ್ಲಿ ಅಭ್ಯರ್ಥಿಗಳ ಮತಗಳಿಕೆ ಮೇಲೆ ಪರಿಣಾಮ ಬೀರಬಹುದು. ದುಡಿಯುವ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಹೆಬ್ಬಾಳ ಕ್ಷೇತ್ರದಲ್ಲಿ ಬಹುಮಹಡಿ ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳು, ಶ್ರೀಮಂತರ ಬಂಗಲೆಗಳಿಗೂ ಕಡಿಮೆ ಇಲ್ಲ. ಹೊರ ರಾಜ್ಯಗಳಿಂದ ಕೆಲಸ ಅರಸಿ ನಗರಕ್ಕೆ ಬಂದು ನೆಲೆಸಿರುವ ಉತ್ತರ ಭಾರತ ಮೂಲದ ಜನರು ಈ ಭಾಗದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಸಾಫ್ಟ್‌ವೇರ್‌ ಕಂಪನಿಗಳಿಗೆ ನೇರ ಸಂಪರ್ಕ ಕಲ್ಪಿಸುವ ರಿಂಗ್‌ ರಸ್ತೆಯ ಕಾರಣದಿಂದಾಗಿ ಈ ಭಾಗದಲ್ಲಿ ಬಾಡಿಗೆ ಮನೆಗಳಲ್ಲಿ ವಾಸವಿರುವ ಸಾಫ್ಟ್‌ವೇರ್‌ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ.

Hebbal Assembly Constituency
ಕ್ಷೇತ್ರದ ಮತದಾರರ ಮಾಹಿತಿ (ಶೇಕಡಾವಾರು)

ಕ್ಷೇತ್ರ ವ್ಯಾಪ್ತಿ: ರಾಧಾಕೃಷ್ಣ ದೇವಸ್ಥಾನ ವಾರ್ಡ್, ಸಂಜಯ ನಗರ, ಗಂಗಾನಗರ, ಹೆಬ್ಬಾಳ, ವಿಶ್ವನಾಥ ನಾಗೇನಹಳ್ಳಿ, ಮನೋರಾಯನಪಾಳ್ಯ, ಗಂಗೇನಹಳ್ಳಿ, ಜೆ.ಸಿ.ನಗರ ವಾರ್ಡ್​ಗಳನ್ನು ಹೆಬ್ಬಾಳ ವಿಧಾನಸಭಾ ಕ್ಷೇತ್ರ ಹೊಂದಿದೆ.

Hebbal Assembly Constituency
ಕ್ಷೇತ್ರ ವಿಂಗಡಣೆ ಬಳಿಕ ಗೆದ್ದ ರಾಜಕೀಯ ಪಕ್ಷಗಳು

ರಾಜಕೀಯ ಇತಿಹಾಸವೇನು?: ಕ್ಷೇತ್ರ ಮರುವಿಂಗಡಣೆಯ ಬಳಿಕ ನಡೆದ ಚುನಾವಣಿಯಲ್ಲಿ ಬಿಜೆಪಿ ಈ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತ್ತು. ಆ ಸಂದರ್ಭದಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ಪಾಲಿಗೆ ಪ್ರಭಾವಿಯಾಗಿ ಕಾಣಿಸಿಕೊಳ್ಳುತ್ತಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಕ್ಷೇತ್ರ ಪ್ರತಿನಿಧಿಸಿದ್ದರು. 46,715 ಮತ ಪಡೆದು ಕಾಂಗ್ರೆಸ್‌ನ ಹೆಚ್​.ಎಂ.ರೇವಣ್ಣ ಅವರನ್ನು 4,952 ಮತಗಳ ಅಂತರದಿಂದ ಸೋಲಿಸಿದ್ದರು. ಜೆಡಿಎಸ್ ಕೇವಲ 4,149 ಮತ ಗಳಿಸಿ ಠೇವಣಿ ಕಳೆದುಕೊಂಡಿತ್ತು. 2013ರ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಂಡಿತು. ಕೇವಲ 38,162 ಮತ ಪಡೆದರೂ ಕಾಂಗ್ರೆಸ್‌ ಅಭ್ಯರ್ಥಿಯನ್ನು 5,136 ಮತಗಳಿಂದ ಸೋಲಿಸಿತು. ಈ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿತ್ತು.

Hebbal Assembly Constituency
ರಾಜಕೀಯ ಪಕ್ಷಗಳು ಪಡೆದ ಮತಗಳು (ಶೇಕಡಾವಾರು)

ಕಾಂಗ್ರೆಸ್ 33,026 ಮತ ಗಳಿಸಿದ್ದರೆ, ಜೆಡಿಎಸ್ 25,073 ಮತಗಳೊಂದಿಗೆ ಪೈಪೋಟಿ ನಡೆಸಿತ್ತು. ವಿಶೇಷವೆಂದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಎಸ್‌ಡಿಪಿಐ ಕೂಡ 1,473 ಮತ ಗಳಿಸಿ ತನ್ನ ಅಸ್ತಿತ್ವ ತೋರಿಸಿತ್ತು. ಈ ನಡುವೆ ಶಾಸಕರಾಗಿ ಆಯ್ಕೆಯಾಗಿದ್ದ ಜಗದೀಶ್‌ ಅಕಾಲಿಕ ನಿಧನದಿಂದ ನಡೆದ ಉಪಚುನಾವಣೆಯಲ್ಲಿ ವೈ.ಎ. ನಾರಾಯಣಸ್ವಾಮಿ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ನಾರಾಯಣಸ್ವಾಮಿ 60,367 ಮತ ಗಳಿಸಿ ಆ ಕ್ಷೇತ್ರದ ಮಟ್ಟಿಗೆ ದೊಡ್ಡ ಗೆಲುವು ದಾಖಲಿಸಿದ್ದರು. ಕಾಂಗ್ರೆಸ್ 41,218 ಮತ ಗಳಿಸಿದರೆ, ಜೆಡಿಎಸ್‌ ಗಳಿಕೆ 3,666 ಮತಕ್ಕೆ ಕುಸಿಯಿತು. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಬೇಕಾಯಿತು.

Hebbal Assembly Constituency
ರಾಜಕೀಯ ಪಕ್ಷಗಳ ಸ್ಥಾನಗಳು

ಪ್ರಸ್ತುತ ಕಾಂಗ್ರೆಸ್​ನ ಭೈರತಿ ಸುರೇಶ್ ಹೆಬ್ಬಾಳದ ಶಾಸಕರಾಗಿದ್ದಾರೆ. 2012 ರಲ್ಲಿ ವಿಧಾನಪರಿಷತ್ ಸದಸ್ಯರಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಕಟವರ್ತಿ ಕೂಡ ಹೌದು. 2018ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ತಮ್ಮ ಪರಿಷತ್ ಹುದ್ದೆ ತೊರೆದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. 2018ರಲ್ಲಿ ಕಾಂಗ್ರೆಸ್‌ನ ಭೈರತಿ ಸುರೇಶ್ 74,453 ಮತಗಳಿಂದ ಗೆದ್ದಿದ್ದರು. ಬಿಜೆಪಿಯ ಡಾ.ವೈ.ಎ. ನಾರಾಯಣಸ್ವಾಮಿ ಬಿಜೆಪಿಯಿಂದ 53,313 ಮತಗಳನ್ನು ಪಡೆದು ಸೋತಿದ್ದರು. ಮೂರನೇ ಸ್ಥಾನಕ್ಕೆ ಕುಸಿದಿದ್ದ ಜೆಡಿಎಸ್‌ನ ಹನುಮಂತೇಗೌಡ 14,092 ಮತಗಳನ್ನಷ್ಟೇ ಗಳಿಸುವಲ್ಲಿ ಸಫಲರಾದರು.

Hebbal Assembly Constituency
ಮತದಾರರ ಬೆಳವಣಿಗೆ

ಟಿಕೆಟ್ ಪೈಪೋಟಿ: ಎಲ್ಲಾ ಕ್ಷೇತ್ರಗಳಂತೆ ಹೆಬ್ಬಾಳ ಕ್ಷೇತ್ರದಲ್ಲೂ ಈ ಬಾರಿ ಟಿಕೆಟ್‌ಗೆ ಭಾರಿ ಪೈಪೋಟಿ ಎದುರಾಗಿದೆ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಭೈರತಿ ಸುರೇಶ್‌ಗೆ ಟಿಕೆಟ್‌ ಸಿಗುವುದು ಖಚಿತವಾಗಿದೆ. ಇನ್ನು ಬಿಜೆಪಿಯಿಂದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲು ಮುಂದಾಗಿದ್ದಾರೆ. ಮತ್ತೊಂದೆಡೆ, ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಕೂಡ ಮತ್ತೊಮ್ಮೆ ಸ್ಪರ್ಧೆಗೆ ಟಿಕೆಟ್ ಬಯಸಿದ್ದಾರೆ. ಜೆಡಿಎಸ್​ನಿಂದ ಮೋಹಿದ್ ಅಲ್ತಾಫ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆಪ್​ ಪಕ್ಷದಿಂದ ಮಂಜುನಾಥ ನಾಯ್ಡು ಕಣಕ್ಕಿಳಿಯಲಿದ್ದಾರೆ.

Hebbal Assembly Constituency
ಹೆಬ್ಬಾಳ ಮತಕ್ಷೇತ್ರದ ಮಾಹಿತಿ

ಮತದಾರರ ವಿವರ: ಕ್ಷೇತ್ರದಲ್ಲಿ 2,65,312 ಒಟ್ಟು ಮತದಾರರು ಇದ್ದಾರೆ. ಮುಸ್ಲಿಂ ಸಮುದಾಯದ ಸಂಖ್ಯೆಯೇ ಹೆಚ್ಚು. ಉಳಿದಂತೆ ಒಕ್ಕಲಿಗರು, ಎಸ್​ಸಿ-ಎಸ್​ಟಿ, ಬ್ರಾಹ್ಮಣರು, ಕುರುಬರು, ಯಾದವ ಮತ್ತು ದೇವಾಂಗ ಮತದಾರರು ಇದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಯಾರ ಪರ ಒಲವು ತೋರುತ್ತಾರೆ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: 'ನಾನು ಮತ್ತೆ ಸಿಎಂ ಆಗಿ ಕ್ಷೇತ್ರಕ್ಕೆ ಬರುತ್ತೇನೆ': ಮುಧೋಳದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿದ್ದಂತೆಯೇ ರಾಜ್ಯ ವಿಧಾನಸಭಾ ಚುನಾವಣೆ ಕಾವೂ ಸಹ ಏರತೊಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚುನಾವಣೆ ಜ್ವರ ಆರಂಭವಾಗಿದ್ದು, ಕ್ಷೇತ್ರಗಳಲ್ಲೂ ಆಕಾಂಕ್ಷಿ ಅಭ್ಯರ್ಥಿಗಳು ಮತಬೇಟೆಗೆ ಇಳಿದಿದ್ದಾರೆ. ಅದೇ ರೀತಿ ಬೆಂಗಳೂರಿನಲ್ಲೂ ಚುನಾವಣೆ ಕಾವೇರುತ್ತಿದೆ.

Hebbal Assembly Constituency
ಕಳೆದ ಮೂರು ವರ್ಷಗಳ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಆಸ್ತಿ ಮತ್ತು ಕ್ರಿಮಿನಲ್ ದಾಖಲೆಗಳ ವಿವರಣೆ

ಕ್ಷೇತ್ರವಾರು ನೋಡುವುದಾದರೆ, ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಹೆಬ್ಬಾಳವೂ ಒಂದು. ಮೊದಲು ಹೆಬ್ಬಾಳ ಮಹಾನಗರ ಪಾಲಿಕೆ ವ್ಯಾಪ್ತಿಯ ಕೊನೇಯ ಪ್ರದೇಶವಾಗಿತ್ತು. ಆದರೆ, ಇದೀಗ ಯಲಹಂಕವರೆಗೂ ವಿಸ್ತರಿಸಿದೆ. ಕೆರೆಗಳು, ಲುಂಬಿಣಿ ಗಾರ್ಡನ್, ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ಹಲವು ಟೆಕ್ ಪಾರ್ಕ್​ಗಳು, ಫ್ಲೈಓವರ್, ಜಿಕೆವಿಕೆ, ಹೆಬ್ಬಾಳ ಪಶುವಿದ್ಯಾನಿಲಯ ಈ ವ್ಯಾಪ್ತಿಯಲ್ಲಿ ಬರುತ್ತದೆ. ಈ ಕ್ಷೇತ್ರದಲ್ಲಿ ಬೇರೆ ಬೇರೆ ಭಾಷಿಕರು ನೆಲೆಸಿದ್ದಾರೆ. ಮುಖ್ಯವಾಗಿ ನಗರದ ಪ್ರಮುಖ ಪ್ರವೇಶದ್ವಾರವಾಗಿದ್ದು ಏರ್​ಪೋರ್ಟ್, ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಆಂಧ್ರದ ಅನಂತಪುರ ಕಡೆ ಹೋಗಬೇಕಾದರೆ ಇದೇ ರಸ್ತೆ ಮೂಲಕವೇ ಹಾದು ಹೋಗಬೇಕು. ಹೆಬ್ಬಾಳ ಫ್ಲೈಓವರ್ ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಯಲಹಂಕ ಕಡೆ ಹೋಗುವ ಹಾಗೂ ನಗರಕ್ಕೆ ಬರುವ ವಾಹನ ಸವಾರರು ದಿನನಿತ್ಯ ಕಿರಿಕಿರಿ ಅನುಭವಿಸಿಯೇ ಓಡಾಡಬೇಕು. ಇದರ ಪರಿಹಾರಕ್ಕೆ ಫ್ಲೈಓವರ್ ವಿಸ್ತರಣೆ ಮಾಡಬೇಕೆಂಬ ಕೂಗು ಕೇಳಿಬರುತ್ತಿದೆ.

Hebbal Assembly Constituency
ಅಭ್ಯರ್ಥಿಗಳ ನಡುವಿನ ಗೆಲುವಿನ ಅಂತರ

ಕಿರಿದಾದ ರಸ್ತೆ, ಗುಂಡಿ ಬಿದ್ದ ರಸ್ತೆಗಳು, ಸಂಚಾರ ದಟ್ಟಣೆ, ಮೂಲಸೌಕರ್ಯಗಳ ಕೊರತೆ ಕ್ಷೇತ್ರದಲ್ಲಿ ಕಾಣುತ್ತಿದೆ. ಕೆಲವು ವಾರ್ಡ್​ಗಳು ಒಂದಷ್ಟು ಸುಸಜ್ಜಿತವಾಗಿ ಕಂಡರೂ ಬಹುಪಾಲು ಕಡೆ ಸಮಸ್ಯೆ ಎದ್ದು ಕಾಣಿಸುತ್ತಿದೆ. ಇದೇ ಈ ಚುನಾವಣೆಯಲ್ಲಿ ಅಭ್ಯರ್ಥಿಗಳ ಮತಗಳಿಕೆ ಮೇಲೆ ಪರಿಣಾಮ ಬೀರಬಹುದು. ದುಡಿಯುವ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಹೆಬ್ಬಾಳ ಕ್ಷೇತ್ರದಲ್ಲಿ ಬಹುಮಹಡಿ ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳು, ಶ್ರೀಮಂತರ ಬಂಗಲೆಗಳಿಗೂ ಕಡಿಮೆ ಇಲ್ಲ. ಹೊರ ರಾಜ್ಯಗಳಿಂದ ಕೆಲಸ ಅರಸಿ ನಗರಕ್ಕೆ ಬಂದು ನೆಲೆಸಿರುವ ಉತ್ತರ ಭಾರತ ಮೂಲದ ಜನರು ಈ ಭಾಗದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಸಾಫ್ಟ್‌ವೇರ್‌ ಕಂಪನಿಗಳಿಗೆ ನೇರ ಸಂಪರ್ಕ ಕಲ್ಪಿಸುವ ರಿಂಗ್‌ ರಸ್ತೆಯ ಕಾರಣದಿಂದಾಗಿ ಈ ಭಾಗದಲ್ಲಿ ಬಾಡಿಗೆ ಮನೆಗಳಲ್ಲಿ ವಾಸವಿರುವ ಸಾಫ್ಟ್‌ವೇರ್‌ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ.

Hebbal Assembly Constituency
ಕ್ಷೇತ್ರದ ಮತದಾರರ ಮಾಹಿತಿ (ಶೇಕಡಾವಾರು)

ಕ್ಷೇತ್ರ ವ್ಯಾಪ್ತಿ: ರಾಧಾಕೃಷ್ಣ ದೇವಸ್ಥಾನ ವಾರ್ಡ್, ಸಂಜಯ ನಗರ, ಗಂಗಾನಗರ, ಹೆಬ್ಬಾಳ, ವಿಶ್ವನಾಥ ನಾಗೇನಹಳ್ಳಿ, ಮನೋರಾಯನಪಾಳ್ಯ, ಗಂಗೇನಹಳ್ಳಿ, ಜೆ.ಸಿ.ನಗರ ವಾರ್ಡ್​ಗಳನ್ನು ಹೆಬ್ಬಾಳ ವಿಧಾನಸಭಾ ಕ್ಷೇತ್ರ ಹೊಂದಿದೆ.

Hebbal Assembly Constituency
ಕ್ಷೇತ್ರ ವಿಂಗಡಣೆ ಬಳಿಕ ಗೆದ್ದ ರಾಜಕೀಯ ಪಕ್ಷಗಳು

ರಾಜಕೀಯ ಇತಿಹಾಸವೇನು?: ಕ್ಷೇತ್ರ ಮರುವಿಂಗಡಣೆಯ ಬಳಿಕ ನಡೆದ ಚುನಾವಣಿಯಲ್ಲಿ ಬಿಜೆಪಿ ಈ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತ್ತು. ಆ ಸಂದರ್ಭದಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ಪಾಲಿಗೆ ಪ್ರಭಾವಿಯಾಗಿ ಕಾಣಿಸಿಕೊಳ್ಳುತ್ತಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಕ್ಷೇತ್ರ ಪ್ರತಿನಿಧಿಸಿದ್ದರು. 46,715 ಮತ ಪಡೆದು ಕಾಂಗ್ರೆಸ್‌ನ ಹೆಚ್​.ಎಂ.ರೇವಣ್ಣ ಅವರನ್ನು 4,952 ಮತಗಳ ಅಂತರದಿಂದ ಸೋಲಿಸಿದ್ದರು. ಜೆಡಿಎಸ್ ಕೇವಲ 4,149 ಮತ ಗಳಿಸಿ ಠೇವಣಿ ಕಳೆದುಕೊಂಡಿತ್ತು. 2013ರ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಂಡಿತು. ಕೇವಲ 38,162 ಮತ ಪಡೆದರೂ ಕಾಂಗ್ರೆಸ್‌ ಅಭ್ಯರ್ಥಿಯನ್ನು 5,136 ಮತಗಳಿಂದ ಸೋಲಿಸಿತು. ಈ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿತ್ತು.

Hebbal Assembly Constituency
ರಾಜಕೀಯ ಪಕ್ಷಗಳು ಪಡೆದ ಮತಗಳು (ಶೇಕಡಾವಾರು)

ಕಾಂಗ್ರೆಸ್ 33,026 ಮತ ಗಳಿಸಿದ್ದರೆ, ಜೆಡಿಎಸ್ 25,073 ಮತಗಳೊಂದಿಗೆ ಪೈಪೋಟಿ ನಡೆಸಿತ್ತು. ವಿಶೇಷವೆಂದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಎಸ್‌ಡಿಪಿಐ ಕೂಡ 1,473 ಮತ ಗಳಿಸಿ ತನ್ನ ಅಸ್ತಿತ್ವ ತೋರಿಸಿತ್ತು. ಈ ನಡುವೆ ಶಾಸಕರಾಗಿ ಆಯ್ಕೆಯಾಗಿದ್ದ ಜಗದೀಶ್‌ ಅಕಾಲಿಕ ನಿಧನದಿಂದ ನಡೆದ ಉಪಚುನಾವಣೆಯಲ್ಲಿ ವೈ.ಎ. ನಾರಾಯಣಸ್ವಾಮಿ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ನಾರಾಯಣಸ್ವಾಮಿ 60,367 ಮತ ಗಳಿಸಿ ಆ ಕ್ಷೇತ್ರದ ಮಟ್ಟಿಗೆ ದೊಡ್ಡ ಗೆಲುವು ದಾಖಲಿಸಿದ್ದರು. ಕಾಂಗ್ರೆಸ್ 41,218 ಮತ ಗಳಿಸಿದರೆ, ಜೆಡಿಎಸ್‌ ಗಳಿಕೆ 3,666 ಮತಕ್ಕೆ ಕುಸಿಯಿತು. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಬೇಕಾಯಿತು.

Hebbal Assembly Constituency
ರಾಜಕೀಯ ಪಕ್ಷಗಳ ಸ್ಥಾನಗಳು

ಪ್ರಸ್ತುತ ಕಾಂಗ್ರೆಸ್​ನ ಭೈರತಿ ಸುರೇಶ್ ಹೆಬ್ಬಾಳದ ಶಾಸಕರಾಗಿದ್ದಾರೆ. 2012 ರಲ್ಲಿ ವಿಧಾನಪರಿಷತ್ ಸದಸ್ಯರಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಕಟವರ್ತಿ ಕೂಡ ಹೌದು. 2018ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ತಮ್ಮ ಪರಿಷತ್ ಹುದ್ದೆ ತೊರೆದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. 2018ರಲ್ಲಿ ಕಾಂಗ್ರೆಸ್‌ನ ಭೈರತಿ ಸುರೇಶ್ 74,453 ಮತಗಳಿಂದ ಗೆದ್ದಿದ್ದರು. ಬಿಜೆಪಿಯ ಡಾ.ವೈ.ಎ. ನಾರಾಯಣಸ್ವಾಮಿ ಬಿಜೆಪಿಯಿಂದ 53,313 ಮತಗಳನ್ನು ಪಡೆದು ಸೋತಿದ್ದರು. ಮೂರನೇ ಸ್ಥಾನಕ್ಕೆ ಕುಸಿದಿದ್ದ ಜೆಡಿಎಸ್‌ನ ಹನುಮಂತೇಗೌಡ 14,092 ಮತಗಳನ್ನಷ್ಟೇ ಗಳಿಸುವಲ್ಲಿ ಸಫಲರಾದರು.

Hebbal Assembly Constituency
ಮತದಾರರ ಬೆಳವಣಿಗೆ

ಟಿಕೆಟ್ ಪೈಪೋಟಿ: ಎಲ್ಲಾ ಕ್ಷೇತ್ರಗಳಂತೆ ಹೆಬ್ಬಾಳ ಕ್ಷೇತ್ರದಲ್ಲೂ ಈ ಬಾರಿ ಟಿಕೆಟ್‌ಗೆ ಭಾರಿ ಪೈಪೋಟಿ ಎದುರಾಗಿದೆ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಭೈರತಿ ಸುರೇಶ್‌ಗೆ ಟಿಕೆಟ್‌ ಸಿಗುವುದು ಖಚಿತವಾಗಿದೆ. ಇನ್ನು ಬಿಜೆಪಿಯಿಂದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲು ಮುಂದಾಗಿದ್ದಾರೆ. ಮತ್ತೊಂದೆಡೆ, ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಕೂಡ ಮತ್ತೊಮ್ಮೆ ಸ್ಪರ್ಧೆಗೆ ಟಿಕೆಟ್ ಬಯಸಿದ್ದಾರೆ. ಜೆಡಿಎಸ್​ನಿಂದ ಮೋಹಿದ್ ಅಲ್ತಾಫ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆಪ್​ ಪಕ್ಷದಿಂದ ಮಂಜುನಾಥ ನಾಯ್ಡು ಕಣಕ್ಕಿಳಿಯಲಿದ್ದಾರೆ.

Hebbal Assembly Constituency
ಹೆಬ್ಬಾಳ ಮತಕ್ಷೇತ್ರದ ಮಾಹಿತಿ

ಮತದಾರರ ವಿವರ: ಕ್ಷೇತ್ರದಲ್ಲಿ 2,65,312 ಒಟ್ಟು ಮತದಾರರು ಇದ್ದಾರೆ. ಮುಸ್ಲಿಂ ಸಮುದಾಯದ ಸಂಖ್ಯೆಯೇ ಹೆಚ್ಚು. ಉಳಿದಂತೆ ಒಕ್ಕಲಿಗರು, ಎಸ್​ಸಿ-ಎಸ್​ಟಿ, ಬ್ರಾಹ್ಮಣರು, ಕುರುಬರು, ಯಾದವ ಮತ್ತು ದೇವಾಂಗ ಮತದಾರರು ಇದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಯಾರ ಪರ ಒಲವು ತೋರುತ್ತಾರೆ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: 'ನಾನು ಮತ್ತೆ ಸಿಎಂ ಆಗಿ ಕ್ಷೇತ್ರಕ್ಕೆ ಬರುತ್ತೇನೆ': ಮುಧೋಳದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.