ETV Bharat / state

ಗಂಡ-ಹೆಂಡತಿ ಜಗಳ.. ಮಹಿಳೆಯನ್ನು ಅಕ್ರಮವಾಗಿ ಕೂಡಿಟ್ಟ ಪೊಲೀಸರಿಗೆ ಬಿತ್ತು ₹1 ಲಕ್ಷ ದಂಡ - ಗಂಡನನ್ನು ತಿರಸ್ಕರಿಸಿದ್ದ ಮಹಿಳೆಯನ್ನು ಅಕ್ರಮವಾಗಿ ಕೂಡಿಟ್ಟ ಪೊಲೀಸರು

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನ ಮನೆ ತೊರೆದಿದ್ದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆ ಮಾನವ ಕಳ್ಳಸಾಗಣೆ ಪುನರ್ವಸತಿ ಕೇಂದ್ರದಲ್ಲಿ ಕೂಡಿಟ್ಟ ಪೊಲೀಸರಿಗೆ ಹೈಕೋರ್ಟ್ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

High Court fined one lakh to police
ಪೊಲೀಸರಿಗೆ ಒಂದು ಲಕ್ಷ ದಂಡ ವಿಧಿಸಿದ ಹೈ ಕೋರ್ಟ್
author img

By

Published : Dec 27, 2021, 8:13 PM IST

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನ ಮನೆ ತೊರೆದಿದ್ದ ಮಹಿಳೆಯನ್ನು ಅಕ್ರಮವಾಗಿ ವೇಶ್ಯಾವಾಟಿಕೆ ಮಾನವ ಕಳ್ಳಸಾಗಣೆ ಪುನರ್ವಸತಿ ಕೇಂದ್ರದಲ್ಲಿ ಕೂಡಿಟ್ಟ ಪೊಲೀಸರಿಗೆ ಹೈಕೋರ್ಟ್ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ತನ್ನನ್ನು ಪುನರ್ವಸತಿ ಕೇಂದ್ರದಲ್ಲಿ ಬಲವಂತವಾಗಿ ಇರಿಸಿದ್ದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಪೀಠ ತನ್ನ ತೀರ್ಪಿನಲ್ಲಿ, ಪೊಲೀಸರ ಕ್ರಮಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಗಂಡನನ್ನು ತೊರೆದಿದ್ದ ಮಹಿಳೆಯನ್ನು ಆಕೆಯ ಪತಿಯ ದೂರಿನ ಮೇರೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪತಿಯೊಂದಿಗೆ ಮಹಿಳೆ ಹೋಗಲು ನಿರಾಕರಿಸಿದ್ದಾರೆ. ಇದಕ್ಕೆ ಒಪ್ಪದ ಪೊಲೀಸರು ಮಹಿಳೆ ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ತುತ್ತಾದ ಮಹಿಳೆಯರ ಪುನರ್ವಸತಿ ಕೇಂದ್ರದಲ್ಲಿ ಇರಿಸಿದ್ದು ನಿಜಕ್ಕೂ ಆಘಾತಕಾರಿ ವಿಚಾರ ಎಂದು ಬೇಸರ ವ್ಯಕ್ತಪಡಿಸಿದೆ.

ಮಹಿಳೆಯೇ ತನ್ನ ಪತಿ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಪತಿಯೊಂದಿಗೆ ಮಹಿಳೆ ಹೋಗಲು ನಿರಾಕರಿಸಿದರು. ಆಕೆಯ ಪೋಷಕರು ಕೂಡ ಮಹಿಳೆಯನ್ನು ಕರೆದುಕೊಂಡು ಹೋಗಲು ಬರಲಿಲ್ಲ. ಇದರಿಂದಾಗಿ ಮಹಿಳೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದು ವಾಸ್ತವ ಸಂಗತಿಯಲ್ಲ ಎಂದು ಪೊಲೀಸರ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪೊಲೀಸರು ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಮತ್ತು ಆಕೆಯ ಪುತ್ರಿಯನ್ನು ವೇಶ್ಯಾವಾಟಿಕೆ ಮತ್ತು ಮಾನವ ಕಳ್ಳಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಇಟ್ಟಿದ್ದು ಬಂಧನವಲ್ಲದೆ ಮತ್ತೇನೂ ಅಲ್ಲ. ಬರೋಬ್ಬರಿ 5 ತಿಂಗಳ ಕಾಲ ಬಲವಂತವಾಗಿ ಕೂಡಿಟ್ಟಿದ್ದು ಜೈಲು ಶಿಕ್ಷೆಗೆ ಸಮ ಎಂದು ಪೊಲೀಸರ ನಡೆಗೆ ಹೈಕೋರ್ಟ್​ ಕಿಡಿಕಾರಿದೆ. ಪೊಲೀಸರ ಈ ನಿಯಮಬಾಹಿರ ಕೃತ್ಯಕ್ಕಾಗಿ 1 ಲಕ್ಷ ದಂಡ ಪಾವತಿಸುವಂತೆ ಆದೇಶಿಸಿದೆ. ಇದೇ ವೇಳೆ ನಿಯಮ ಬಾಹಿರವಾಗಿ ಮಹಿಳೆ ಮತ್ತಾಕೆಯ ಪುತ್ರಿಯನ್ನು ಇರಿಸಿಕೊಂಡಿದ್ದಕ್ಕೆ ಪುನರ್ವಸತಿ ಕೇಂದ್ರಕ್ಕೂ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

2017ರಲ್ಲಿ ವಿವಾಹವಾಗಿದ್ದ ದಂಪತಿ ನಡುವೆ ವಿರಸ ಮೂಡಿತ್ತು. ಈ ಹಿನ್ನೆಲೆಯಲ್ಲಿ 22 ವರ್ಷದ ಮಹಿಳೆ ಹಾಗೂ ಆಕೆಯ 3 ವರ್ಷದ ಪುತ್ರಿ ಮನೆ ತೊರೆದಿದ್ದರು. 2021ರ ಮೇ 3ರಂದು ಪತಿ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ್ದ ಪೊಲೀಸರು ಮಹಿಳೆಯನ್ನು ಠಾಣೆಗೆ ಕರೆಸಿ ಪತಿ ಜೊತೆಗೆ ತೆರಳುವಂತೆ ಸೂಚಿಸಿದ್ದರು. ಆದರೆ ಮಹಿಳೆ ಒಪ್ಪಿರಲಿಲ್ಲ. ನಂತರ ಪೊಲೀಸರು ಮಹಿಳೆಯನ್ನು ಬಲವಂತವಾಗಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಿದ್ದರಿಂದ ಮಹಿಳೆ ಮತ್ತು ಆಕೆಯ ಪುತ್ರಿ ಮೇ.26ರಿಂದ ಅಕ್ಟೋಬರ್ 21ರವರೆಗೆ ಅಲ್ಲಿಯೇ ವಾಸವಿದ್ದರು.

ಇದನ್ನೂ ಓದಿ: Karnataka COVID update: ರಾಜ್ಯದಲ್ಲಿಂದು 289 ಮಂದಿಗೆ ಕೊರೊನಾ ದೃಢ, ನಾಲ್ವರು ಸಾವು

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನ ಮನೆ ತೊರೆದಿದ್ದ ಮಹಿಳೆಯನ್ನು ಅಕ್ರಮವಾಗಿ ವೇಶ್ಯಾವಾಟಿಕೆ ಮಾನವ ಕಳ್ಳಸಾಗಣೆ ಪುನರ್ವಸತಿ ಕೇಂದ್ರದಲ್ಲಿ ಕೂಡಿಟ್ಟ ಪೊಲೀಸರಿಗೆ ಹೈಕೋರ್ಟ್ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ತನ್ನನ್ನು ಪುನರ್ವಸತಿ ಕೇಂದ್ರದಲ್ಲಿ ಬಲವಂತವಾಗಿ ಇರಿಸಿದ್ದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಪೀಠ ತನ್ನ ತೀರ್ಪಿನಲ್ಲಿ, ಪೊಲೀಸರ ಕ್ರಮಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಗಂಡನನ್ನು ತೊರೆದಿದ್ದ ಮಹಿಳೆಯನ್ನು ಆಕೆಯ ಪತಿಯ ದೂರಿನ ಮೇರೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪತಿಯೊಂದಿಗೆ ಮಹಿಳೆ ಹೋಗಲು ನಿರಾಕರಿಸಿದ್ದಾರೆ. ಇದಕ್ಕೆ ಒಪ್ಪದ ಪೊಲೀಸರು ಮಹಿಳೆ ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ತುತ್ತಾದ ಮಹಿಳೆಯರ ಪುನರ್ವಸತಿ ಕೇಂದ್ರದಲ್ಲಿ ಇರಿಸಿದ್ದು ನಿಜಕ್ಕೂ ಆಘಾತಕಾರಿ ವಿಚಾರ ಎಂದು ಬೇಸರ ವ್ಯಕ್ತಪಡಿಸಿದೆ.

ಮಹಿಳೆಯೇ ತನ್ನ ಪತಿ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಪತಿಯೊಂದಿಗೆ ಮಹಿಳೆ ಹೋಗಲು ನಿರಾಕರಿಸಿದರು. ಆಕೆಯ ಪೋಷಕರು ಕೂಡ ಮಹಿಳೆಯನ್ನು ಕರೆದುಕೊಂಡು ಹೋಗಲು ಬರಲಿಲ್ಲ. ಇದರಿಂದಾಗಿ ಮಹಿಳೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದು ವಾಸ್ತವ ಸಂಗತಿಯಲ್ಲ ಎಂದು ಪೊಲೀಸರ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪೊಲೀಸರು ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಮತ್ತು ಆಕೆಯ ಪುತ್ರಿಯನ್ನು ವೇಶ್ಯಾವಾಟಿಕೆ ಮತ್ತು ಮಾನವ ಕಳ್ಳಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಇಟ್ಟಿದ್ದು ಬಂಧನವಲ್ಲದೆ ಮತ್ತೇನೂ ಅಲ್ಲ. ಬರೋಬ್ಬರಿ 5 ತಿಂಗಳ ಕಾಲ ಬಲವಂತವಾಗಿ ಕೂಡಿಟ್ಟಿದ್ದು ಜೈಲು ಶಿಕ್ಷೆಗೆ ಸಮ ಎಂದು ಪೊಲೀಸರ ನಡೆಗೆ ಹೈಕೋರ್ಟ್​ ಕಿಡಿಕಾರಿದೆ. ಪೊಲೀಸರ ಈ ನಿಯಮಬಾಹಿರ ಕೃತ್ಯಕ್ಕಾಗಿ 1 ಲಕ್ಷ ದಂಡ ಪಾವತಿಸುವಂತೆ ಆದೇಶಿಸಿದೆ. ಇದೇ ವೇಳೆ ನಿಯಮ ಬಾಹಿರವಾಗಿ ಮಹಿಳೆ ಮತ್ತಾಕೆಯ ಪುತ್ರಿಯನ್ನು ಇರಿಸಿಕೊಂಡಿದ್ದಕ್ಕೆ ಪುನರ್ವಸತಿ ಕೇಂದ್ರಕ್ಕೂ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

2017ರಲ್ಲಿ ವಿವಾಹವಾಗಿದ್ದ ದಂಪತಿ ನಡುವೆ ವಿರಸ ಮೂಡಿತ್ತು. ಈ ಹಿನ್ನೆಲೆಯಲ್ಲಿ 22 ವರ್ಷದ ಮಹಿಳೆ ಹಾಗೂ ಆಕೆಯ 3 ವರ್ಷದ ಪುತ್ರಿ ಮನೆ ತೊರೆದಿದ್ದರು. 2021ರ ಮೇ 3ರಂದು ಪತಿ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ್ದ ಪೊಲೀಸರು ಮಹಿಳೆಯನ್ನು ಠಾಣೆಗೆ ಕರೆಸಿ ಪತಿ ಜೊತೆಗೆ ತೆರಳುವಂತೆ ಸೂಚಿಸಿದ್ದರು. ಆದರೆ ಮಹಿಳೆ ಒಪ್ಪಿರಲಿಲ್ಲ. ನಂತರ ಪೊಲೀಸರು ಮಹಿಳೆಯನ್ನು ಬಲವಂತವಾಗಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಿದ್ದರಿಂದ ಮಹಿಳೆ ಮತ್ತು ಆಕೆಯ ಪುತ್ರಿ ಮೇ.26ರಿಂದ ಅಕ್ಟೋಬರ್ 21ರವರೆಗೆ ಅಲ್ಲಿಯೇ ವಾಸವಿದ್ದರು.

ಇದನ್ನೂ ಓದಿ: Karnataka COVID update: ರಾಜ್ಯದಲ್ಲಿಂದು 289 ಮಂದಿಗೆ ಕೊರೊನಾ ದೃಢ, ನಾಲ್ವರು ಸಾವು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.