ETV Bharat / state

ಹೆಚ್​ಎಂಟಿಯಿಂದ ಅರಣ್ಯ ಭೂಮಿ ಮಾರಾಟ ಯತ್ನ ಆರೋಪ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

author img

By

Published : Dec 25, 2020, 5:11 AM IST

ಹೆಚ್​ಎಂಟಿ ಸಂಸ್ಥೆ ಭೂಮಿಯನ್ನು ಪರಭಾರೆ ಮಾಡಲು ಸಿದ್ಧತೆ ನಡೆಸಿದೆ ಎಂಬ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೀಠ, ಈ ಸಂಬಂಧ ಸಂಸ್ಥೆ ಕೈಗೊಳ್ಳಲಿರುವ ಯಾವುದೇ ಕ್ರಮಗಳು ನ್ಯಾಯಾಲಯದ ಮುಂದಿರುವ ಅರ್ಜಿಯ ಅಂತಿಮ ತೀರ್ಪಿಗೆ ಒಳಪಡಲಿವೆ ಎಂದು ಮಧ್ಯಂತರ ಆದೇಶ ನೀಡಿದೆ.

High Court given notice to govt about forest land sell
ಹೈಕೋರ್ಟ್

ಬೆಂಗಳೂರು : ಕೇಂದ್ರ ಸರ್ಕಾರಿ ಒಡೆತನದ ಹೆಚ್​ಎಂಟಿ ಸಂಸ್ಥೆ ತನ್ನ ಸುಪರ್ದಿಯಲ್ಲಿರುವ 165 ಎಕರೆ ಅರಣ್ಯಭೂಮಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ರಾಮಮೂರ್ತಿ ನಗರದ ಬಾಲಾಜಿ ನಾಯ್ಡು ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಹಾಗೂ ಹೆಚ್​ಎಂಟಿ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ಹೆಚ್​ಎಂಟಿ ಸಂಸ್ಥೆ ಭೂಮಿಯನ್ನು ಪರಭಾರೆ ಮಾಡಲು ಸಿದ್ಧತೆ ನಡೆಸಿದೆ ಎಂಬ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೀಠ, ಈ ಸಂಬಂಧ ಸಂಸ್ಥೆ ಕೈಗೊಳ್ಳಲಿರುವ ಯಾವುದೇ ಕ್ರಮಗಳು ನ್ಯಾಯಾಲಯದ ಮುಂದಿರುವ ಅರ್ಜಿಯ ಅಂತಿಮ ತೀರ್ಪಿಗೆ ಒಳಪಡಲಿವೆ ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಜನವರಿ 4ಕ್ಕೆ ಮುಂದೂಡಿದೆ.

ಅರ್ಜಿದಾರರ ಆರೋಪ : ಹೆಚ್​ಎಂಟಿ ಕಾರ್ಯನಿರ್ವಹಣೆ ಮಾಡುತ್ತಿದ್ದ 165 ಎಕರೆ ಭೂಮಿ ಮೂಲತಃ ಅರಣ್ಯ ಇಲಾಖೆಗೆ ಸೇರಿದ್ದಾಗಿದೆ. ಆ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಹೆಚ್​ಎಂಟಿ ನೀಡಲಾಗಿದೆ. ಆದರೀಗ ಹೆಚ್​ಎಂಟಿ ತನ್ನ ಸುಪರ್ದಿಯಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಭೂಮಿಯನ್ನು ಮಾರಾಟ ಮಾಡಿ ತನ್ನ ಸಾಲ ತೀರಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ನ್ಯಾಯಾಲಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಬೆಂಗಳೂರು : ಕೇಂದ್ರ ಸರ್ಕಾರಿ ಒಡೆತನದ ಹೆಚ್​ಎಂಟಿ ಸಂಸ್ಥೆ ತನ್ನ ಸುಪರ್ದಿಯಲ್ಲಿರುವ 165 ಎಕರೆ ಅರಣ್ಯಭೂಮಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ರಾಮಮೂರ್ತಿ ನಗರದ ಬಾಲಾಜಿ ನಾಯ್ಡು ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಹಾಗೂ ಹೆಚ್​ಎಂಟಿ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ಹೆಚ್​ಎಂಟಿ ಸಂಸ್ಥೆ ಭೂಮಿಯನ್ನು ಪರಭಾರೆ ಮಾಡಲು ಸಿದ್ಧತೆ ನಡೆಸಿದೆ ಎಂಬ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೀಠ, ಈ ಸಂಬಂಧ ಸಂಸ್ಥೆ ಕೈಗೊಳ್ಳಲಿರುವ ಯಾವುದೇ ಕ್ರಮಗಳು ನ್ಯಾಯಾಲಯದ ಮುಂದಿರುವ ಅರ್ಜಿಯ ಅಂತಿಮ ತೀರ್ಪಿಗೆ ಒಳಪಡಲಿವೆ ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಜನವರಿ 4ಕ್ಕೆ ಮುಂದೂಡಿದೆ.

ಅರ್ಜಿದಾರರ ಆರೋಪ : ಹೆಚ್​ಎಂಟಿ ಕಾರ್ಯನಿರ್ವಹಣೆ ಮಾಡುತ್ತಿದ್ದ 165 ಎಕರೆ ಭೂಮಿ ಮೂಲತಃ ಅರಣ್ಯ ಇಲಾಖೆಗೆ ಸೇರಿದ್ದಾಗಿದೆ. ಆ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಹೆಚ್​ಎಂಟಿ ನೀಡಲಾಗಿದೆ. ಆದರೀಗ ಹೆಚ್​ಎಂಟಿ ತನ್ನ ಸುಪರ್ದಿಯಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಭೂಮಿಯನ್ನು ಮಾರಾಟ ಮಾಡಿ ತನ್ನ ಸಾಲ ತೀರಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ನ್ಯಾಯಾಲಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.