ETV Bharat / state

ಸಿ ಜೆ ಹುನಗುಂದಗೆ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯ ಸ್ಥಾನ ನೀಡಿದ್ದಕ್ಕೆ ಆಕ್ಷೇಪ: ಹೈಕೋರ್ಟ್ ನೋಟಿಸ್

author img

By ETV Bharat Karnataka Team

Published : Aug 30, 2023, 6:03 PM IST

ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ ಮಾಜಿ ಸದಸ್ಯ ಸಿ.ಜೆ. ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಸಂಬಂಧ ಹೈಕೋರ್ಟ್​ ರಾಜ್ಯ ಸರ್ಕಾರ ಮತ್ತು ಸಿ ಜೆ ಹುನಗುಂದ ಅವರಿಗೆ ನೋಟಿಸ್​ ನೀಡಿದೆ.

high-court-given-notice-to-state-government-over-appointing-fo-former-member-of-kshrc
ಕೆಎಸ್‌ಎಚ್‌ಆರ್‌ಸಿ ಮಾಜಿ ಸದಸ್ಯರನ್ನು ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ: ಹೈಕೋರ್ಟ್ ನೋಟಿಸ್

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ (ಕೆಎಸ್‌ಎಚ್‌ಆರ್‌ಸಿ)ದ ಮಾಜಿ ಸದಸ್ಯ ಸಿ ಜೆ ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಎಸ್ ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಿ ಜೆ ಹುನಗುಂದ್ ಅವರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ತಿಳಿಸಿ ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.

ಹುನಗುಂದ ಅವರು ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದರು. ಇದಾದ ಬಳಿಕ ಅವರು 2012ರ ನವೆಂಬರ್ 29 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದು, 2012ರ ನವೆಂಬರ್ 28ರಂದು ನಿವೃತ್ತರಾಗಿದ್ದರು. ನಂತರ 2022ರ ಅಕ್ಟೋಬರ್ 20ರಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದು ಕಾನೂನು ಬಾಹಿರವಾಗಿದ್ದು, ಈ ನೇಮಕಾತಿ ರದ್ದು ಪಡಿಸುವಂತೆ ಕೋರಿ ಅರ್ಜಿದಾರ ಉಮಾಪತಿ ಅವರು 2023ರ ಪ್ರತಿವಾದಿಗಳಿಗೆ ಮನವಿ ಮಾಡಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೂ ಈವರೆಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಅವರ ನೇಮಕ ಆದೇಶವನ್ನು ರದ್ದು ಪಡಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ, ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ. ಸೆಕ್ಷನ್ 24(3)ರ ಪ್ರಕಾರ ಯಾವುದೇ ರಾಜ್ಯದ ಮಾನವನ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾದವರು ದೇಶದ ಯಾವುದೇ ರಾಜ್ಯದಲ್ಲಿ ಮತ್ಯಾವುದೇ ಹುದ್ದೆಯನ್ನು ಹೊಂದುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಆದರೆ, ಈ ಅಂಶವನ್ನು ಮರೆಮಾಚಿ 2022ರ ಅಕ್ಟೋಬರ್ ತಿಂಗಳಿನಿಂದ ಅನ್ವಯವಾಗುವಂತೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಉಮಾಪತಿ ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ಆರೋಪ: ಮಾವಿನ ತೋಪು ತೆರವಿಗೆ ಹೈಕೋರ್ಟ್ ತಡೆ

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ (ಕೆಎಸ್‌ಎಚ್‌ಆರ್‌ಸಿ)ದ ಮಾಜಿ ಸದಸ್ಯ ಸಿ ಜೆ ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಎಸ್ ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಿ ಜೆ ಹುನಗುಂದ್ ಅವರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ತಿಳಿಸಿ ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.

ಹುನಗುಂದ ಅವರು ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದರು. ಇದಾದ ಬಳಿಕ ಅವರು 2012ರ ನವೆಂಬರ್ 29 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದು, 2012ರ ನವೆಂಬರ್ 28ರಂದು ನಿವೃತ್ತರಾಗಿದ್ದರು. ನಂತರ 2022ರ ಅಕ್ಟೋಬರ್ 20ರಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದು ಕಾನೂನು ಬಾಹಿರವಾಗಿದ್ದು, ಈ ನೇಮಕಾತಿ ರದ್ದು ಪಡಿಸುವಂತೆ ಕೋರಿ ಅರ್ಜಿದಾರ ಉಮಾಪತಿ ಅವರು 2023ರ ಪ್ರತಿವಾದಿಗಳಿಗೆ ಮನವಿ ಮಾಡಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೂ ಈವರೆಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಅವರ ನೇಮಕ ಆದೇಶವನ್ನು ರದ್ದು ಪಡಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ, ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ. ಸೆಕ್ಷನ್ 24(3)ರ ಪ್ರಕಾರ ಯಾವುದೇ ರಾಜ್ಯದ ಮಾನವನ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾದವರು ದೇಶದ ಯಾವುದೇ ರಾಜ್ಯದಲ್ಲಿ ಮತ್ಯಾವುದೇ ಹುದ್ದೆಯನ್ನು ಹೊಂದುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಆದರೆ, ಈ ಅಂಶವನ್ನು ಮರೆಮಾಚಿ 2022ರ ಅಕ್ಟೋಬರ್ ತಿಂಗಳಿನಿಂದ ಅನ್ವಯವಾಗುವಂತೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಉಮಾಪತಿ ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ಆರೋಪ: ಮಾವಿನ ತೋಪು ತೆರವಿಗೆ ಹೈಕೋರ್ಟ್ ತಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.