ETV Bharat / state

ಹೆಬ್ಬಾಳ ಜಂಕ್ಷನ್ ಹೆಚ್ಚುವರಿ ಲೇನ್‌ನ ಡೌನ್ ರಾಂಪ್‌ ಅಡಿಪಾಯ ಬಹುತೇಕ ಪೂರ್ಣ: ಮುಂದಿನ ವಾರದಿಂದ ವಾಹನ ಸಂಚಾರ

author img

By

Published : Jul 18, 2023, 7:18 AM IST

ಹೆಬ್ಬಾಳ ಜಂಕ್ಷನ್ ಹೆಚ್ಚುವರಿ ಲೇನ್‌ನ ಡೌನ್ ರಾಂಪ್‌ ಅಡಿಪಾಯ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಜುಲೈ 19ಕ್ಕೆ ಹೆಬ್ಬಾಳ ರಸ್ತೆಯಲ್ಲಿ ವಾಹನ ಸಂಚಾರ ಆರಂಭವಾಗಲಿದೆ.

hebbala-junction-extra-lane-down-ramp-complete-dot-road-to-resume-next-week
ಹೆಬ್ಬಾಳ ಜಂಕ್ಷನ್ ಹೆಚ್ಚುವರಿ ಲೇನ್‌ನ ಡೌನ್ ರಾಂಪ್‌ ಅಡಿಪಾಯ ಪೂರ್ಣ: ಮುಂದಿನ ವಾರದಿಂದ ಹೆಬ್ಬಾಳ ರಸ್ತೆಯಲ್ಲಿ ಸಂಚಾರ ಪುನರಾರಂಭ

ಬೆಂಗಳೂರು : ಹೆಬ್ಬಾಳ ಜಂಕ್ಷನ್ ಟ್ರಾಫಿಕ್ ಸಮಸ್ಯೆ ಮುಂದಿನ ದಿನಗಳಲ್ಲಿ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ ಇದೆ. ಜುಲೈ 19ರೊಳಗೆ ಹೆಚ್ಚುವರಿ ಲೇನ್‌ನ ಡೌನ್ ರಾಂಪ್‌ಗೆ ಅಡಿಪಾಯ ಹಾಕುವ ಕೆಲಸ ಪೂರ್ಣಗೊಳ್ಳಲಿದ್ದು, ಮುಂದಿನ ವಾರದಿಂದ ಹೆಬ್ಬಾಳ ರಸ್ತೆಯಲ್ಲಿ ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆ ಹೆಚ್ಚಿದೆ. ಸದ್ಯ ಟ್ರಾಫಿಕ್ ಪೊಲೀಸರು ಕೂಡ ಹೆಬ್ಬಾಳ ಮೇಲ್ಸೇತುವೆ ಡೌನ್ ರಾಂಪ್‌ನಲ್ಲಿರುವ ಸೆಂಟ್ರಲ್ ಮೀಡಿಯನ್ ತೆಗೆದುಹಾಕಿದ್ದಾರೆ. ವಿಮಾನ ನಿಲ್ದಾಣದ ಮಾರ್ಗದಿಂದ ವಾಹನಗಳಿಗೆ ಸಂಚಾರ ಸುಗಮವಾಗಿಸಿದ್ದಾರೆ.

ಟ್ರಾಫಿಕ್ ಸಮಸ್ಯೆ ತಗ್ಗಿಸಲು ಬಿಡಿಎ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಹೆಚ್ಚುವರಿ ಡೌನ್ ರ್‍ಯಾಂಪ್‌ಗೆ ಅಡಿಪಾಯ ಹಾಕುತ್ತಿದೆ. ಸ್ಥಳ ಪರಿಶೀಲನೆ ನಡೆಸಿರುವ ಬಿಡಿಎ ಅಧಿಕಾರಿಗಳು, ಸರ್ವಿಸ್ ರಸ್ತೆಯಲ್ಲಿ ಡೌನ್ ರ್‍ಯಾಂಪ್ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿರುವುದನ್ನು ಗಮನಿಸಿದ್ದಾರೆ. ಜುಲೈ 19ರೊಳಗೆ ಸರ್ವಿಸ್ ರಸ್ತೆಯ ಎರಡು ಸ್ಥಳಗಳಲ್ಲಿ ಅಡಿಪಾಯ ಕಾಮಗಾರಿಯನ್ನು ಪೂರ್ಣಗೊಳಿಸಿ ಮುಚ್ಚಲಾಗುವುದು. ಶೀಘ್ರದಲ್ಲೇ ಸರ್ವಿಸ್ ರಸ್ತೆಯಲ್ಲಿ ಸಂಚಾರ ಪುನರಾರಂಭಿಲಾಗುವುದು ಎಂದು ಬಿಡಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಆರ್.ಸುರೇಶ್ ತಿಳಿಸಿದ್ದಾರೆ.

ಯೋಜನೆ ಪೂರ್ಣಗೊಳ್ಳಲು ಬೇಕಿದೆ ಒಂದೂವರೆ ವರ್ಷ : ಡೌನ್ ರ್‍ಯಾಂಪ್‌ಗೆ ಅಡಿಪಾಯ ಹಾಕಿದ ನಂತರ ಪಕ್ಕದ ಗೋಡೆಗಳ ನಿರ್ಮಾಣದಂತಹ ಕೆಲಸಗಳು ನಡೆಯಬೇಕಿದೆ. ಹೀಗಾಗಿ, ಯೋಜನೆ ಪೂರ್ಣಗೊಳ್ಳಲು ಕನಿಷ್ಠ ಒಂದೂವರೆ ವರ್ಷ ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ವಿಪಕ್ಷಗಳ ಔತಣಕೂಟ ಮುಕ್ತಾಯ..ನಿರಂಕುಶ ಪ್ರಭುತ್ವದಿಂದ ದೇಶ ರಕ್ಷಣೆಗೆ ಸಮಾನ ಮನಸ್ಕ ಪಕ್ಷಗಳಿಂದ ಒಗ್ಗಟ್ಟು: ಕಾಂಗ್ರೆಸ್

ಮಳೆಯಿಂದ ಕೆಲಸ ಕುಂಠಿತ : ನಗರದಲ್ಲಿ ಆಗಾಗ್ಗೆ ಮಳೆಯಾಗುತ್ತಿರುವ ಕಾರಣ ಕೆಲಸ ನಿರಂತರವಾಗಿ ನಡೆಯಲು ಅಡ್ಡಿಯಾಗುತ್ತಿದೆ. ಮಳೆಯ ಕಾರಣ ಪ್ರತಿದಿನ ಕೆಲಸವು ಕೆಲವು ಗಂಟೆಗಳ ಕಾಲ ವಿಳಂಬವಾಗುತ್ತದೆ. ಕಾಂಕ್ರೀಟ್ ಸುರಿದು ಎರಡು ಸ್ಥಳಗಳನ್ನು ಮುಚ್ಚಲು ಮೂರು ದಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಗುತ್ತಿಗೆದಾರರು ಮಾಹಿತಿ ನೀಡಿದ್ದಾರೆ.

ಟ್ರಾಫಿಕ್​ ಸಮಸ್ಯೆ ಬಗೆಹರಿಸಲು ಡಿಸಿಎಂ ಸಭೆ : ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ವಿವಿಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಸಭೆಯಲ್ಲಿ ನಗರದ ಟ್ರಾಫಿಕ್​ ಸಮಸ್ಯೆ ಬಗ್ಗೆ ಮತ್ತು ಇದರ ನಿವಾರಣೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದರು.

ಸಭೆಯಲ್ಲಿ ಬಿಎಮ್ಆರ್​​ಡಿಎ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದರು. ಬಳಿಕ ಮಾತನಾಡಿದ ಅವರು, ಬೆಂಗಳೂರಲ್ಲಿ ಸುರಂಗ ಮಾರ್ಗ ಹಾಗೂ ಫ್ಲೈ ಓವರ್ ನಿರ್ಮಾಣ ವಿಚಾರವಾಗಿ ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ವಿಷಯ ಮಂಡಿಸಿದ್ದಾರೆ. ಇದೇ ವೇಳೆ ಎಲ್ಲ ಪಕ್ಷದ ಶಾಸಕರು, ಸಚಿವರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ನಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ : ಬಿಡಿಎ ಬಿಬಿಎಂಪಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ, ಕಡತಗಳನ್ನು ಮನೆ ಬಾಗಿಲಿಗೆ ತಲುಪಿಸಲು ನಿರ್ಧಾರ: ಡಿಕೆಶಿ

ಬೆಂಗಳೂರು : ಹೆಬ್ಬಾಳ ಜಂಕ್ಷನ್ ಟ್ರಾಫಿಕ್ ಸಮಸ್ಯೆ ಮುಂದಿನ ದಿನಗಳಲ್ಲಿ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ ಇದೆ. ಜುಲೈ 19ರೊಳಗೆ ಹೆಚ್ಚುವರಿ ಲೇನ್‌ನ ಡೌನ್ ರಾಂಪ್‌ಗೆ ಅಡಿಪಾಯ ಹಾಕುವ ಕೆಲಸ ಪೂರ್ಣಗೊಳ್ಳಲಿದ್ದು, ಮುಂದಿನ ವಾರದಿಂದ ಹೆಬ್ಬಾಳ ರಸ್ತೆಯಲ್ಲಿ ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆ ಹೆಚ್ಚಿದೆ. ಸದ್ಯ ಟ್ರಾಫಿಕ್ ಪೊಲೀಸರು ಕೂಡ ಹೆಬ್ಬಾಳ ಮೇಲ್ಸೇತುವೆ ಡೌನ್ ರಾಂಪ್‌ನಲ್ಲಿರುವ ಸೆಂಟ್ರಲ್ ಮೀಡಿಯನ್ ತೆಗೆದುಹಾಕಿದ್ದಾರೆ. ವಿಮಾನ ನಿಲ್ದಾಣದ ಮಾರ್ಗದಿಂದ ವಾಹನಗಳಿಗೆ ಸಂಚಾರ ಸುಗಮವಾಗಿಸಿದ್ದಾರೆ.

ಟ್ರಾಫಿಕ್ ಸಮಸ್ಯೆ ತಗ್ಗಿಸಲು ಬಿಡಿಎ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಹೆಚ್ಚುವರಿ ಡೌನ್ ರ್‍ಯಾಂಪ್‌ಗೆ ಅಡಿಪಾಯ ಹಾಕುತ್ತಿದೆ. ಸ್ಥಳ ಪರಿಶೀಲನೆ ನಡೆಸಿರುವ ಬಿಡಿಎ ಅಧಿಕಾರಿಗಳು, ಸರ್ವಿಸ್ ರಸ್ತೆಯಲ್ಲಿ ಡೌನ್ ರ್‍ಯಾಂಪ್ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿರುವುದನ್ನು ಗಮನಿಸಿದ್ದಾರೆ. ಜುಲೈ 19ರೊಳಗೆ ಸರ್ವಿಸ್ ರಸ್ತೆಯ ಎರಡು ಸ್ಥಳಗಳಲ್ಲಿ ಅಡಿಪಾಯ ಕಾಮಗಾರಿಯನ್ನು ಪೂರ್ಣಗೊಳಿಸಿ ಮುಚ್ಚಲಾಗುವುದು. ಶೀಘ್ರದಲ್ಲೇ ಸರ್ವಿಸ್ ರಸ್ತೆಯಲ್ಲಿ ಸಂಚಾರ ಪುನರಾರಂಭಿಲಾಗುವುದು ಎಂದು ಬಿಡಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಆರ್.ಸುರೇಶ್ ತಿಳಿಸಿದ್ದಾರೆ.

ಯೋಜನೆ ಪೂರ್ಣಗೊಳ್ಳಲು ಬೇಕಿದೆ ಒಂದೂವರೆ ವರ್ಷ : ಡೌನ್ ರ್‍ಯಾಂಪ್‌ಗೆ ಅಡಿಪಾಯ ಹಾಕಿದ ನಂತರ ಪಕ್ಕದ ಗೋಡೆಗಳ ನಿರ್ಮಾಣದಂತಹ ಕೆಲಸಗಳು ನಡೆಯಬೇಕಿದೆ. ಹೀಗಾಗಿ, ಯೋಜನೆ ಪೂರ್ಣಗೊಳ್ಳಲು ಕನಿಷ್ಠ ಒಂದೂವರೆ ವರ್ಷ ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ವಿಪಕ್ಷಗಳ ಔತಣಕೂಟ ಮುಕ್ತಾಯ..ನಿರಂಕುಶ ಪ್ರಭುತ್ವದಿಂದ ದೇಶ ರಕ್ಷಣೆಗೆ ಸಮಾನ ಮನಸ್ಕ ಪಕ್ಷಗಳಿಂದ ಒಗ್ಗಟ್ಟು: ಕಾಂಗ್ರೆಸ್

ಮಳೆಯಿಂದ ಕೆಲಸ ಕುಂಠಿತ : ನಗರದಲ್ಲಿ ಆಗಾಗ್ಗೆ ಮಳೆಯಾಗುತ್ತಿರುವ ಕಾರಣ ಕೆಲಸ ನಿರಂತರವಾಗಿ ನಡೆಯಲು ಅಡ್ಡಿಯಾಗುತ್ತಿದೆ. ಮಳೆಯ ಕಾರಣ ಪ್ರತಿದಿನ ಕೆಲಸವು ಕೆಲವು ಗಂಟೆಗಳ ಕಾಲ ವಿಳಂಬವಾಗುತ್ತದೆ. ಕಾಂಕ್ರೀಟ್ ಸುರಿದು ಎರಡು ಸ್ಥಳಗಳನ್ನು ಮುಚ್ಚಲು ಮೂರು ದಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಗುತ್ತಿಗೆದಾರರು ಮಾಹಿತಿ ನೀಡಿದ್ದಾರೆ.

ಟ್ರಾಫಿಕ್​ ಸಮಸ್ಯೆ ಬಗೆಹರಿಸಲು ಡಿಸಿಎಂ ಸಭೆ : ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ವಿವಿಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಸಭೆಯಲ್ಲಿ ನಗರದ ಟ್ರಾಫಿಕ್​ ಸಮಸ್ಯೆ ಬಗ್ಗೆ ಮತ್ತು ಇದರ ನಿವಾರಣೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದರು.

ಸಭೆಯಲ್ಲಿ ಬಿಎಮ್ಆರ್​​ಡಿಎ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದರು. ಬಳಿಕ ಮಾತನಾಡಿದ ಅವರು, ಬೆಂಗಳೂರಲ್ಲಿ ಸುರಂಗ ಮಾರ್ಗ ಹಾಗೂ ಫ್ಲೈ ಓವರ್ ನಿರ್ಮಾಣ ವಿಚಾರವಾಗಿ ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ವಿಷಯ ಮಂಡಿಸಿದ್ದಾರೆ. ಇದೇ ವೇಳೆ ಎಲ್ಲ ಪಕ್ಷದ ಶಾಸಕರು, ಸಚಿವರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ನಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ : ಬಿಡಿಎ ಬಿಬಿಎಂಪಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ, ಕಡತಗಳನ್ನು ಮನೆ ಬಾಗಿಲಿಗೆ ತಲುಪಿಸಲು ನಿರ್ಧಾರ: ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.