ETV Bharat / state

ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕೈಬಿಟ್ಟ ಸರ್ಕಾರ: ಪಿಐಎಲ್​ ಇತ್ಯರ್ಥಪಡಿಸಿದ ಹೈಕೋರ್ಟ್ - undefined

ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯೋಜನೆ ಕೈಬಿಟ್ಟಿರುವುದಾಗಿ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮೆಮೋ ಸಲ್ಲಿಸಿರುವ ಹಿನ್ನಲೆಯಲ್ಲಿ ಹೈಕೋರ್ಟ್​ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

ಹೈಕೋರ್ಟ್
author img

By

Published : Jun 18, 2019, 10:39 PM IST

ಬೆಂಗಳೂರು: ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ನಿರ್ಮಿಸಲು ಪ್ಲಾನ್​ ಮಾಡಿದ್ದ ಸ್ಟೀಲ್ ಬ್ರಿಡ್ಜ್ ಯೋಜನೆಯಿಂದ ರಾಜ್ಯ ಸರ್ಕಾರ ಹಿಂದೆ ಸರಿದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಸ್ಪಷ್ಟನೆ ನೀಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮವನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಈ ವೇಳೆ ಸರ್ಕಾರ ಪರ ವಕೀಲರು ವಾದ ಮಂಡನೆ ಮಾಡಿ ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗೆ ಸ್ಟೀಲ್ ಬ್ರಿಡ್ಜ್ ‌ನಿರ್ಮಿಸಲು ಬೆಂಗಳೂರು ಅಭಿವದ್ಧಿ ಪ್ರಾಧಿಕಾರ ನೋಟಿಫಿಕೇಶನ್ ಹೊರಡಿಸಿತ್ತು. ಆದರೆ ಈಗ ಯೋಜನೆಯಿಂದ ಸರ್ಕಾರ ಹಿಂದೆ ಸರಿದಿದೆ ಎಂದು ಪೀಠಕ್ಕೆ ಮೆಮೋ ಸಲ್ಲಿಸಿದರು. ಈ ಮೆಮೋ ದಾಖಲಿಸಿಕೊಂಡ ನ್ಯಾಯಪೀಠವು ಅರ್ಜಿಯನ್ನು ಇತ್ಯರ್ಥಗೊಳಿಸಿತು.

ಮೇಲ್ಸೇತುವೆ ಯೋಜನೆ ಕೈಗೊಳ್ಳಲು 2016ರಲ್ಲಿ ನಿರ್ಧರಿಸಿದ್ದ ಸರ್ಕಾರ ಯೋಜನೆಗಾಗಿ ನೂರಾರು ಮರಗಳನ್ನು ಕತ್ತರಿಸಲು‌ ನಿರ್ಧರಿಸಿತ್ತು. ಇದಕ್ಕೆ ಸಾರ್ವಜನಿಕರು, ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು.

ಬೆಂಗಳೂರು: ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ನಿರ್ಮಿಸಲು ಪ್ಲಾನ್​ ಮಾಡಿದ್ದ ಸ್ಟೀಲ್ ಬ್ರಿಡ್ಜ್ ಯೋಜನೆಯಿಂದ ರಾಜ್ಯ ಸರ್ಕಾರ ಹಿಂದೆ ಸರಿದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಸ್ಪಷ್ಟನೆ ನೀಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮವನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಈ ವೇಳೆ ಸರ್ಕಾರ ಪರ ವಕೀಲರು ವಾದ ಮಂಡನೆ ಮಾಡಿ ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗೆ ಸ್ಟೀಲ್ ಬ್ರಿಡ್ಜ್ ‌ನಿರ್ಮಿಸಲು ಬೆಂಗಳೂರು ಅಭಿವದ್ಧಿ ಪ್ರಾಧಿಕಾರ ನೋಟಿಫಿಕೇಶನ್ ಹೊರಡಿಸಿತ್ತು. ಆದರೆ ಈಗ ಯೋಜನೆಯಿಂದ ಸರ್ಕಾರ ಹಿಂದೆ ಸರಿದಿದೆ ಎಂದು ಪೀಠಕ್ಕೆ ಮೆಮೋ ಸಲ್ಲಿಸಿದರು. ಈ ಮೆಮೋ ದಾಖಲಿಸಿಕೊಂಡ ನ್ಯಾಯಪೀಠವು ಅರ್ಜಿಯನ್ನು ಇತ್ಯರ್ಥಗೊಳಿಸಿತು.

ಮೇಲ್ಸೇತುವೆ ಯೋಜನೆ ಕೈಗೊಳ್ಳಲು 2016ರಲ್ಲಿ ನಿರ್ಧರಿಸಿದ್ದ ಸರ್ಕಾರ ಯೋಜನೆಗಾಗಿ ನೂರಾರು ಮರಗಳನ್ನು ಕತ್ತರಿಸಲು‌ ನಿರ್ಧರಿಸಿತ್ತು. ಇದಕ್ಕೆ ಸಾರ್ವಜನಿಕರು, ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು.

Intro:ಸ್ಟೀಲ್ ಬ್ರಿಡ್ಜ್ ನಿರ್ಮಾಣ
ರಾಜ್ಯ ಸರ್ಕಾರ ಕೈಬಿಟ್ಟಿದೆ ಹೈಕೋರ್ಟ್ಗೆ ‌ಮಾಹಿತಿ..

ಭವ್ಯ

ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯೋಜನೆಯಿಂದ ರಾಜ್ಯ ಸರಕಾರ ಹಿಂದೆ ಸರಿದಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸ್ಪಷ್ಟ ಪಡಿಸಿದೆ..

ಬೆಂಗಳೂರು ಅಭಿವದ್ಧಿ ಪ್ರಾಧಿಕಾರ ಕ್ರಮವನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ಸರಕಾರದ ಪರ ವಕೀಲರು ವಾದ ಮಂಡನೆ ಮಾಡಿ ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗೆ ಸ್ಟೀಲ್ ಬ್ರಿಡ್ಜ್ ‌ನಿರ್ಮಿಸಲು ಬೆಂಗಳೂರು ಅಭಿವದ್ಧಿ ಪ್ರಾಧಿಕಾರ ನೋಟಿಫಿಕೇಶನ್ ಹೊರಡಿಸಿತ್ತು. ಆದರೆ ಈಗ ಯೋಜನೆಯಿಂದ ರಾಜ್ಯ ಸರಕಾರ ಹಿಂದೆ ಸರಿದಿದೆ ಎಂದು ಪೀಠಕ್ಕೆ ಮೆಮೋ ಸಲ್ಲಿಸಿದರು. ಈ ಮೆಮೋ ದಾಖಲಿಸಿಕೊಂಡ ನ್ಯಾಯಪೀಠವು ಅರ್ಜಿಯನ್ನು ಇತ್ಯರ್ಥಗೊಳಿಸಿತು.

ಮೇಲ್ಸೇಸೇತುವೆ ಯೋಜನೆ ಕೈಗೊಳ್ಳಲು 2016ರಲ್ಲಿ ನಿರ್ಧರಿಸಿದ್ದ ಸರ್ಕಾರ ಯೋಜನೆಗಾಗಿ ನೂರಾರು ಮರಗಳನ್ನು ಕತ್ತರಿಸಲು‌ ನಿರ್ಧಾರಿಸಲಾಗಿತ್ತು..‌ಇದಕ್ಕೆ ಸಾರ್ವಜನಿಕರು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಯೋಜನೆ ಕೈ ಬಿಡುವುದಾಗಿ ಹೈಕೋರ್ಟ್ ಗೆ ಸರ್ಕಾರದಿಂದ ಇಂದು ಮೆಮೋ ಸಲ್ಲಿಕೆ ಮಾಡಿದ್ದಾರೆ.. ಹೀಗಾಗಿ ಇಂದು ಅರ್ಜಿ ಇತ್ಯರ್ಥ ಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.


Body:KN_BNG_09_18_HIGCOURT_BHAVYA_7204498Conclusion:KN_BNG_09_18_HIGCOURT_BHAVYA_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.