ETV Bharat / state

ಸಂಸದರ ಪತ್ನಿಯ ಟ್ರಸ್ಟ್​ನಿಂದ ಸಿಎ ಸೈಟ್ ದುರ್ಬಳಕೆ ಆರೋಪ : ದಾಖಲಾತಿ ಕೇಳಿದ ಹೈಕೋರ್ಟ್

ನಿಯಮಗಳ ಉಲ್ಲಂಘನೆಯಾಗಿರುವ ಕಾರಣ ಮೂರ್ತಿ ಚಾರಿಟಬಲ್ ಟ್ರಸ್ಟ್ ಗೆ ಮಂಜೂರು ಮಾಡಿರುವ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೆಎಚ್‌ಬಿ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

author img

By

Published : Mar 1, 2021, 10:42 PM IST

High  court
ಹೈಕೋರ್ಟ್

ಬೆಂಗಳೂರು: ಸಂಸದ ಉಮೇಶ ಜಾಧವ ಪತ್ನಿ ಗಾಯತ್ರಿ ಅವರು ಅಧ್ಯಕ್ಷರಾಗಿರುವ ಮೂರ್ತಿ ಚಾರಿಟಬಲ್ ಟ್ರಸ್ಟ್‌ಗೆ ಶಾಲಾ ಕಟ್ಟಡ ನಿರ್ಮಿಸಲು ನೀಡಲಾಗಿದ್ದ ಸಿಎ ಸೈಟ್ ದುರ್ಬಳಕೆ ಆರೋಪ ಹಿನ್ನೆಲೆ, ನಿವೇಶನ ಮಂಜೂರು ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಗೃಹ ಮಂಡಳಿಗೆ (ಕೆಎಚ್‌ಬಿ) ಹೈಕೋರ್ಟ್​ ನಿರ್ದೇಶಿಸಿದೆ.

ಈ ಕುರಿತು ಆದಿನಾರಾಯಣ ಶೆಟ್ಟಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ, ನಿಯಮಗಳ ಉಲ್ಲಂಘನೆಯಾಗಿರುವ ಕಾರಣ ಮೂರ್ತಿ ಚಾರಿಟಬಲ್ ಟ್ರಸ್ಟ್​ಗೆ ಮಂಜೂರು ಮಾಡಿರುವ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೆಎಚ್‌ಬಿ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಅಲ್ಲದೆ, ಹಕ್ಕು ಪತ್ರ ವಿತರಿಸುವ ಸಂದರ್ಭದಲ್ಲಿ ನಿವೇಶನ ಮಂಜೂರಾತಿ ನಿಯಮಗಳನ್ನು ಸರಳೀಕರಿಸಲಾಗಿತ್ತೆ? ಅಥವಾ ನಿಯಮ ಪಾಲನೆಯಿಂದ ವಿನಾಯಿತಿ ನೀಡಲಾಗಿತ್ತೆ? ಈ ಬಗ್ಗೆ ಯಾವುದಾದರೂ ನಿರ್ಧಾರ ತೆಗೆದಕೊಳ್ಳಲಾಗಿತ್ತೆ? ಎಂದು ಕೆಎಚ್‌ಬಿಯನ್ನು ಪ್ರಶ್ನಿಸಿದ ಪೀಠ, ಈ ಕುರಿತ ಎಲ್ಲ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ನಿಯಮಗಳ ಉಲ್ಲಂಘನೆಯಾಗಿದ್ದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿ, ವಿಚಾರಣೆಯನ್ನು ಮಾ.31ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಗಾಯತ್ರಿ ಅಧ್ಯಕ್ಷರಾಗಿರುವ ಮೂರ್ತಿ ಚಾರಿಟಬಲ್ ಟ್ರಸ್ಟ್‌ಗೆ ಶಾಲಾ ಕಟ್ಟಡ ನಿರ್ಮಿಸಲು ಯಲಹಂಕದಲ್ಲಿ ಸಿಎ ನಿವೇಶನ ಮಂಜೂರಾತಿ ಮಾಡಲಾಗಿತ್ತು. ನಿವೇಶನ ಮಂಜೂರಾತಿಯಾಗಿ 16 ವರ್ಷ ಕಳೆದರೂ ಶಾಲಾ ಕಟ್ಟಡ ನಿರ್ಮಿಸಿಲ್ಲ. ಈ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರು ಟ್ರಸ್ಟ್‌ಗೆ ನಿವೇಶನ ಮಂಜೂರು ಮಾಡಿರುವ ಆದೇಶ ರದ್ದುಪಡಿಸಬೇಕು. ನಿವೇಶನದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ಕೆಎಚ್‌ಬಿ ವಶಕ್ಕೆ ಒಪ್ಪಿಸಬೇಕೆಂದು ಕೋರಿದ್ದಾರೆ.

ಬೆಂಗಳೂರು: ಸಂಸದ ಉಮೇಶ ಜಾಧವ ಪತ್ನಿ ಗಾಯತ್ರಿ ಅವರು ಅಧ್ಯಕ್ಷರಾಗಿರುವ ಮೂರ್ತಿ ಚಾರಿಟಬಲ್ ಟ್ರಸ್ಟ್‌ಗೆ ಶಾಲಾ ಕಟ್ಟಡ ನಿರ್ಮಿಸಲು ನೀಡಲಾಗಿದ್ದ ಸಿಎ ಸೈಟ್ ದುರ್ಬಳಕೆ ಆರೋಪ ಹಿನ್ನೆಲೆ, ನಿವೇಶನ ಮಂಜೂರು ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಗೃಹ ಮಂಡಳಿಗೆ (ಕೆಎಚ್‌ಬಿ) ಹೈಕೋರ್ಟ್​ ನಿರ್ದೇಶಿಸಿದೆ.

ಈ ಕುರಿತು ಆದಿನಾರಾಯಣ ಶೆಟ್ಟಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ, ನಿಯಮಗಳ ಉಲ್ಲಂಘನೆಯಾಗಿರುವ ಕಾರಣ ಮೂರ್ತಿ ಚಾರಿಟಬಲ್ ಟ್ರಸ್ಟ್​ಗೆ ಮಂಜೂರು ಮಾಡಿರುವ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೆಎಚ್‌ಬಿ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಅಲ್ಲದೆ, ಹಕ್ಕು ಪತ್ರ ವಿತರಿಸುವ ಸಂದರ್ಭದಲ್ಲಿ ನಿವೇಶನ ಮಂಜೂರಾತಿ ನಿಯಮಗಳನ್ನು ಸರಳೀಕರಿಸಲಾಗಿತ್ತೆ? ಅಥವಾ ನಿಯಮ ಪಾಲನೆಯಿಂದ ವಿನಾಯಿತಿ ನೀಡಲಾಗಿತ್ತೆ? ಈ ಬಗ್ಗೆ ಯಾವುದಾದರೂ ನಿರ್ಧಾರ ತೆಗೆದಕೊಳ್ಳಲಾಗಿತ್ತೆ? ಎಂದು ಕೆಎಚ್‌ಬಿಯನ್ನು ಪ್ರಶ್ನಿಸಿದ ಪೀಠ, ಈ ಕುರಿತ ಎಲ್ಲ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ನಿಯಮಗಳ ಉಲ್ಲಂಘನೆಯಾಗಿದ್ದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿ, ವಿಚಾರಣೆಯನ್ನು ಮಾ.31ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಗಾಯತ್ರಿ ಅಧ್ಯಕ್ಷರಾಗಿರುವ ಮೂರ್ತಿ ಚಾರಿಟಬಲ್ ಟ್ರಸ್ಟ್‌ಗೆ ಶಾಲಾ ಕಟ್ಟಡ ನಿರ್ಮಿಸಲು ಯಲಹಂಕದಲ್ಲಿ ಸಿಎ ನಿವೇಶನ ಮಂಜೂರಾತಿ ಮಾಡಲಾಗಿತ್ತು. ನಿವೇಶನ ಮಂಜೂರಾತಿಯಾಗಿ 16 ವರ್ಷ ಕಳೆದರೂ ಶಾಲಾ ಕಟ್ಟಡ ನಿರ್ಮಿಸಿಲ್ಲ. ಈ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರು ಟ್ರಸ್ಟ್‌ಗೆ ನಿವೇಶನ ಮಂಜೂರು ಮಾಡಿರುವ ಆದೇಶ ರದ್ದುಪಡಿಸಬೇಕು. ನಿವೇಶನದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ಕೆಎಚ್‌ಬಿ ವಶಕ್ಕೆ ಒಪ್ಪಿಸಬೇಕೆಂದು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.