ETV Bharat / state

ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ವಯಸ್ಸು ಖಚಿತಪಡಿಸಿಕೊಳ್ಳಿ: ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

author img

By ETV Bharat Karnataka Team

Published : Jan 13, 2024, 5:55 PM IST

ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಅವರ ವಯಸ್ಸನ್ನು ಖಚಿತಪಡಿಸಿಕೊಳ್ಳಲು ಹೈಕೋರ್ಟ್​ ಸೂಚಿಸಿದೆ.

Etv BharatHigh Court
ಕ್ರಿಮಿನಲ್ ಪ್ರಕರಣ

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಹಾಜರುಪಡಿಸುವ ಆರೋಪಿಗಳು ಅಪ್ರಾಪ್ತ ವಯಸ್ಕರಲ್ಲ ಎಂದು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳು ಸೇರಿದಂತೆ ಎಲ್ಲ ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

18 ರಿಂದ 22 ವರ್ಷದೊಳಗಿನ ಆರೋಪಿಗಳನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಿದಾಗ ವಯಸ್ಸಿಗೆ ಸಂಬಂಧಿಸಿದಂತೆ ದಾಖಲೆ ಪುರಾವೆಗಳನ್ನು ಒದಗಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ತನಿಖಾಧಿಕಾರಿಗಳು ಹಾಗೂ ಆರೋಪಿಗಳಿಗೆ ಸೂಚಿಸಬೇಕು ಎಂದು ಕೋರ್ಟ್​​ ತಿಳಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ (ಪೋಕ್ಸೊ) ಪ್ರಕರಣದಲ್ಲಿ ಅಪ್ರಾಪ್ತ ಆರೋಪಿಯನ್ನು (16 ವರ್ಷ) ಬಾಲಾಪರಾಧಿ ನ್ಯಾಯ ಮಂಡಳಿಗೆ ಕರೆದೊಯ್ಯುವ ಬದಲಾಗಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೇ, ಅಪರಾಧಿಯ ಶಿಕ್ಷೆಯನ್ನು ರದ್ದು ಮಾಡಿ ಆದೇಶಿಸಿದೆ.

ಅಲ್ಲದೇ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲೇಖಿಸಿರುವ ಹೈಕೋರ್ಟ್, ವಿಚಾರಣಾ ನ್ಯಾಯಾಲಯಗಳು, ಆರೋಪಿಗಳನ್ನು ಮೊದಲ ಬಾರಿಗೆ ಹಾಜರುಪಡಿಸುವ ವೇಳೆ ಪೊಲೀಸರ ನಡವಳಿಕೆಗಳು, ವಶಕ್ಕೆ ಪಡೆದ ಕುರಿತು ಆರೋಪಿಗಳ ಕುಟುಂಬ ಸದಸ್ಯರಿಗೆ ನೀಡಿದ ಮಾಹಿತಿ, ಬಂಧನದ ಕಾರಣಗಳು, ಬಂಧನದ ಸ್ಥಳದ ಬಗ್ಗೆ ಹೊರತಾಗಿ ವಯಸ್ಸಿನ ಬಗ್ಗೆ ಮೌಖಿಕ ವಿಚಾರಣೆ ನಡೆಸಬೇಕು ಎಂದು ಹೇಳಿದೆ. ಜೊತೆಗೆ, ಯಾವುದೇ ಕಾಯಿಲೆಗಳು ಇದ್ದಲ್ಲಿ ಆದೇಶದಲ್ಲಿ ದಾಖಲಿಸಬೇಕು ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ನ್ಯಾಯಮೂರ್ತಿ ವರ್ಗಾವಣೆ ಕುರಿತು ಸಿಜೆಐಗೆ ಪತ್ರ ಬರೆದ ಆರೋಪ: ಮುರುಘಾ ಮಠದ ಸಿಇಒಗೆ ಹೈಕೋರ್ಟ್ ಸಮನ್ಸ್

ಆರೋಪಿ ಬಾಲಾಪರಾಧಿ ಆಗಿರುವುದರಿಂದ ಸಾಮಾನ್ಯ ನ್ಯಾಯಾಲಯದ ಮುಂದೆ ಅವರ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಲು ಅವಕಾಶವಿಲ್ಲ. ಸಂತ್ರಸ್ತೆ ಸೇರಿದಂತೆ ಅನೇಕ ಸಾಕ್ಷಿಗಳು ಪ್ರತಿಕೂಲವಾಗಿರುವುದರಿಂದ ಅವರ ವಿರುದ್ಧ ಸಾಕಷ್ಟು ಪುರಾವೆಗಳಿಲ್ಲ. ಅಲ್ಲದೇ, ಕೇವಲ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯವು ಅವರನ್ನು ದೋಷಿ ಎಂದು ಪರಿಗಣಿಸಿದೆ. ಡಿಎನ್‌ಎ ಪರೀಕ್ಷೆಗಾಗಿ ಮಾದರಿಗಳ ಸಂಗ್ರಹವನ್ನು ಪೊಲೀಸರು ಸರಿಯಾಗಿ ನಡೆಸಿಲ್ಲ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ ವೈದ್ಯರ ಹೇಳಿಕೆಗಳನ್ನು ಸಹ ವಿಚಾರಣಾ ನ್ಯಾಯಾಲಯದ ಮುಂದೆ ದಾಖಲಿಸಲಾಗಿಲ್ಲ ಎಂದು ಹೈಕೋರ್ಟ್​​ ತನ್ನ ಆದೇಶದಲ್ಲಿ ತಿಳಿಸಿದೆ.

ಜೊತೆಗೆ, ಬಾಲಾಪರಾಧಿಗಳಿಗೆ ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ವಿಶೇಷ ಗೃಹಗಳಲ್ಲಿ ಗರಿಷ್ಠ ಬಂಧನದ ಅವಧಿ ಮೂರು ವರ್ಷಗಳಾಗಿದ್ದರೂ ಅವರು ಮೂರು ವರ್ಷಕ್ಕಿಂತಲೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ತಿಳಿಸಿರುವ ನ್ಯಾಯಪೀಠ, ಆರೋಪಿಯ ಶಿಕ್ಷೆಯನ್ನು ರದ್ದುಪಡಿಸಿ ಆದೇಶಿಸಿದೆ.

ಇದನ್ನೂ ಓದಿ: 'ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು': ಹೈಕೋರ್ಟ್

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಹಾಜರುಪಡಿಸುವ ಆರೋಪಿಗಳು ಅಪ್ರಾಪ್ತ ವಯಸ್ಕರಲ್ಲ ಎಂದು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳು ಸೇರಿದಂತೆ ಎಲ್ಲ ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

18 ರಿಂದ 22 ವರ್ಷದೊಳಗಿನ ಆರೋಪಿಗಳನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಿದಾಗ ವಯಸ್ಸಿಗೆ ಸಂಬಂಧಿಸಿದಂತೆ ದಾಖಲೆ ಪುರಾವೆಗಳನ್ನು ಒದಗಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ತನಿಖಾಧಿಕಾರಿಗಳು ಹಾಗೂ ಆರೋಪಿಗಳಿಗೆ ಸೂಚಿಸಬೇಕು ಎಂದು ಕೋರ್ಟ್​​ ತಿಳಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ (ಪೋಕ್ಸೊ) ಪ್ರಕರಣದಲ್ಲಿ ಅಪ್ರಾಪ್ತ ಆರೋಪಿಯನ್ನು (16 ವರ್ಷ) ಬಾಲಾಪರಾಧಿ ನ್ಯಾಯ ಮಂಡಳಿಗೆ ಕರೆದೊಯ್ಯುವ ಬದಲಾಗಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೇ, ಅಪರಾಧಿಯ ಶಿಕ್ಷೆಯನ್ನು ರದ್ದು ಮಾಡಿ ಆದೇಶಿಸಿದೆ.

ಅಲ್ಲದೇ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲೇಖಿಸಿರುವ ಹೈಕೋರ್ಟ್, ವಿಚಾರಣಾ ನ್ಯಾಯಾಲಯಗಳು, ಆರೋಪಿಗಳನ್ನು ಮೊದಲ ಬಾರಿಗೆ ಹಾಜರುಪಡಿಸುವ ವೇಳೆ ಪೊಲೀಸರ ನಡವಳಿಕೆಗಳು, ವಶಕ್ಕೆ ಪಡೆದ ಕುರಿತು ಆರೋಪಿಗಳ ಕುಟುಂಬ ಸದಸ್ಯರಿಗೆ ನೀಡಿದ ಮಾಹಿತಿ, ಬಂಧನದ ಕಾರಣಗಳು, ಬಂಧನದ ಸ್ಥಳದ ಬಗ್ಗೆ ಹೊರತಾಗಿ ವಯಸ್ಸಿನ ಬಗ್ಗೆ ಮೌಖಿಕ ವಿಚಾರಣೆ ನಡೆಸಬೇಕು ಎಂದು ಹೇಳಿದೆ. ಜೊತೆಗೆ, ಯಾವುದೇ ಕಾಯಿಲೆಗಳು ಇದ್ದಲ್ಲಿ ಆದೇಶದಲ್ಲಿ ದಾಖಲಿಸಬೇಕು ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ನ್ಯಾಯಮೂರ್ತಿ ವರ್ಗಾವಣೆ ಕುರಿತು ಸಿಜೆಐಗೆ ಪತ್ರ ಬರೆದ ಆರೋಪ: ಮುರುಘಾ ಮಠದ ಸಿಇಒಗೆ ಹೈಕೋರ್ಟ್ ಸಮನ್ಸ್

ಆರೋಪಿ ಬಾಲಾಪರಾಧಿ ಆಗಿರುವುದರಿಂದ ಸಾಮಾನ್ಯ ನ್ಯಾಯಾಲಯದ ಮುಂದೆ ಅವರ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಲು ಅವಕಾಶವಿಲ್ಲ. ಸಂತ್ರಸ್ತೆ ಸೇರಿದಂತೆ ಅನೇಕ ಸಾಕ್ಷಿಗಳು ಪ್ರತಿಕೂಲವಾಗಿರುವುದರಿಂದ ಅವರ ವಿರುದ್ಧ ಸಾಕಷ್ಟು ಪುರಾವೆಗಳಿಲ್ಲ. ಅಲ್ಲದೇ, ಕೇವಲ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯವು ಅವರನ್ನು ದೋಷಿ ಎಂದು ಪರಿಗಣಿಸಿದೆ. ಡಿಎನ್‌ಎ ಪರೀಕ್ಷೆಗಾಗಿ ಮಾದರಿಗಳ ಸಂಗ್ರಹವನ್ನು ಪೊಲೀಸರು ಸರಿಯಾಗಿ ನಡೆಸಿಲ್ಲ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ ವೈದ್ಯರ ಹೇಳಿಕೆಗಳನ್ನು ಸಹ ವಿಚಾರಣಾ ನ್ಯಾಯಾಲಯದ ಮುಂದೆ ದಾಖಲಿಸಲಾಗಿಲ್ಲ ಎಂದು ಹೈಕೋರ್ಟ್​​ ತನ್ನ ಆದೇಶದಲ್ಲಿ ತಿಳಿಸಿದೆ.

ಜೊತೆಗೆ, ಬಾಲಾಪರಾಧಿಗಳಿಗೆ ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ವಿಶೇಷ ಗೃಹಗಳಲ್ಲಿ ಗರಿಷ್ಠ ಬಂಧನದ ಅವಧಿ ಮೂರು ವರ್ಷಗಳಾಗಿದ್ದರೂ ಅವರು ಮೂರು ವರ್ಷಕ್ಕಿಂತಲೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ತಿಳಿಸಿರುವ ನ್ಯಾಯಪೀಠ, ಆರೋಪಿಯ ಶಿಕ್ಷೆಯನ್ನು ರದ್ದುಪಡಿಸಿ ಆದೇಶಿಸಿದೆ.

ಇದನ್ನೂ ಓದಿ: 'ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು': ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.