ETV Bharat / state

ಸೇವಾ ಹಿರಿತನ: ಹೈಕೋರ್ಟ್​ನಲ್ಲಿ ಏರ್ ಇಂಡಿಯಾ ಉದ್ಯೋಗಿಗಳ ಅರ್ಜಿ ವಜಾ - ಉದ್ಯೋಗಿಗಳ ಅರ್ಜಿ ವಜಾಗೊಳಿಸಿದ ಹೈಕೋರ್ಟ್​

ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಉದ್ಯೋಗಿಗಳಾದ ಪದ್ಮಾವತಿ ಸುಬ್ರಮಣಿಯನ್ ಹಾಗೂ ಮತ್ತಿಬ್ಬರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಜಾಗೊಳಿಸಿದ್ದಾರೆ.

high court
high court
author img

By

Published : Apr 19, 2022, 8:30 PM IST

ಬೆಂಗಳೂರು: ಏರ್ ಇಂಡಿಯಾ ಇದೀಗ ಸಂಪೂರ್ಣ ಖಾಸಗಿ ಸಂಸ್ಥೆಯಾಗಿದ್ದು ಅದರ ಉದ್ಯೋಗಿಗಳು ಸಂವಿಧಾನದ ವಿಧಿ 226ರ ಅಡಿ ಪರಿಹಾರ ಕೋರಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನೌಕರರು ತಮ್ಮ ತಕರಾರನ್ನು ಸಕ್ಷಮ ಪ್ರಾಧಿಕಾರದ ಮುಂದೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದೆ. ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಉದ್ಯೋಗಿಗಳಾದ ಪದ್ಮಾವತಿ ಸುಬ್ರಮಣಿಯನ್ ಹಾಗೂ ಮತ್ತಿಬ್ಬರು ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಉದ್ಯೋಗಿಗಳು ಸಕ್ಷಮ ಪ್ರಾಧಿಕಾರದ ಮುಂದೆ ತಮ್ಮ ದೂರು ದಾಖಲಿಸಲು ಮುಕ್ತರಿದ್ದಾರೆ ಎಂದು ಅಭಿಪ್ರಾಯ ಹೇಳಿದ್ದಾರೆ.

ಏರ್ ಇಂಡಿಯಾ ಸಂಸ್ಥೆಯ ಸಂಪೂರ್ಣ ಮಾಲಿಕತ್ವವನ್ನು ಭಾರತ ಸರ್ಕಾರ ತಾಲೇಸ್ ಪ್ರೈವೇಟ್ ಲಿಮಿಟೆಡ್​ಗೆ ನೀಡಿದೆ. ಸರ್ಕಾರ ಸಂಸ್ಥೆಯಲ್ಲಿನ ಸಂಪೂರ್ಣ ಹೂಡಿಕೆ ಹಿಂಪಡೆದುಕೊಂಡಿದೆ. ಹೀಗಾಗಿ, ಸಂಸ್ಥೆಯು ಸಂಪೂರ್ಣ ಖಾಸಗಿ ಒಡೆತನಕ್ಕೆ ಸೇರಿದ್ದು, ಅದರ ಉದ್ಯೋಗಿಗಳ ಕುಂದುಕೊರತೆಗಳನ್ನು ನೇರವಾಗಿ ರಿಟ್ ನ್ಯಾಯ ವ್ಯಾಪ್ತಿಯಲ್ಲಿ ಪ್ರಶ್ನಿಸಲಾಗದು. ಆದ್ದರಿಂದ, ನೌಕರರು ತಮ್ಮ ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರದಲ್ಲಿ ಪ್ರಶ್ನಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ನ್ಯಾಯ ಪೀಠ ನಿರ್ದೇಶನ ಮಾಡಿದೆ.

ಬೆಂಗಳೂರು: ಏರ್ ಇಂಡಿಯಾ ಇದೀಗ ಸಂಪೂರ್ಣ ಖಾಸಗಿ ಸಂಸ್ಥೆಯಾಗಿದ್ದು ಅದರ ಉದ್ಯೋಗಿಗಳು ಸಂವಿಧಾನದ ವಿಧಿ 226ರ ಅಡಿ ಪರಿಹಾರ ಕೋರಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನೌಕರರು ತಮ್ಮ ತಕರಾರನ್ನು ಸಕ್ಷಮ ಪ್ರಾಧಿಕಾರದ ಮುಂದೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದೆ. ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಉದ್ಯೋಗಿಗಳಾದ ಪದ್ಮಾವತಿ ಸುಬ್ರಮಣಿಯನ್ ಹಾಗೂ ಮತ್ತಿಬ್ಬರು ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಉದ್ಯೋಗಿಗಳು ಸಕ್ಷಮ ಪ್ರಾಧಿಕಾರದ ಮುಂದೆ ತಮ್ಮ ದೂರು ದಾಖಲಿಸಲು ಮುಕ್ತರಿದ್ದಾರೆ ಎಂದು ಅಭಿಪ್ರಾಯ ಹೇಳಿದ್ದಾರೆ.

ಏರ್ ಇಂಡಿಯಾ ಸಂಸ್ಥೆಯ ಸಂಪೂರ್ಣ ಮಾಲಿಕತ್ವವನ್ನು ಭಾರತ ಸರ್ಕಾರ ತಾಲೇಸ್ ಪ್ರೈವೇಟ್ ಲಿಮಿಟೆಡ್​ಗೆ ನೀಡಿದೆ. ಸರ್ಕಾರ ಸಂಸ್ಥೆಯಲ್ಲಿನ ಸಂಪೂರ್ಣ ಹೂಡಿಕೆ ಹಿಂಪಡೆದುಕೊಂಡಿದೆ. ಹೀಗಾಗಿ, ಸಂಸ್ಥೆಯು ಸಂಪೂರ್ಣ ಖಾಸಗಿ ಒಡೆತನಕ್ಕೆ ಸೇರಿದ್ದು, ಅದರ ಉದ್ಯೋಗಿಗಳ ಕುಂದುಕೊರತೆಗಳನ್ನು ನೇರವಾಗಿ ರಿಟ್ ನ್ಯಾಯ ವ್ಯಾಪ್ತಿಯಲ್ಲಿ ಪ್ರಶ್ನಿಸಲಾಗದು. ಆದ್ದರಿಂದ, ನೌಕರರು ತಮ್ಮ ಸೇವಾ ಹಿರಿತನಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರದಲ್ಲಿ ಪ್ರಶ್ನಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ನ್ಯಾಯ ಪೀಠ ನಿರ್ದೇಶನ ಮಾಡಿದೆ.

ಇದನ್ನೂ ಓದಿ: ಹೈಕೋರ್ಟ್​ಗೆ ಬೇಸಿಗೆ ರಜೆ: ಬೆಂಗಳೂರು ಪ್ರಧಾನಪೀಠದಲ್ಲಿ ರಜಾಕಾಲದ ಕಾರ್ಯನಿರ್ವಹಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.